Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ: ವೆರ್ನಾನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೇರಾ ಅವರಿಗೆ ಸುಪ್ರೀಂ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣ: ವೆರ್ನಾನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೇರಾ ಅವರಿಗೆ ಸುಪ್ರೀಂ ಜಾಮೀನು

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದ ಹೋರಾಟಗಾರರಾದ ವೆರ್ನಾನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೇರಾ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ ಎಂದು ಲೈವ್ ಲಾ ವರದಿ ಮಾಡಿದೆ. ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸುಧಾಂಶು ಧುಲಿಯಾ ಅವರು ಮಾರ್ಚ್ 3 ರಂದು ತೀರ್ಪನ್ನು ಕಾಯ್ದಿರಿಸಿದ್ದರು.

ಗೊನ್ಸಾಲ್ವೆಸ್ ಮತ್ತು ಫೆರೇರಾ ಐದು ವರ್ಷಗಳಿಗೂ ಹೆಚ್ಚು ಕಾಲ ಬಂಧನದಲ್ಲಿದ್ದರು ಎನ್ನುವುದನ್ನು ನ್ಯಾಯಾಲಯವು ಪರಿಗಣನೆಗೆ ತೆಗೆದುಕೊಂಡು ಜಾಮೀನು ನೀಡಿತು.

”ಆರೋಪಗಳು ಗಂಭೀರವಾಗಿವೆ ಎಂಬ ಕಾರಣಕ್ಕಾಗಿ ಮಾತ್ರ, ಅವರಿಗೆ ಜಾಮೀನು ನಿರಾಕರಿಸಲಾಗುವುದಿಲ್ಲ” ಎಂದು ಆದೇಶವನ್ನು ಓದುವಾಗ ನ್ಯಾಯಮೂರ್ತಿ ಬೋಸ್ ಹೇಳಿದರು.

ಜಾಮೀನಿಗೆ ಷರತ್ತುಗಳ ಪ್ರಕಾರ, ಗೊನ್ಸಾಲ್ವೆಸ್ ಮತ್ತು ಫೆರೇರಾ ಅವರು ಪ್ರಕರಣದ ವಿಚಾರಣೆ ಮುಗಿಯುವವರೆಗೆ ಮಹಾರಾಷ್ಟ್ರವನ್ನು ಬಿಟ್ಟು ಎಲ್ಲಿಗೂ ಹೋಗುವಂತಿಲ್ಲ. ಇಬ್ಬರು ಕಾರ್ಯಕರ್ತರು ತಮ್ಮ ಪಾಸ್‌ಪೋರ್ಟ್‌ಗಳನ್ನು ಒಪ್ಪಿಸಬೇಕು ಮತ್ತು ಅವರ ವಿಳಾಸಗಳು ಮತ್ತು ಫೋನ್ ಸಂಖ್ಯೆಗಳ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ ತಿಳಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

”ಅವರು ಈ ಅವಧಿಯಲ್ಲಿ ಕೇವಲ ಒಂದು ಮೊಬೈಲ್ ಸಂಪರ್ಕವನ್ನು ಹೊಂದಬಹುದು. ಲೈವ್ ಟ್ರ್ಯಾಕಿಂಗ್‌ಗಾಗಿ NIA [ರಾಷ್ಟ್ರೀಯ ತನಿಖಾ ಸಂಸ್ಥೆ] ಅಧಿಕಾರಿಯೊಂದಿಗೆ ಮೊಬೈಲ್ ಸಂಖ್ಯೆ ಹಂಚಿಕೊಳ್ಳಬೇಕು. ಅವರು ವಾರಕ್ಕೊಮ್ಮೆ ತನಿಖಾಧಿಕಾರಿಗೆ ವರದಿ ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣದ ಹಿನ್ನೆಲೆ

ಜನವರಿ 1, 2018ರಂದು ಪುಣೆ ಬಳಿಯ ಭೀಮಾ ಕೋರೆಗಾಂವ್ ಗ್ರಾಮದಲ್ಲಿ ನಡೆದ ಜಾತಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 16 ಕಾರ್ಯಕರ್ತರು, ಶಿಕ್ಷಣ ತಜ್ಞರು ಮತ್ತು ವಕೀಲರಲ್ಲಿ ಗೊನ್ಸಾಲ್ವೆಸ್ ಮತ್ತು ಫೆರೇರಾ ಸೇರಿದ್ದಾರೆ. ಯಾವುದೇ ವಿಶ್ವಾಸಾರ್ಹ ಪುರಾವೆಗಳಿಲ್ಲದೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಅವರನ್ನು ಜೈಲಿಗೆ ಹಾಕಲಾಗಿತ್ತು.

ಭೀಮಾ ಕೋರೆಗಾಂವ್ ಯುದ್ಧದ 200ನೇ ವಾರ್ಷಿಕೋತ್ಸವದ ಸ್ಮರಣಾರ್ಥ 2017ರ ಡಿಸೆಂಬರ್ 31 ರಂದು ಎಲ್ಗಾರ್ ಪರಿಷತ್ ಕಾರ್ಯಕ್ರಮವನ್ನು ಆಯೋಜಿಸುವಲ್ಲಿ ಶಿಕ್ಷಣ ತಜ್ಞರು ವಕೀಲರು ಸೇರಿ ಅನೇಕರು ಭಾಗಿಯಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಈ ಸಮಾರಂಭದಲ್ಲಿ ಪ್ರಚೋದನಕಾರಿ ಭಾಷಣಗಳು ಮರುದಿನ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ 16 ವ್ಯಕ್ತಿಗಳು ಪ್ರಧಾನಿ ನರೇಂದ್ರ ಮೋದಿಯವರ ಹತ್ಯೆಗೆ ಸಂಚು ರೂಪಿಸಿದ್ದರು ಮತ್ತು ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ.

ಆಗಸ್ಟ್ 28, 2018 ರಂದು ಬಂಧಿತರಾದ ಗೊನ್ಸಾಲ್ವೆಸ್ ಮತ್ತು ಫೆರೇರಾ ಅವರು ಈ ಪ್ರಕರಣದಲ್ಲಿ ಡೀಫಾಲ್ಟ್ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಲು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಗೊನ್ಸಾಲ್ವೆಸ್ ಮತ್ತು ಫೆರೇರಾ ಅವರು ಜಾಮೀನಿಗೆ ಸಮಯಕ್ಕೆ ಸರಿಯಾಗಿ ಅರ್ಜಿ ಸಲ್ಲಿಸಲಿಲ್ಲ ಎಂದು ನ್ಯಾಯಾಲಯವು ಹೇಳಿತ್ತು.

ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ 1973 ರ ಸೆಕ್ಷನ್ 167(2)ರ ಅಡಿಯಲ್ಲಿ, ಆರೋಪಿತ ವ್ಯಕ್ತಿಯನ್ನು ನಿರ್ದಿಷ್ಟ ಸಮಯದವರೆಗೆ ಮಾತ್ರ ಬಂಧಿಸಬಹುದು. ಈ ಅವಧಿಯ ನಂತರವೂ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸದಿದ್ದರೆ ಅವರಿಗೆ ಜಾಮೀನು ನೀಡಬೇಕಾಗುತ್ತದೆ. ಈ ಸೆಕ್ಷನ್ ಅಡಿಯಲ್ಲಿ ಜಾಮೀನು ಡೀಫಾಲ್ಟ್ ಜಾಮೀನು ಅಥವಾ ಕಡ್ಡಾಯ ಜಾಮೀನು ಎಂದು ಉಲ್ಲೇಖಿಸಲಾಗುತ್ತದೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್: ಚಿಂತಕ ಆನಂದ್ ತೇಲ್ತುಂಬ್ಡೆರವರಿಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...