Homeಮುಖಪುಟಭೀಮಾ-ಕೋರೆಗಾಂವ್ ಪ್ರಕರಣ; ಗೌತಮ್ ನವ್ಲಾಖಾ ಜಾಮೀನಿನ ಮೇಲಿನ ತಡೆಯಾಜ್ಞೆ ವಿಸ್ತರಣೆ

ಭೀಮಾ-ಕೋರೆಗಾಂವ್ ಪ್ರಕರಣ; ಗೌತಮ್ ನವ್ಲಾಖಾ ಜಾಮೀನಿನ ಮೇಲಿನ ತಡೆಯಾಜ್ಞೆ ವಿಸ್ತರಣೆ

- Advertisement -
- Advertisement -

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕೋರಿಕೆಯ ಮೇರೆಗೆ ಭೀಮಾ-ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ಅವರಿಗೆ ಬಾಂಬೆ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನು ಆದೇಶದ ತಡೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಿಸ್ತರಿಸಿದೆ.

ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಇತರ ಆರೋಪಿಗಳ ಇದೇ ರೀತಿಯ ಜಾಮೀನು ವಿಷಯಗಳು ಉನ್ನತ ನ್ಯಾಯಾಲಯಗಳ ಇತರ ಪೀಠಗಳ ಮುಂದೆ ಇತ್ಯರ್ಥವಾಗುತ್ತಿಲ್ಲ ಎಂದು ತಿಳಿಸಿದ ನಂತರ ನ್ಯಾಯಾಲಯವು ತನಿಖಾ ಸಂಸ್ಥೆಯ ಮೇಲ್ಮನವಿಯನ್ನು ಪುರಸ್ಕರಿಸಿ, ಎಲ್ಲ ಪ್ರಕರಣಗಳನ್ನು ಮುಖ್ಯ ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸುವುದಾಗಿ ಹೇಳಿದೆ.

72 ವರ್ಷ ವಯಸ್ಸಿನ ಕಾರ್ಯಕರ್ತನಿಗೆ ಜಾಮೀನು ಮಂಜೂರು ಮಾಡಿದ ಬಾಂಬೆ ಹೈಕೋರ್ಟ್ ಡಿಸೆಂಬರ್ 19ರ ಆದೇಶವನ್ನು ಪ್ರಶ್ನಿಸಿ ಎನ್ಐಎ ಮೇಲ್ಮನವಿ ಸಲ್ಲಿಸಿತ್ತು. ಡಿಸೆಂಬರ್ 19ರ ಆದೇಶದ ಮೂಲಕ ಹೈಕೋರ್ಟ್ ತನ್ನ ನಿರ್ಧಾರವನ್ನು ಮೂರು ವಾರಗಳವರೆಗೆ ತಡೆಹಿಡಿದಿರುವುದರಿಂದ, ಸಿಜೆಐ ಅವರು ಪೀಠದ ಮುಂದೆ ವಿಷಯವನ್ನು ಹಂಚುವವರೆಗೂ ಹಿಂದಿನ ಆದೇಶವನ್ನೆ ವಿಸ್ತರಿಸಲಾಗಿದೆ ಎಂದು ನ್ಯಾಯಮೂರ್ತಿಗಳಾದ ಎಂಎಂ ಸುಂದ್ರೇಶ್ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠ ಶುಕ್ರವಾರ ಹೇಳಿದೆ.

ಭೀಮಾ-ಕೋರೆಗಾಂವ್ ಹಿಂಸಾಚಾರದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದ್ದು, ಈ ವಿಷಯವನ್ನು ಒಂದು ವಿಚಾರಣಾ ಅರ್ಜಿಯೊಂದಿಗೆ ಆಲಿಸಬೇಕು ಎಂದು ಒತ್ತಾಯಿಸಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ನೇತೃತ್ವದ ನವ್ಲಾಖಾ ಅವರ ವಕೀಲರ ನಡುವೆ ವಿವಾದ ಉಂಟಾದ ನಂತರ ನ್ಯಾಯಾಲಯವು ಮೇಲ್ಮನವಿಯ ಬಗ್ಗೆ ನೋಟಿಸ್ ನೀಡಲಿಲ್ಲ.

ಎನ್ಐಎಯನ್ನು ಪ್ರತಿನಿಧಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್‌ವಿ ರಾಜು ಅವರು, ಮತ್ತೊಬ್ಬ ಆರೋಪಿ ಮಹೇಶ್ ರಾವುತ್‌ಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಂಸ್ಥೆ ಸಲ್ಲಿಸಿದ ಇದೇ ರೀತಿಯ ಮೇಲ್ಮನವಿಯೊಂದಿಗೆ ವಿಷಯವನ್ನು ಪಟ್ಟಿ ಮಾಡುವಂತೆ ನ್ಯಾಯಾಲಯವನ್ನು ಒತ್ತಾಯಿಸಿದರು.

ಸೆಪ್ಟೆಂಬರ್ ನಲ್ಲಿ, ಬಾಂಬೆ ಹೈಕೋರ್ಟ್ ರಾವುತ್‌ಗೆ ಜಾಮೀನು ನೀಡಿತ್ತು ಮತ್ತು ಅದೇ ತಿಂಗಳು, ಎನ್ಐಎ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿತು. ಅವರ ಬಿಡುಗಡೆಗೆ ತಡೆಯಾಜ್ಞೆಯನ್ನು ವಿಸ್ತರಿಸಿತು. ಈ ವಿಷಯವು ಇನ್ನೂ ಉನ್ನತ ನ್ಯಾಯಾಲಯದಲ್ಲಿ ಪರಿಗಣನೆಗೆ ಬಾಕಿ ಇದೆ’ ಎಂದು ನೆನಪಿಸಿದರು.

ಈ ವಿಷಯಗಳು ವಿವಿಧ ಪೀಠಗಳ ಮುಂದೆ ಇತ್ಯರ್ಥಕ್ಕೆ ಬಾಕಿ ಇವೆ ಎಂದು ಎರಡೂ ಕಡೆಯ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ನವೆಂಬರ್ 2022 ರಲ್ಲಿ ಅಂಗೀಕರಿಸಿದ ಸುಪ್ರೀಂ ಆದೇಶದ ನಂತರ ನವ್ಲಾಖಾ ಅವರು ಪ್ರಸ್ತುತ ಗೃಹಬಂಧನದಲ್ಲಿದ್ದಾರೆ. ಆ ವಿಷಯವು ಸುಪ್ರೀಂ ಕೋರ್ಟಿನಲ್ಲಿ ಬಾಕಿ ಉಳಿದಿದೆ ಎಂದು ಹಿರಿಯ ವಕೀಲ ನಿತ್ಯಾ ರಾಮಕೃಷ್ಣನ್ ಗಮನಸೆಳೆದರು.

ಭೀಮಾ-ಕೋರೆಗಾಂವ್ ಹಿಂಸಾಚಾರ ಪ್ರಕರಣದ ಮತ್ತೊಬ್ಬ ಆರೋಪಿ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಹನಿ ಬಾಬು ಅವರ ಜಾಮೀನು ಅರ್ಜಿಯನ್ನು ಎರಡು ದಿನಗಳ ಹಿಂದೆ, ನ್ಯಾಯಮೂರ್ತಿ ಅನಿರುದ್ಧ ಬೋಸ್ ನೇತೃತ್ವದ ಪೀಠದ ಮುಂದೆ ಪಟ್ಟಿ ಮಾಡಲಾಗಿದ್ದು, ಅಲ್ಲಿ ನೋಟಿಸ್ ನೀಡಲಾಯಿತು ಮತ್ತು ವಿಚಾರಣೆಯನ್ನು ಮೂರು ವಾರಗಳವರೆಗೆ ಮುಂದೂಡಲಾಯಿತು. ಈ ಪ್ರಕರಣ ಸಂಬಂಧ ಹಲವಾರು ಪೀಠಗಳ ಮುಂದೆ ವಿಚಾರಣೆ ಬಾಕಿಯಿದೆ ಎಂದು ಸಿಂಘ್ವಿ ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ‘ಇದೆ ಮಾದರಿಯ ಪ್ರಕರಣಗಳೊಂದಿಗೆ ವಿಚಾರಣೆ ನಡೆಸುವ ಕಾರ್ಯಸಾಧ್ಯತೆಯನ್ನು ಪರಿಗಣಿಸಲು ನಾವು ಈ ವಿಷಯವನ್ನು ಭಾರತದ ಮುಖ್ಯ ನ್ಯಾಯಾಧೀಶರ ಮುಂದೆ ಇಡಲು ನೋಂದಾವಣೆಗೆ ನಿರ್ದೇಶಿಸುತ್ತೇವೆ’ ಎಂದು ಹೇಳಿದರು.

ಏಕ ಪೀಠದ ಮುಂದೆ ಎಲ್ಲ ಪ್ರಕರಣಗಳ ವಿಚಾರಣೆಗೆ ನಡೆಸಬೇಕು ಎಂದು ಪೀಠವು ಅಭಿಪ್ರಾಯಪಟ್ಟಿದೆ.
ಮಹಾರಾಷ್ಟ್ರದಲ್ಲಿ 2018ರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನವ್ಲಾಖಾ ಅವರನ್ನು ಏಪ್ರಿಲ್ 2020 ರಲ್ಲಿ ಬಂಧಿಸಲಾಯಿತು ಮತ್ತು ನಿಷೇಧಿತ ನಕ್ಸಲ್ ಸಂಘಟನೆ – ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ನೊಂದಿಗೆ ಸಂಪರ್ಕ ಹೊಂದಿರುವ ಆರೋಪವಿದೆ. ಅವರು ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪಗಳನ್ನು ಎದುರಿಸುತ್ತಿದ್ದಾರೆ. 10 ನವೆಂಬರ್ 2022ರಿಂದ, ಆರೋಗ್ಯ ಸಂಬಂಧಿತ ಸಮಸ್ಯೆಗಳ ಕಾರಣದಿಂದ ಗೃಹಬಂಧನದಲ್ಲಿ ಇರಲು ಉನ್ನತ ನ್ಯಾಯಾಲಯವು ಅವರಿಗೆ ಅನುಮತಿ ನೀಡಿದೆ.

ಭೀಮಾ-ಕೋರೆಗಾಂವ್ ಪ್ರಕರಣವು 31 ಡಿಸೆಂಬರ್ 2017 ರಂದು ಪುಣೆಯಲ್ಲಿ ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಆಪಾದಿತ ಪ್ರಚೋದಕ ಭಾಷಣಗಳಿಗೆ ಸಂಬಂಧಿಸಿದೆ. ವಿಯೋತ್ಸವ ನಡೆದ ಮರುದಿನ ಭೀಮಾ-ಕೋರೆಗಾಂವ್ ಯುದ್ಧ ಸ್ಮಾರಕದ ಬಳಿ ಹಿಂಸಾಚಾರವನ್ನು ಪ್ರಚೋದಿಸಿತು ಎಂದು ಪೊಲೀಸರು ಹೇಳಿದ್ದಾರೆ; ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

317 ಸಾಕ್ಷಿಗಳಿದ್ದು, ಆರೋಪಗಳನ್ನು ಹೊರಿಸಬೇಕಾಗಿರುವುದರಿಂದ ಶೀಘ್ರದಲ್ಲೇ ವಿಚಾರಣೆ ಪ್ರಾರಂಭವಾಗುವ ಸಾಧ್ಯತೆಯಿಲ್ಲ ಎಂದು ನವ್ಲಾಖಾ ಅವರ ವಕೀಲರು ಸೂಚಿಸಿದರು. ಯುಎಪಿಎ ಅಪರಾಧಗಳಲ್ಲಿ, ವಿಚಾರಣೆಯ ಪ್ರಾರಂಭವು ಕಣ್ಣಿಗೆ ಬೀಳದಿದ್ದರೆ, ಅದು ಜಾಮೀನು ನೀಡಲು ಒಂದು ಆಧಾರವಾಗಿದೆ ಎಂದು ಸಿಂಘ್ವಿ ಹೇಳಿದರು.

ನವ್ಲಾಖಾ ಅವರಿಗೆ ಜಾಮೀನು ನೀಡುವಾಗ ಹೈಕೋರ್ಟ್, ₹1 ಲಕ್ಷ ವೈಯಕ್ತಿಕ ಬಾಂಡ್ ನೀಡುವಂತೆ ಸೂಚಿಸಿತ್ತು. 18 ನವೆಂಬರ್ 2022 ಮತ್ತು 21 ಸೆಪ್ಟೆಂಬರ್ 2023 ರಂದು ಕ್ರಮವಾಗಿ ಜಾಮೀನಿನ ಮೇಲೆ ಬಿಡುಗಡೆಯಾದ ತೇಲ್ತುಂಬ್ಡೆ ಮತ್ತು ರಾವುತ್‌ಗೆ ಕೂಡಾ ಅದೇ ಮಾದರಿಯ ಷರತ್ತುಗಳನ್ನು ವಿಧಿಸಿತು.

ಇದನ್ನೂ ಓದಿ; ಮಿಮಿಕ್ರಿ ಮಾಡಿದ ಸಂಸದರನ್ನು ಊಟಕ್ಕೆ ಕರೆದ ಧನ್ಖರ್; ಸಂತಸ ವ್ಯಕ್ತಪಡಿಸಿದ ಕಲ್ಯಾಣ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...