Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ: ಮತ್ತೆ ಮೂವರನ್ನು ಬಂಧಿಸಿದ NIA

ಭೀಮಾ ಕೋರೆಗಾಂವ್ ಪ್ರಕರಣ: ಮತ್ತೆ ಮೂವರನ್ನು ಬಂಧಿಸಿದ NIA

ಆರೋಪಿಗಳು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಸಿಪಿಐ (ಮಾವೋವಾದಿ)ಯ ಸಂಘಟನೆಯಾದ ಕಬೀರ್ ಕಲಾ ಮಂಚ್ ಸದಸ್ಯರಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

- Advertisement -
- Advertisement -

ಭೀಮಾ ಕೋರೆಗಾಂವ್ ಎಲ್ಗರ್ ಪರಿಷತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಮಹಿಳೆ ಸೇರಿದಂತೆ ಮೂವರನ್ನು NIA ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರುಗಳು ಸಿಪಿಐ (ಮಾವೋವಾದಿ) ಸಂಘಟನೆಯವರು ಎಂಬುದು ಅವರ ಆರೋಪವಾಗಿದೆ.

ಸಾಗರ್ ತತ್ಯಾರಾಮ್ ಗೂರ್ಖೆ (32) ಮತ್ತು ರಮೇಶ್ ಮುರ್ಲಿಧರ್ ಗೈಚೋರ್ (36) ಅವರನ್ನು ಸೋಮವಾರ ಬಂಧಿಸಲಾಗಿದ್ದು, ಜ್ಯೋತಿ ರಘೋಬಾ ಜಗ್ತಾಪ್ (33) ಅವರನ್ನು ಮಂಗಳವಾರ ಬಂಧಿಸಲಾಗಿದೆ ಎಂದು NIA ವಕ್ತಾರರು ತಿಳಿಸಿದ್ದಾರೆ. ಇವರೆಲ್ಲರೂ ಪುಣೆಯ ನಿವಾಸಿಗಳು ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಆರೋಪಿಗಳು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಸಿಪಿಐ (ಮಾವೋವಾದಿ)ಯ ಸಂಘಟನೆಯಾದ ಕಬೀರ್ ಕಲಾ ಮಂಚ್ ಸದಸ್ಯರಾಗಿದ್ದಾರೆ ಎಂದು ಅಧಿಕಾರಿ ಆರೋಪಿಸಿದ್ದಾರೆ.

ಡಿಸೆಂಬರ್ 31, 2017 ರಂದು ಪುಣೆಯ ಶನಿವಾರವಾಡದಲ್ಲಿ ಕಬೀರ್ ಕಲಾ ಮಂಚ್ ಆಯೋಜಿಸಿದ್ದ ಎಲ್ಗರ್ ಪರಿಷತ್ ಕಾರ್ಯಕ್ರಮಕ್ಕೆ ಈ ಪ್ರಕರಣವು ಸಂಬಂಧಿಸಿದೆ. ಅಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಲಾಯಿತು, ವಿವಿಧ ಜಾತಿ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿ, ಜನರ ಜೀವನ ಮತ್ತು ಆಸ್ತಿಪಾಸ್ತಿ ನಷ್ಟಕ್ಕೆ ಕಾರಣವಾಗಿದೆ. ಮಹಾರಾಷ್ಟ್ರದಲ್ಲಿ ರಾಜ್ಯವ್ಯಾಪಿ ಆಂದೋಲನ ನಡೆಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ ಎನ್‌ಐಎಗೆ ವರ್ಗಾವಣೆ ಪ್ರಶ್ನಿಸಿ ಹೈಕೋರ್ಟ್‌‌ನಲ್ಲಿ ಅರ್ಜಿ..

ಈ ಪ್ರಕರಣದಲ್ಲಿ ಪುಣೆ ಪೊಲೀಸರು ಕ್ರಮವಾಗಿ ನವೆಂಬರ್ 15, 2018 ಮತ್ತು ಫೆಬ್ರವರಿ 21, 2019 ರಂದು ಚಾರ್ಜ್‌ಶೀಟ್ ಮತ್ತು ಪೂರಕ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಎಫ್‌ಐಆರ್‌ನಲ್ಲಿ ಗೋರ್ಖೆ, ಗೈಚೋರ್ ಮತ್ತು ಜಗ್ತಾಪ್ ಹೆಸರಿಸಲಾಗಿದೆ. ಈ ವರ್ಷದ ಜನವರಿ 24 ರಂದು NIA ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದು, ಆನಂದ್ ತೆಲ್ತುಂಬ್ಡೆ ಮತ್ತು ಗೌತಮ್ ನವಲಖಾ ಅವರನ್ನು ಏಪ್ರಿಲ್ 14 ರಂದು ಬಂಧಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದಲ್ಲದೆ, ಉತ್ತರ ಪ್ರದೇಶದ ಗೌತಮ್ ಬುದ್ಧನಗರದ ನಿವಾಸಿ ಮತ್ತು ದೆಹಲಿ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಹನಿಬಾಬು ಮುಸಲಿಯಾವೀರ್ತಿಲ್ ತರೈಲ್ (54) ಅವರನ್ನು ಜುಲೈ 28 ರಂದು ಬಂಧಿಸಲಾಯಿತು.

ಗೋರ್ಖೆ, ಗೈಚೋರ್ ಮತ್ತು ಜಗ್ತಾಪ್ ಅವರು ನಕ್ಸಲ್ ಚಟುವಟಿಕೆಗಳು ಮತ್ತು ಮಾವೋವಾದಿ ಸಿದ್ಧಾಂತವನ್ನು ಪ್ರಚಾರ ಮಾಡುತ್ತಿದ್ದಾರೆ ಮತ್ತು ಬಂಧಿತ ಇತರ ಆರೋಪಿಗಳೊಂದಿಗೆ ಸಹ-ಸಂಚುಕೋರರು ಎಂದು NIA ಅಧಿಕಾರಿ ಹೇಳಿದ್ದಾರೆ.

ಬಂಧಿತ ಮೂವರು ಆರೋಪಿಗಳನ್ನು ಮುಂಬೈನ ವಿಶೇಷ NIA ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನಂತರ ಅವರನ್ನು ನಾಲ್ಕು ದಿನಗಳ NIA ಕಸ್ಟಡಿಗೆ ಕಳುಹಿಸಲಾಗಿದೆ. ಇದರ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶದ ಹಲವಾರು ಚಿಂತಕರು, ವಿದ್ವಾಂಸರು ಮತ್ತು ಹೋರಾಟಗಾರರನ್ನು ಇದೇ ಕೇಸಿನಲ್ಲಿ ಬಂಧಿಸಿರುವುದನ್ನು ಇಲ್ಲಿ ಸ್ಮರಿಸಬಹುದು. ಸದರಿ ಪ್ರಕರಣದಲ್ಲಿ ಸಂಘಪರಿವಾರದ ಸಂಘಟನೆಯೊಂದು ಗಲಭೆಗೆ ಕರೆ ನೀಡಿ, ಭೀಮಾ ಕೊರೆಗಾಂವ್‌ನಲ್ಲಿ ಕೊರೆಗಾಂವ್ ವೀರರನ್ನು ಸ್ಮರಿಸಿ ವಾಪಸ್ಸು ಬರುತ್ತಿರುವವರ ಮೇಲೆ ಹಿಂಸಾಚಾರ ನಡೆದಿತ್ತು. ಆದರೆ, ಅದರ ಕೆಲವು ದಿನಗಳ ನಂತರ ಹಲ್ಲೆಗೊಳಗಾದ ಸಂಘಟನೆಯೇ ಹಿಂಸೆಗೆ ಕಾರಣವೆಂದು ಆರೋಪಿಸಿ ಪ್ರಕರಣ ದಾಖಲಾಗಿತ್ತು.

ಇದೆಲ್ಲಾ ನಡೆದಾಗ ಮಹಾರಾಷ್ಟ್ರದಲ್ಲಿಯೂ ಬಿಜೆಪಿ ಸರ್ಕಾರವೇ ಅಧಿಕಾರಲ್ಲಿತ್ತು. ಅಲ್ಲಿಂದ ಮುಂದೆ, ಇದ್ದಕ್ಕಿದ್ದಂತೆ ಈ ಹಿಂಸಾಚಾರಕ್ಕೆ (ಈಗ ಬಂಧಿತವಾಗಿರುವ) ವಿದ್ವಾಂಸರು ಕಾರಣವೆಂದು ಇನ್ನೊಂದು ಪ್ರಕರಣ ದಾಖಲಿಸಿ ಬಂಧನಗಳು ಆರಂಭವಾದವು. ದೇಶದ ಮತ್ತು ಅಂತರ್ರಾಷ್ಟ್ರೀಯ ಮಟ್ಟದ ಹಲವಾರು ಚಿಂತಕರು ಈ ಬಂಧನಗಳನ್ನು ಖಂಡಿಸಿದ್ದರು. ಈಗ ಅದರ ಮುಂದುವರಿಕೆಯಾಗಿ ಈ ಬಂಧನಗಳು ನಡೆದಿವೆ.


ಇದನ್ನೂ ಓದಿ: ಭೀಮಾ ಕೋರೆಗಾಂವ್; ಪ್ರಾಧ್ಯಾಪಕರ ಮೇಲಿನ NIA ಕಿರುಕುಳಕ್ಕೆ ವಿದ್ಯಾರ್ಥಿಗಳ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...