Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ; ಗೌತಮ್ ನವ್ಲಾಖಾಗೆ 1 ಕೋಟಿ ಪಾವತಿಗೆ ಸೂಚಿಸಿದ ಎನ್‌ಐಎ!

ಭೀಮಾ ಕೋರೆಗಾಂವ್ ಪ್ರಕರಣ; ಗೌತಮ್ ನವ್ಲಾಖಾಗೆ 1 ಕೋಟಿ ಪಾವತಿಗೆ ಸೂಚಿಸಿದ ಎನ್‌ಐಎ!

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಗೃಹ ಬಂಧನದಲ್ಲಿರುವ ಗೌತಮ್ ನವ್ಲಾಖಾ ಅವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ(NIA) 1ಕೋಟಿ ರೂ.ಪಾವತಿಗೆ ಸೂಚಿಸಿದ್ದು, ಈ ಬಗ್ಗೆ ನವ್ಲಾಖಾ ಪರ ವಕೀಲರು ಕೋರ್ಟ್‌ನಲ್ಲಿ ಆಕ್ಷೇಪವನ್ನು ಸಲ್ಲಿಸಿದ್ದಾರೆ.

ಆರೋಪಿ ಗೌತಮ್ ನವ್ಲಾಖಾ ಅವರಿಂದ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಗೃಹಬಂಧನದ ವೆಚ್ಚವನ್ನು ಪೂರೈಸಲು ಹೆಚ್ಚಿನ ಮೊತ್ತವನ್ನು ಬೇಡಿಕೆಯಿಡುವ ಮೂಲಕ ಸುಲಿಗೆ ಮಾಡುತ್ತಿದೆ ಎಂದು ಅವರ ಪರ ವಕೀಲ  ನಿತ್ಯಾ ರಾಮಕೃಷ್ಣನ್ ಆರೋಪಿಸಿದ್ದಾರೆ. ಪುಣೆಯ ಭೀಮಾ ಕೋರೆಗಾಂವ್‌ನಲ್ಲಿ 2018ರಲ್ಲಿ ನಡೆದ ಜಾತಿ ಆಧಾರಿತ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ, 1967ರಡಿಯಲ್ಲಿ ಗೌತಮ್ ನವ್ಲಾಖಾ ಅವರನ್ನು 2018ರಲ್ಲಿ ಬಂಧಿಸಲಾಗಿತ್ತು. ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರ ಅವರು ನವೆಂಬರ್ 2022ರಿಂದ ಗೃಹಬಂಧನದಲ್ಲಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಗೌತಮ್ ನವ್ಲಾಖಾ ಅವರಿಗೆ ಜಾಮೀನು ಮಂಜೂರು ಮಾಡಿದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಎನ್‌ಐಎ ಸಲ್ಲಿಸಿದ ಮನವಿ ಮತ್ತು ಮುಂಬೈನಲ್ಲಿರುವ ತನ್ನ ಗೃಹಬಂಧನ ಸ್ಥಳವನ್ನು ಸ್ಥಳಾಂತರಿಸುವಂತೆ ಕೇಳಿದ ನವ್ಲಾಖಾ ಅವರ ಮನವಿ ಕುರಿತ ವಿಚಾರಣೆಯ ವೇಳೆ ಈ ವಿಚಾರಗಳ ಪ್ರಸ್ತಾವನೆ ನಡೆದಿದೆ. ನ್ಯಾಯಮೂರ್ತಿಗಳಾದ ಎಂಎಂ ಸುಂದ್ರೇಶ್ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ಎರಡು ಪ್ರಕರಣಗಳ ವಿಚಾರಣೆ ನಡೆಸಿತ್ತು.

ಸ್ಥಳ ಬದಲಾವಣೆ ಕುರಿತ ಅವರ ಮನವಿಗೆ ಪ್ರತಿಕ್ರಿಯೆಯಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರತಿ-ಅಫಿಡವಿಟ್ ಸಲ್ಲಿಸಲು ಅವಕಾಶ ನೀಡಿ ವಿಚಾರಣೆಯನ್ನು ಮುಂದೂಡಲಾಗಿದೆ. ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರು ಗೃಹಬಂಧನದ ಆದೇಶದ ಬಗ್ಗೆ ಕೇಂದ್ರೀಯ ಸಂಸ್ಥೆಯ ಕಳವಳವನ್ನು ಮತ್ತೊಮ್ಮೆ ಪುನರುಚ್ಚರಿಸಿದರು. ನಿವೃತ್ತ ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಪೀಠವು ನವ್ಲಾಖಾ ಅವರನ್ನು ಬಂಧನದಿಂದ ಬಿಡುಗಡೆ ಮಾಡಲು ಮತ್ತು ಅವರ ಹದಗೆಟ್ಟ ಆರೋಗ್ಯದ ಆಧಾರದ ಮೇಲೆ ಗೃಹಬಂಧನದಲ್ಲಿ ಇರಿಸಲು ಅವಕಾಶ ಮಾಡಿಕೊಟ್ಟಿತ್ತು.

ವಿಚಾರಣೆಯ ಸಮಯದಲ್ಲಿ, ಎಎಸ್‌ಜಿ ರಾಜು ಅವರು ನವ್ಲಾಖಾ ಅವರು ಮನೆಯಲ್ಲಿರುವ ಸ್ಥಳದಲ್ಲಿ ರಾತ್ರಿಯಿಡಿ ಕಣ್ಗಾವಲು ವ್ಯವಸ್ಥೆಗೆ ಒಂದು ಕೋಟಿ ಪಾವತಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಈ  ಬೇಡಿಕೆಗೆ    ಗೌತಮ್ ನವ್ಲಾಖಾ ಪರವಾಗಿ ಹಾಜರಾದ ಹಿರಿಯ ವಕೀಲರಾದ ನಿತ್ಯಾ ರಾಮಕೃಷ್ಣನ್ ಆಕ್ಷೇಪಿಸಿದ್ದಾರೆ. ಪಾವತಿಸಬೇಕಾದ ಮೊತ್ತದ ಬಗೆಗಿನ ಕೇಂದ್ರದ ಏಜೆನ್ಸಿಯ ಲೆಕ್ಕಾಚಾರವು ತಪ್ಪಾಗಿದೆ ಮತ್ತು ನಿಯಮಗಳಿಗೆ ವಿರುದ್ಧವಾಗಿದೆ ಎಂದು ವಾದಿಸಿದ್ದಾರೆ. ಇದಲ್ಲದೆ ಕೋರ್ಟ್‌ ಈ ಮೊದಲು ನೀಡಿರುವ ಆದೇಶದಂತೆ ಈಗಾಗಲೇ ಎಂಟು ಲಕ್ಷ ಠೇವಣಿ ಇಡಲಾಗಿದೆ ಎಂದು ಅವರು ಪೀಠಕ್ಕೆ ತಿಳಿಸಿದರು.

ಇದಕ್ಕೆ ತನಿಖಾ ಸಂಸ್ಥೆಯನ್ನು ಪ್ರತಿನಿಧಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಪ್ರತಿಕ್ರಿಯಿಸಿ, ನವ್ಲಾಖಾ ಅವರು ಮೊದಲು ಪಾವತಿ ಮಾಡಬೇಕು ಎಂದು ಒತ್ತಾಯಿಸಿದರು, ಅವರು ಇದುವರೆಗೆ ಕೇವಲ ಹತ್ತು ಲಕ್ಷ ಮಾತ್ರ ಪಾವತಿಸಿದ್ದಾರೆ ಎಂದು ಹೇಳಿದ್ದಾರೆ. ಇದಕ್ಕೆ ರಾಮಕೃಷ್ಣನ್, ಎನ್‌ಐಎ ನಿಲುವನ್ನು ಪ್ರಶ್ನಿಸುವುದನ್ನು ಮುಂದುವರೆಸಿದರು, ಸಂಸ್ಥೆಯು ಸುಲಿಗೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.  ಅಂತಿಮವಾಗಿ, ನ್ಯಾಯಾಧೀಶರು ಮಧ್ಯಪ್ರವೇಶಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆಯು ಕ್ಲೈಮ್ ಮಾಡಿದ ಮೊತ್ತದ ವಿವಾದವನ್ನು ಸರಿಯಾದ ವಿಚಾರಣೆಯ ಬಳಿಕ ತೀರ್ಮಾನಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಟಿಆರ್‌ಪಿ ಹಗರಣ: ಅರ್ನಬ್‌ ಗೋಸ್ವಾಮಿ ವಿರುದ್ಧದ ಪ್ರಕರಣ ಹಿಂಪಡೆಯಲು ಅನುಮತಿಸಿದ ಕೋರ್ಟ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...