Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಮಹೇಶ್ ರಾವುತ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಮಹೇಶ್ ರಾವುತ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಎಲ್ಗಾರ್ ಪರಿಷದ್ ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಬಂಧಿತರಾಗಿದ್ದ ಕಾರ್ಯಕರ್ತ ಮಹೇಶ್ ರಾವುತ್‌ಗೆ ಬಾಂಬೆ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಎ ಎಸ್ ಗಡ್ಕರಿ ಮತ್ತು ಶರ್ಮಿಳಾ ದೇಶಮುಖ್ ಅವರ ವಿಭಾಗೀಯ ಪೀಠವು ಅರ್ಹತೆಯ ಆಧಾರದ ಮೇಲೆ ಜಾಮೀನು ಕೋರಿ ರಾವುತ್ ಮಾಡಿದ ಮನವಿಯನ್ನು ಅಂಗೀಕರಿಸಿತು.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಎರಡು ವಾರಗಳ ಕಾಲ ತನ್ನ ಆದೇಶಕ್ಕೆ ತಡೆ ನೀಡುವಂತೆ ನ್ಯಾಯಾಲಯವನ್ನು ಕೋರಿದೆ. ನಂತರ ಪೀಠವು ತನ್ನ ಆದೇಶಕ್ಕೆ ಒಂದು ವಾರ ತಡೆ ನೀಡಿತು.

ರಾವತ್ ಅವರನ್ನು ಜೂನ್ 2018ರಲ್ಲಿ ಬಂಧಿಸಲಾಯಿತು ಮತ್ತು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರು ವಿಶೇಷ ಎನ್‌ಐಎ ನ್ಯಾಯಾಲಯವು ಜಾಮೀನು ನಿರಾಕರಿಸಿದ ಆದೇಶವನ್ನು ಪ್ರಶ್ನಿಸಿ, ಜಾಮೀನು ಕೋರಿ 2022ರಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರಾವುತ್ ತನ್ನ ಮನವಿಯಲ್ಲಿ ತನ್ನ ಕಸ್ಟಡಿಯು ಅನಗತ್ಯವಾಗಿದೆ ಮತ್ತು ಇದು ಸಂವಿಧಾನದ 14 ಮತ್ತು 21 ನೇ ವಿಧಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಸಾಂವಿಧಾನಿಕ ಆಧಾರದ ಮೇಲೆ ಜಾಮೀನು ಪಡೆಯಲು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ದಾಖಲಿಸಲಾದ ಆರೋಪಿಗೆ ಮಂಜೂರು ಮಾಡುವುದು ಸಮರ್ಥನೀಯವಲ್ಲ ಎಂದು ಎನ್ಐಎ ಮನವಿಯನ್ನು ವಿರೋಧಿಸಿದೆ.

ಈ ಪ್ರಕರಣದಲ್ಲಿ 16 ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಐವರು ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ. ವಿದ್ವಾಂಸ-ಕಾರ್ಯಕರ್ತ ಆನಂದ್ ತೇಲ್ತುಂಬ್ಡೆ, ವಕೀಲೆ ಸುಧಾ ಭಾರದ್ವಾಜ್, ವೆರ್ನಾನ್ ಗೊನ್ಸಾಲ್ವಿಸ್ ಮತ್ತು ಅರುಣ್ ಫೆರೇರಾ ಅವರಿಗೆ ನಿಯಮಿತ ಜಾಮೀನು ನೀಡಲಾಗಿದ್ದು, ಕವಿ ವರವರ ರಾವ್ ಅವರು ಆರೋಗ್ಯದ ಆಧಾರದ ಮೇಲೆ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ.

ಮತ್ತೊಬ್ಬ ಆರೋಪಿ, ಕಾರ್ಯಕರ್ತ ಗೌತಮ್ ನವ್ಲಾಖಾ ಅವರನ್ನು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಗೃಹಬಂಧನದಲ್ಲಿ ಇರಿಸಲಾಗಿದೆ. ಈ ಪ್ರಕರಣವು ಪುಣೆಯಲ್ಲಿ ಡಿಸೆಂಬರ್ 31, 2017 ರಂದು ನಡೆದ ಎಲ್ಗಾರ್ ಪರಿಷತ್ ಸಮಾವೇಶಕ್ಕೆ ಸಂಬಂಧಿಸಿದೆ, ಪುಣೆ ಪೊಲೀಸರ ಪ್ರಕಾರ ಮಾವೋವಾದಿಗಳಿಂದ ಹಣ ಪಡೆದಿದೆ. ಅಲ್ಲಿ ಮಾಡಿದ ಉದ್ರೇಕಕಾರಿ ಭಾಷಣಗಳು ಮರುದಿನ ಪುಣೆಯ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತು ಎಂದು ಪೊಲೀಸರು ಆರೋಪಿಸಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ವೆರ್ನಾನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೇರಾ ಅವರಿಗೆ ಸುಪ್ರೀಂ ಜಾಮೀನು

ಮಹೇಶ್ ರಾವುತ್‌ ಕುರಿತು ಮಾಹಿತಿ:

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯವರಾದ ಮಹೇಶ್ ರಾವುತ್ ತಮ್ಮ ಜಿಲ್ಲೆಯಲ್ಲಿ ಆದಿವಾಸಿ ಸಮುದಾಯಗಳ ಹಕ್ಕುಗಳಿಗಾಗಿ ಹೋರಾಡುತ್ತಿರುವ ಪ್ರಮುಖ ಯುವ ಕಾರ್ಯಕರ್ತ. ಮಹಾರಾಷ್ಟ್ರದ ಸಣ್ಣ ಹಳ್ಳಿಯಾಗಿರುವ ಲಾಖಾಪುರದಲ್ಲಿ ಹುಟ್ಟಿದ ಮಹೇಶ್, ಗಡ್ಚಿರೋಲಿಯಲ್ಲಿ ಶಾಲಾ ಶಿಕ್ಷಣ ಮುಗಿಸಿ, ಪದವಿ ಶಿಕ್ಷಣಕ್ಕಾಗಿ ನಾಗಪುರಕ್ಕೆ ತೆರಳಿದರು. ನಂತರ ಉನ್ನತ ಶಿಕ್ಷಣಕ್ಕಾಗಿ ಮುಂಬಯಿಯ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್‌ಗೆ ಸೇರಿದರು.

ಶಿಕ್ಷಣ ಮುಗಿಸಿದ ಬಳಿಕ ಅವರು ಗಡ್ಚಿರೋಲಿಯಲ್ಲಿ ಪ್ರಧಾನ ಮಂತ್ರಿ ಗ್ರಾಮೀಣಾಭಿವೃದ್ಧಿ ಫೆಲೋ (ಪಿಎಂಆರ್‌ಡಿಎಫ್) ಆಗಿ ಕೆಲಸ ಮಾಡಿದರು. ದೊಡ್ಡ ಕಾರ್ಪೊರೇಟ್‌ಗಳ ಕಾನೂನುಬಾಹಿರ ಭೂಕಬಳಿಕೆ ವಿರುದ್ಧ ಮೂಲನಿವಾಸಿ ಜನರ ಪ್ರಜಾಸತ್ತಾತ್ಮಕ ಹಕ್ಕುಗಳಿಗೆ ರಕ್ಷಣೆ ನೀಡುವ ಪಂಚಾಯತ್ (ಅಧಿಸೂಚಿತ ಪ್ರದೇಶಗಳಿಗೆ ವಿಸ್ತರಣೆ) ಕಾಯಿದೆ ಮತ್ತು ಅರಣ್ಯ ಹಕ್ಕುಗಳ ಕಾಯಿದೆಗಳ ಪರವಾಗಿ ಅವರು ದಣಿವರಿಯದೇ ಕೆಲಸ ಮಾಡಿದರು. ಮಹೇಶ್ ಅವರು ಸಂವಿಧಾನದ ಚೌಕಟ್ಟಿನಲ್ಲಿಯೇ ಅಂಚಿಗೆ ತಳ್ಳಲ್ಪಟ್ಟ ದುರ್ಬಲ ಸಮುದಾಯಗಳ ಹಕ್ಕುಗಳನ್ನು ರಕ್ಷಿಸಲು ಮತ್ತು ಪ್ರೋತ್ಸಾಹಿಸಲು ನಿರಂತರವಾಗಿ ದುಡಿದರು. ತಮ್ಮ ಫೆಲೋಶಿಪ್ ಮುಗಿದ ಬಳಿಕವೂ ಅವರು ರಾಜ್ಯದ ಆದಿವಾಸಿ ಸಮುದಾಯಗಳ ಜೊತೆಗೆ ಕೆಲಸ ಮಾಡುವುದನ್ನು ಮುಂದುವರಿಸಲು ನಿರ್ಧರಿಸಿದರು.

ಮಹೇಶ್ ರಾವುತ್ ಸಮಾಜಕಲ್ಯಾಣಕ್ಕೆ ಒತ್ತಾಸೆ ನೀಡಲು ಸಾಮೂಹಿಕ ಚಳವಳಿಗಳನ್ನು ಅಯೋಜಿಸಿದರಲ್ಲದೆ ಅಂತಹ ಹಲವು ಚಳವಳಿಗಳಲ್ಲಿ ಭಾಗವಹಿಸಿದರು. ಅವರು ಆದಿವಾಸಿಗಳು ಮತ್ತು ಇತರ ಶೋಷಿತ ವರ್ಗಗಳ ಜನರನ್ನು ಬಲವಂತದಿಂದ ಒಕ್ಕಲೆಬ್ಬಿಸುವ ವಿದ್ಯಮಾನದ ವಿರುದ್ಧ ಹೋರಾಡುವ ವಿಸ್ಥಾಪನ್ ವಿರೋಧಿ ಜನ್ ವಿಕಾಸ್ ಆಂದೋಲನ್ (ವಿವಿಜೆವಿಎ) ಸಂಘಟನೆಯ ಸಹಸಂಚಾಲಕರಾಗಿದ್ದರು. ವಿವಿಜೆವಿಎಯ ಸದಸ್ಯರಾಗಿ ಅವರು ಆ ಪ್ರದೇಶದ ಆದಿವಾಸಿ ಸಮುದಾಯಗಳ ತೆಂಡು ಎಲೆ ಸಂಗ್ರಹಿಸುವ ಕಾರ್ಮಿಕರನ್ನು ಸಂಘಟಿಸಿ, ಅವರು ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆಯೇ ನೇರವಾಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದಾದ ವ್ಯವಸ್ಥೆ ಮಾಡಿದರು.

ಆ ಪ್ರದೇಶದ ಆದಿವಾಸಿಗಳ ಪರವಾಗಿ ಪ್ರಚಾರ ಮಾಡುತ್ತಲೇ ಅವರು ದಿವಂಗತ ಬಿ.ಡಿ. ಶರ್ಮಾ ಅವರು ಸ್ಥಾಪಿಸಿದ್ದ ಭಾರತ್ ಜನ ಆಂದೋಲನ್ (ಬಿಜೆಎ) ಸಂಘಟನೆಗೂ ಸೇರಿದರು. ಬಿಜೆಎ ಜೊತೆ ತನ್ನ ಕೆಲಸದ ಮೂಲಕ ಅವರು ಸೂರಜ್‌ಗಢ್ ಮೈನಿಂಗ್ ಪ್ರೊಜೆಕ್ಟ್ ಸೇರಿದಂತೆ ಹಲವಾರು ಗಣಿಗಾರಿಕಾ ಯೋಜನೆಗಳಿಂದ ಬಾಧಿತವಾದ ಪ್ರದೇಶಗಳಲ್ಲಿ ’ಭಾಗವಹಿಸುವಿಕೆಯ ಮೂಲಕ ತಾವೇ ನಿರ್ಧಾರ ಕೈಗೊಳ್ಳುವುದರ ಪರವಾಗಿ ಜನರನ್ನು ಸಂಘಟಿಸುವುದರಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ಪೊಲೀಸ್ ಮತ್ತು ಪ್ರಭುತ್ವದ ಹಲವಾರು ಅಧಿಕಾರಿಗಳ ದೌರ್ಜನ್ಯ ಮತ್ತು ಅತಿರೇಕಗಳ ವಿರುದ್ಧ ಅವರ ಹೋರಾಟದ ಪರಿಣಾಮವಾಗಿ ಅವರ ವಿರುದ್ಧ ಹಲವಾರು ಪ್ರಕರಣಗಳು ದಾಖಲಾದವು. ಅವರ ಪಿಎಂಆರ್‌ಡಿಎಫ್ ಸಂಗಾತಿಗಳು ಬರೆದಿರುವ ಪತ್ರವೊಂದರ ಪ್ರಕಾರ, ಮಹೇಶ್ ಅವರ ವಿರುದ್ಧ ಸರಕಾರದ ದಮನವು 2013ರಲ್ಲಿಯೇ ಆರಂಭವಾಗಿದ್ದು, ಅವರ ನಿರಂತರ ರಾಜಕೀಯ ಚಟುವಟಿಕೆಗಳು ಅವರಿಗೆ ಕಿರುಕುಳ ನೀಡುವುದಕ್ಕೆ ಕಾರಣಗಳಲ್ಲಿ ಒಂದು ಎಂದು ಹೇಳಲಾಗಿದೆ.

2018ರಲ್ಲಿ ಎಲ್ಗಾರ್ ಪರಿಷದ್‌ನ ಸಂಘಟನೆಯಲ್ಲಿ ಶಾಮೀಲಾತಿ ಮತ್ತು ತಥಾಕಥಿತ ಮಾವೋವಾದಿ ಸಂಪರ್ಕದ ಆರೋಪ ಹೊರಿಸಿ ಪುಣೆ ಪೊಲೀಸರು ಮಹೇಶ್ ಅವರನ್ನು ಬಂಧಿಸಿದರು. ಕಾನೂನುಬಾಹಿರ ಚಟುವಟಿಕೆ ತಡೆ ಕಾಯಿದೆ (ಯುಎಪಿಎ)ಯ ಕೆಲವು ವಿಧಿಗಳ ಅಡಿಯಲ್ಲಿ ಅವರನ್ನು ಅವರ ನಾಗಪುರದ ಮನೆಯಿಂದ ಬಂಧಿಸಲಾಯಿತು. ವಾಸ್ತವವಾಗಿ ಅವರು ಎಲ್ಗಾರ್ ಪರಿಷದ್‌ನ ಆಯೋಜನೆಯಲ್ಲಿ ಭಾಗಿಯಾಗಿರಲೂ ಇಲ್ಲ, ಡಿಸೆಂಬರ್ 31ರ ಕಾರ್ಯಕ್ರಮಗಳಲ್ಲಿ ಭಾಗವಹಿಸಿರಲೂ ಇಲ್ಲ. ಅವರ ಬಂಧನವು ಪ್ರಭುತ್ವ ಮತ್ತು ಕಾರ್ಪೊರೇಟ್‌ಗಳ ನಡುವಿನ ಕೂಟದ ಎದುರು ಹೋರಾಡುತ್ತಿರುವ ರಾಜ್ಯದ ಮಾನವ ಹಕ್ಕು ರಕ್ಷಕರ ವಿರುದ್ಧ ನಡೆಸಿದ ಸ್ಪಷ್ಟ ದಮನವಾಗಿದೆ. ಅಂಚಿಗೆ ಸರಿಸಲ್ಪಟ್ಟ ದಮನಿತ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳನ್ನು ಎತ್ತಿಹಿಡಿಯುವಲ್ಲಿ ಅವರ ದೇಣಿಗೆಯೇ ಅವರಿಗೆ ಕಿರುಕುಳ ನೀಡುವುದಕ್ಕೆ ಮತ್ತು ನಂತರ ಅವರ ಬಂಧನಕ್ಕೆ ಕಾರಣವಾಗಿದೆ. ಅವರ ಕಾರಾಗೃಹವಾಸವು ಪ್ರಭುತ್ವವು ಕಾಲಡಿಯಲ್ಲಿ ಹೊಸಕಿಹಾಕುತ್ತಿರುವ ಸಂವಿಧಾನದ ಮೌಲ್ಯಗಳನ್ನು ರಕ್ಷಿಸುತ್ತಿರುವ ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ಅದೇ ಪ್ರಭುತ್ವ ನಡೆಸುತ್ತಿರುವ ದಬ್ಬಾಳಿಕೆಗೆ ಜೀವಂತ ಸಾಕ್ಷಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...