Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಮಹೇಶ್ ರಾವುತ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಮಹೇಶ್ ರಾವುತ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಎಲ್ಗಾರ್ ಪರಿಷದ್ ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಬಂಧಿತರಾಗಿದ್ದ ಕಾರ್ಯಕರ್ತ ಮಹೇಶ್ ರಾವುತ್‌ಗೆ ಬಾಂಬೆ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಎ ಎಸ್ ಗಡ್ಕರಿ ಮತ್ತು ಶರ್ಮಿಳಾ ದೇಶಮುಖ್ ಅವರ ವಿಭಾಗೀಯ ಪೀಠವು ಅರ್ಹತೆಯ ಆಧಾರದ ಮೇಲೆ ಜಾಮೀನು ಕೋರಿ ರಾವುತ್ ಮಾಡಿದ ಮನವಿಯನ್ನು ಅಂಗೀಕರಿಸಿತು.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಎರಡು ವಾರಗಳ ಕಾಲ ತನ್ನ ಆದೇಶಕ್ಕೆ ತಡೆ ನೀಡುವಂತೆ ನ್ಯಾಯಾಲಯವನ್ನು ಕೋರಿದೆ. ನಂತರ ಪೀಠವು ತನ್ನ ಆದೇಶಕ್ಕೆ ಒಂದು ವಾರ ತಡೆ ನೀಡಿತು.

ರಾವತ್ ಅವರನ್ನು ಜೂನ್ 2018ರಲ್ಲಿ ಬಂಧಿಸಲಾಯಿತು ಮತ್ತು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರು ವಿಶೇಷ ಎನ್‌ಐಎ ನ್ಯಾಯಾಲಯವು ಜಾಮೀನು ನಿರಾಕರಿಸಿದ ಆದೇಶವನ್ನು ಪ್ರಶ್ನಿಸಿ, ಜಾಮೀನು ಕೋರಿ 2022ರಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರಾವುತ್ ತನ್ನ ಮನವಿಯಲ್ಲಿ ತನ್ನ ಕಸ್ಟಡಿಯು ಅನಗತ್ಯವಾಗಿದೆ ಮತ್ತು ಇದು ಸಂವಿಧಾನದ 14 ಮತ್ತು 21 ನೇ ವಿಧಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಸಾಂವಿಧಾನಿಕ ಆಧಾರದ ಮೇಲೆ ಜಾಮೀನು ಪಡೆಯಲು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ದಾಖಲಿಸಲಾದ ಆರೋಪಿಗೆ ಮಂಜೂರು ಮಾಡುವುದು ಸಮರ್ಥನೀಯವಲ್ಲ ಎಂದು ಎನ್ಐಎ ಮನವಿಯನ್ನು ವಿರೋಧಿಸಿದೆ.

ಈ ಪ್ರಕರಣದಲ್ಲಿ 16 ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಐವರು ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ. ವಿದ್ವಾಂಸ-ಕಾರ್ಯಕರ್ತ ಆನಂದ್ ತೇಲ್ತುಂಬ್ಡೆ, ವಕೀಲೆ ಸುಧಾ ಭಾರದ್ವಾಜ್, ವೆರ್ನಾನ್ ಗೊನ್ಸಾಲ್ವಿಸ್ ಮತ್ತು ಅರುಣ್ ಫೆರೇರಾ ಅವರಿಗೆ ನಿಯಮಿತ ಜಾಮೀನು ನೀಡಲಾಗಿದ್ದು, ಕವಿ ವರವರ ರಾವ್ ಅವರು ಆರೋಗ್ಯದ ಆಧಾರದ ಮೇಲೆ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ.

ಮತ್ತೊಬ್ಬ ಆರೋಪಿ, ಕಾರ್ಯಕರ್ತ ಗೌತಮ್ ನವ್ಲಾಖಾ ಅವರನ್ನು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಗೃಹಬಂಧನದಲ್ಲಿ ಇರಿಸಲಾಗಿದೆ. ಈ ಪ್ರಕರಣವು ಪುಣೆಯಲ್ಲಿ ಡಿಸೆಂಬರ್ 31, 2017 ರಂದು ನಡೆದ ಎಲ್ಗಾರ್ ಪರಿಷತ್ ಸಮಾವೇಶಕ್ಕೆ ಸಂಬಂಧಿಸಿದೆ, ಪುಣೆ ಪೊಲೀಸರ ಪ್ರಕಾರ ಮಾವೋವಾದಿಗಳಿಂದ ಹಣ ಪಡೆದಿದೆ. ಅಲ್ಲಿ ಮಾಡಿದ ಉದ್ರೇಕಕಾರಿ ಭಾಷಣಗಳು ಮರುದಿನ ಪುಣೆಯ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತು ಎಂದು ಪೊಲೀಸರು ಆರೋಪಿಸಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ವೆರ್ನಾನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೇರಾ ಅವರಿಗೆ ಸುಪ್ರೀಂ ಜಾಮೀನು

ಮಹೇಶ್ ರಾವುತ್‌ ಕುರಿತು ಮಾಹಿತಿ:

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯವರಾದ ಮಹೇಶ್ ರಾವುತ್ ತಮ್ಮ ಜಿಲ್ಲೆಯಲ್ಲಿ ಆದಿವಾಸಿ ಸಮುದಾಯಗಳ ಹಕ್ಕುಗಳಿಗಾಗಿ ಹೋರಾಡುತ್ತಿರುವ ಪ್ರಮುಖ ಯುವ ಕಾರ್ಯಕರ್ತ. ಮಹಾರಾಷ್ಟ್ರದ ಸಣ್ಣ ಹಳ್ಳಿಯಾಗಿರುವ ಲಾಖಾಪುರದಲ್ಲಿ ಹುಟ್ಟಿದ ಮಹೇಶ್, ಗಡ್ಚಿರೋಲಿಯಲ್ಲಿ ಶಾಲಾ ಶಿಕ್ಷಣ ಮುಗಿಸಿ, ಪದವಿ ಶಿಕ್ಷಣಕ್ಕಾಗಿ ನಾಗಪುರಕ್ಕೆ ತೆರಳಿದರು. ನಂತರ ಉನ್ನತ ಶಿಕ್ಷಣಕ್ಕಾಗಿ ಮುಂಬಯಿಯ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್‌ಗೆ ಸೇರಿದರು.

ಶಿಕ್ಷಣ ಮುಗಿಸಿದ ಬಳಿಕ ಅವರು ಗಡ್ಚಿರೋಲಿಯಲ್ಲಿ ಪ್ರಧಾನ ಮಂತ್ರಿ ಗ್ರಾಮೀಣಾಭಿವೃದ್ಧಿ ಫೆಲೋ (ಪಿಎಂಆರ್‌ಡಿಎಫ್) ಆಗಿ ಕೆಲಸ ಮಾಡಿದರು. ದೊಡ್ಡ ಕಾರ್ಪೊರೇಟ್‌ಗಳ ಕಾನೂನುಬಾಹಿರ ಭೂಕಬಳಿಕೆ ವಿರುದ್ಧ ಮೂಲನಿವಾಸಿ ಜನರ ಪ್ರಜಾಸತ್ತಾತ್ಮಕ ಹಕ್ಕುಗಳಿಗೆ ರಕ್ಷಣೆ ನೀಡುವ ಪಂಚಾಯತ್ (ಅಧಿಸೂಚಿತ ಪ್ರದೇಶಗಳಿಗೆ ವಿಸ್ತರಣೆ) ಕಾಯಿದೆ ಮತ್ತು ಅರಣ್ಯ ಹಕ್ಕುಗಳ ಕಾಯಿದೆಗಳ ಪರವಾಗಿ ಅವರು ದಣಿವರಿಯದೇ ಕೆಲಸ ಮಾಡಿದರು. ಮಹೇಶ್ ಅವರು ಸಂವಿಧಾನದ ಚೌಕಟ್ಟಿನಲ್ಲಿಯೇ ಅಂಚಿಗೆ ತಳ್ಳಲ್ಪಟ್ಟ ದುರ್ಬಲ ಸಮುದಾಯಗಳ ಹಕ್ಕುಗಳನ್ನು ರಕ್ಷಿಸಲು ಮತ್ತು ಪ್ರೋತ್ಸಾಹಿಸಲು ನಿರಂತರವಾಗಿ ದುಡಿದರು. ತಮ್ಮ ಫೆಲೋಶಿಪ್ ಮುಗಿದ ಬಳಿಕವೂ ಅವರು ರಾಜ್ಯದ ಆದಿವಾಸಿ ಸಮುದಾಯಗಳ ಜೊತೆಗೆ ಕೆಲಸ ಮಾಡುವುದನ್ನು ಮುಂದುವರಿಸಲು ನಿರ್ಧರಿಸಿದರು.

ಮಹೇಶ್ ರಾವುತ್ ಸಮಾಜಕಲ್ಯಾಣಕ್ಕೆ ಒತ್ತಾಸೆ ನೀಡಲು ಸಾಮೂಹಿಕ ಚಳವಳಿಗಳನ್ನು ಅಯೋಜಿಸಿದರಲ್ಲದೆ ಅಂತಹ ಹಲವು ಚಳವಳಿಗಳಲ್ಲಿ ಭಾಗವಹಿಸಿದರು. ಅವರು ಆದಿವಾಸಿಗಳು ಮತ್ತು ಇತರ ಶೋಷಿತ ವರ್ಗಗಳ ಜನರನ್ನು ಬಲವಂತದಿಂದ ಒಕ್ಕಲೆಬ್ಬಿಸುವ ವಿದ್ಯಮಾನದ ವಿರುದ್ಧ ಹೋರಾಡುವ ವಿಸ್ಥಾಪನ್ ವಿರೋಧಿ ಜನ್ ವಿಕಾಸ್ ಆಂದೋಲನ್ (ವಿವಿಜೆವಿಎ) ಸಂಘಟನೆಯ ಸಹಸಂಚಾಲಕರಾಗಿದ್ದರು. ವಿವಿಜೆವಿಎಯ ಸದಸ್ಯರಾಗಿ ಅವರು ಆ ಪ್ರದೇಶದ ಆದಿವಾಸಿ ಸಮುದಾಯಗಳ ತೆಂಡು ಎಲೆ ಸಂಗ್ರಹಿಸುವ ಕಾರ್ಮಿಕರನ್ನು ಸಂಘಟಿಸಿ, ಅವರು ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆಯೇ ನೇರವಾಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದಾದ ವ್ಯವಸ್ಥೆ ಮಾಡಿದರು.

ಆ ಪ್ರದೇಶದ ಆದಿವಾಸಿಗಳ ಪರವಾಗಿ ಪ್ರಚಾರ ಮಾಡುತ್ತಲೇ ಅವರು ದಿವಂಗತ ಬಿ.ಡಿ. ಶರ್ಮಾ ಅವರು ಸ್ಥಾಪಿಸಿದ್ದ ಭಾರತ್ ಜನ ಆಂದೋಲನ್ (ಬಿಜೆಎ) ಸಂಘಟನೆಗೂ ಸೇರಿದರು. ಬಿಜೆಎ ಜೊತೆ ತನ್ನ ಕೆಲಸದ ಮೂಲಕ ಅವರು ಸೂರಜ್‌ಗಢ್ ಮೈನಿಂಗ್ ಪ್ರೊಜೆಕ್ಟ್ ಸೇರಿದಂತೆ ಹಲವಾರು ಗಣಿಗಾರಿಕಾ ಯೋಜನೆಗಳಿಂದ ಬಾಧಿತವಾದ ಪ್ರದೇಶಗಳಲ್ಲಿ ’ಭಾಗವಹಿಸುವಿಕೆಯ ಮೂಲಕ ತಾವೇ ನಿರ್ಧಾರ ಕೈಗೊಳ್ಳುವುದರ ಪರವಾಗಿ ಜನರನ್ನು ಸಂಘಟಿಸುವುದರಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ಪೊಲೀಸ್ ಮತ್ತು ಪ್ರಭುತ್ವದ ಹಲವಾರು ಅಧಿಕಾರಿಗಳ ದೌರ್ಜನ್ಯ ಮತ್ತು ಅತಿರೇಕಗಳ ವಿರುದ್ಧ ಅವರ ಹೋರಾಟದ ಪರಿಣಾಮವಾಗಿ ಅವರ ವಿರುದ್ಧ ಹಲವಾರು ಪ್ರಕರಣಗಳು ದಾಖಲಾದವು. ಅವರ ಪಿಎಂಆರ್‌ಡಿಎಫ್ ಸಂಗಾತಿಗಳು ಬರೆದಿರುವ ಪತ್ರವೊಂದರ ಪ್ರಕಾರ, ಮಹೇಶ್ ಅವರ ವಿರುದ್ಧ ಸರಕಾರದ ದಮನವು 2013ರಲ್ಲಿಯೇ ಆರಂಭವಾಗಿದ್ದು, ಅವರ ನಿರಂತರ ರಾಜಕೀಯ ಚಟುವಟಿಕೆಗಳು ಅವರಿಗೆ ಕಿರುಕುಳ ನೀಡುವುದಕ್ಕೆ ಕಾರಣಗಳಲ್ಲಿ ಒಂದು ಎಂದು ಹೇಳಲಾಗಿದೆ.

2018ರಲ್ಲಿ ಎಲ್ಗಾರ್ ಪರಿಷದ್‌ನ ಸಂಘಟನೆಯಲ್ಲಿ ಶಾಮೀಲಾತಿ ಮತ್ತು ತಥಾಕಥಿತ ಮಾವೋವಾದಿ ಸಂಪರ್ಕದ ಆರೋಪ ಹೊರಿಸಿ ಪುಣೆ ಪೊಲೀಸರು ಮಹೇಶ್ ಅವರನ್ನು ಬಂಧಿಸಿದರು. ಕಾನೂನುಬಾಹಿರ ಚಟುವಟಿಕೆ ತಡೆ ಕಾಯಿದೆ (ಯುಎಪಿಎ)ಯ ಕೆಲವು ವಿಧಿಗಳ ಅಡಿಯಲ್ಲಿ ಅವರನ್ನು ಅವರ ನಾಗಪುರದ ಮನೆಯಿಂದ ಬಂಧಿಸಲಾಯಿತು. ವಾಸ್ತವವಾಗಿ ಅವರು ಎಲ್ಗಾರ್ ಪರಿಷದ್‌ನ ಆಯೋಜನೆಯಲ್ಲಿ ಭಾಗಿಯಾಗಿರಲೂ ಇಲ್ಲ, ಡಿಸೆಂಬರ್ 31ರ ಕಾರ್ಯಕ್ರಮಗಳಲ್ಲಿ ಭಾಗವಹಿಸಿರಲೂ ಇಲ್ಲ. ಅವರ ಬಂಧನವು ಪ್ರಭುತ್ವ ಮತ್ತು ಕಾರ್ಪೊರೇಟ್‌ಗಳ ನಡುವಿನ ಕೂಟದ ಎದುರು ಹೋರಾಡುತ್ತಿರುವ ರಾಜ್ಯದ ಮಾನವ ಹಕ್ಕು ರಕ್ಷಕರ ವಿರುದ್ಧ ನಡೆಸಿದ ಸ್ಪಷ್ಟ ದಮನವಾಗಿದೆ. ಅಂಚಿಗೆ ಸರಿಸಲ್ಪಟ್ಟ ದಮನಿತ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳನ್ನು ಎತ್ತಿಹಿಡಿಯುವಲ್ಲಿ ಅವರ ದೇಣಿಗೆಯೇ ಅವರಿಗೆ ಕಿರುಕುಳ ನೀಡುವುದಕ್ಕೆ ಮತ್ತು ನಂತರ ಅವರ ಬಂಧನಕ್ಕೆ ಕಾರಣವಾಗಿದೆ. ಅವರ ಕಾರಾಗೃಹವಾಸವು ಪ್ರಭುತ್ವವು ಕಾಲಡಿಯಲ್ಲಿ ಹೊಸಕಿಹಾಕುತ್ತಿರುವ ಸಂವಿಧಾನದ ಮೌಲ್ಯಗಳನ್ನು ರಕ್ಷಿಸುತ್ತಿರುವ ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ಅದೇ ಪ್ರಭುತ್ವ ನಡೆಸುತ್ತಿರುವ ದಬ್ಬಾಳಿಕೆಗೆ ಜೀವಂತ ಸಾಕ್ಷಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...