Homeಚಳವಳಿಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಗೌತಮ್ ನವಲಖಾ ಗೃಹಬಂಧನದ ಮನವಿ ಪುರಸ್ಕರಿಸಿದ ಸುಪ್ರೀಂಕೋರ್ಟ್‌

ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಗೌತಮ್ ನವಲಖಾ ಗೃಹಬಂಧನದ ಮನವಿ ಪುರಸ್ಕರಿಸಿದ ಸುಪ್ರೀಂಕೋರ್ಟ್‌

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನದಲ್ಲಿರುವ ಮಾನವ ಹಕ್ಕುಗಳ ಹೋರಾಟಗಾರ ಗೌತಮ್ ನವಲಖ ಅವರನ್ನು ಗೃಹಬಂಧನಕ್ಕೆ ವರ್ಗಾಯಿಸಲು ಸುಪ್ರೀಂಕೋರ್ಟ್‌ ಗುರುವಾರ ಆದೇಶಿಸಿದೆ. ಗೃಹಬಂಧನಕ್ಕೆ ವರ್ಗಾಯಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಯ ಆಕ್ಷೇಪಣೆಗಳ ಹೊರತಾಗಿಯೂ ನವಲಖ ಅವರ ಮನವಿಗೆ ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.

ನವಲಖ ಅವರ ವಯಸ್ಸು, ಆರೋಗ್ಯ ಸ್ಥಿತಿ, ಅವರು 2020 ರಿಂದ ಜೈಲಿನಲ್ಲಿದ್ದಾರೆ ಎಂಬ ಅಂಶ, ಜೊತೆಗೆ ಈ ಪ್ರಕರಣದಲ್ಲಿ ಆರೋಪಿಯಾಗಿರುವುದನ್ನು ಹೊರತುಪಡಿಸಿ ಬೇರೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಹಾಗೂ ಮುಂದಿನ ದಿನಗಳಲ್ಲಿ ವಿಚಾರಣೆ ಪ್ರಗತಿ ಕಾಣುವ ಸಾಧ್ಯತೆಯಿಲ್ಲ ಎಂಬ ಅಂಶಗಳನ್ನು ಸುಪ್ರೀಂ ಕೋರ್ಟ್ ಗಮನಿಸಿದೆ. 48 ಗಂಟೆಗಳ ಒಳಗೆ ಆದೇಶವನ್ನು ಜಾರಿಗೊಳಿಸಬೇಕು ಎಂದು ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಹೃಷಿಕೇಶ್ ರಾಯ್ ಅವರ ಪೀಠವು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರಂಭದಲ್ಲಿ ಅವರು ತಿಂಗಳ ಕಾಲ ಗೃಹಬಂಧನದಲ್ಲಿರುತ್ತದೆ, ನಂತರ ಅದನ್ನು ನ್ಯಾಯಾಲಯವು ಪರಿಶೀಲಿಸುತ್ತದೆ ಎಂದು ಪೀಠವು ಹೇಳಿದೆ. ಪೀಠವು ಮುಂಬೈನಲ್ಲಿ ಅವರೊಂದಿಗೆ ವಾಸಿಸಲು ಅನುಮತಿ ನೀಡಿದ ಅವರ ಸಂಗಾತಿ ಸಭಾ ಹುಸೈನ್‌‌ ಅವರಿಗೂ ಕಠಿಣ ಷರತ್ತುಗಳನ್ನು ವಿಧಿಸಿದ್ದು, ಈ ಷರತ್ತುಗಳಲ್ಲಿ ಫೋನ್ ಬಳಕೆಯ ಮೇಲಿನ ನಿರ್ಬಂಧಗಳು ಕೂಡಾ ಒಳಗೊಂಡಿವೆ.

ಇದನ್ನೂ ಓದಿ: ಅವರ ಹಾಡಿನೊಂದಿಗೇ ಅವರನ್ನು ಮೆಲ್ಲನೆ ಮುಗಿಸುವುದು; ಫಾದರ್ ಸ್ಟ್ಯಾನ್ ಸ್ವಾಮಿಯವರಿಗೆ ಶೋಕಗೀತೆ

ನವಲಖಾ ಅವರನ್ನು ಗೃಹ ಬಂಧನಕ್ಕೆ ವರ್ಗಾವಣೆ ಮಾಡುವ ಮೊದಲು ಅವರು ಉಳಿಯಲು ಇರುವ “ಆವರಣದ ಅಗತ್ಯ ಮೌಲ್ಯಮಾಪನವನ್ನು ಕೈಗೊಳ್ಳಲು” ಎನ್ಐಎಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಗೃಹಬಂಧನದ ಯಾವುದೇ ದುರುಪಯೋಗ ನಡೆಯದಂತೆ ಮೇಲ್ವಿಚಾರಣೆ ಮಾಡಲು ಮತ್ತು ತಡೆಯಲು ಸಂಸ್ಥೆಯು “ಸೂಕ್ತ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ಸ್ವತಂತ್ರವಾಗಿದೆ” ಎಂದು ಸುಪ್ರೀಂಕೋರ್ಟ್‌ ಆದೇಶವು ಹೇಳಿದ್ದು, ಅವರ ಭದ್ರತೆಗೆ ತಗಲುವ ವೆಚ್ಚ 2.4 ಲಕ್ಷ ರೂ. ಗಳನ್ನು ಠೇವಣಿ ಇಡುವಂತೆ ಕೇಳಿದೆ.

“ಅವರು ಉಳಿಯುವ ಮನೆಯ ಪ್ರವೇಶದ್ವಾರದಲ್ಲಿ ಅವರದೇ ವೆಚ್ಚದಲ್ಲಿ ಸಿಸಿಟಿವಿ ಅಳವಡಿಸಬೇಕು. ಸಿಸಿಟಿವಿ ಕೊಠಡಿಗಳ ಹೊರಗೆ, ಪ್ರವೇಶ, ನಿರ್ಗಮನ ಧ್ವಾರದ ಹೊರಗೆ ಇರಬೇಕು. ಸಿಸಿಟಿವಿಯು ಕಾರ್ಯನಿರ್ವಹಿಸುವ ಸ್ಥಿತಿಯಲ್ಲಿರಬೇಕು. ಅವರನ್ನು ಮನೆಗೆ ವರ್ಗಾಯಿಸುವ ಮೊದಲು ಮನೆಯನ್ನು ಪರೀಕ್ಷಿಸಲಾಗುವುದು” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.

ಗೃಹಬಂಧನದಲ್ಲಿರುವಾಗ ಯಾವುದೇ ಮೊಬೈಲ್ ಫೋನ್, ಇಂಟರ್ನೆಟ್, ಲ್ಯಾಪ್‌ಟಾಪ್ ಅಥವಾ ಯಾವುದೇ ಸಂವಹನ ಸಾಧನವನ್ನು ಬಳಸದಂತೆ ಸುಪ್ರಿಂಕೋರ್ಟ್‌ ನವಲಾಖಾ ಅವರನ್ನು ಕೇಳಿದ್ದು, ಆದರೆ ದಿನಕ್ಕೊಮ್ಮೆ 10 ನಿಮಿಷಗಳ ಕಾಲ ಪೊಲೀಸ್ ಸಿಬ್ಬಂದಿ ಒದಗಿಸುವ ಮೊಬೈಲ್‌ ಬಳಸಲು ಅವರಿಗೆ ಅನುಮತಿ ನೀಡಿದೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಸಾಕ್ಷ್ಯ ಸಂಗ್ರಹಿಸಲು ಹೆಣಗುತ್ತಿರುವ NIA!

“ನವಲಖ ಅವರು ಮುಂಬೈನಿಂದ ಹೊರ ಹೋಗುವಂತಿಲ್ಲ, ಆದರೆ ವಾರಕ್ಕೊಮ್ಮೆ ಮೂರು ಗಂಟೆಗಳ ಕಾಲ ಇಬ್ಬರು ಕುಟುಂಬ ಸದಸ್ಯರನ್ನು ಭೇಟಿ ಮಾಡಬಹುದು” ಎಂದು ಸುಪ್ರೀಂಕೋರ್ಟ್‌ ಹೇಳಿದ್ದು, ಹೆಚ್ಚುವರಿಯಾಗಿ, ಪ್ರಕರಣದಲ್ಲಿ ಯಾವುದೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಅಥವಾ ಯಾವುದೇ ಕಾನೂನುಬಾಹಿರ ಚಟುವಟಿಕೆಯನ್ನು ಮಾಡದಂತೆ ಕೇಳಿದೆ.

ಪೊಲೀಸ್ ಸಿಬ್ಬಂದಿಯ ಸಮ್ಮುಖದಲ್ಲಿ ನಡೆಯಲು ಅವರಿಗೆ ಅನುಮತಿ ನೀಡಲಾಗಿದ್ದರೂ ಯಾರೊಂದಿಗೂ ಯಾವುದೇ ಸಂಭಾಷಣೆಯಲ್ಲಿ ತೊಡಬಾರದು ಎಂದು ಹೇಳಿದೆ. “ಅವರಿಗೆ ವಕೀಲರೊಂದಿಗೆ ಸಂವಹನ ನಡೆಸಲು ಅನುಮತಿ ನೀಡಲಾಗುತ್ತದೆ ಮತ್ತು ಅವರು ವಕೀಲರ ಹೆಸರನ್ನು ನೀಡಬೇಕು” ಎಂದು ಆದೇಶದಲ್ಲಿ ಹೇಳಲಾಗಿದೆ.

ಫೋನ್ ಕರೆಗಳನ್ನು ಮಾಡುವ ಸೌಲಭ್ಯವನ್ನು ಹೊಂದಿರುವ ಮೊಬೈಲ್ ಫೋನ್ ಅನ್ನು ಬಳಸಲು ನ್ಯಾಯಾಲಯವು ಅವರನ್ನು ನೋಡಿಕೊಳ್ಳುವ ಅವರ ಸಂಗಾತಿಗೆ ಅನುಮತಿ ನೀಡಿದ್ದು, ಆದರೆ ಅವರು ಮಾಡಿದ ಫೋನ್ ಕರೆಗಳ ಕಣ್ಗಾವಲು ಮತ್ತು ರೆಕಾರ್ಡ್‌ ಮಾಡಲು ಸುಪ್ರೀಂಕೋರ್ಟ್‌ ತನಿಖಾ ಸಂಸ್ಥೆಗೆ ಸ್ವಾತಂತ್ರ್ಯ ನೀಡಿದೆ. “ಸಹಚರನೂ ಫೋನ್ ಕರೆ ಅಥವಾ ಸಂದೇಶದ ವಿವರಗಳನ್ನು ಅಳಿಸಬಾರದು” ಎಂದು ನ್ಯಾಯಾಲಯವು ಹೇಳಿದೆ.

ಇದನ್ನೂ ಓದಿ: ‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’: NHRC ಅಧ್ಯಕ್ಷರಾಗಿ ಅರುಣ್ ಮಿಶ್ರಾ ಆಯ್ಕೆಗೆ PUCL ಖಂಡನೆ

ತನ್ನನ್ನು ಗೃಹಬಂಧನಕ್ಕೆ ವರ್ಗಾಯಿಸಲು ನಿರಾಕರಿಸಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ನವಲಖಾ ಅವರು ಸಲ್ಲಿಸಿದ ಮೇಲ್ಮನವಿಯ ಮೇರೆಗೆ ಸುಪ್ರೀಂಕೋರ್ಟ್‌ ವಿಚಾರಣೆ ನಡೆಸಿ ಆದೇಶ ನೀಡಿದೆ. ನವಲಖಾ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್, ಅರ್ಜಿದಾರರು 70 ವರ್ಷ ವಯಸ್ಸಿನವರಾಗಿದ್ದು, ಅನೇಕ ಆರೋಗ್ಯ ಸಮಸ್ಯೆಗಳೊಂದಿಗೆ ಹೋರಾಡುತ್ತಿದ್ದಾರೆ ಎಂದು ವಾದಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸದ್ಯಕ್ಕೆ ಇದೊಂದು ಸಮಾದಾನಕರ ಸಂಗತಿ. ಯು.ಎ.ಪಿ.ಎ. ಎಂಬ ಕರಾಳ ಕಾನೂನು ರದ್ದಾಗಬೇಕು.

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...