Homeಚಳವಳಿ204ನೇ ವರ್ಷದ ಭೀಮಾ ಕೋರೆಗಾಂವ್ ಸ್ಮರಣೆ: ಸಾವಿರಾರು ಜನರಿಂದ ಗೌರವ ಸಮರ್ಪಣೆ

204ನೇ ವರ್ಷದ ಭೀಮಾ ಕೋರೆಗಾಂವ್ ಸ್ಮರಣೆ: ಸಾವಿರಾರು ಜನರಿಂದ ಗೌರವ ಸಮರ್ಪಣೆ

- Advertisement -
- Advertisement -

1818 ರ ಆಂಗ್ಲೋ-ಮರಾಠಾ ಯುದ್ಧದಲ್ಲಿ ದಲಿತ ದಿಗ್ವಿಜಯದ ನೆನಪಿಗಾಗಿ ಪುಣೆಯಿಂದ 40 ಕಿ.ಮೀ ದೂರದಲ್ಲಿರುವ ಭೀಮಾ ಕೋರೆಗಾಂವ್‌ನಲ್ಲಿ ಇಂದು ನಡೆಯುತ್ತಿರುವ 204ನೇ ವರ್ಷದ ವಿಜಯೋತ್ಸವ ಸ್ಮರಣೆ ಕಾರ್ಯಕ್ರಮದಲ್ಲಿ ಸಾವಿರಾರು ಅಂಬೇಡ್ಕರ್‌ವಾದಿಗಳು ಸೇರಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಕಾರಣಕ್ಕಾಗಿ ಜಿಲ್ಲಾಡಳಿತದ ಹಲವಾರು ನಿರ್ಬಂಧಗಳ ನಡುವೆಯೂ ಕಾರ್ಯಕ್ರಮ ಜರುಗುತ್ತಿದೆ.

ಕಳೆದ ವರ್ಷ 203ನೇ ವರ್ಷದ ವಿಜಯೋತ್ಸವದ ವೇಳೆ ಸುಮಾರು 5 ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ಅದರ ಹಿಂದಿನ ವರ್ಷ 10 ಲಕ್ಷಕ್ಕೂ ಹೆಚ್ಚು ಜನ ಭೀಮಾ ಕೋರೆಗಾಂವ್ ವಿಜಯಸ್ಥಂಭಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದ್ದರು ಎಂದು ವರದಿಯಾಗಿತ್ತು.

ಕೊರೊನಾ ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು 60 ವರ್ಷಕ್ಕಿಂತ ಮೇಲ್ಪಟ್ಟ ಜನರು ಮತ್ತು 10 ವರ್ಷದೊಳಗಿನ ಮಕ್ಕಳು ಜಯಸ್ತಂಭಕ್ಕೆ ಬರುವುದನ್ನು ತಪ್ಪಿಸಲು ಜಿಲ್ಲಾಡಳಿತವು ಒತ್ತಾಯಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯುದ್ಧ ಸ್ಮಾರಕದ ಬಳಿ ಪೊಲೀಸ್ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ ಮತ್ತು COVID-19 ಪರೀಕ್ಷೆಯಂತಹ ಸೌಲಭ್ಯಗಳು ಸ್ಥಳದಲ್ಲಿವೆ ಎನ್ನಲಾಗಿದೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್, ರಾಜ್ಯ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, ಸಮಾಜ ಕಲ್ಯಾಣ ಸಚಿವ ಧನಂಜಯ್ ಮುಂಡೆ ಇಂದು ಬೆಳಗ್ಗೆ ಜಯಸ್ತಂಭಕ್ಕೆ ಭೇಟಿ ನೀಡಿದವರಲ್ಲಿ ಪ್ರಮುಖರಾಗಿದ್ದಾರೆ. ಜೊತೆಗೆ ದೇಶಾದ್ಯಂತದಿಂದ ಸಾವಿರಾರು ದಲಿತರು, ಅಂಬೇಡ್ಕರ್‌ವಾದಿಗಳು ಭೇಟಿ ನೀಡುತ್ತಿದ್ದಾರೆ.

1818ರ ಸಮಯದಲ್ಲಿ ಅಸ್ಪೃಶ್ಯರೆಂದು ಪರಿಗಣಿಸಲ್ಪಟ್ಟ ಮಹರ್ ಸಮುದಾಯದ ಸೈನಿಕರು ಜಾತಿ ತಾರತಮ್ಯ, ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದು ಮೇಲ್ಜಾತಿ ಪೇಶ್ವೆಗಳ ವಿರುದ್ಧದ ಮೂರನೇ ಆಂಗ್ಲೋ-ಮರಾಠಾ ಯುದ್ದದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಸೈನ್ಯವನ್ನು ಬೆಂಬಲಿಸಿದರು. ಕೇವಲ 500 ಜನ ದಲಿತ ಸೈನಿಕರು ದಿಟ್ಟ ಹೋರಾಟದ ಮೂಲಕ 28,000 ದಷ್ಟಿದ್ದ ಪೇಶ್ವೆ ಸೈನ್ಯವನ್ನು ಮಣಿಸಿದ ನೆನಪಿಗಾಗಿ ಇಲ್ಲಿ ಪ್ರತಿವರ್ಷ ವಿಜಯೋತ್ಸವ ಆಚರಿಸಲಾಗುತ್ತದೆ.

ಆ ಯುದ್ಧದ ವಿಜಯದ ನೆನಪಿಗಾಗಿ ಭೀಮಾ ಕೋರೆಗಾಂವ್‌ನಲ್ಲಿ ಸ್ಮಾರಕ ‘ಜೈ ಸ್ತಂಭ’ ಸ್ಥಾಪಿಸಲಾಗಿದೆ. ಡಾ.ಬಿ.ಆರ್ ಅಂಬೇಡ್ಕರ್‌ರವರು ತಮ್ಮ ಜೀವಿತಾವಧಿಯುದ್ದಕ್ಕೂ ಪ್ರತಿ ವರ್ಷ ಜನವರಿ 1 ರಂದು ಭೀಮಾ ಕೋರೆಗಾಂವ್‌ಗೆ ಭೇಟಿ ನೀಡಿ ಜಯಸ್ಥಂಭಕ್ಕೆ ಗೌರವ ಸಮರ್ಪಿಸುತ್ತಿದ್ದರು. ಆ ಸಂಪ್ರದಾಯವನ್ನು ಅಂಬೇಡ್ಕರ್‌ವಾದಿಗಳು ಇಂದಿಗೂ ಮುಂದುವರೆಸಿದ್ದಾರೆ.

ಆದರೆ ಭೀಮಾ ಕೋರೆಗಾಂವ್‌ನಲ್ಲಿ 2018 ರ ಜನವರಿ 1 ರಂದು ಸಂಭ್ರಮಾಚರಣೆಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಇದರಲ್ಲಿ ಒಬ್ಬರು ಸಾವನ್ನಪ್ಪಿದ್ದರು ಮತ್ತು ಹಲವಾರು ಮಂದಿ ಗಾಯಗೊಂಡಿದ್ದರು. ಇದನ್ನೆ ನೆಪವಾಗಿಟ್ಟುಕೊಂಡು ಅಂದಿನ ದೇವೇಂದ್ರ ಫಡ್ನವಿಸ್ ನೇತೃತ್ವದ ಬಿಜೆಪಿ ಸರ್ಕಾರ 15ಕ್ಕೂ ಹೆಚ್ಚು ಕಾರ್ಯಕರ್ತರ ಮೇಲೆ ಪಿತೂರಿ, ಕೊಲೆ ಪ್ರಕರಣಗಳನ್ನು ದಾಖಲಿಸಿ ಬಂಧಿಸಲಾಗಿದೆ. ಅವೆಲ್ಲವೂ ಸುಳ್ಳು ಕೇಸುಗಳಾಗಿದ್ದು, ಅವುಗಳನ್ನು ಹಿಂಪಡೆಯಬೇಕೆಂದು ಬಹಳಷ್ಟು ಹೋರಾಟಗಾರರು ಒತ್ತಾಯಿಸುತ್ತಲೇ ಇದ್ದಾರೆ.


ಇದನ್ನೂ ಓದಿ; ಕೋರೆಗಾಂವ್‌‌ ಕದನ: ದಲಿತ ಅಸ್ಮಿತೆ, ಸ್ವಾಭಿಮಾನದ ಮಹಾಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...