Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಮಹೇಶ್ ರಾವುತ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಮಹೇಶ್ ರಾವುತ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಎಲ್ಗಾರ್ ಪರಿಷದ್ ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಬಂಧಿತರಾಗಿದ್ದ ಕಾರ್ಯಕರ್ತ ಮಹೇಶ್ ರಾವುತ್‌ಗೆ ಬಾಂಬೆ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಎ ಎಸ್ ಗಡ್ಕರಿ ಮತ್ತು ಶರ್ಮಿಳಾ ದೇಶಮುಖ್ ಅವರ ವಿಭಾಗೀಯ ಪೀಠವು ಅರ್ಹತೆಯ ಆಧಾರದ ಮೇಲೆ ಜಾಮೀನು ಕೋರಿ ರಾವುತ್ ಮಾಡಿದ ಮನವಿಯನ್ನು ಅಂಗೀಕರಿಸಿತು.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಎರಡು ವಾರಗಳ ಕಾಲ ತನ್ನ ಆದೇಶಕ್ಕೆ ತಡೆ ನೀಡುವಂತೆ ನ್ಯಾಯಾಲಯವನ್ನು ಕೋರಿದೆ. ನಂತರ ಪೀಠವು ತನ್ನ ಆದೇಶಕ್ಕೆ ಒಂದು ವಾರ ತಡೆ ನೀಡಿತು.

ರಾವತ್ ಅವರನ್ನು ಜೂನ್ 2018ರಲ್ಲಿ ಬಂಧಿಸಲಾಯಿತು ಮತ್ತು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರು ವಿಶೇಷ ಎನ್‌ಐಎ ನ್ಯಾಯಾಲಯವು ಜಾಮೀನು ನಿರಾಕರಿಸಿದ ಆದೇಶವನ್ನು ಪ್ರಶ್ನಿಸಿ, ಜಾಮೀನು ಕೋರಿ 2022ರಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರಾವುತ್ ತನ್ನ ಮನವಿಯಲ್ಲಿ ತನ್ನ ಕಸ್ಟಡಿಯು ಅನಗತ್ಯವಾಗಿದೆ ಮತ್ತು ಇದು ಸಂವಿಧಾನದ 14 ಮತ್ತು 21 ನೇ ವಿಧಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಸಾಂವಿಧಾನಿಕ ಆಧಾರದ ಮೇಲೆ ಜಾಮೀನು ಪಡೆಯಲು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ದಾಖಲಿಸಲಾದ ಆರೋಪಿಗೆ ಮಂಜೂರು ಮಾಡುವುದು ಸಮರ್ಥನೀಯವಲ್ಲ ಎಂದು ಎನ್ಐಎ ಮನವಿಯನ್ನು ವಿರೋಧಿಸಿದೆ.

ಈ ಪ್ರಕರಣದಲ್ಲಿ 16 ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಐವರು ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ. ವಿದ್ವಾಂಸ-ಕಾರ್ಯಕರ್ತ ಆನಂದ್ ತೇಲ್ತುಂಬ್ಡೆ, ವಕೀಲೆ ಸುಧಾ ಭಾರದ್ವಾಜ್, ವೆರ್ನಾನ್ ಗೊನ್ಸಾಲ್ವಿಸ್ ಮತ್ತು ಅರುಣ್ ಫೆರೇರಾ ಅವರಿಗೆ ನಿಯಮಿತ ಜಾಮೀನು ನೀಡಲಾಗಿದ್ದು, ಕವಿ ವರವರ ರಾವ್ ಅವರು ಆರೋಗ್ಯದ ಆಧಾರದ ಮೇಲೆ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ.

ಮತ್ತೊಬ್ಬ ಆರೋಪಿ, ಕಾರ್ಯಕರ್ತ ಗೌತಮ್ ನವ್ಲಾಖಾ ಅವರನ್ನು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಗೃಹಬಂಧನದಲ್ಲಿ ಇರಿಸಲಾಗಿದೆ. ಈ ಪ್ರಕರಣವು ಪುಣೆಯಲ್ಲಿ ಡಿಸೆಂಬರ್ 31, 2017 ರಂದು ನಡೆದ ಎಲ್ಗಾರ್ ಪರಿಷತ್ ಸಮಾವೇಶಕ್ಕೆ ಸಂಬಂಧಿಸಿದೆ, ಪುಣೆ ಪೊಲೀಸರ ಪ್ರಕಾರ ಮಾವೋವಾದಿಗಳಿಂದ ಹಣ ಪಡೆದಿದೆ. ಅಲ್ಲಿ ಮಾಡಿದ ಉದ್ರೇಕಕಾರಿ ಭಾಷಣಗಳು ಮರುದಿನ ಪುಣೆಯ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತು ಎಂದು ಪೊಲೀಸರು ಆರೋಪಿಸಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ವೆರ್ನಾನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೇರಾ ಅವರಿಗೆ ಸುಪ್ರೀಂ ಜಾಮೀನು

ಮಹೇಶ್ ರಾವುತ್‌ ಕುರಿತು ಮಾಹಿತಿ:

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯವರಾದ ಮಹೇಶ್ ರಾವುತ್ ತಮ್ಮ ಜಿಲ್ಲೆಯಲ್ಲಿ ಆದಿವಾಸಿ ಸಮುದಾಯಗಳ ಹಕ್ಕುಗಳಿಗಾಗಿ ಹೋರಾಡುತ್ತಿರುವ ಪ್ರಮುಖ ಯುವ ಕಾರ್ಯಕರ್ತ. ಮಹಾರಾಷ್ಟ್ರದ ಸಣ್ಣ ಹಳ್ಳಿಯಾಗಿರುವ ಲಾಖಾಪುರದಲ್ಲಿ ಹುಟ್ಟಿದ ಮಹೇಶ್, ಗಡ್ಚಿರೋಲಿಯಲ್ಲಿ ಶಾಲಾ ಶಿಕ್ಷಣ ಮುಗಿಸಿ, ಪದವಿ ಶಿಕ್ಷಣಕ್ಕಾಗಿ ನಾಗಪುರಕ್ಕೆ ತೆರಳಿದರು. ನಂತರ ಉನ್ನತ ಶಿಕ್ಷಣಕ್ಕಾಗಿ ಮುಂಬಯಿಯ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್‌ಗೆ ಸೇರಿದರು.

ಶಿಕ್ಷಣ ಮುಗಿಸಿದ ಬಳಿಕ ಅವರು ಗಡ್ಚಿರೋಲಿಯಲ್ಲಿ ಪ್ರಧಾನ ಮಂತ್ರಿ ಗ್ರಾಮೀಣಾಭಿವೃದ್ಧಿ ಫೆಲೋ (ಪಿಎಂಆರ್‌ಡಿಎಫ್) ಆಗಿ ಕೆಲಸ ಮಾಡಿದರು. ದೊಡ್ಡ ಕಾರ್ಪೊರೇಟ್‌ಗಳ ಕಾನೂನುಬಾಹಿರ ಭೂಕಬಳಿಕೆ ವಿರುದ್ಧ ಮೂಲನಿವಾಸಿ ಜನರ ಪ್ರಜಾಸತ್ತಾತ್ಮಕ ಹಕ್ಕುಗಳಿಗೆ ರಕ್ಷಣೆ ನೀಡುವ ಪಂಚಾಯತ್ (ಅಧಿಸೂಚಿತ ಪ್ರದೇಶಗಳಿಗೆ ವಿಸ್ತರಣೆ) ಕಾಯಿದೆ ಮತ್ತು ಅರಣ್ಯ ಹಕ್ಕುಗಳ ಕಾಯಿದೆಗಳ ಪರವಾಗಿ ಅವರು ದಣಿವರಿಯದೇ ಕೆಲಸ ಮಾಡಿದರು. ಮಹೇಶ್ ಅವರು ಸಂವಿಧಾನದ ಚೌಕಟ್ಟಿನಲ್ಲಿಯೇ ಅಂಚಿಗೆ ತಳ್ಳಲ್ಪಟ್ಟ ದುರ್ಬಲ ಸಮುದಾಯಗಳ ಹಕ್ಕುಗಳನ್ನು ರಕ್ಷಿಸಲು ಮತ್ತು ಪ್ರೋತ್ಸಾಹಿಸಲು ನಿರಂತರವಾಗಿ ದುಡಿದರು. ತಮ್ಮ ಫೆಲೋಶಿಪ್ ಮುಗಿದ ಬಳಿಕವೂ ಅವರು ರಾಜ್ಯದ ಆದಿವಾಸಿ ಸಮುದಾಯಗಳ ಜೊತೆಗೆ ಕೆಲಸ ಮಾಡುವುದನ್ನು ಮುಂದುವರಿಸಲು ನಿರ್ಧರಿಸಿದರು.

ಮಹೇಶ್ ರಾವುತ್ ಸಮಾಜಕಲ್ಯಾಣಕ್ಕೆ ಒತ್ತಾಸೆ ನೀಡಲು ಸಾಮೂಹಿಕ ಚಳವಳಿಗಳನ್ನು ಅಯೋಜಿಸಿದರಲ್ಲದೆ ಅಂತಹ ಹಲವು ಚಳವಳಿಗಳಲ್ಲಿ ಭಾಗವಹಿಸಿದರು. ಅವರು ಆದಿವಾಸಿಗಳು ಮತ್ತು ಇತರ ಶೋಷಿತ ವರ್ಗಗಳ ಜನರನ್ನು ಬಲವಂತದಿಂದ ಒಕ್ಕಲೆಬ್ಬಿಸುವ ವಿದ್ಯಮಾನದ ವಿರುದ್ಧ ಹೋರಾಡುವ ವಿಸ್ಥಾಪನ್ ವಿರೋಧಿ ಜನ್ ವಿಕಾಸ್ ಆಂದೋಲನ್ (ವಿವಿಜೆವಿಎ) ಸಂಘಟನೆಯ ಸಹಸಂಚಾಲಕರಾಗಿದ್ದರು. ವಿವಿಜೆವಿಎಯ ಸದಸ್ಯರಾಗಿ ಅವರು ಆ ಪ್ರದೇಶದ ಆದಿವಾಸಿ ಸಮುದಾಯಗಳ ತೆಂಡು ಎಲೆ ಸಂಗ್ರಹಿಸುವ ಕಾರ್ಮಿಕರನ್ನು ಸಂಘಟಿಸಿ, ಅವರು ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆಯೇ ನೇರವಾಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದಾದ ವ್ಯವಸ್ಥೆ ಮಾಡಿದರು.

ಆ ಪ್ರದೇಶದ ಆದಿವಾಸಿಗಳ ಪರವಾಗಿ ಪ್ರಚಾರ ಮಾಡುತ್ತಲೇ ಅವರು ದಿವಂಗತ ಬಿ.ಡಿ. ಶರ್ಮಾ ಅವರು ಸ್ಥಾಪಿಸಿದ್ದ ಭಾರತ್ ಜನ ಆಂದೋಲನ್ (ಬಿಜೆಎ) ಸಂಘಟನೆಗೂ ಸೇರಿದರು. ಬಿಜೆಎ ಜೊತೆ ತನ್ನ ಕೆಲಸದ ಮೂಲಕ ಅವರು ಸೂರಜ್‌ಗಢ್ ಮೈನಿಂಗ್ ಪ್ರೊಜೆಕ್ಟ್ ಸೇರಿದಂತೆ ಹಲವಾರು ಗಣಿಗಾರಿಕಾ ಯೋಜನೆಗಳಿಂದ ಬಾಧಿತವಾದ ಪ್ರದೇಶಗಳಲ್ಲಿ ’ಭಾಗವಹಿಸುವಿಕೆಯ ಮೂಲಕ ತಾವೇ ನಿರ್ಧಾರ ಕೈಗೊಳ್ಳುವುದರ ಪರವಾಗಿ ಜನರನ್ನು ಸಂಘಟಿಸುವುದರಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ಪೊಲೀಸ್ ಮತ್ತು ಪ್ರಭುತ್ವದ ಹಲವಾರು ಅಧಿಕಾರಿಗಳ ದೌರ್ಜನ್ಯ ಮತ್ತು ಅತಿರೇಕಗಳ ವಿರುದ್ಧ ಅವರ ಹೋರಾಟದ ಪರಿಣಾಮವಾಗಿ ಅವರ ವಿರುದ್ಧ ಹಲವಾರು ಪ್ರಕರಣಗಳು ದಾಖಲಾದವು. ಅವರ ಪಿಎಂಆರ್‌ಡಿಎಫ್ ಸಂಗಾತಿಗಳು ಬರೆದಿರುವ ಪತ್ರವೊಂದರ ಪ್ರಕಾರ, ಮಹೇಶ್ ಅವರ ವಿರುದ್ಧ ಸರಕಾರದ ದಮನವು 2013ರಲ್ಲಿಯೇ ಆರಂಭವಾಗಿದ್ದು, ಅವರ ನಿರಂತರ ರಾಜಕೀಯ ಚಟುವಟಿಕೆಗಳು ಅವರಿಗೆ ಕಿರುಕುಳ ನೀಡುವುದಕ್ಕೆ ಕಾರಣಗಳಲ್ಲಿ ಒಂದು ಎಂದು ಹೇಳಲಾಗಿದೆ.

2018ರಲ್ಲಿ ಎಲ್ಗಾರ್ ಪರಿಷದ್‌ನ ಸಂಘಟನೆಯಲ್ಲಿ ಶಾಮೀಲಾತಿ ಮತ್ತು ತಥಾಕಥಿತ ಮಾವೋವಾದಿ ಸಂಪರ್ಕದ ಆರೋಪ ಹೊರಿಸಿ ಪುಣೆ ಪೊಲೀಸರು ಮಹೇಶ್ ಅವರನ್ನು ಬಂಧಿಸಿದರು. ಕಾನೂನುಬಾಹಿರ ಚಟುವಟಿಕೆ ತಡೆ ಕಾಯಿದೆ (ಯುಎಪಿಎ)ಯ ಕೆಲವು ವಿಧಿಗಳ ಅಡಿಯಲ್ಲಿ ಅವರನ್ನು ಅವರ ನಾಗಪುರದ ಮನೆಯಿಂದ ಬಂಧಿಸಲಾಯಿತು. ವಾಸ್ತವವಾಗಿ ಅವರು ಎಲ್ಗಾರ್ ಪರಿಷದ್‌ನ ಆಯೋಜನೆಯಲ್ಲಿ ಭಾಗಿಯಾಗಿರಲೂ ಇಲ್ಲ, ಡಿಸೆಂಬರ್ 31ರ ಕಾರ್ಯಕ್ರಮಗಳಲ್ಲಿ ಭಾಗವಹಿಸಿರಲೂ ಇಲ್ಲ. ಅವರ ಬಂಧನವು ಪ್ರಭುತ್ವ ಮತ್ತು ಕಾರ್ಪೊರೇಟ್‌ಗಳ ನಡುವಿನ ಕೂಟದ ಎದುರು ಹೋರಾಡುತ್ತಿರುವ ರಾಜ್ಯದ ಮಾನವ ಹಕ್ಕು ರಕ್ಷಕರ ವಿರುದ್ಧ ನಡೆಸಿದ ಸ್ಪಷ್ಟ ದಮನವಾಗಿದೆ. ಅಂಚಿಗೆ ಸರಿಸಲ್ಪಟ್ಟ ದಮನಿತ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳನ್ನು ಎತ್ತಿಹಿಡಿಯುವಲ್ಲಿ ಅವರ ದೇಣಿಗೆಯೇ ಅವರಿಗೆ ಕಿರುಕುಳ ನೀಡುವುದಕ್ಕೆ ಮತ್ತು ನಂತರ ಅವರ ಬಂಧನಕ್ಕೆ ಕಾರಣವಾಗಿದೆ. ಅವರ ಕಾರಾಗೃಹವಾಸವು ಪ್ರಭುತ್ವವು ಕಾಲಡಿಯಲ್ಲಿ ಹೊಸಕಿಹಾಕುತ್ತಿರುವ ಸಂವಿಧಾನದ ಮೌಲ್ಯಗಳನ್ನು ರಕ್ಷಿಸುತ್ತಿರುವ ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ಅದೇ ಪ್ರಭುತ್ವ ನಡೆಸುತ್ತಿರುವ ದಬ್ಬಾಳಿಕೆಗೆ ಜೀವಂತ ಸಾಕ್ಷಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...