Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ; ಗೌತಮ್ ನವ್ಲಾಖಾಗೆ 1 ಕೋಟಿ ಪಾವತಿಗೆ ಸೂಚಿಸಿದ ಎನ್‌ಐಎ!

ಭೀಮಾ ಕೋರೆಗಾಂವ್ ಪ್ರಕರಣ; ಗೌತಮ್ ನವ್ಲಾಖಾಗೆ 1 ಕೋಟಿ ಪಾವತಿಗೆ ಸೂಚಿಸಿದ ಎನ್‌ಐಎ!

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಗೃಹ ಬಂಧನದಲ್ಲಿರುವ ಗೌತಮ್ ನವ್ಲಾಖಾ ಅವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ(NIA) 1ಕೋಟಿ ರೂ.ಪಾವತಿಗೆ ಸೂಚಿಸಿದ್ದು, ಈ ಬಗ್ಗೆ ನವ್ಲಾಖಾ ಪರ ವಕೀಲರು ಕೋರ್ಟ್‌ನಲ್ಲಿ ಆಕ್ಷೇಪವನ್ನು ಸಲ್ಲಿಸಿದ್ದಾರೆ.

ಆರೋಪಿ ಗೌತಮ್ ನವ್ಲಾಖಾ ಅವರಿಂದ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಗೃಹಬಂಧನದ ವೆಚ್ಚವನ್ನು ಪೂರೈಸಲು ಹೆಚ್ಚಿನ ಮೊತ್ತವನ್ನು ಬೇಡಿಕೆಯಿಡುವ ಮೂಲಕ ಸುಲಿಗೆ ಮಾಡುತ್ತಿದೆ ಎಂದು ಅವರ ಪರ ವಕೀಲ  ನಿತ್ಯಾ ರಾಮಕೃಷ್ಣನ್ ಆರೋಪಿಸಿದ್ದಾರೆ. ಪುಣೆಯ ಭೀಮಾ ಕೋರೆಗಾಂವ್‌ನಲ್ಲಿ 2018ರಲ್ಲಿ ನಡೆದ ಜಾತಿ ಆಧಾರಿತ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ, 1967ರಡಿಯಲ್ಲಿ ಗೌತಮ್ ನವ್ಲಾಖಾ ಅವರನ್ನು 2018ರಲ್ಲಿ ಬಂಧಿಸಲಾಗಿತ್ತು. ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರ ಅವರು ನವೆಂಬರ್ 2022ರಿಂದ ಗೃಹಬಂಧನದಲ್ಲಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಗೌತಮ್ ನವ್ಲಾಖಾ ಅವರಿಗೆ ಜಾಮೀನು ಮಂಜೂರು ಮಾಡಿದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಎನ್‌ಐಎ ಸಲ್ಲಿಸಿದ ಮನವಿ ಮತ್ತು ಮುಂಬೈನಲ್ಲಿರುವ ತನ್ನ ಗೃಹಬಂಧನ ಸ್ಥಳವನ್ನು ಸ್ಥಳಾಂತರಿಸುವಂತೆ ಕೇಳಿದ ನವ್ಲಾಖಾ ಅವರ ಮನವಿ ಕುರಿತ ವಿಚಾರಣೆಯ ವೇಳೆ ಈ ವಿಚಾರಗಳ ಪ್ರಸ್ತಾವನೆ ನಡೆದಿದೆ. ನ್ಯಾಯಮೂರ್ತಿಗಳಾದ ಎಂಎಂ ಸುಂದ್ರೇಶ್ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ಎರಡು ಪ್ರಕರಣಗಳ ವಿಚಾರಣೆ ನಡೆಸಿತ್ತು.

ಸ್ಥಳ ಬದಲಾವಣೆ ಕುರಿತ ಅವರ ಮನವಿಗೆ ಪ್ರತಿಕ್ರಿಯೆಯಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರತಿ-ಅಫಿಡವಿಟ್ ಸಲ್ಲಿಸಲು ಅವಕಾಶ ನೀಡಿ ವಿಚಾರಣೆಯನ್ನು ಮುಂದೂಡಲಾಗಿದೆ. ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರು ಗೃಹಬಂಧನದ ಆದೇಶದ ಬಗ್ಗೆ ಕೇಂದ್ರೀಯ ಸಂಸ್ಥೆಯ ಕಳವಳವನ್ನು ಮತ್ತೊಮ್ಮೆ ಪುನರುಚ್ಚರಿಸಿದರು. ನಿವೃತ್ತ ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಪೀಠವು ನವ್ಲಾಖಾ ಅವರನ್ನು ಬಂಧನದಿಂದ ಬಿಡುಗಡೆ ಮಾಡಲು ಮತ್ತು ಅವರ ಹದಗೆಟ್ಟ ಆರೋಗ್ಯದ ಆಧಾರದ ಮೇಲೆ ಗೃಹಬಂಧನದಲ್ಲಿ ಇರಿಸಲು ಅವಕಾಶ ಮಾಡಿಕೊಟ್ಟಿತ್ತು.

ವಿಚಾರಣೆಯ ಸಮಯದಲ್ಲಿ, ಎಎಸ್‌ಜಿ ರಾಜು ಅವರು ನವ್ಲಾಖಾ ಅವರು ಮನೆಯಲ್ಲಿರುವ ಸ್ಥಳದಲ್ಲಿ ರಾತ್ರಿಯಿಡಿ ಕಣ್ಗಾವಲು ವ್ಯವಸ್ಥೆಗೆ ಒಂದು ಕೋಟಿ ಪಾವತಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಈ  ಬೇಡಿಕೆಗೆ    ಗೌತಮ್ ನವ್ಲಾಖಾ ಪರವಾಗಿ ಹಾಜರಾದ ಹಿರಿಯ ವಕೀಲರಾದ ನಿತ್ಯಾ ರಾಮಕೃಷ್ಣನ್ ಆಕ್ಷೇಪಿಸಿದ್ದಾರೆ. ಪಾವತಿಸಬೇಕಾದ ಮೊತ್ತದ ಬಗೆಗಿನ ಕೇಂದ್ರದ ಏಜೆನ್ಸಿಯ ಲೆಕ್ಕಾಚಾರವು ತಪ್ಪಾಗಿದೆ ಮತ್ತು ನಿಯಮಗಳಿಗೆ ವಿರುದ್ಧವಾಗಿದೆ ಎಂದು ವಾದಿಸಿದ್ದಾರೆ. ಇದಲ್ಲದೆ ಕೋರ್ಟ್‌ ಈ ಮೊದಲು ನೀಡಿರುವ ಆದೇಶದಂತೆ ಈಗಾಗಲೇ ಎಂಟು ಲಕ್ಷ ಠೇವಣಿ ಇಡಲಾಗಿದೆ ಎಂದು ಅವರು ಪೀಠಕ್ಕೆ ತಿಳಿಸಿದರು.

ಇದಕ್ಕೆ ತನಿಖಾ ಸಂಸ್ಥೆಯನ್ನು ಪ್ರತಿನಿಧಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಪ್ರತಿಕ್ರಿಯಿಸಿ, ನವ್ಲಾಖಾ ಅವರು ಮೊದಲು ಪಾವತಿ ಮಾಡಬೇಕು ಎಂದು ಒತ್ತಾಯಿಸಿದರು, ಅವರು ಇದುವರೆಗೆ ಕೇವಲ ಹತ್ತು ಲಕ್ಷ ಮಾತ್ರ ಪಾವತಿಸಿದ್ದಾರೆ ಎಂದು ಹೇಳಿದ್ದಾರೆ. ಇದಕ್ಕೆ ರಾಮಕೃಷ್ಣನ್, ಎನ್‌ಐಎ ನಿಲುವನ್ನು ಪ್ರಶ್ನಿಸುವುದನ್ನು ಮುಂದುವರೆಸಿದರು, ಸಂಸ್ಥೆಯು ಸುಲಿಗೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.  ಅಂತಿಮವಾಗಿ, ನ್ಯಾಯಾಧೀಶರು ಮಧ್ಯಪ್ರವೇಶಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆಯು ಕ್ಲೈಮ್ ಮಾಡಿದ ಮೊತ್ತದ ವಿವಾದವನ್ನು ಸರಿಯಾದ ವಿಚಾರಣೆಯ ಬಳಿಕ ತೀರ್ಮಾನಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಟಿಆರ್‌ಪಿ ಹಗರಣ: ಅರ್ನಬ್‌ ಗೋಸ್ವಾಮಿ ವಿರುದ್ಧದ ಪ್ರಕರಣ ಹಿಂಪಡೆಯಲು ಅನುಮತಿಸಿದ ಕೋರ್ಟ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...