Homeಚಳವಳಿಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಗೌತಮ್ ನವಲಖಾ ಗೃಹಬಂಧನದ ಮನವಿ ಪುರಸ್ಕರಿಸಿದ ಸುಪ್ರೀಂಕೋರ್ಟ್‌

ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಗೌತಮ್ ನವಲಖಾ ಗೃಹಬಂಧನದ ಮನವಿ ಪುರಸ್ಕರಿಸಿದ ಸುಪ್ರೀಂಕೋರ್ಟ್‌

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನದಲ್ಲಿರುವ ಮಾನವ ಹಕ್ಕುಗಳ ಹೋರಾಟಗಾರ ಗೌತಮ್ ನವಲಖ ಅವರನ್ನು ಗೃಹಬಂಧನಕ್ಕೆ ವರ್ಗಾಯಿಸಲು ಸುಪ್ರೀಂಕೋರ್ಟ್‌ ಗುರುವಾರ ಆದೇಶಿಸಿದೆ. ಗೃಹಬಂಧನಕ್ಕೆ ವರ್ಗಾಯಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಯ ಆಕ್ಷೇಪಣೆಗಳ ಹೊರತಾಗಿಯೂ ನವಲಖ ಅವರ ಮನವಿಗೆ ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.

ನವಲಖ ಅವರ ವಯಸ್ಸು, ಆರೋಗ್ಯ ಸ್ಥಿತಿ, ಅವರು 2020 ರಿಂದ ಜೈಲಿನಲ್ಲಿದ್ದಾರೆ ಎಂಬ ಅಂಶ, ಜೊತೆಗೆ ಈ ಪ್ರಕರಣದಲ್ಲಿ ಆರೋಪಿಯಾಗಿರುವುದನ್ನು ಹೊರತುಪಡಿಸಿ ಬೇರೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಹಾಗೂ ಮುಂದಿನ ದಿನಗಳಲ್ಲಿ ವಿಚಾರಣೆ ಪ್ರಗತಿ ಕಾಣುವ ಸಾಧ್ಯತೆಯಿಲ್ಲ ಎಂಬ ಅಂಶಗಳನ್ನು ಸುಪ್ರೀಂ ಕೋರ್ಟ್ ಗಮನಿಸಿದೆ. 48 ಗಂಟೆಗಳ ಒಳಗೆ ಆದೇಶವನ್ನು ಜಾರಿಗೊಳಿಸಬೇಕು ಎಂದು ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಹೃಷಿಕೇಶ್ ರಾಯ್ ಅವರ ಪೀಠವು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರಂಭದಲ್ಲಿ ಅವರು ತಿಂಗಳ ಕಾಲ ಗೃಹಬಂಧನದಲ್ಲಿರುತ್ತದೆ, ನಂತರ ಅದನ್ನು ನ್ಯಾಯಾಲಯವು ಪರಿಶೀಲಿಸುತ್ತದೆ ಎಂದು ಪೀಠವು ಹೇಳಿದೆ. ಪೀಠವು ಮುಂಬೈನಲ್ಲಿ ಅವರೊಂದಿಗೆ ವಾಸಿಸಲು ಅನುಮತಿ ನೀಡಿದ ಅವರ ಸಂಗಾತಿ ಸಭಾ ಹುಸೈನ್‌‌ ಅವರಿಗೂ ಕಠಿಣ ಷರತ್ತುಗಳನ್ನು ವಿಧಿಸಿದ್ದು, ಈ ಷರತ್ತುಗಳಲ್ಲಿ ಫೋನ್ ಬಳಕೆಯ ಮೇಲಿನ ನಿರ್ಬಂಧಗಳು ಕೂಡಾ ಒಳಗೊಂಡಿವೆ.

ಇದನ್ನೂ ಓದಿ: ಅವರ ಹಾಡಿನೊಂದಿಗೇ ಅವರನ್ನು ಮೆಲ್ಲನೆ ಮುಗಿಸುವುದು; ಫಾದರ್ ಸ್ಟ್ಯಾನ್ ಸ್ವಾಮಿಯವರಿಗೆ ಶೋಕಗೀತೆ

ನವಲಖಾ ಅವರನ್ನು ಗೃಹ ಬಂಧನಕ್ಕೆ ವರ್ಗಾವಣೆ ಮಾಡುವ ಮೊದಲು ಅವರು ಉಳಿಯಲು ಇರುವ “ಆವರಣದ ಅಗತ್ಯ ಮೌಲ್ಯಮಾಪನವನ್ನು ಕೈಗೊಳ್ಳಲು” ಎನ್ಐಎಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಗೃಹಬಂಧನದ ಯಾವುದೇ ದುರುಪಯೋಗ ನಡೆಯದಂತೆ ಮೇಲ್ವಿಚಾರಣೆ ಮಾಡಲು ಮತ್ತು ತಡೆಯಲು ಸಂಸ್ಥೆಯು “ಸೂಕ್ತ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ಸ್ವತಂತ್ರವಾಗಿದೆ” ಎಂದು ಸುಪ್ರೀಂಕೋರ್ಟ್‌ ಆದೇಶವು ಹೇಳಿದ್ದು, ಅವರ ಭದ್ರತೆಗೆ ತಗಲುವ ವೆಚ್ಚ 2.4 ಲಕ್ಷ ರೂ. ಗಳನ್ನು ಠೇವಣಿ ಇಡುವಂತೆ ಕೇಳಿದೆ.

“ಅವರು ಉಳಿಯುವ ಮನೆಯ ಪ್ರವೇಶದ್ವಾರದಲ್ಲಿ ಅವರದೇ ವೆಚ್ಚದಲ್ಲಿ ಸಿಸಿಟಿವಿ ಅಳವಡಿಸಬೇಕು. ಸಿಸಿಟಿವಿ ಕೊಠಡಿಗಳ ಹೊರಗೆ, ಪ್ರವೇಶ, ನಿರ್ಗಮನ ಧ್ವಾರದ ಹೊರಗೆ ಇರಬೇಕು. ಸಿಸಿಟಿವಿಯು ಕಾರ್ಯನಿರ್ವಹಿಸುವ ಸ್ಥಿತಿಯಲ್ಲಿರಬೇಕು. ಅವರನ್ನು ಮನೆಗೆ ವರ್ಗಾಯಿಸುವ ಮೊದಲು ಮನೆಯನ್ನು ಪರೀಕ್ಷಿಸಲಾಗುವುದು” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.

ಗೃಹಬಂಧನದಲ್ಲಿರುವಾಗ ಯಾವುದೇ ಮೊಬೈಲ್ ಫೋನ್, ಇಂಟರ್ನೆಟ್, ಲ್ಯಾಪ್‌ಟಾಪ್ ಅಥವಾ ಯಾವುದೇ ಸಂವಹನ ಸಾಧನವನ್ನು ಬಳಸದಂತೆ ಸುಪ್ರಿಂಕೋರ್ಟ್‌ ನವಲಾಖಾ ಅವರನ್ನು ಕೇಳಿದ್ದು, ಆದರೆ ದಿನಕ್ಕೊಮ್ಮೆ 10 ನಿಮಿಷಗಳ ಕಾಲ ಪೊಲೀಸ್ ಸಿಬ್ಬಂದಿ ಒದಗಿಸುವ ಮೊಬೈಲ್‌ ಬಳಸಲು ಅವರಿಗೆ ಅನುಮತಿ ನೀಡಿದೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಸಾಕ್ಷ್ಯ ಸಂಗ್ರಹಿಸಲು ಹೆಣಗುತ್ತಿರುವ NIA!

“ನವಲಖ ಅವರು ಮುಂಬೈನಿಂದ ಹೊರ ಹೋಗುವಂತಿಲ್ಲ, ಆದರೆ ವಾರಕ್ಕೊಮ್ಮೆ ಮೂರು ಗಂಟೆಗಳ ಕಾಲ ಇಬ್ಬರು ಕುಟುಂಬ ಸದಸ್ಯರನ್ನು ಭೇಟಿ ಮಾಡಬಹುದು” ಎಂದು ಸುಪ್ರೀಂಕೋರ್ಟ್‌ ಹೇಳಿದ್ದು, ಹೆಚ್ಚುವರಿಯಾಗಿ, ಪ್ರಕರಣದಲ್ಲಿ ಯಾವುದೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಅಥವಾ ಯಾವುದೇ ಕಾನೂನುಬಾಹಿರ ಚಟುವಟಿಕೆಯನ್ನು ಮಾಡದಂತೆ ಕೇಳಿದೆ.

ಪೊಲೀಸ್ ಸಿಬ್ಬಂದಿಯ ಸಮ್ಮುಖದಲ್ಲಿ ನಡೆಯಲು ಅವರಿಗೆ ಅನುಮತಿ ನೀಡಲಾಗಿದ್ದರೂ ಯಾರೊಂದಿಗೂ ಯಾವುದೇ ಸಂಭಾಷಣೆಯಲ್ಲಿ ತೊಡಬಾರದು ಎಂದು ಹೇಳಿದೆ. “ಅವರಿಗೆ ವಕೀಲರೊಂದಿಗೆ ಸಂವಹನ ನಡೆಸಲು ಅನುಮತಿ ನೀಡಲಾಗುತ್ತದೆ ಮತ್ತು ಅವರು ವಕೀಲರ ಹೆಸರನ್ನು ನೀಡಬೇಕು” ಎಂದು ಆದೇಶದಲ್ಲಿ ಹೇಳಲಾಗಿದೆ.

ಫೋನ್ ಕರೆಗಳನ್ನು ಮಾಡುವ ಸೌಲಭ್ಯವನ್ನು ಹೊಂದಿರುವ ಮೊಬೈಲ್ ಫೋನ್ ಅನ್ನು ಬಳಸಲು ನ್ಯಾಯಾಲಯವು ಅವರನ್ನು ನೋಡಿಕೊಳ್ಳುವ ಅವರ ಸಂಗಾತಿಗೆ ಅನುಮತಿ ನೀಡಿದ್ದು, ಆದರೆ ಅವರು ಮಾಡಿದ ಫೋನ್ ಕರೆಗಳ ಕಣ್ಗಾವಲು ಮತ್ತು ರೆಕಾರ್ಡ್‌ ಮಾಡಲು ಸುಪ್ರೀಂಕೋರ್ಟ್‌ ತನಿಖಾ ಸಂಸ್ಥೆಗೆ ಸ್ವಾತಂತ್ರ್ಯ ನೀಡಿದೆ. “ಸಹಚರನೂ ಫೋನ್ ಕರೆ ಅಥವಾ ಸಂದೇಶದ ವಿವರಗಳನ್ನು ಅಳಿಸಬಾರದು” ಎಂದು ನ್ಯಾಯಾಲಯವು ಹೇಳಿದೆ.

ಇದನ್ನೂ ಓದಿ: ‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’: NHRC ಅಧ್ಯಕ್ಷರಾಗಿ ಅರುಣ್ ಮಿಶ್ರಾ ಆಯ್ಕೆಗೆ PUCL ಖಂಡನೆ

ತನ್ನನ್ನು ಗೃಹಬಂಧನಕ್ಕೆ ವರ್ಗಾಯಿಸಲು ನಿರಾಕರಿಸಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ನವಲಖಾ ಅವರು ಸಲ್ಲಿಸಿದ ಮೇಲ್ಮನವಿಯ ಮೇರೆಗೆ ಸುಪ್ರೀಂಕೋರ್ಟ್‌ ವಿಚಾರಣೆ ನಡೆಸಿ ಆದೇಶ ನೀಡಿದೆ. ನವಲಖಾ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್, ಅರ್ಜಿದಾರರು 70 ವರ್ಷ ವಯಸ್ಸಿನವರಾಗಿದ್ದು, ಅನೇಕ ಆರೋಗ್ಯ ಸಮಸ್ಯೆಗಳೊಂದಿಗೆ ಹೋರಾಡುತ್ತಿದ್ದಾರೆ ಎಂದು ವಾದಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸದ್ಯಕ್ಕೆ ಇದೊಂದು ಸಮಾದಾನಕರ ಸಂಗತಿ. ಯು.ಎ.ಪಿ.ಎ. ಎಂಬ ಕರಾಳ ಕಾನೂನು ರದ್ದಾಗಬೇಕು.

LEAVE A REPLY

Please enter your comment!
Please enter your name here

- Advertisment -

ದೆಹಲಿ: ಪಟ್ಟಿಯಿಂದ ಹೊರಗುಳಿದಿರುವ 47.7 ಲಕ್ಷ ಮತದಾರರ ಹೆಸರುಗಳನ್ನು ಪ್ರಕಟಿಸಿ, ಕರಡು ಪಟ್ಟಿಗೆ ಮುನ್ನ ತಿದ್ದುಪಡಿಗೆ ಅವಕಾಶ ನೀಡಿ: ಮತದಾರರ ಅಧಿಕಾರ ಮಂಚ್ ಸೂಚನೆ

ದೆಹಲಿ: ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ "ಸಂಗ್ರಹಿಸಲು ಸಾಧ್ಯವಾಗದವರು" ಎಂದು ಗುರುತಿಸಿ ಹೊರಗಿಡಲಾಗಿರುವ ಬರೋಬ್ಬರಿ 47.7 ಲಕ್ಷ ಮತದಾರರ ಮತಗಟ್ಟೆವಾರಿನ ಪಟ್ಟಿಯನ್ನು ತಕ್ಷಣವೇ...

ದ್ವೇಷ ಭಾಷಣ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಜಾಮೀನು ರಹಿತ ವಾರಂಟ್

ದ್ವೇಷ ಭಾಷಣಕ್ಕೆ (Hate Speech) ಸಂಬಂಧಿಸಿದ ಪ್ರಕರಣದಲ್ಲಿ ಪದೇ ಪದೆ ಸಮನ್ಸ್ ನೀಡಿದ್ದರೂ ನ್ಯಾಯಾಲಯಕ್ಕೆ ಗೈರುಹಾಜರಾದ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪಶ್ಚಿಮ ಬಂಗಾಳದ ಕೃಷ್ಣನಗರ ನ್ಯಾಯಾಲಯವು...

ಬಿಹಾರ| ಉಪ್ಪಿನ ಬದಲು ಡಿಟರ್ಜೆಂಟ್ ಬಳಸಿ ಅಡುಗೆ; ಊಟ ಸೇವಿಸಿದ 34 ಶಾಲಾ ಮಕ್ಕಳು ಅಸ್ವಸ್ಥ

ಬಿಹಾರದ ನಳಂದ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ನಂತರ 34 ಮಕ್ಕಳು ಅಸ್ವಸ್ಥರಾಗಿದ್ದಾರೆ. ಅಡುಗೆಯವರು ಉಪ್ಪಿನ ಬದಲಿಗೆ ಕಣ್ತಪ್ಪಿನಿಂದ ಡಿಟರ್ಜೆಂಟ್ ಪುಡಿಯನ್ನು ಬೆರೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆಗಸ್ಟ್ 18 ರ ಮಂಗಳವಾರ ಪಾರ್ಸಾ ಪ್ರಾಥಮಿಕ...

ಬೆಳಗಾವಿಯಲ್ಲಿ ನೇಕಾರ ಕಾರ್ಮಿಕ ಆತ್ಮಹತ್ಯೆ: ಅನಾಥವಾಯಿತು ಕುಟುಂಬ, ನೆರವಿಗೆ ಹೆಣ್ಣುಮಕ್ಕಳ ಅಳಲು

ಸಾಲದ ಸುಳಿಗೆ ಸಿಲುಕಿ ಜೀವನ ನಡೆಸಲಾಗದೆ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ಬೆಳಗಾವಿ ನಗರದ ಮಂಗಾಯಿ ನಗರದ 4ನೇ ಕ್ರಾಸ್‌ನಲ್ಲಿ ಸಂಭವಿಸಿದೆ. ಮೃತರನ್ನು ವಿಠ್ಠಲ ಲಿಂಗಪ್ಪ ಲೋಕರಿ ಎಂದು...

ಶಿವಮೊಗ್ಗ| ಅಂಗನವಾಡಿ ಸಹಾಯಕಿಯಾಗಿ ದಲಿತ ಮಹಿಳೆಯ ನೇಮಕ; ಗ್ರಾಮಸ್ಥರ ವಿರೋಧ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗುಡ್ತಿ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರನ್ನು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿರುವ ಸುದ್ದಿ ಬೆಳಕಿಗೆ ಬಂದಿದ್ದು,...

ಉಮರ್ ಖಾಲಿದ್- ಶಾರ್ಜೀಲ್ ದೀರ್ಘಕಾಲದ ಬಂಧನದ ಬಗ್ಗೆ ಕಳವಳ; 100 ಕ್ಕೂ ಹೆಚ್ಚು ಪ್ರಮುಖರಿಂದ ಸಿಜೆಐಗೆ ಬಹಿರಂಗ ಪತ್ರ

2020 ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ದೀರ್ಘಕಾಲದ ಬಂಧನದ ಬಗ್ಗೆ ಕಳವಳ ವ್ಯಕ್ತಪಡಿಸಿ 100 ಕ್ಕೂ ಹೆಚ್ಚು ಬರಹಗಾರರು, ನಟರು,...

ಗೋಡ್ಸೆ ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿದ್ದ ಎಂದು ಸಾವರ್ಕರ್ ಅವರ ಸೋದರಳಿಯ ಕೋರ್ಟ್‌ನಲ್ಲಿ ಹೇಳಿಕೆ: ಸಂಘದಿಂದ ಸ್ಪಷ್ಟನೆ ಕೇಳಿದ ಕಾಂಗ್ರೆಸ್

ಮುಂಬೈ: ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯರಾಗಿದ್ದರು ಎಂದು ವಿನಾಯಕ್ ದಾಮೋದರ್ ಸಾವರ್ಕರ್ ಅವರ ಸೋದರಳಿಯ ಸತ್ಯಕಿ ಸಾವರ್ಕರ್ ನ್ಯಾಯಾಲಯದ ವಿಚಾರಣೆ ವೇಳೆ ನೀಡಿರುವ ಹೇಳಿಕೆ ಈಗ ದೇಶಾದ್ಯಂತ...

SIR ಅವಾಂತರ : ಆ.20ರಂದು ಮತ ಕಾವಲು ಸಮಿತಿಯಿಂದ ‘ಸಾಂಸ್ಕೃತಿಕ ಪ್ರತಿರೋಧ’

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರಾಜ್ಯದಲ್ಲಿ ಸೃಷ್ಟಿಸಿರುವ ಅವಾಂತರಗಳ ವಿರುದ್ಧ ಗುರುವಾರ (ಆ.20) ಬೆಂಗಳೂರಿನ ಗಾಂಧಿ ಭವನದಲ್ಲಿ 'ಸಾಂಸ್ಕೃತಿಕ ಪ್ರತಿರೋಧ' ಹಮ್ಮಿಕೊಳ್ಳಲಾಗಿದೆ. ನಾಗರಿಕ ಮತ ಕಾವಲು ಸಮಿತಿ ಆಯೋಜಿಸಿರುವ ಕಾರ್ಯಕ್ರಮವನ್ನು ನಟ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಮತದಾರರಲ್ಲಿ ಬಹಿಷ್ಕಾರ ಬೆದರಿಕೆ ಎದುರಿಸುತ್ತಿರುವವರಲ್ಲಿ ಶೇ. 59 ರಷ್ಟು ಜನ ಬಿಜೆಪಿ ಹಿಡಿತದಲ್ಲಿರುವ ಕ್ಷೇತ್ರಗಳವರು: ವರದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಶುದ್ಧೀಕರಣದ ಹೆಸರಿನಲ್ಲಿ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಚುನಾವಣಾ ಆಯೋಗವು ಪ್ರಕಟಿಸಿರುವ ಅಧಿಕೃತ ದತ್ತಾಂಶಗಳನ್ನು ಆಧರಿಸಿ...

ವಿದ್ಯಾರ್ಥಿ ಪ್ರತಿಭಟನೆ ತಡೆಯುವ ಆದೇಶ ವಾಪಸ್: ತೀವ್ರ ವಿರೋಧದ ಹಿನ್ನೆಲೆ ಹಿಂದೆ ಸರಿದ ತಮಿಳುನಾಡು ಸರ್ಕಾರ

ಎಡಪಕ್ಷಗಳು ಹಾಗೂ ತಮಿಳುನಾಡು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಘಟಿಸಿದ ಪ್ರತಿಭಟನೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದನ್ನು ತಡೆಯುವ ವಿವಾದಾತ್ಮಕ ಆದೇಶವನ್ನು ತೀವ್ರ ವಿರೋಧದ ಬೆನ್ನಲ್ಲೇ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಹಿಂಪಡೆದಿದೆ. ಶಾಲಾ ಶಿಕ್ಷಣ...