Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣದ ಪರಿಶೀಲನೆ ನಡೆಸುತ್ತೇವೆ: ಮಹಾರಾಷ್ಟ್ರ ಗೃಹ ಸಚಿವ

ಭೀಮಾ ಕೋರೆಗಾಂವ್ ಪ್ರಕರಣದ ಪರಿಶೀಲನೆ ನಡೆಸುತ್ತೇವೆ: ಮಹಾರಾಷ್ಟ್ರ ಗೃಹ ಸಚಿವ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರವು 2018ರ ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಪರಿಶೀಲಿಸಲು ಬಯಸಿದೆ. ಇದಕ್ಕಾಗಿ ರಾಜ್ಯದಲ್ಲಿ ಹಿಂದಿನ ಬಿಜೆಪಿ ನೇತೃತ್ವದ ಅವಧಿಯಲ್ಲಿ 10 ಕಾರ್ಯಕರ್ತರನ್ನು ಜೈಲಿಗೆ ಹಾಕಲಾಗಿತ್ತು.

ಗೃಹ ಸಚಿವ ಅನಿಲ್ ದೇಶ್‌ಮುಖ್, ಹಿರಿಯ ಎನ್‌ಸಿಪಿ ಮುಖಂಡ, ಪುಣೆಯ ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಮುಂಬೈನ ಸಭೆಗೆ ಕರೆದಿದ್ದಾರೆ. ಜೈಲಿನಲ್ಲಿದ್ದ ಕಾರ್ಯಕರ್ತರ ವಿರುದ್ಧದ ಸಾಕ್ಷ್ಯಗಳ ಕುರಿತು ಪೊಲೀಸರಿಂದ ಎಲ್ಲ ಮಾಹಿತಿ ಪಡೆದ ನಂತರ ಪ್ರಕರಣದ ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.

ರಾಜಕೀಯ ಕಾರಣಕ್ಕಾಗಿ ಈ ಪ್ರಕರಣ ದಾಖಲಾಗಿದೆ ಎಂದು ಆರೋಪಿಸಲಾಗಿದ್ದು, ಬಿಜೆಪಿ ತನ್ನ ಸಿದ್ಧಾಂತವನ್ನು ವಿರೋಧಿಸಿದ ಕಾರ್ಯಕರ್ತರನ್ನು “ನಗರ ನಕ್ಸಲ್” ಎಂದು ಬ್ರಾಂಡ್ ಮಾಡಿ ಜೈಲಿಗೆ ತಳ್ಳಿರುವ ಆರೋಪ ಎದುರಿಸುತ್ತಿದೆ.

ಮರಾಠಿ ದಿನಪತ್ರಿಕೆ ‘ಲೋಕಸತ್ತ’ ಜೊತೆ ಮಾತನಾಡಿದ ದೇಶ್‌ಮುಖ್, ಹಿಂದಿನ ಸರ್ಕಾರವು ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವವರನ್ನು “ನಗರ ನಕ್ಸಲ್” ಎಂದು ಕರೆದಿದೆ. ಆದರೆ ಪ್ರಸ್ತುತ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಆಡಳಿತವು ಆ ರೀತಿ ನಡೆದುಕೊಳ್ಳುವುದಿಲ್ಲ. ಏಕೆಂದರೆ ನಮ್ಮ ಸರ್ಕಾರವು ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕಿದೆ ಎಂಬುದನ್ನು ನಂಬುತ್ತದೆ ಎಂದು ಹೇಳಿದ್ದಾರೆ.

“ಭೀಮಾ ಕೋರೆಗಾಂವ್ ಪ್ರಸಂಗಕ್ಕೆ ಸಂಬಂಧಿಸಿದಂತೆ ನಾವು ಈ ಬಗ್ಗೆ ಯೋಚಿಸುತ್ತೇವೆ. ಈ ಬಗ್ಗೆ ತನಿಖೆ ನಡೆಸಲು ಎಸ್ಐಟಿ (ವಿಶೇಷ ತನಿಖಾ ತಂಡ) ರಚಿಸುವ ಬಗ್ಗೆ ಬೇಡಿಕೆಗಳು ಬರುತ್ತಿವೆ. ನಾವು ಇದನ್ನು ನಮ್ಮ ಅಧಿಕಾರಿಗಳ ಮೂಲಕ ಪರಿಶೀಲಿಸುತ್ತೇವೆ ಮತ್ತು ಭವಿಷ್ಯದಲ್ಲಿ ಏನು ಮಾಡಬೇಕೆಂದು ನಿರ್ಧರಿಸುತ್ತೇವೆ” ಎಂದು ದೇಶ್‌ಮುಖ್ ಹೇಳಿದ್ದಾರೆ.

ಈ ಪ್ರಕರಣವು 2018ರ ಜನವರಿ 01ರಂದು ಪುಣೆ ಜಿಲ್ಲೆಯ ಭೀಮಾ ಕೋರೆಗಾಂವ್ ಬಳಿ ದಲಿತ ಗುಂಪುಗಳು 200ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸುತ್ತಿದ್ದಾಗ ಹಿಂಸಾಚಾರವನ್ನು ಕಂಡುಬಂದಿತ್ತು. ಡಿಸೆಂಬರ್ 31, 2017 ರಂದು ನಡೆದ ಎಲ್ಗರ್ ಪರಿಷತ್‌ನಲ್ಲಿ ಭಾಷಣ ಮಾಡಿದ ಕಾರ್ಯಕರ್ತರು ಮತ್ತು ಬುದ್ಧಿಜೀವಿಗಳ ವಿರುದ್ಧ ಪುಣೆ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದರು. ಕಾರ್ಯಕರ್ತರ ಮೇಲೆ ಹಿಂಸಾಚಾರವನ್ನು ಪ್ರಚೋದಿಸಲಾಯಿತು ಮತ್ತು ದೇಶಾದ್ಯಂತ ದಾಳಿಗಳಿಗೆ ಕಾರಣರಾಗಿದ್ದರು ಎಂದು ಆರೋಪಿಸಿದ್ದರು. ಅಲ್ಲದೇ ಸಭೆಯ ಸಂಘಟಕರಿಗೆ ನಕ್ಸಲ್ ಸಂಪರ್ಕವಿದೆ ಎಂದು ಪೊಲೀಸರು ಹೇಳಿಕೊಂಡಿದ್ದರು.

1818ರ ಸಮಯದಲ್ಲಿ ಅಸ್ಪೃಶ್ಯರೆಂದು ಪರಿಗಣಿಸಲ್ಪಟ್ಟ ಮಹರ್ ಸಮುದಾಯದ ಸೈನಿಕರು ಜಾತಿ ತಾರತಮ್ಯ, ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದು ಮೇಲ್ಜಾತಿ ಪೇಶ್ವೆಗಳ ವಿರುದ್ಧದ ಮೂರನೇ ಆಂಗ್ಲೋ-ಮರಾಠಾ ಯುದ್ದದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಸೈನ್ಯವನ್ನು ಬೆಂಬಲಿಸಿದರು. ಕೇವಲ 500 ಜನ ದಲಿತ ಸೈನಿಕರು ದಿಟ್ಟ ಹೋರಾಟದ ಮೂಲಕ ಪೇಶ್ವೆ ಸೈನ್ಯವನ್ನು ಮಣಿಸಿದ ನೆನಪಿಗಾಗಿ ಇಲ್ಲಿ ಪ್ರತಿವರ್ಷ ವಿಜಯೋತ್ಸವ ಆಚರಿಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...