Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣದ ಪರಿಶೀಲನೆ ನಡೆಸುತ್ತೇವೆ: ಮಹಾರಾಷ್ಟ್ರ ಗೃಹ ಸಚಿವ

ಭೀಮಾ ಕೋರೆಗಾಂವ್ ಪ್ರಕರಣದ ಪರಿಶೀಲನೆ ನಡೆಸುತ್ತೇವೆ: ಮಹಾರಾಷ್ಟ್ರ ಗೃಹ ಸಚಿವ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರವು 2018ರ ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಪರಿಶೀಲಿಸಲು ಬಯಸಿದೆ. ಇದಕ್ಕಾಗಿ ರಾಜ್ಯದಲ್ಲಿ ಹಿಂದಿನ ಬಿಜೆಪಿ ನೇತೃತ್ವದ ಅವಧಿಯಲ್ಲಿ 10 ಕಾರ್ಯಕರ್ತರನ್ನು ಜೈಲಿಗೆ ಹಾಕಲಾಗಿತ್ತು.

ಗೃಹ ಸಚಿವ ಅನಿಲ್ ದೇಶ್‌ಮುಖ್, ಹಿರಿಯ ಎನ್‌ಸಿಪಿ ಮುಖಂಡ, ಪುಣೆಯ ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಮುಂಬೈನ ಸಭೆಗೆ ಕರೆದಿದ್ದಾರೆ. ಜೈಲಿನಲ್ಲಿದ್ದ ಕಾರ್ಯಕರ್ತರ ವಿರುದ್ಧದ ಸಾಕ್ಷ್ಯಗಳ ಕುರಿತು ಪೊಲೀಸರಿಂದ ಎಲ್ಲ ಮಾಹಿತಿ ಪಡೆದ ನಂತರ ಪ್ರಕರಣದ ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.

ರಾಜಕೀಯ ಕಾರಣಕ್ಕಾಗಿ ಈ ಪ್ರಕರಣ ದಾಖಲಾಗಿದೆ ಎಂದು ಆರೋಪಿಸಲಾಗಿದ್ದು, ಬಿಜೆಪಿ ತನ್ನ ಸಿದ್ಧಾಂತವನ್ನು ವಿರೋಧಿಸಿದ ಕಾರ್ಯಕರ್ತರನ್ನು “ನಗರ ನಕ್ಸಲ್” ಎಂದು ಬ್ರಾಂಡ್ ಮಾಡಿ ಜೈಲಿಗೆ ತಳ್ಳಿರುವ ಆರೋಪ ಎದುರಿಸುತ್ತಿದೆ.

ಮರಾಠಿ ದಿನಪತ್ರಿಕೆ ‘ಲೋಕಸತ್ತ’ ಜೊತೆ ಮಾತನಾಡಿದ ದೇಶ್‌ಮುಖ್, ಹಿಂದಿನ ಸರ್ಕಾರವು ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವವರನ್ನು “ನಗರ ನಕ್ಸಲ್” ಎಂದು ಕರೆದಿದೆ. ಆದರೆ ಪ್ರಸ್ತುತ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಆಡಳಿತವು ಆ ರೀತಿ ನಡೆದುಕೊಳ್ಳುವುದಿಲ್ಲ. ಏಕೆಂದರೆ ನಮ್ಮ ಸರ್ಕಾರವು ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕಿದೆ ಎಂಬುದನ್ನು ನಂಬುತ್ತದೆ ಎಂದು ಹೇಳಿದ್ದಾರೆ.

“ಭೀಮಾ ಕೋರೆಗಾಂವ್ ಪ್ರಸಂಗಕ್ಕೆ ಸಂಬಂಧಿಸಿದಂತೆ ನಾವು ಈ ಬಗ್ಗೆ ಯೋಚಿಸುತ್ತೇವೆ. ಈ ಬಗ್ಗೆ ತನಿಖೆ ನಡೆಸಲು ಎಸ್ಐಟಿ (ವಿಶೇಷ ತನಿಖಾ ತಂಡ) ರಚಿಸುವ ಬಗ್ಗೆ ಬೇಡಿಕೆಗಳು ಬರುತ್ತಿವೆ. ನಾವು ಇದನ್ನು ನಮ್ಮ ಅಧಿಕಾರಿಗಳ ಮೂಲಕ ಪರಿಶೀಲಿಸುತ್ತೇವೆ ಮತ್ತು ಭವಿಷ್ಯದಲ್ಲಿ ಏನು ಮಾಡಬೇಕೆಂದು ನಿರ್ಧರಿಸುತ್ತೇವೆ” ಎಂದು ದೇಶ್‌ಮುಖ್ ಹೇಳಿದ್ದಾರೆ.

ಈ ಪ್ರಕರಣವು 2018ರ ಜನವರಿ 01ರಂದು ಪುಣೆ ಜಿಲ್ಲೆಯ ಭೀಮಾ ಕೋರೆಗಾಂವ್ ಬಳಿ ದಲಿತ ಗುಂಪುಗಳು 200ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸುತ್ತಿದ್ದಾಗ ಹಿಂಸಾಚಾರವನ್ನು ಕಂಡುಬಂದಿತ್ತು. ಡಿಸೆಂಬರ್ 31, 2017 ರಂದು ನಡೆದ ಎಲ್ಗರ್ ಪರಿಷತ್‌ನಲ್ಲಿ ಭಾಷಣ ಮಾಡಿದ ಕಾರ್ಯಕರ್ತರು ಮತ್ತು ಬುದ್ಧಿಜೀವಿಗಳ ವಿರುದ್ಧ ಪುಣೆ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದರು. ಕಾರ್ಯಕರ್ತರ ಮೇಲೆ ಹಿಂಸಾಚಾರವನ್ನು ಪ್ರಚೋದಿಸಲಾಯಿತು ಮತ್ತು ದೇಶಾದ್ಯಂತ ದಾಳಿಗಳಿಗೆ ಕಾರಣರಾಗಿದ್ದರು ಎಂದು ಆರೋಪಿಸಿದ್ದರು. ಅಲ್ಲದೇ ಸಭೆಯ ಸಂಘಟಕರಿಗೆ ನಕ್ಸಲ್ ಸಂಪರ್ಕವಿದೆ ಎಂದು ಪೊಲೀಸರು ಹೇಳಿಕೊಂಡಿದ್ದರು.

1818ರ ಸಮಯದಲ್ಲಿ ಅಸ್ಪೃಶ್ಯರೆಂದು ಪರಿಗಣಿಸಲ್ಪಟ್ಟ ಮಹರ್ ಸಮುದಾಯದ ಸೈನಿಕರು ಜಾತಿ ತಾರತಮ್ಯ, ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದು ಮೇಲ್ಜಾತಿ ಪೇಶ್ವೆಗಳ ವಿರುದ್ಧದ ಮೂರನೇ ಆಂಗ್ಲೋ-ಮರಾಠಾ ಯುದ್ದದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಸೈನ್ಯವನ್ನು ಬೆಂಬಲಿಸಿದರು. ಕೇವಲ 500 ಜನ ದಲಿತ ಸೈನಿಕರು ದಿಟ್ಟ ಹೋರಾಟದ ಮೂಲಕ ಪೇಶ್ವೆ ಸೈನ್ಯವನ್ನು ಮಣಿಸಿದ ನೆನಪಿಗಾಗಿ ಇಲ್ಲಿ ಪ್ರತಿವರ್ಷ ವಿಜಯೋತ್ಸವ ಆಚರಿಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...