Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣದ ಪರಿಶೀಲನೆ ನಡೆಸುತ್ತೇವೆ: ಮಹಾರಾಷ್ಟ್ರ ಗೃಹ ಸಚಿವ

ಭೀಮಾ ಕೋರೆಗಾಂವ್ ಪ್ರಕರಣದ ಪರಿಶೀಲನೆ ನಡೆಸುತ್ತೇವೆ: ಮಹಾರಾಷ್ಟ್ರ ಗೃಹ ಸಚಿವ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರವು 2018ರ ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಪರಿಶೀಲಿಸಲು ಬಯಸಿದೆ. ಇದಕ್ಕಾಗಿ ರಾಜ್ಯದಲ್ಲಿ ಹಿಂದಿನ ಬಿಜೆಪಿ ನೇತೃತ್ವದ ಅವಧಿಯಲ್ಲಿ 10 ಕಾರ್ಯಕರ್ತರನ್ನು ಜೈಲಿಗೆ ಹಾಕಲಾಗಿತ್ತು.

ಗೃಹ ಸಚಿವ ಅನಿಲ್ ದೇಶ್‌ಮುಖ್, ಹಿರಿಯ ಎನ್‌ಸಿಪಿ ಮುಖಂಡ, ಪುಣೆಯ ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಮುಂಬೈನ ಸಭೆಗೆ ಕರೆದಿದ್ದಾರೆ. ಜೈಲಿನಲ್ಲಿದ್ದ ಕಾರ್ಯಕರ್ತರ ವಿರುದ್ಧದ ಸಾಕ್ಷ್ಯಗಳ ಕುರಿತು ಪೊಲೀಸರಿಂದ ಎಲ್ಲ ಮಾಹಿತಿ ಪಡೆದ ನಂತರ ಪ್ರಕರಣದ ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.

ರಾಜಕೀಯ ಕಾರಣಕ್ಕಾಗಿ ಈ ಪ್ರಕರಣ ದಾಖಲಾಗಿದೆ ಎಂದು ಆರೋಪಿಸಲಾಗಿದ್ದು, ಬಿಜೆಪಿ ತನ್ನ ಸಿದ್ಧಾಂತವನ್ನು ವಿರೋಧಿಸಿದ ಕಾರ್ಯಕರ್ತರನ್ನು “ನಗರ ನಕ್ಸಲ್” ಎಂದು ಬ್ರಾಂಡ್ ಮಾಡಿ ಜೈಲಿಗೆ ತಳ್ಳಿರುವ ಆರೋಪ ಎದುರಿಸುತ್ತಿದೆ.

ಮರಾಠಿ ದಿನಪತ್ರಿಕೆ ‘ಲೋಕಸತ್ತ’ ಜೊತೆ ಮಾತನಾಡಿದ ದೇಶ್‌ಮುಖ್, ಹಿಂದಿನ ಸರ್ಕಾರವು ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವವರನ್ನು “ನಗರ ನಕ್ಸಲ್” ಎಂದು ಕರೆದಿದೆ. ಆದರೆ ಪ್ರಸ್ತುತ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಆಡಳಿತವು ಆ ರೀತಿ ನಡೆದುಕೊಳ್ಳುವುದಿಲ್ಲ. ಏಕೆಂದರೆ ನಮ್ಮ ಸರ್ಕಾರವು ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕಿದೆ ಎಂಬುದನ್ನು ನಂಬುತ್ತದೆ ಎಂದು ಹೇಳಿದ್ದಾರೆ.

“ಭೀಮಾ ಕೋರೆಗಾಂವ್ ಪ್ರಸಂಗಕ್ಕೆ ಸಂಬಂಧಿಸಿದಂತೆ ನಾವು ಈ ಬಗ್ಗೆ ಯೋಚಿಸುತ್ತೇವೆ. ಈ ಬಗ್ಗೆ ತನಿಖೆ ನಡೆಸಲು ಎಸ್ಐಟಿ (ವಿಶೇಷ ತನಿಖಾ ತಂಡ) ರಚಿಸುವ ಬಗ್ಗೆ ಬೇಡಿಕೆಗಳು ಬರುತ್ತಿವೆ. ನಾವು ಇದನ್ನು ನಮ್ಮ ಅಧಿಕಾರಿಗಳ ಮೂಲಕ ಪರಿಶೀಲಿಸುತ್ತೇವೆ ಮತ್ತು ಭವಿಷ್ಯದಲ್ಲಿ ಏನು ಮಾಡಬೇಕೆಂದು ನಿರ್ಧರಿಸುತ್ತೇವೆ” ಎಂದು ದೇಶ್‌ಮುಖ್ ಹೇಳಿದ್ದಾರೆ.

ಈ ಪ್ರಕರಣವು 2018ರ ಜನವರಿ 01ರಂದು ಪುಣೆ ಜಿಲ್ಲೆಯ ಭೀಮಾ ಕೋರೆಗಾಂವ್ ಬಳಿ ದಲಿತ ಗುಂಪುಗಳು 200ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸುತ್ತಿದ್ದಾಗ ಹಿಂಸಾಚಾರವನ್ನು ಕಂಡುಬಂದಿತ್ತು. ಡಿಸೆಂಬರ್ 31, 2017 ರಂದು ನಡೆದ ಎಲ್ಗರ್ ಪರಿಷತ್‌ನಲ್ಲಿ ಭಾಷಣ ಮಾಡಿದ ಕಾರ್ಯಕರ್ತರು ಮತ್ತು ಬುದ್ಧಿಜೀವಿಗಳ ವಿರುದ್ಧ ಪುಣೆ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದರು. ಕಾರ್ಯಕರ್ತರ ಮೇಲೆ ಹಿಂಸಾಚಾರವನ್ನು ಪ್ರಚೋದಿಸಲಾಯಿತು ಮತ್ತು ದೇಶಾದ್ಯಂತ ದಾಳಿಗಳಿಗೆ ಕಾರಣರಾಗಿದ್ದರು ಎಂದು ಆರೋಪಿಸಿದ್ದರು. ಅಲ್ಲದೇ ಸಭೆಯ ಸಂಘಟಕರಿಗೆ ನಕ್ಸಲ್ ಸಂಪರ್ಕವಿದೆ ಎಂದು ಪೊಲೀಸರು ಹೇಳಿಕೊಂಡಿದ್ದರು.

1818ರ ಸಮಯದಲ್ಲಿ ಅಸ್ಪೃಶ್ಯರೆಂದು ಪರಿಗಣಿಸಲ್ಪಟ್ಟ ಮಹರ್ ಸಮುದಾಯದ ಸೈನಿಕರು ಜಾತಿ ತಾರತಮ್ಯ, ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದು ಮೇಲ್ಜಾತಿ ಪೇಶ್ವೆಗಳ ವಿರುದ್ಧದ ಮೂರನೇ ಆಂಗ್ಲೋ-ಮರಾಠಾ ಯುದ್ದದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಸೈನ್ಯವನ್ನು ಬೆಂಬಲಿಸಿದರು. ಕೇವಲ 500 ಜನ ದಲಿತ ಸೈನಿಕರು ದಿಟ್ಟ ಹೋರಾಟದ ಮೂಲಕ ಪೇಶ್ವೆ ಸೈನ್ಯವನ್ನು ಮಣಿಸಿದ ನೆನಪಿಗಾಗಿ ಇಲ್ಲಿ ಪ್ರತಿವರ್ಷ ವಿಜಯೋತ್ಸವ ಆಚರಿಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...