Homeಚಳವಳಿಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಗೌತಮ್ ನವಲಖಾ ಗೃಹಬಂಧನದ ಮನವಿ ಪುರಸ್ಕರಿಸಿದ ಸುಪ್ರೀಂಕೋರ್ಟ್‌

ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಗೌತಮ್ ನವಲಖಾ ಗೃಹಬಂಧನದ ಮನವಿ ಪುರಸ್ಕರಿಸಿದ ಸುಪ್ರೀಂಕೋರ್ಟ್‌

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನದಲ್ಲಿರುವ ಮಾನವ ಹಕ್ಕುಗಳ ಹೋರಾಟಗಾರ ಗೌತಮ್ ನವಲಖ ಅವರನ್ನು ಗೃಹಬಂಧನಕ್ಕೆ ವರ್ಗಾಯಿಸಲು ಸುಪ್ರೀಂಕೋರ್ಟ್‌ ಗುರುವಾರ ಆದೇಶಿಸಿದೆ. ಗೃಹಬಂಧನಕ್ಕೆ ವರ್ಗಾಯಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಯ ಆಕ್ಷೇಪಣೆಗಳ ಹೊರತಾಗಿಯೂ ನವಲಖ ಅವರ ಮನವಿಗೆ ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.

ನವಲಖ ಅವರ ವಯಸ್ಸು, ಆರೋಗ್ಯ ಸ್ಥಿತಿ, ಅವರು 2020 ರಿಂದ ಜೈಲಿನಲ್ಲಿದ್ದಾರೆ ಎಂಬ ಅಂಶ, ಜೊತೆಗೆ ಈ ಪ್ರಕರಣದಲ್ಲಿ ಆರೋಪಿಯಾಗಿರುವುದನ್ನು ಹೊರತುಪಡಿಸಿ ಬೇರೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಹಾಗೂ ಮುಂದಿನ ದಿನಗಳಲ್ಲಿ ವಿಚಾರಣೆ ಪ್ರಗತಿ ಕಾಣುವ ಸಾಧ್ಯತೆಯಿಲ್ಲ ಎಂಬ ಅಂಶಗಳನ್ನು ಸುಪ್ರೀಂ ಕೋರ್ಟ್ ಗಮನಿಸಿದೆ. 48 ಗಂಟೆಗಳ ಒಳಗೆ ಆದೇಶವನ್ನು ಜಾರಿಗೊಳಿಸಬೇಕು ಎಂದು ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಹೃಷಿಕೇಶ್ ರಾಯ್ ಅವರ ಪೀಠವು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರಂಭದಲ್ಲಿ ಅವರು ತಿಂಗಳ ಕಾಲ ಗೃಹಬಂಧನದಲ್ಲಿರುತ್ತದೆ, ನಂತರ ಅದನ್ನು ನ್ಯಾಯಾಲಯವು ಪರಿಶೀಲಿಸುತ್ತದೆ ಎಂದು ಪೀಠವು ಹೇಳಿದೆ. ಪೀಠವು ಮುಂಬೈನಲ್ಲಿ ಅವರೊಂದಿಗೆ ವಾಸಿಸಲು ಅನುಮತಿ ನೀಡಿದ ಅವರ ಸಂಗಾತಿ ಸಭಾ ಹುಸೈನ್‌‌ ಅವರಿಗೂ ಕಠಿಣ ಷರತ್ತುಗಳನ್ನು ವಿಧಿಸಿದ್ದು, ಈ ಷರತ್ತುಗಳಲ್ಲಿ ಫೋನ್ ಬಳಕೆಯ ಮೇಲಿನ ನಿರ್ಬಂಧಗಳು ಕೂಡಾ ಒಳಗೊಂಡಿವೆ.

ಇದನ್ನೂ ಓದಿ: ಅವರ ಹಾಡಿನೊಂದಿಗೇ ಅವರನ್ನು ಮೆಲ್ಲನೆ ಮುಗಿಸುವುದು; ಫಾದರ್ ಸ್ಟ್ಯಾನ್ ಸ್ವಾಮಿಯವರಿಗೆ ಶೋಕಗೀತೆ

ನವಲಖಾ ಅವರನ್ನು ಗೃಹ ಬಂಧನಕ್ಕೆ ವರ್ಗಾವಣೆ ಮಾಡುವ ಮೊದಲು ಅವರು ಉಳಿಯಲು ಇರುವ “ಆವರಣದ ಅಗತ್ಯ ಮೌಲ್ಯಮಾಪನವನ್ನು ಕೈಗೊಳ್ಳಲು” ಎನ್ಐಎಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಗೃಹಬಂಧನದ ಯಾವುದೇ ದುರುಪಯೋಗ ನಡೆಯದಂತೆ ಮೇಲ್ವಿಚಾರಣೆ ಮಾಡಲು ಮತ್ತು ತಡೆಯಲು ಸಂಸ್ಥೆಯು “ಸೂಕ್ತ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ಸ್ವತಂತ್ರವಾಗಿದೆ” ಎಂದು ಸುಪ್ರೀಂಕೋರ್ಟ್‌ ಆದೇಶವು ಹೇಳಿದ್ದು, ಅವರ ಭದ್ರತೆಗೆ ತಗಲುವ ವೆಚ್ಚ 2.4 ಲಕ್ಷ ರೂ. ಗಳನ್ನು ಠೇವಣಿ ಇಡುವಂತೆ ಕೇಳಿದೆ.

“ಅವರು ಉಳಿಯುವ ಮನೆಯ ಪ್ರವೇಶದ್ವಾರದಲ್ಲಿ ಅವರದೇ ವೆಚ್ಚದಲ್ಲಿ ಸಿಸಿಟಿವಿ ಅಳವಡಿಸಬೇಕು. ಸಿಸಿಟಿವಿ ಕೊಠಡಿಗಳ ಹೊರಗೆ, ಪ್ರವೇಶ, ನಿರ್ಗಮನ ಧ್ವಾರದ ಹೊರಗೆ ಇರಬೇಕು. ಸಿಸಿಟಿವಿಯು ಕಾರ್ಯನಿರ್ವಹಿಸುವ ಸ್ಥಿತಿಯಲ್ಲಿರಬೇಕು. ಅವರನ್ನು ಮನೆಗೆ ವರ್ಗಾಯಿಸುವ ಮೊದಲು ಮನೆಯನ್ನು ಪರೀಕ್ಷಿಸಲಾಗುವುದು” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.

ಗೃಹಬಂಧನದಲ್ಲಿರುವಾಗ ಯಾವುದೇ ಮೊಬೈಲ್ ಫೋನ್, ಇಂಟರ್ನೆಟ್, ಲ್ಯಾಪ್‌ಟಾಪ್ ಅಥವಾ ಯಾವುದೇ ಸಂವಹನ ಸಾಧನವನ್ನು ಬಳಸದಂತೆ ಸುಪ್ರಿಂಕೋರ್ಟ್‌ ನವಲಾಖಾ ಅವರನ್ನು ಕೇಳಿದ್ದು, ಆದರೆ ದಿನಕ್ಕೊಮ್ಮೆ 10 ನಿಮಿಷಗಳ ಕಾಲ ಪೊಲೀಸ್ ಸಿಬ್ಬಂದಿ ಒದಗಿಸುವ ಮೊಬೈಲ್‌ ಬಳಸಲು ಅವರಿಗೆ ಅನುಮತಿ ನೀಡಿದೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಸಾಕ್ಷ್ಯ ಸಂಗ್ರಹಿಸಲು ಹೆಣಗುತ್ತಿರುವ NIA!

“ನವಲಖ ಅವರು ಮುಂಬೈನಿಂದ ಹೊರ ಹೋಗುವಂತಿಲ್ಲ, ಆದರೆ ವಾರಕ್ಕೊಮ್ಮೆ ಮೂರು ಗಂಟೆಗಳ ಕಾಲ ಇಬ್ಬರು ಕುಟುಂಬ ಸದಸ್ಯರನ್ನು ಭೇಟಿ ಮಾಡಬಹುದು” ಎಂದು ಸುಪ್ರೀಂಕೋರ್ಟ್‌ ಹೇಳಿದ್ದು, ಹೆಚ್ಚುವರಿಯಾಗಿ, ಪ್ರಕರಣದಲ್ಲಿ ಯಾವುದೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಅಥವಾ ಯಾವುದೇ ಕಾನೂನುಬಾಹಿರ ಚಟುವಟಿಕೆಯನ್ನು ಮಾಡದಂತೆ ಕೇಳಿದೆ.

ಪೊಲೀಸ್ ಸಿಬ್ಬಂದಿಯ ಸಮ್ಮುಖದಲ್ಲಿ ನಡೆಯಲು ಅವರಿಗೆ ಅನುಮತಿ ನೀಡಲಾಗಿದ್ದರೂ ಯಾರೊಂದಿಗೂ ಯಾವುದೇ ಸಂಭಾಷಣೆಯಲ್ಲಿ ತೊಡಬಾರದು ಎಂದು ಹೇಳಿದೆ. “ಅವರಿಗೆ ವಕೀಲರೊಂದಿಗೆ ಸಂವಹನ ನಡೆಸಲು ಅನುಮತಿ ನೀಡಲಾಗುತ್ತದೆ ಮತ್ತು ಅವರು ವಕೀಲರ ಹೆಸರನ್ನು ನೀಡಬೇಕು” ಎಂದು ಆದೇಶದಲ್ಲಿ ಹೇಳಲಾಗಿದೆ.

ಫೋನ್ ಕರೆಗಳನ್ನು ಮಾಡುವ ಸೌಲಭ್ಯವನ್ನು ಹೊಂದಿರುವ ಮೊಬೈಲ್ ಫೋನ್ ಅನ್ನು ಬಳಸಲು ನ್ಯಾಯಾಲಯವು ಅವರನ್ನು ನೋಡಿಕೊಳ್ಳುವ ಅವರ ಸಂಗಾತಿಗೆ ಅನುಮತಿ ನೀಡಿದ್ದು, ಆದರೆ ಅವರು ಮಾಡಿದ ಫೋನ್ ಕರೆಗಳ ಕಣ್ಗಾವಲು ಮತ್ತು ರೆಕಾರ್ಡ್‌ ಮಾಡಲು ಸುಪ್ರೀಂಕೋರ್ಟ್‌ ತನಿಖಾ ಸಂಸ್ಥೆಗೆ ಸ್ವಾತಂತ್ರ್ಯ ನೀಡಿದೆ. “ಸಹಚರನೂ ಫೋನ್ ಕರೆ ಅಥವಾ ಸಂದೇಶದ ವಿವರಗಳನ್ನು ಅಳಿಸಬಾರದು” ಎಂದು ನ್ಯಾಯಾಲಯವು ಹೇಳಿದೆ.

ಇದನ್ನೂ ಓದಿ: ‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’: NHRC ಅಧ್ಯಕ್ಷರಾಗಿ ಅರುಣ್ ಮಿಶ್ರಾ ಆಯ್ಕೆಗೆ PUCL ಖಂಡನೆ

ತನ್ನನ್ನು ಗೃಹಬಂಧನಕ್ಕೆ ವರ್ಗಾಯಿಸಲು ನಿರಾಕರಿಸಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ನವಲಖಾ ಅವರು ಸಲ್ಲಿಸಿದ ಮೇಲ್ಮನವಿಯ ಮೇರೆಗೆ ಸುಪ್ರೀಂಕೋರ್ಟ್‌ ವಿಚಾರಣೆ ನಡೆಸಿ ಆದೇಶ ನೀಡಿದೆ. ನವಲಖಾ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್, ಅರ್ಜಿದಾರರು 70 ವರ್ಷ ವಯಸ್ಸಿನವರಾಗಿದ್ದು, ಅನೇಕ ಆರೋಗ್ಯ ಸಮಸ್ಯೆಗಳೊಂದಿಗೆ ಹೋರಾಡುತ್ತಿದ್ದಾರೆ ಎಂದು ವಾದಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸದ್ಯಕ್ಕೆ ಇದೊಂದು ಸಮಾದಾನಕರ ಸಂಗತಿ. ಯು.ಎ.ಪಿ.ಎ. ಎಂಬ ಕರಾಳ ಕಾನೂನು ರದ್ದಾಗಬೇಕು.

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...