Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣದ ಪರಿಶೀಲನೆ ನಡೆಸುತ್ತೇವೆ: ಮಹಾರಾಷ್ಟ್ರ ಗೃಹ ಸಚಿವ

ಭೀಮಾ ಕೋರೆಗಾಂವ್ ಪ್ರಕರಣದ ಪರಿಶೀಲನೆ ನಡೆಸುತ್ತೇವೆ: ಮಹಾರಾಷ್ಟ್ರ ಗೃಹ ಸಚಿವ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರವು 2018ರ ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಪರಿಶೀಲಿಸಲು ಬಯಸಿದೆ. ಇದಕ್ಕಾಗಿ ರಾಜ್ಯದಲ್ಲಿ ಹಿಂದಿನ ಬಿಜೆಪಿ ನೇತೃತ್ವದ ಅವಧಿಯಲ್ಲಿ 10 ಕಾರ್ಯಕರ್ತರನ್ನು ಜೈಲಿಗೆ ಹಾಕಲಾಗಿತ್ತು.

ಗೃಹ ಸಚಿವ ಅನಿಲ್ ದೇಶ್‌ಮುಖ್, ಹಿರಿಯ ಎನ್‌ಸಿಪಿ ಮುಖಂಡ, ಪುಣೆಯ ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಮುಂಬೈನ ಸಭೆಗೆ ಕರೆದಿದ್ದಾರೆ. ಜೈಲಿನಲ್ಲಿದ್ದ ಕಾರ್ಯಕರ್ತರ ವಿರುದ್ಧದ ಸಾಕ್ಷ್ಯಗಳ ಕುರಿತು ಪೊಲೀಸರಿಂದ ಎಲ್ಲ ಮಾಹಿತಿ ಪಡೆದ ನಂತರ ಪ್ರಕರಣದ ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.

ರಾಜಕೀಯ ಕಾರಣಕ್ಕಾಗಿ ಈ ಪ್ರಕರಣ ದಾಖಲಾಗಿದೆ ಎಂದು ಆರೋಪಿಸಲಾಗಿದ್ದು, ಬಿಜೆಪಿ ತನ್ನ ಸಿದ್ಧಾಂತವನ್ನು ವಿರೋಧಿಸಿದ ಕಾರ್ಯಕರ್ತರನ್ನು “ನಗರ ನಕ್ಸಲ್” ಎಂದು ಬ್ರಾಂಡ್ ಮಾಡಿ ಜೈಲಿಗೆ ತಳ್ಳಿರುವ ಆರೋಪ ಎದುರಿಸುತ್ತಿದೆ.

ಮರಾಠಿ ದಿನಪತ್ರಿಕೆ ‘ಲೋಕಸತ್ತ’ ಜೊತೆ ಮಾತನಾಡಿದ ದೇಶ್‌ಮುಖ್, ಹಿಂದಿನ ಸರ್ಕಾರವು ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವವರನ್ನು “ನಗರ ನಕ್ಸಲ್” ಎಂದು ಕರೆದಿದೆ. ಆದರೆ ಪ್ರಸ್ತುತ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಆಡಳಿತವು ಆ ರೀತಿ ನಡೆದುಕೊಳ್ಳುವುದಿಲ್ಲ. ಏಕೆಂದರೆ ನಮ್ಮ ಸರ್ಕಾರವು ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕಿದೆ ಎಂಬುದನ್ನು ನಂಬುತ್ತದೆ ಎಂದು ಹೇಳಿದ್ದಾರೆ.

“ಭೀಮಾ ಕೋರೆಗಾಂವ್ ಪ್ರಸಂಗಕ್ಕೆ ಸಂಬಂಧಿಸಿದಂತೆ ನಾವು ಈ ಬಗ್ಗೆ ಯೋಚಿಸುತ್ತೇವೆ. ಈ ಬಗ್ಗೆ ತನಿಖೆ ನಡೆಸಲು ಎಸ್ಐಟಿ (ವಿಶೇಷ ತನಿಖಾ ತಂಡ) ರಚಿಸುವ ಬಗ್ಗೆ ಬೇಡಿಕೆಗಳು ಬರುತ್ತಿವೆ. ನಾವು ಇದನ್ನು ನಮ್ಮ ಅಧಿಕಾರಿಗಳ ಮೂಲಕ ಪರಿಶೀಲಿಸುತ್ತೇವೆ ಮತ್ತು ಭವಿಷ್ಯದಲ್ಲಿ ಏನು ಮಾಡಬೇಕೆಂದು ನಿರ್ಧರಿಸುತ್ತೇವೆ” ಎಂದು ದೇಶ್‌ಮುಖ್ ಹೇಳಿದ್ದಾರೆ.

ಈ ಪ್ರಕರಣವು 2018ರ ಜನವರಿ 01ರಂದು ಪುಣೆ ಜಿಲ್ಲೆಯ ಭೀಮಾ ಕೋರೆಗಾಂವ್ ಬಳಿ ದಲಿತ ಗುಂಪುಗಳು 200ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸುತ್ತಿದ್ದಾಗ ಹಿಂಸಾಚಾರವನ್ನು ಕಂಡುಬಂದಿತ್ತು. ಡಿಸೆಂಬರ್ 31, 2017 ರಂದು ನಡೆದ ಎಲ್ಗರ್ ಪರಿಷತ್‌ನಲ್ಲಿ ಭಾಷಣ ಮಾಡಿದ ಕಾರ್ಯಕರ್ತರು ಮತ್ತು ಬುದ್ಧಿಜೀವಿಗಳ ವಿರುದ್ಧ ಪುಣೆ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದರು. ಕಾರ್ಯಕರ್ತರ ಮೇಲೆ ಹಿಂಸಾಚಾರವನ್ನು ಪ್ರಚೋದಿಸಲಾಯಿತು ಮತ್ತು ದೇಶಾದ್ಯಂತ ದಾಳಿಗಳಿಗೆ ಕಾರಣರಾಗಿದ್ದರು ಎಂದು ಆರೋಪಿಸಿದ್ದರು. ಅಲ್ಲದೇ ಸಭೆಯ ಸಂಘಟಕರಿಗೆ ನಕ್ಸಲ್ ಸಂಪರ್ಕವಿದೆ ಎಂದು ಪೊಲೀಸರು ಹೇಳಿಕೊಂಡಿದ್ದರು.

1818ರ ಸಮಯದಲ್ಲಿ ಅಸ್ಪೃಶ್ಯರೆಂದು ಪರಿಗಣಿಸಲ್ಪಟ್ಟ ಮಹರ್ ಸಮುದಾಯದ ಸೈನಿಕರು ಜಾತಿ ತಾರತಮ್ಯ, ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದು ಮೇಲ್ಜಾತಿ ಪೇಶ್ವೆಗಳ ವಿರುದ್ಧದ ಮೂರನೇ ಆಂಗ್ಲೋ-ಮರಾಠಾ ಯುದ್ದದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಸೈನ್ಯವನ್ನು ಬೆಂಬಲಿಸಿದರು. ಕೇವಲ 500 ಜನ ದಲಿತ ಸೈನಿಕರು ದಿಟ್ಟ ಹೋರಾಟದ ಮೂಲಕ ಪೇಶ್ವೆ ಸೈನ್ಯವನ್ನು ಮಣಿಸಿದ ನೆನಪಿಗಾಗಿ ಇಲ್ಲಿ ಪ್ರತಿವರ್ಷ ವಿಜಯೋತ್ಸವ ಆಚರಿಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...