Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ: 6 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾದ ಶೋಮಾ ಸೇನ್

ಭೀಮಾ ಕೋರೆಗಾಂವ್ ಪ್ರಕರಣ: 6 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾದ ಶೋಮಾ ಸೇನ್

- Advertisement -
- Advertisement -

ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿ, ಕಳೆದ ಆರು ವರ್ಷಗಳಿಂದ ಬಂಧನದಲ್ಲಿದ್ದ 66 ವರ್ಷದ ಸಾಮಾಜಿಕ ಕಾರ್ಯಕರ್ತೆ ಶೋಮಾ ಸೇನ್ ಇಂದು ಮಹಾರಾಷ್ಟ್ರದ ಬೈಕುಲ್ಲಾ ಜೈಲಿನಿಂದ ಬಿಡುಗಡೆಯಾದರು.

ನಾಗ್ಪುರ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕಿ ಶೋಮಾ ಸೇನ್ ಅವರನ್ನು 2018ರ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿಸಲಾಯಿತು. ಕಠಿಣ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಆಕೆಯನ್ನು ಬಂಧಿಸಲಾಯಿತು. ಆವರ ಆರೋಗ್ಯ ಸ್ಥಿತಿ ಮತ್ತು ವಿಚಾರಣೆಯಿಲ್ಲದೆ ಸುದೀರ್ಘ ಬಂಧನವನ್ನು ಪರಿಗಣಿಸಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ಜಾಮೀನು ನೀಡಿತು.

ಜಾಮೀನು ಷರತ್ತುಗಳ ಪ್ರಕಾರ, ಶೋಮಾ ಸೇನ್ ಅವರು ಪ್ರತಿ ಹದಿನೈದು ದಿನಗಳಿಗೊಮ್ಮೆ ಅವರು ವಾಸಿಸುವ ಅಧಿಕಾರ ವ್ಯಾಪ್ತಿಯಲ್ಲಿರುವ ಪೊಲೀಸ್ ಠಾಣಾ ಅಧಿಕಾರಿಗೆ ವರದಿ ಮಾಡಬೇಕು. ವಿಶೇಷ ನ್ಯಾಯಾಲಯದ ಅನುಮೋದನೆಯಿಲ್ಲದೆ ಅವರು ಮಹಾರಾಷ್ಟ್ರವನ್ನು ತೊರೆಯಲು ಅವಕಾಶವಿಲ್ಲ ಮತ್ತು ಅವರ ಪಾಸ್‌ಪೋರ್ಟ್ ಅನ್ನು ಒಪ್ಪಿಸಬೇಕು.

ಕಣ್ಗಾವಲಿನ ಭಾಗವಾಗಿ ಅವರು ತಾನು ವಾಸಿಸುವ ಸ್ಥಳದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ತಿಳಿಸಬೇಕು. ಆವರ ಮೊಬೈಲ್ ಫೋನ್ ಸಕ್ರಿಯವಾಗಿರಬೇಕು ಇದರಿಂದ ಭಯೋತ್ಪಾದನಾ ನಿಗ್ರಹ ಸಂಸ್ಥೆ ಆಕೆಯ ಚಲನವಲನದ ಮೇಲೆ ನಿಗಾ ಇಡಬಹುದು.

ಭೀಮಾ ಕೋರೆಗಾಂವ್ ಹಿಂಸಾಚಾರದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಶೋಮಾ ಸೇನ್ ಅವರನ್ನು ಜೂನ್ 6, 2018 ರಂದು ಬಂಧಿಸಲಾಯಿತು. ಸೇನ್ ಅವರೊಂದಿಗೆ ವರವರ ರಾವ್, ವೆರ್ನಾನ್ ಗೊನ್ಸಾಲ್ವಿಸ್, ಆನಂದ್ ತೇಲ್ತುಂಬ್ಡೆ, ಸುಧಾ ಭಾರದ್ವಾಜ್, ಅರುಣ್ ಫೆರೇರಾ, ಗೌತಮ್ ನವ್ಲಾಖಾ, ಫಾದರ್ ಸೇರಿದಂತೆ ಸ್ಟಾನ್ ಸ್ವಾಮಿ ಹಾಗೂ ಇತರರನ್ನು ಬಂಧಿಸಲಾಗಿತ್ತು. ಪುಣೆ ಪೊಲೀಸರು ಅವರನ್ನು “ಮಾವೋವಾದಿಗಳು” ಎಂದು ಆರೋಪಿಸಿದರು.

ಪ್ರಕರಣದ ಪ್ರಕಾರ, ಪುಣೆಯ ಶನಿವಾರವಾಡದಲ್ಲಿ ಡಿಸೆಂಬರ್ 31, 2017 ರಂದು ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಆಪಾದಿತ ಪ್ರಚೋದಕ ಭಾಷಣಗಳು ಭೀಮಾ ಕೋರೆಗಾಂವ್‌ನಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತು. ಜನವರಿ 1, 2018 ರಂದು, ಭೀಮಾ ಕೋರೆಗಾಂವ್ ಕದನದ ದ್ವಿಶತಮಾನೋತ್ಸವದಲ್ಲಿ ಭಾಗವಹಿಸಲು ಭೀಮಾ ಕೋರೆಗಾಂವ್ ಸ್ಮಾರಕದಲ್ಲಿ ಮಹರ್ ಸಮುದಾಯದ ದಲಿತರು ಸಮಾವೇಶಗೊಂಡಾಗ, ವಿವಾದಾತ್ಮಕ ಬಲಪಂಥೀಯ ನಾಯಕ ಸಂಭಾಜಿ ಭಿಡೆ ನೇತೃತ್ವದ ಮರಾಠ ಗುಂಪುಗಳು ಅವರ ಮೇಲೆ ಹಲ್ಲೆ ನಡೆಸಿದ್ದವು.

ಆರಂಭದಲ್ಲಿ ಪೊಲೀಸರು ಭಿಡೆ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಕೊಲೆ ಯತ್ನ ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಿದ್ದರೆ, ಅವರ ವಿರುದ್ಧದ ಪ್ರಕರಣವನ್ನು 2022 ರಲ್ಲಿ ಕೈಬಿಡಲಾಯಿತು. ಭಿಡೆ ವಿರುದ್ಧ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ; ಯಾವ ಆಧಾರದಲ್ಲಿ 400 ಸೀಟು ಎಂದು ಹೇಳುತ್ತಿದ್ದಾರೆ.. ಅವರು ಜ್ಯೋತಿಷಿಗಳೇ..?’; ಬಿಜೆಪಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ: ನೀವು ಭಯಪಡಬೇಕೆ? ವೈದ್ಯರು ಹೇಳುವುದೇನು?

0
ಕೋವಿಡ್ -19 ವಿರುದ್ಧದ 'ಕೋವಿಶೀಲ್ಡ್‌' ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದ ಅಪರೂಪದ ಅಡ್ಡ ಪರಿಣಾಮದ ಸಾಮರ್ಥ್ಯವನ್ನು ಹೊಂದಿದೆ ಎಂದು ಬ್ರಿಟಿಷ್ ಫಾರ್ಮಾ ದೈತ್ಯ ‘ಅಸ್ಟ್ರಾಜೆನೆಕಾ’  ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿದೆ. TTS ಅಥವಾ...