Homeಚಳವಳಿಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಗೌತಮ್ ನವಲಖಾ ಗೃಹಬಂಧನದ ಮನವಿ ಪುರಸ್ಕರಿಸಿದ ಸುಪ್ರೀಂಕೋರ್ಟ್‌

ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಗೌತಮ್ ನವಲಖಾ ಗೃಹಬಂಧನದ ಮನವಿ ಪುರಸ್ಕರಿಸಿದ ಸುಪ್ರೀಂಕೋರ್ಟ್‌

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನದಲ್ಲಿರುವ ಮಾನವ ಹಕ್ಕುಗಳ ಹೋರಾಟಗಾರ ಗೌತಮ್ ನವಲಖ ಅವರನ್ನು ಗೃಹಬಂಧನಕ್ಕೆ ವರ್ಗಾಯಿಸಲು ಸುಪ್ರೀಂಕೋರ್ಟ್‌ ಗುರುವಾರ ಆದೇಶಿಸಿದೆ. ಗೃಹಬಂಧನಕ್ಕೆ ವರ್ಗಾಯಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಯ ಆಕ್ಷೇಪಣೆಗಳ ಹೊರತಾಗಿಯೂ ನವಲಖ ಅವರ ಮನವಿಗೆ ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.

ನವಲಖ ಅವರ ವಯಸ್ಸು, ಆರೋಗ್ಯ ಸ್ಥಿತಿ, ಅವರು 2020 ರಿಂದ ಜೈಲಿನಲ್ಲಿದ್ದಾರೆ ಎಂಬ ಅಂಶ, ಜೊತೆಗೆ ಈ ಪ್ರಕರಣದಲ್ಲಿ ಆರೋಪಿಯಾಗಿರುವುದನ್ನು ಹೊರತುಪಡಿಸಿ ಬೇರೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಹಾಗೂ ಮುಂದಿನ ದಿನಗಳಲ್ಲಿ ವಿಚಾರಣೆ ಪ್ರಗತಿ ಕಾಣುವ ಸಾಧ್ಯತೆಯಿಲ್ಲ ಎಂಬ ಅಂಶಗಳನ್ನು ಸುಪ್ರೀಂ ಕೋರ್ಟ್ ಗಮನಿಸಿದೆ. 48 ಗಂಟೆಗಳ ಒಳಗೆ ಆದೇಶವನ್ನು ಜಾರಿಗೊಳಿಸಬೇಕು ಎಂದು ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಹೃಷಿಕೇಶ್ ರಾಯ್ ಅವರ ಪೀಠವು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರಂಭದಲ್ಲಿ ಅವರು ತಿಂಗಳ ಕಾಲ ಗೃಹಬಂಧನದಲ್ಲಿರುತ್ತದೆ, ನಂತರ ಅದನ್ನು ನ್ಯಾಯಾಲಯವು ಪರಿಶೀಲಿಸುತ್ತದೆ ಎಂದು ಪೀಠವು ಹೇಳಿದೆ. ಪೀಠವು ಮುಂಬೈನಲ್ಲಿ ಅವರೊಂದಿಗೆ ವಾಸಿಸಲು ಅನುಮತಿ ನೀಡಿದ ಅವರ ಸಂಗಾತಿ ಸಭಾ ಹುಸೈನ್‌‌ ಅವರಿಗೂ ಕಠಿಣ ಷರತ್ತುಗಳನ್ನು ವಿಧಿಸಿದ್ದು, ಈ ಷರತ್ತುಗಳಲ್ಲಿ ಫೋನ್ ಬಳಕೆಯ ಮೇಲಿನ ನಿರ್ಬಂಧಗಳು ಕೂಡಾ ಒಳಗೊಂಡಿವೆ.

ಇದನ್ನೂ ಓದಿ: ಅವರ ಹಾಡಿನೊಂದಿಗೇ ಅವರನ್ನು ಮೆಲ್ಲನೆ ಮುಗಿಸುವುದು; ಫಾದರ್ ಸ್ಟ್ಯಾನ್ ಸ್ವಾಮಿಯವರಿಗೆ ಶೋಕಗೀತೆ

ನವಲಖಾ ಅವರನ್ನು ಗೃಹ ಬಂಧನಕ್ಕೆ ವರ್ಗಾವಣೆ ಮಾಡುವ ಮೊದಲು ಅವರು ಉಳಿಯಲು ಇರುವ “ಆವರಣದ ಅಗತ್ಯ ಮೌಲ್ಯಮಾಪನವನ್ನು ಕೈಗೊಳ್ಳಲು” ಎನ್ಐಎಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಗೃಹಬಂಧನದ ಯಾವುದೇ ದುರುಪಯೋಗ ನಡೆಯದಂತೆ ಮೇಲ್ವಿಚಾರಣೆ ಮಾಡಲು ಮತ್ತು ತಡೆಯಲು ಸಂಸ್ಥೆಯು “ಸೂಕ್ತ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ಸ್ವತಂತ್ರವಾಗಿದೆ” ಎಂದು ಸುಪ್ರೀಂಕೋರ್ಟ್‌ ಆದೇಶವು ಹೇಳಿದ್ದು, ಅವರ ಭದ್ರತೆಗೆ ತಗಲುವ ವೆಚ್ಚ 2.4 ಲಕ್ಷ ರೂ. ಗಳನ್ನು ಠೇವಣಿ ಇಡುವಂತೆ ಕೇಳಿದೆ.

“ಅವರು ಉಳಿಯುವ ಮನೆಯ ಪ್ರವೇಶದ್ವಾರದಲ್ಲಿ ಅವರದೇ ವೆಚ್ಚದಲ್ಲಿ ಸಿಸಿಟಿವಿ ಅಳವಡಿಸಬೇಕು. ಸಿಸಿಟಿವಿ ಕೊಠಡಿಗಳ ಹೊರಗೆ, ಪ್ರವೇಶ, ನಿರ್ಗಮನ ಧ್ವಾರದ ಹೊರಗೆ ಇರಬೇಕು. ಸಿಸಿಟಿವಿಯು ಕಾರ್ಯನಿರ್ವಹಿಸುವ ಸ್ಥಿತಿಯಲ್ಲಿರಬೇಕು. ಅವರನ್ನು ಮನೆಗೆ ವರ್ಗಾಯಿಸುವ ಮೊದಲು ಮನೆಯನ್ನು ಪರೀಕ್ಷಿಸಲಾಗುವುದು” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.

ಗೃಹಬಂಧನದಲ್ಲಿರುವಾಗ ಯಾವುದೇ ಮೊಬೈಲ್ ಫೋನ್, ಇಂಟರ್ನೆಟ್, ಲ್ಯಾಪ್‌ಟಾಪ್ ಅಥವಾ ಯಾವುದೇ ಸಂವಹನ ಸಾಧನವನ್ನು ಬಳಸದಂತೆ ಸುಪ್ರಿಂಕೋರ್ಟ್‌ ನವಲಾಖಾ ಅವರನ್ನು ಕೇಳಿದ್ದು, ಆದರೆ ದಿನಕ್ಕೊಮ್ಮೆ 10 ನಿಮಿಷಗಳ ಕಾಲ ಪೊಲೀಸ್ ಸಿಬ್ಬಂದಿ ಒದಗಿಸುವ ಮೊಬೈಲ್‌ ಬಳಸಲು ಅವರಿಗೆ ಅನುಮತಿ ನೀಡಿದೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಸಾಕ್ಷ್ಯ ಸಂಗ್ರಹಿಸಲು ಹೆಣಗುತ್ತಿರುವ NIA!

“ನವಲಖ ಅವರು ಮುಂಬೈನಿಂದ ಹೊರ ಹೋಗುವಂತಿಲ್ಲ, ಆದರೆ ವಾರಕ್ಕೊಮ್ಮೆ ಮೂರು ಗಂಟೆಗಳ ಕಾಲ ಇಬ್ಬರು ಕುಟುಂಬ ಸದಸ್ಯರನ್ನು ಭೇಟಿ ಮಾಡಬಹುದು” ಎಂದು ಸುಪ್ರೀಂಕೋರ್ಟ್‌ ಹೇಳಿದ್ದು, ಹೆಚ್ಚುವರಿಯಾಗಿ, ಪ್ರಕರಣದಲ್ಲಿ ಯಾವುದೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಅಥವಾ ಯಾವುದೇ ಕಾನೂನುಬಾಹಿರ ಚಟುವಟಿಕೆಯನ್ನು ಮಾಡದಂತೆ ಕೇಳಿದೆ.

ಪೊಲೀಸ್ ಸಿಬ್ಬಂದಿಯ ಸಮ್ಮುಖದಲ್ಲಿ ನಡೆಯಲು ಅವರಿಗೆ ಅನುಮತಿ ನೀಡಲಾಗಿದ್ದರೂ ಯಾರೊಂದಿಗೂ ಯಾವುದೇ ಸಂಭಾಷಣೆಯಲ್ಲಿ ತೊಡಬಾರದು ಎಂದು ಹೇಳಿದೆ. “ಅವರಿಗೆ ವಕೀಲರೊಂದಿಗೆ ಸಂವಹನ ನಡೆಸಲು ಅನುಮತಿ ನೀಡಲಾಗುತ್ತದೆ ಮತ್ತು ಅವರು ವಕೀಲರ ಹೆಸರನ್ನು ನೀಡಬೇಕು” ಎಂದು ಆದೇಶದಲ್ಲಿ ಹೇಳಲಾಗಿದೆ.

ಫೋನ್ ಕರೆಗಳನ್ನು ಮಾಡುವ ಸೌಲಭ್ಯವನ್ನು ಹೊಂದಿರುವ ಮೊಬೈಲ್ ಫೋನ್ ಅನ್ನು ಬಳಸಲು ನ್ಯಾಯಾಲಯವು ಅವರನ್ನು ನೋಡಿಕೊಳ್ಳುವ ಅವರ ಸಂಗಾತಿಗೆ ಅನುಮತಿ ನೀಡಿದ್ದು, ಆದರೆ ಅವರು ಮಾಡಿದ ಫೋನ್ ಕರೆಗಳ ಕಣ್ಗಾವಲು ಮತ್ತು ರೆಕಾರ್ಡ್‌ ಮಾಡಲು ಸುಪ್ರೀಂಕೋರ್ಟ್‌ ತನಿಖಾ ಸಂಸ್ಥೆಗೆ ಸ್ವಾತಂತ್ರ್ಯ ನೀಡಿದೆ. “ಸಹಚರನೂ ಫೋನ್ ಕರೆ ಅಥವಾ ಸಂದೇಶದ ವಿವರಗಳನ್ನು ಅಳಿಸಬಾರದು” ಎಂದು ನ್ಯಾಯಾಲಯವು ಹೇಳಿದೆ.

ಇದನ್ನೂ ಓದಿ: ‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’: NHRC ಅಧ್ಯಕ್ಷರಾಗಿ ಅರುಣ್ ಮಿಶ್ರಾ ಆಯ್ಕೆಗೆ PUCL ಖಂಡನೆ

ತನ್ನನ್ನು ಗೃಹಬಂಧನಕ್ಕೆ ವರ್ಗಾಯಿಸಲು ನಿರಾಕರಿಸಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ನವಲಖಾ ಅವರು ಸಲ್ಲಿಸಿದ ಮೇಲ್ಮನವಿಯ ಮೇರೆಗೆ ಸುಪ್ರೀಂಕೋರ್ಟ್‌ ವಿಚಾರಣೆ ನಡೆಸಿ ಆದೇಶ ನೀಡಿದೆ. ನವಲಖಾ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್, ಅರ್ಜಿದಾರರು 70 ವರ್ಷ ವಯಸ್ಸಿನವರಾಗಿದ್ದು, ಅನೇಕ ಆರೋಗ್ಯ ಸಮಸ್ಯೆಗಳೊಂದಿಗೆ ಹೋರಾಡುತ್ತಿದ್ದಾರೆ ಎಂದು ವಾದಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸದ್ಯಕ್ಕೆ ಇದೊಂದು ಸಮಾದಾನಕರ ಸಂಗತಿ. ಯು.ಎ.ಪಿ.ಎ. ಎಂಬ ಕರಾಳ ಕಾನೂನು ರದ್ದಾಗಬೇಕು.

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...