Homeಮುಖಪುಟಭೀಮಾ-ಕೋರೆಗಾಂವ್ ಪ್ರಕರಣ; ಗೌತಮ್ ನವ್ಲಾಖಾ ಜಾಮೀನಿನ ಮೇಲಿನ ತಡೆಯಾಜ್ಞೆ ವಿಸ್ತರಣೆ

ಭೀಮಾ-ಕೋರೆಗಾಂವ್ ಪ್ರಕರಣ; ಗೌತಮ್ ನವ್ಲಾಖಾ ಜಾಮೀನಿನ ಮೇಲಿನ ತಡೆಯಾಜ್ಞೆ ವಿಸ್ತರಣೆ

- Advertisement -
- Advertisement -

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕೋರಿಕೆಯ ಮೇರೆಗೆ ಭೀಮಾ-ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ಅವರಿಗೆ ಬಾಂಬೆ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನು ಆದೇಶದ ತಡೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಿಸ್ತರಿಸಿದೆ.

ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಇತರ ಆರೋಪಿಗಳ ಇದೇ ರೀತಿಯ ಜಾಮೀನು ವಿಷಯಗಳು ಉನ್ನತ ನ್ಯಾಯಾಲಯಗಳ ಇತರ ಪೀಠಗಳ ಮುಂದೆ ಇತ್ಯರ್ಥವಾಗುತ್ತಿಲ್ಲ ಎಂದು ತಿಳಿಸಿದ ನಂತರ ನ್ಯಾಯಾಲಯವು ತನಿಖಾ ಸಂಸ್ಥೆಯ ಮೇಲ್ಮನವಿಯನ್ನು ಪುರಸ್ಕರಿಸಿ, ಎಲ್ಲ ಪ್ರಕರಣಗಳನ್ನು ಮುಖ್ಯ ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸುವುದಾಗಿ ಹೇಳಿದೆ.

72 ವರ್ಷ ವಯಸ್ಸಿನ ಕಾರ್ಯಕರ್ತನಿಗೆ ಜಾಮೀನು ಮಂಜೂರು ಮಾಡಿದ ಬಾಂಬೆ ಹೈಕೋರ್ಟ್ ಡಿಸೆಂಬರ್ 19ರ ಆದೇಶವನ್ನು ಪ್ರಶ್ನಿಸಿ ಎನ್ಐಎ ಮೇಲ್ಮನವಿ ಸಲ್ಲಿಸಿತ್ತು. ಡಿಸೆಂಬರ್ 19ರ ಆದೇಶದ ಮೂಲಕ ಹೈಕೋರ್ಟ್ ತನ್ನ ನಿರ್ಧಾರವನ್ನು ಮೂರು ವಾರಗಳವರೆಗೆ ತಡೆಹಿಡಿದಿರುವುದರಿಂದ, ಸಿಜೆಐ ಅವರು ಪೀಠದ ಮುಂದೆ ವಿಷಯವನ್ನು ಹಂಚುವವರೆಗೂ ಹಿಂದಿನ ಆದೇಶವನ್ನೆ ವಿಸ್ತರಿಸಲಾಗಿದೆ ಎಂದು ನ್ಯಾಯಮೂರ್ತಿಗಳಾದ ಎಂಎಂ ಸುಂದ್ರೇಶ್ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠ ಶುಕ್ರವಾರ ಹೇಳಿದೆ.

ಭೀಮಾ-ಕೋರೆಗಾಂವ್ ಹಿಂಸಾಚಾರದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದ್ದು, ಈ ವಿಷಯವನ್ನು ಒಂದು ವಿಚಾರಣಾ ಅರ್ಜಿಯೊಂದಿಗೆ ಆಲಿಸಬೇಕು ಎಂದು ಒತ್ತಾಯಿಸಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ನೇತೃತ್ವದ ನವ್ಲಾಖಾ ಅವರ ವಕೀಲರ ನಡುವೆ ವಿವಾದ ಉಂಟಾದ ನಂತರ ನ್ಯಾಯಾಲಯವು ಮೇಲ್ಮನವಿಯ ಬಗ್ಗೆ ನೋಟಿಸ್ ನೀಡಲಿಲ್ಲ.

ಎನ್ಐಎಯನ್ನು ಪ್ರತಿನಿಧಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್‌ವಿ ರಾಜು ಅವರು, ಮತ್ತೊಬ್ಬ ಆರೋಪಿ ಮಹೇಶ್ ರಾವುತ್‌ಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಂಸ್ಥೆ ಸಲ್ಲಿಸಿದ ಇದೇ ರೀತಿಯ ಮೇಲ್ಮನವಿಯೊಂದಿಗೆ ವಿಷಯವನ್ನು ಪಟ್ಟಿ ಮಾಡುವಂತೆ ನ್ಯಾಯಾಲಯವನ್ನು ಒತ್ತಾಯಿಸಿದರು.

ಸೆಪ್ಟೆಂಬರ್ ನಲ್ಲಿ, ಬಾಂಬೆ ಹೈಕೋರ್ಟ್ ರಾವುತ್‌ಗೆ ಜಾಮೀನು ನೀಡಿತ್ತು ಮತ್ತು ಅದೇ ತಿಂಗಳು, ಎನ್ಐಎ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿತು. ಅವರ ಬಿಡುಗಡೆಗೆ ತಡೆಯಾಜ್ಞೆಯನ್ನು ವಿಸ್ತರಿಸಿತು. ಈ ವಿಷಯವು ಇನ್ನೂ ಉನ್ನತ ನ್ಯಾಯಾಲಯದಲ್ಲಿ ಪರಿಗಣನೆಗೆ ಬಾಕಿ ಇದೆ’ ಎಂದು ನೆನಪಿಸಿದರು.

ಈ ವಿಷಯಗಳು ವಿವಿಧ ಪೀಠಗಳ ಮುಂದೆ ಇತ್ಯರ್ಥಕ್ಕೆ ಬಾಕಿ ಇವೆ ಎಂದು ಎರಡೂ ಕಡೆಯ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ನವೆಂಬರ್ 2022 ರಲ್ಲಿ ಅಂಗೀಕರಿಸಿದ ಸುಪ್ರೀಂ ಆದೇಶದ ನಂತರ ನವ್ಲಾಖಾ ಅವರು ಪ್ರಸ್ತುತ ಗೃಹಬಂಧನದಲ್ಲಿದ್ದಾರೆ. ಆ ವಿಷಯವು ಸುಪ್ರೀಂ ಕೋರ್ಟಿನಲ್ಲಿ ಬಾಕಿ ಉಳಿದಿದೆ ಎಂದು ಹಿರಿಯ ವಕೀಲ ನಿತ್ಯಾ ರಾಮಕೃಷ್ಣನ್ ಗಮನಸೆಳೆದರು.

ಭೀಮಾ-ಕೋರೆಗಾಂವ್ ಹಿಂಸಾಚಾರ ಪ್ರಕರಣದ ಮತ್ತೊಬ್ಬ ಆರೋಪಿ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಹನಿ ಬಾಬು ಅವರ ಜಾಮೀನು ಅರ್ಜಿಯನ್ನು ಎರಡು ದಿನಗಳ ಹಿಂದೆ, ನ್ಯಾಯಮೂರ್ತಿ ಅನಿರುದ್ಧ ಬೋಸ್ ನೇತೃತ್ವದ ಪೀಠದ ಮುಂದೆ ಪಟ್ಟಿ ಮಾಡಲಾಗಿದ್ದು, ಅಲ್ಲಿ ನೋಟಿಸ್ ನೀಡಲಾಯಿತು ಮತ್ತು ವಿಚಾರಣೆಯನ್ನು ಮೂರು ವಾರಗಳವರೆಗೆ ಮುಂದೂಡಲಾಯಿತು. ಈ ಪ್ರಕರಣ ಸಂಬಂಧ ಹಲವಾರು ಪೀಠಗಳ ಮುಂದೆ ವಿಚಾರಣೆ ಬಾಕಿಯಿದೆ ಎಂದು ಸಿಂಘ್ವಿ ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ‘ಇದೆ ಮಾದರಿಯ ಪ್ರಕರಣಗಳೊಂದಿಗೆ ವಿಚಾರಣೆ ನಡೆಸುವ ಕಾರ್ಯಸಾಧ್ಯತೆಯನ್ನು ಪರಿಗಣಿಸಲು ನಾವು ಈ ವಿಷಯವನ್ನು ಭಾರತದ ಮುಖ್ಯ ನ್ಯಾಯಾಧೀಶರ ಮುಂದೆ ಇಡಲು ನೋಂದಾವಣೆಗೆ ನಿರ್ದೇಶಿಸುತ್ತೇವೆ’ ಎಂದು ಹೇಳಿದರು.

ಏಕ ಪೀಠದ ಮುಂದೆ ಎಲ್ಲ ಪ್ರಕರಣಗಳ ವಿಚಾರಣೆಗೆ ನಡೆಸಬೇಕು ಎಂದು ಪೀಠವು ಅಭಿಪ್ರಾಯಪಟ್ಟಿದೆ.
ಮಹಾರಾಷ್ಟ್ರದಲ್ಲಿ 2018ರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನವ್ಲಾಖಾ ಅವರನ್ನು ಏಪ್ರಿಲ್ 2020 ರಲ್ಲಿ ಬಂಧಿಸಲಾಯಿತು ಮತ್ತು ನಿಷೇಧಿತ ನಕ್ಸಲ್ ಸಂಘಟನೆ – ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ನೊಂದಿಗೆ ಸಂಪರ್ಕ ಹೊಂದಿರುವ ಆರೋಪವಿದೆ. ಅವರು ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪಗಳನ್ನು ಎದುರಿಸುತ್ತಿದ್ದಾರೆ. 10 ನವೆಂಬರ್ 2022ರಿಂದ, ಆರೋಗ್ಯ ಸಂಬಂಧಿತ ಸಮಸ್ಯೆಗಳ ಕಾರಣದಿಂದ ಗೃಹಬಂಧನದಲ್ಲಿ ಇರಲು ಉನ್ನತ ನ್ಯಾಯಾಲಯವು ಅವರಿಗೆ ಅನುಮತಿ ನೀಡಿದೆ.

ಭೀಮಾ-ಕೋರೆಗಾಂವ್ ಪ್ರಕರಣವು 31 ಡಿಸೆಂಬರ್ 2017 ರಂದು ಪುಣೆಯಲ್ಲಿ ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಆಪಾದಿತ ಪ್ರಚೋದಕ ಭಾಷಣಗಳಿಗೆ ಸಂಬಂಧಿಸಿದೆ. ವಿಯೋತ್ಸವ ನಡೆದ ಮರುದಿನ ಭೀಮಾ-ಕೋರೆಗಾಂವ್ ಯುದ್ಧ ಸ್ಮಾರಕದ ಬಳಿ ಹಿಂಸಾಚಾರವನ್ನು ಪ್ರಚೋದಿಸಿತು ಎಂದು ಪೊಲೀಸರು ಹೇಳಿದ್ದಾರೆ; ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

317 ಸಾಕ್ಷಿಗಳಿದ್ದು, ಆರೋಪಗಳನ್ನು ಹೊರಿಸಬೇಕಾಗಿರುವುದರಿಂದ ಶೀಘ್ರದಲ್ಲೇ ವಿಚಾರಣೆ ಪ್ರಾರಂಭವಾಗುವ ಸಾಧ್ಯತೆಯಿಲ್ಲ ಎಂದು ನವ್ಲಾಖಾ ಅವರ ವಕೀಲರು ಸೂಚಿಸಿದರು. ಯುಎಪಿಎ ಅಪರಾಧಗಳಲ್ಲಿ, ವಿಚಾರಣೆಯ ಪ್ರಾರಂಭವು ಕಣ್ಣಿಗೆ ಬೀಳದಿದ್ದರೆ, ಅದು ಜಾಮೀನು ನೀಡಲು ಒಂದು ಆಧಾರವಾಗಿದೆ ಎಂದು ಸಿಂಘ್ವಿ ಹೇಳಿದರು.

ನವ್ಲಾಖಾ ಅವರಿಗೆ ಜಾಮೀನು ನೀಡುವಾಗ ಹೈಕೋರ್ಟ್, ₹1 ಲಕ್ಷ ವೈಯಕ್ತಿಕ ಬಾಂಡ್ ನೀಡುವಂತೆ ಸೂಚಿಸಿತ್ತು. 18 ನವೆಂಬರ್ 2022 ಮತ್ತು 21 ಸೆಪ್ಟೆಂಬರ್ 2023 ರಂದು ಕ್ರಮವಾಗಿ ಜಾಮೀನಿನ ಮೇಲೆ ಬಿಡುಗಡೆಯಾದ ತೇಲ್ತುಂಬ್ಡೆ ಮತ್ತು ರಾವುತ್‌ಗೆ ಕೂಡಾ ಅದೇ ಮಾದರಿಯ ಷರತ್ತುಗಳನ್ನು ವಿಧಿಸಿತು.

ಇದನ್ನೂ ಓದಿ; ಮಿಮಿಕ್ರಿ ಮಾಡಿದ ಸಂಸದರನ್ನು ಊಟಕ್ಕೆ ಕರೆದ ಧನ್ಖರ್; ಸಂತಸ ವ್ಯಕ್ತಪಡಿಸಿದ ಕಲ್ಯಾಣ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...