Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ ಎನ್‌ಐಎಗೆ ವರ್ಗಾವಣೆ ಪ್ರಶ್ನಿಸಿ ಹೈಕೋರ್ಟ್‌‌ನಲ್ಲಿ ಅರ್ಜಿ..

ಭೀಮಾ ಕೋರೆಗಾಂವ್ ಪ್ರಕರಣ ಎನ್‌ಐಎಗೆ ವರ್ಗಾವಣೆ ಪ್ರಶ್ನಿಸಿ ಹೈಕೋರ್ಟ್‌‌ನಲ್ಲಿ ಅರ್ಜಿ..

- Advertisement -
- Advertisement -

ಎಲ್ಗರ್ ಪರಿಷತ್ ಪ್ರಕರಣದಲ್ಲಿ ಬಂಧಿತರಾಗಿರುವ ಮಾನವ ಹಕ್ಕುಗಳ ವಕೀಲ ಸುರೇಂದ್ರ ಗ್ಯಾಡ್ಲಿಂಗ್ ಮತ್ತು ಬರಹಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಸುಧೀರ್ ಧವಾಲೆ ಅವರು ಶುಕ್ರವಾರ ಬಾಂಬೆ ಹೈಕೋರ್ಟ್‌ನ್ನು ಸಂಪರ್ಕಿಸಿ ತಮ್ಮ ವಿರುದ್ದ ನಡೆಸಲಾಗುತ್ತಿರುವ ತನಿಖೆಯನ್ನು ಪುಣೆ ಪೊಲೀಸರಿಂದ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವರ್ಗಾಯಿಸಿದ್ದನ್ನು ಪ್ರಶ್ನಿಸಿದ್ದಾರೆ.

ಮಾವೋವಾದಿ ಸಂಪರ್ಕ ಹೊಂದಿದ್ದಾರೆಂದು ಆರೋಪಿಸಿ ಹಲವಾರು ಮಾನವ ಹಕ್ಕುಗಳ ಕಾರ್ಯಕರ್ತರನ್ನು ಬಂಧಿಸಿರುವ ಈ ಪ್ರಕರಣವೂ ಜನವರಿ 24 ರಂದು ಪುಣೆ ಪೊಲೀಸರಿಂದ ಎನ್‌ಐಎಗೆ ವರ್ಗಾಯಿಸಲಾಗಿತ್ತು.

ಗ್ಯಾಡ್ಲಿಂಗ್ ಮತ್ತು ಧವಾಲೆ ಅವರನ್ನು ಜೂನ್ 2018 ರಲ್ಲಿ ಬಂಧಿಸಲಾಗಿದ್ದು, ಅವರನ್ನು ಮುಂಬೈ ಬಳಿಯ ತಾಲೋಜ ಜೈಲಿನಲ್ಲಿ ಇರಿಸಲಾಗಿದೆ.

ನ್ಯಾಯವಾದಿ ಎಸ್ ಬಿ ತಾಲೇಕರ್ ಅವರ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ, ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡ ನಂತರ ಕೇಂದ್ರ ಸರ್ಕಾರವು ತನಿಖೆಯನ್ನು ವರ್ಗಾವಣೆ ಮಾಡಿದೆ, ಇದು “ರಾಜಕೀಯ ಪ್ರೇರಿತವಾಗಿದೆ” ಎಂದು ಆರೋಪಿಸಿದೆ.

“ಈ ವರ್ಗಾವಣೆಯ ಆದೇಶವು ಅನಿಯಂತ್ರಿತ, ತಾರತಮ್ಯ, ಅನ್ಯಾಯ ಹಾಗೂ ಆರೋಪಿಗಳ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

“ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಹಿಂದೂತ್ವ ಸಂಘಟನೆಗಳೊಂದಿಗೆ ಸೇರಿ ಡಿಸೆಂಬರ್ 2017-ಜನವರಿ 2018 ರಲ್ಲಿ ಪುಣೆಯ ಕೊರೆಗಾಂವ್ ಭೀಮಾದಲ್ಲಿ ನಡೆದ ಹಿಂಸಾಚಾರದ ಘಟನೆಯನ್ನು ಮಾವೋವಾದಿ ಚಳವಳಿಯ ಭಾಗವೆಂದು ಎಲ್ಗರ್ ಪರಿಷತ್ ಸಭೆಯನ್ನು ತೋರಿಸುವ ಮೂಲಕ ಪ್ರಭಾವಿ ದಲಿತ ಚಿಂತಕರನ್ನು ಗುರಿ ಮಾಡಿಕೊಂಡಿದೆ”.

ಈ ಅರ್ಜಿಯನ್ನು ಜೂನ್ 23 ರಂದು ಹೈಕೋರ್ಟ್ ವಿಚಾರಣೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಗ್ಯಾಡ್ಲಿಂಗ್ ಮತ್ತು ಧವಾಲೆ ಅವರಲ್ಲದೆ, ರೋನಾ ವಿಲ್ಸನ್, ಆನಂದ್ ತೇಲ್ತುಂಬ್ಡೆ, ಗೌತಮ್ ನವಲಖಾ, ಶೋಮಾ ಸೇನ್, ವೆರ್ನಾನ್ ಗೊನ್ಸಾಲ್ವೆಸ್, ವರವರ ರಾವ್, ಅರುಣ್ ಫೆರೀರಾ ಮತ್ತು ಸುಧಾ ಭಾರದ್ವಾಜ್ ಈ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ.


ಓದಿ: ಪ್ರೊ. ಆನಂದ್ ತೇಲ್ತುಂಬ್ಡೆ ನರೇಂದ್ರ ಮೋದಿ ಸರ್ಕಾರಕ್ಕೆ ಏಕೆ ಅಪಾಯಕಾರಿಯಾದರು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...