Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಮಹೇಶ್ ರಾವುತ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಮಹೇಶ್ ರಾವುತ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಎಲ್ಗಾರ್ ಪರಿಷದ್ ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಬಂಧಿತರಾಗಿದ್ದ ಕಾರ್ಯಕರ್ತ ಮಹೇಶ್ ರಾವುತ್‌ಗೆ ಬಾಂಬೆ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಎ ಎಸ್ ಗಡ್ಕರಿ ಮತ್ತು ಶರ್ಮಿಳಾ ದೇಶಮುಖ್ ಅವರ ವಿಭಾಗೀಯ ಪೀಠವು ಅರ್ಹತೆಯ ಆಧಾರದ ಮೇಲೆ ಜಾಮೀನು ಕೋರಿ ರಾವುತ್ ಮಾಡಿದ ಮನವಿಯನ್ನು ಅಂಗೀಕರಿಸಿತು.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಎರಡು ವಾರಗಳ ಕಾಲ ತನ್ನ ಆದೇಶಕ್ಕೆ ತಡೆ ನೀಡುವಂತೆ ನ್ಯಾಯಾಲಯವನ್ನು ಕೋರಿದೆ. ನಂತರ ಪೀಠವು ತನ್ನ ಆದೇಶಕ್ಕೆ ಒಂದು ವಾರ ತಡೆ ನೀಡಿತು.

ರಾವತ್ ಅವರನ್ನು ಜೂನ್ 2018ರಲ್ಲಿ ಬಂಧಿಸಲಾಯಿತು ಮತ್ತು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರು ವಿಶೇಷ ಎನ್‌ಐಎ ನ್ಯಾಯಾಲಯವು ಜಾಮೀನು ನಿರಾಕರಿಸಿದ ಆದೇಶವನ್ನು ಪ್ರಶ್ನಿಸಿ, ಜಾಮೀನು ಕೋರಿ 2022ರಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರಾವುತ್ ತನ್ನ ಮನವಿಯಲ್ಲಿ ತನ್ನ ಕಸ್ಟಡಿಯು ಅನಗತ್ಯವಾಗಿದೆ ಮತ್ತು ಇದು ಸಂವಿಧಾನದ 14 ಮತ್ತು 21 ನೇ ವಿಧಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಸಾಂವಿಧಾನಿಕ ಆಧಾರದ ಮೇಲೆ ಜಾಮೀನು ಪಡೆಯಲು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ದಾಖಲಿಸಲಾದ ಆರೋಪಿಗೆ ಮಂಜೂರು ಮಾಡುವುದು ಸಮರ್ಥನೀಯವಲ್ಲ ಎಂದು ಎನ್ಐಎ ಮನವಿಯನ್ನು ವಿರೋಧಿಸಿದೆ.

ಈ ಪ್ರಕರಣದಲ್ಲಿ 16 ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಐವರು ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ. ವಿದ್ವಾಂಸ-ಕಾರ್ಯಕರ್ತ ಆನಂದ್ ತೇಲ್ತುಂಬ್ಡೆ, ವಕೀಲೆ ಸುಧಾ ಭಾರದ್ವಾಜ್, ವೆರ್ನಾನ್ ಗೊನ್ಸಾಲ್ವಿಸ್ ಮತ್ತು ಅರುಣ್ ಫೆರೇರಾ ಅವರಿಗೆ ನಿಯಮಿತ ಜಾಮೀನು ನೀಡಲಾಗಿದ್ದು, ಕವಿ ವರವರ ರಾವ್ ಅವರು ಆರೋಗ್ಯದ ಆಧಾರದ ಮೇಲೆ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ.

ಮತ್ತೊಬ್ಬ ಆರೋಪಿ, ಕಾರ್ಯಕರ್ತ ಗೌತಮ್ ನವ್ಲಾಖಾ ಅವರನ್ನು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಗೃಹಬಂಧನದಲ್ಲಿ ಇರಿಸಲಾಗಿದೆ. ಈ ಪ್ರಕರಣವು ಪುಣೆಯಲ್ಲಿ ಡಿಸೆಂಬರ್ 31, 2017 ರಂದು ನಡೆದ ಎಲ್ಗಾರ್ ಪರಿಷತ್ ಸಮಾವೇಶಕ್ಕೆ ಸಂಬಂಧಿಸಿದೆ, ಪುಣೆ ಪೊಲೀಸರ ಪ್ರಕಾರ ಮಾವೋವಾದಿಗಳಿಂದ ಹಣ ಪಡೆದಿದೆ. ಅಲ್ಲಿ ಮಾಡಿದ ಉದ್ರೇಕಕಾರಿ ಭಾಷಣಗಳು ಮರುದಿನ ಪುಣೆಯ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತು ಎಂದು ಪೊಲೀಸರು ಆರೋಪಿಸಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ವೆರ್ನಾನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೇರಾ ಅವರಿಗೆ ಸುಪ್ರೀಂ ಜಾಮೀನು

ಮಹೇಶ್ ರಾವುತ್‌ ಕುರಿತು ಮಾಹಿತಿ:

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯವರಾದ ಮಹೇಶ್ ರಾವುತ್ ತಮ್ಮ ಜಿಲ್ಲೆಯಲ್ಲಿ ಆದಿವಾಸಿ ಸಮುದಾಯಗಳ ಹಕ್ಕುಗಳಿಗಾಗಿ ಹೋರಾಡುತ್ತಿರುವ ಪ್ರಮುಖ ಯುವ ಕಾರ್ಯಕರ್ತ. ಮಹಾರಾಷ್ಟ್ರದ ಸಣ್ಣ ಹಳ್ಳಿಯಾಗಿರುವ ಲಾಖಾಪುರದಲ್ಲಿ ಹುಟ್ಟಿದ ಮಹೇಶ್, ಗಡ್ಚಿರೋಲಿಯಲ್ಲಿ ಶಾಲಾ ಶಿಕ್ಷಣ ಮುಗಿಸಿ, ಪದವಿ ಶಿಕ್ಷಣಕ್ಕಾಗಿ ನಾಗಪುರಕ್ಕೆ ತೆರಳಿದರು. ನಂತರ ಉನ್ನತ ಶಿಕ್ಷಣಕ್ಕಾಗಿ ಮುಂಬಯಿಯ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್‌ಗೆ ಸೇರಿದರು.

ಶಿಕ್ಷಣ ಮುಗಿಸಿದ ಬಳಿಕ ಅವರು ಗಡ್ಚಿರೋಲಿಯಲ್ಲಿ ಪ್ರಧಾನ ಮಂತ್ರಿ ಗ್ರಾಮೀಣಾಭಿವೃದ್ಧಿ ಫೆಲೋ (ಪಿಎಂಆರ್‌ಡಿಎಫ್) ಆಗಿ ಕೆಲಸ ಮಾಡಿದರು. ದೊಡ್ಡ ಕಾರ್ಪೊರೇಟ್‌ಗಳ ಕಾನೂನುಬಾಹಿರ ಭೂಕಬಳಿಕೆ ವಿರುದ್ಧ ಮೂಲನಿವಾಸಿ ಜನರ ಪ್ರಜಾಸತ್ತಾತ್ಮಕ ಹಕ್ಕುಗಳಿಗೆ ರಕ್ಷಣೆ ನೀಡುವ ಪಂಚಾಯತ್ (ಅಧಿಸೂಚಿತ ಪ್ರದೇಶಗಳಿಗೆ ವಿಸ್ತರಣೆ) ಕಾಯಿದೆ ಮತ್ತು ಅರಣ್ಯ ಹಕ್ಕುಗಳ ಕಾಯಿದೆಗಳ ಪರವಾಗಿ ಅವರು ದಣಿವರಿಯದೇ ಕೆಲಸ ಮಾಡಿದರು. ಮಹೇಶ್ ಅವರು ಸಂವಿಧಾನದ ಚೌಕಟ್ಟಿನಲ್ಲಿಯೇ ಅಂಚಿಗೆ ತಳ್ಳಲ್ಪಟ್ಟ ದುರ್ಬಲ ಸಮುದಾಯಗಳ ಹಕ್ಕುಗಳನ್ನು ರಕ್ಷಿಸಲು ಮತ್ತು ಪ್ರೋತ್ಸಾಹಿಸಲು ನಿರಂತರವಾಗಿ ದುಡಿದರು. ತಮ್ಮ ಫೆಲೋಶಿಪ್ ಮುಗಿದ ಬಳಿಕವೂ ಅವರು ರಾಜ್ಯದ ಆದಿವಾಸಿ ಸಮುದಾಯಗಳ ಜೊತೆಗೆ ಕೆಲಸ ಮಾಡುವುದನ್ನು ಮುಂದುವರಿಸಲು ನಿರ್ಧರಿಸಿದರು.

ಮಹೇಶ್ ರಾವುತ್ ಸಮಾಜಕಲ್ಯಾಣಕ್ಕೆ ಒತ್ತಾಸೆ ನೀಡಲು ಸಾಮೂಹಿಕ ಚಳವಳಿಗಳನ್ನು ಅಯೋಜಿಸಿದರಲ್ಲದೆ ಅಂತಹ ಹಲವು ಚಳವಳಿಗಳಲ್ಲಿ ಭಾಗವಹಿಸಿದರು. ಅವರು ಆದಿವಾಸಿಗಳು ಮತ್ತು ಇತರ ಶೋಷಿತ ವರ್ಗಗಳ ಜನರನ್ನು ಬಲವಂತದಿಂದ ಒಕ್ಕಲೆಬ್ಬಿಸುವ ವಿದ್ಯಮಾನದ ವಿರುದ್ಧ ಹೋರಾಡುವ ವಿಸ್ಥಾಪನ್ ವಿರೋಧಿ ಜನ್ ವಿಕಾಸ್ ಆಂದೋಲನ್ (ವಿವಿಜೆವಿಎ) ಸಂಘಟನೆಯ ಸಹಸಂಚಾಲಕರಾಗಿದ್ದರು. ವಿವಿಜೆವಿಎಯ ಸದಸ್ಯರಾಗಿ ಅವರು ಆ ಪ್ರದೇಶದ ಆದಿವಾಸಿ ಸಮುದಾಯಗಳ ತೆಂಡು ಎಲೆ ಸಂಗ್ರಹಿಸುವ ಕಾರ್ಮಿಕರನ್ನು ಸಂಘಟಿಸಿ, ಅವರು ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆಯೇ ನೇರವಾಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದಾದ ವ್ಯವಸ್ಥೆ ಮಾಡಿದರು.

ಆ ಪ್ರದೇಶದ ಆದಿವಾಸಿಗಳ ಪರವಾಗಿ ಪ್ರಚಾರ ಮಾಡುತ್ತಲೇ ಅವರು ದಿವಂಗತ ಬಿ.ಡಿ. ಶರ್ಮಾ ಅವರು ಸ್ಥಾಪಿಸಿದ್ದ ಭಾರತ್ ಜನ ಆಂದೋಲನ್ (ಬಿಜೆಎ) ಸಂಘಟನೆಗೂ ಸೇರಿದರು. ಬಿಜೆಎ ಜೊತೆ ತನ್ನ ಕೆಲಸದ ಮೂಲಕ ಅವರು ಸೂರಜ್‌ಗಢ್ ಮೈನಿಂಗ್ ಪ್ರೊಜೆಕ್ಟ್ ಸೇರಿದಂತೆ ಹಲವಾರು ಗಣಿಗಾರಿಕಾ ಯೋಜನೆಗಳಿಂದ ಬಾಧಿತವಾದ ಪ್ರದೇಶಗಳಲ್ಲಿ ’ಭಾಗವಹಿಸುವಿಕೆಯ ಮೂಲಕ ತಾವೇ ನಿರ್ಧಾರ ಕೈಗೊಳ್ಳುವುದರ ಪರವಾಗಿ ಜನರನ್ನು ಸಂಘಟಿಸುವುದರಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ಪೊಲೀಸ್ ಮತ್ತು ಪ್ರಭುತ್ವದ ಹಲವಾರು ಅಧಿಕಾರಿಗಳ ದೌರ್ಜನ್ಯ ಮತ್ತು ಅತಿರೇಕಗಳ ವಿರುದ್ಧ ಅವರ ಹೋರಾಟದ ಪರಿಣಾಮವಾಗಿ ಅವರ ವಿರುದ್ಧ ಹಲವಾರು ಪ್ರಕರಣಗಳು ದಾಖಲಾದವು. ಅವರ ಪಿಎಂಆರ್‌ಡಿಎಫ್ ಸಂಗಾತಿಗಳು ಬರೆದಿರುವ ಪತ್ರವೊಂದರ ಪ್ರಕಾರ, ಮಹೇಶ್ ಅವರ ವಿರುದ್ಧ ಸರಕಾರದ ದಮನವು 2013ರಲ್ಲಿಯೇ ಆರಂಭವಾಗಿದ್ದು, ಅವರ ನಿರಂತರ ರಾಜಕೀಯ ಚಟುವಟಿಕೆಗಳು ಅವರಿಗೆ ಕಿರುಕುಳ ನೀಡುವುದಕ್ಕೆ ಕಾರಣಗಳಲ್ಲಿ ಒಂದು ಎಂದು ಹೇಳಲಾಗಿದೆ.

2018ರಲ್ಲಿ ಎಲ್ಗಾರ್ ಪರಿಷದ್‌ನ ಸಂಘಟನೆಯಲ್ಲಿ ಶಾಮೀಲಾತಿ ಮತ್ತು ತಥಾಕಥಿತ ಮಾವೋವಾದಿ ಸಂಪರ್ಕದ ಆರೋಪ ಹೊರಿಸಿ ಪುಣೆ ಪೊಲೀಸರು ಮಹೇಶ್ ಅವರನ್ನು ಬಂಧಿಸಿದರು. ಕಾನೂನುಬಾಹಿರ ಚಟುವಟಿಕೆ ತಡೆ ಕಾಯಿದೆ (ಯುಎಪಿಎ)ಯ ಕೆಲವು ವಿಧಿಗಳ ಅಡಿಯಲ್ಲಿ ಅವರನ್ನು ಅವರ ನಾಗಪುರದ ಮನೆಯಿಂದ ಬಂಧಿಸಲಾಯಿತು. ವಾಸ್ತವವಾಗಿ ಅವರು ಎಲ್ಗಾರ್ ಪರಿಷದ್‌ನ ಆಯೋಜನೆಯಲ್ಲಿ ಭಾಗಿಯಾಗಿರಲೂ ಇಲ್ಲ, ಡಿಸೆಂಬರ್ 31ರ ಕಾರ್ಯಕ್ರಮಗಳಲ್ಲಿ ಭಾಗವಹಿಸಿರಲೂ ಇಲ್ಲ. ಅವರ ಬಂಧನವು ಪ್ರಭುತ್ವ ಮತ್ತು ಕಾರ್ಪೊರೇಟ್‌ಗಳ ನಡುವಿನ ಕೂಟದ ಎದುರು ಹೋರಾಡುತ್ತಿರುವ ರಾಜ್ಯದ ಮಾನವ ಹಕ್ಕು ರಕ್ಷಕರ ವಿರುದ್ಧ ನಡೆಸಿದ ಸ್ಪಷ್ಟ ದಮನವಾಗಿದೆ. ಅಂಚಿಗೆ ಸರಿಸಲ್ಪಟ್ಟ ದಮನಿತ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳನ್ನು ಎತ್ತಿಹಿಡಿಯುವಲ್ಲಿ ಅವರ ದೇಣಿಗೆಯೇ ಅವರಿಗೆ ಕಿರುಕುಳ ನೀಡುವುದಕ್ಕೆ ಮತ್ತು ನಂತರ ಅವರ ಬಂಧನಕ್ಕೆ ಕಾರಣವಾಗಿದೆ. ಅವರ ಕಾರಾಗೃಹವಾಸವು ಪ್ರಭುತ್ವವು ಕಾಲಡಿಯಲ್ಲಿ ಹೊಸಕಿಹಾಕುತ್ತಿರುವ ಸಂವಿಧಾನದ ಮೌಲ್ಯಗಳನ್ನು ರಕ್ಷಿಸುತ್ತಿರುವ ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ಅದೇ ಪ್ರಭುತ್ವ ನಡೆಸುತ್ತಿರುವ ದಬ್ಬಾಳಿಕೆಗೆ ಜೀವಂತ ಸಾಕ್ಷಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...