Homeಚಳವಳಿ204ನೇ ವರ್ಷದ ಭೀಮಾ ಕೋರೆಗಾಂವ್ ಸ್ಮರಣೆ: ಸಾವಿರಾರು ಜನರಿಂದ ಗೌರವ ಸಮರ್ಪಣೆ

204ನೇ ವರ್ಷದ ಭೀಮಾ ಕೋರೆಗಾಂವ್ ಸ್ಮರಣೆ: ಸಾವಿರಾರು ಜನರಿಂದ ಗೌರವ ಸಮರ್ಪಣೆ

- Advertisement -
- Advertisement -

1818 ರ ಆಂಗ್ಲೋ-ಮರಾಠಾ ಯುದ್ಧದಲ್ಲಿ ದಲಿತ ದಿಗ್ವಿಜಯದ ನೆನಪಿಗಾಗಿ ಪುಣೆಯಿಂದ 40 ಕಿ.ಮೀ ದೂರದಲ್ಲಿರುವ ಭೀಮಾ ಕೋರೆಗಾಂವ್‌ನಲ್ಲಿ ಇಂದು ನಡೆಯುತ್ತಿರುವ 204ನೇ ವರ್ಷದ ವಿಜಯೋತ್ಸವ ಸ್ಮರಣೆ ಕಾರ್ಯಕ್ರಮದಲ್ಲಿ ಸಾವಿರಾರು ಅಂಬೇಡ್ಕರ್‌ವಾದಿಗಳು ಸೇರಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಕಾರಣಕ್ಕಾಗಿ ಜಿಲ್ಲಾಡಳಿತದ ಹಲವಾರು ನಿರ್ಬಂಧಗಳ ನಡುವೆಯೂ ಕಾರ್ಯಕ್ರಮ ಜರುಗುತ್ತಿದೆ.

ಕಳೆದ ವರ್ಷ 203ನೇ ವರ್ಷದ ವಿಜಯೋತ್ಸವದ ವೇಳೆ ಸುಮಾರು 5 ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ಅದರ ಹಿಂದಿನ ವರ್ಷ 10 ಲಕ್ಷಕ್ಕೂ ಹೆಚ್ಚು ಜನ ಭೀಮಾ ಕೋರೆಗಾಂವ್ ವಿಜಯಸ್ಥಂಭಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದ್ದರು ಎಂದು ವರದಿಯಾಗಿತ್ತು.

ಕೊರೊನಾ ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು 60 ವರ್ಷಕ್ಕಿಂತ ಮೇಲ್ಪಟ್ಟ ಜನರು ಮತ್ತು 10 ವರ್ಷದೊಳಗಿನ ಮಕ್ಕಳು ಜಯಸ್ತಂಭಕ್ಕೆ ಬರುವುದನ್ನು ತಪ್ಪಿಸಲು ಜಿಲ್ಲಾಡಳಿತವು ಒತ್ತಾಯಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯುದ್ಧ ಸ್ಮಾರಕದ ಬಳಿ ಪೊಲೀಸ್ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ ಮತ್ತು COVID-19 ಪರೀಕ್ಷೆಯಂತಹ ಸೌಲಭ್ಯಗಳು ಸ್ಥಳದಲ್ಲಿವೆ ಎನ್ನಲಾಗಿದೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್, ರಾಜ್ಯ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, ಸಮಾಜ ಕಲ್ಯಾಣ ಸಚಿವ ಧನಂಜಯ್ ಮುಂಡೆ ಇಂದು ಬೆಳಗ್ಗೆ ಜಯಸ್ತಂಭಕ್ಕೆ ಭೇಟಿ ನೀಡಿದವರಲ್ಲಿ ಪ್ರಮುಖರಾಗಿದ್ದಾರೆ. ಜೊತೆಗೆ ದೇಶಾದ್ಯಂತದಿಂದ ಸಾವಿರಾರು ದಲಿತರು, ಅಂಬೇಡ್ಕರ್‌ವಾದಿಗಳು ಭೇಟಿ ನೀಡುತ್ತಿದ್ದಾರೆ.

1818ರ ಸಮಯದಲ್ಲಿ ಅಸ್ಪೃಶ್ಯರೆಂದು ಪರಿಗಣಿಸಲ್ಪಟ್ಟ ಮಹರ್ ಸಮುದಾಯದ ಸೈನಿಕರು ಜಾತಿ ತಾರತಮ್ಯ, ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದು ಮೇಲ್ಜಾತಿ ಪೇಶ್ವೆಗಳ ವಿರುದ್ಧದ ಮೂರನೇ ಆಂಗ್ಲೋ-ಮರಾಠಾ ಯುದ್ದದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಸೈನ್ಯವನ್ನು ಬೆಂಬಲಿಸಿದರು. ಕೇವಲ 500 ಜನ ದಲಿತ ಸೈನಿಕರು ದಿಟ್ಟ ಹೋರಾಟದ ಮೂಲಕ 28,000 ದಷ್ಟಿದ್ದ ಪೇಶ್ವೆ ಸೈನ್ಯವನ್ನು ಮಣಿಸಿದ ನೆನಪಿಗಾಗಿ ಇಲ್ಲಿ ಪ್ರತಿವರ್ಷ ವಿಜಯೋತ್ಸವ ಆಚರಿಸಲಾಗುತ್ತದೆ.

ಆ ಯುದ್ಧದ ವಿಜಯದ ನೆನಪಿಗಾಗಿ ಭೀಮಾ ಕೋರೆಗಾಂವ್‌ನಲ್ಲಿ ಸ್ಮಾರಕ ‘ಜೈ ಸ್ತಂಭ’ ಸ್ಥಾಪಿಸಲಾಗಿದೆ. ಡಾ.ಬಿ.ಆರ್ ಅಂಬೇಡ್ಕರ್‌ರವರು ತಮ್ಮ ಜೀವಿತಾವಧಿಯುದ್ದಕ್ಕೂ ಪ್ರತಿ ವರ್ಷ ಜನವರಿ 1 ರಂದು ಭೀಮಾ ಕೋರೆಗಾಂವ್‌ಗೆ ಭೇಟಿ ನೀಡಿ ಜಯಸ್ಥಂಭಕ್ಕೆ ಗೌರವ ಸಮರ್ಪಿಸುತ್ತಿದ್ದರು. ಆ ಸಂಪ್ರದಾಯವನ್ನು ಅಂಬೇಡ್ಕರ್‌ವಾದಿಗಳು ಇಂದಿಗೂ ಮುಂದುವರೆಸಿದ್ದಾರೆ.

ಆದರೆ ಭೀಮಾ ಕೋರೆಗಾಂವ್‌ನಲ್ಲಿ 2018 ರ ಜನವರಿ 1 ರಂದು ಸಂಭ್ರಮಾಚರಣೆಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಇದರಲ್ಲಿ ಒಬ್ಬರು ಸಾವನ್ನಪ್ಪಿದ್ದರು ಮತ್ತು ಹಲವಾರು ಮಂದಿ ಗಾಯಗೊಂಡಿದ್ದರು. ಇದನ್ನೆ ನೆಪವಾಗಿಟ್ಟುಕೊಂಡು ಅಂದಿನ ದೇವೇಂದ್ರ ಫಡ್ನವಿಸ್ ನೇತೃತ್ವದ ಬಿಜೆಪಿ ಸರ್ಕಾರ 15ಕ್ಕೂ ಹೆಚ್ಚು ಕಾರ್ಯಕರ್ತರ ಮೇಲೆ ಪಿತೂರಿ, ಕೊಲೆ ಪ್ರಕರಣಗಳನ್ನು ದಾಖಲಿಸಿ ಬಂಧಿಸಲಾಗಿದೆ. ಅವೆಲ್ಲವೂ ಸುಳ್ಳು ಕೇಸುಗಳಾಗಿದ್ದು, ಅವುಗಳನ್ನು ಹಿಂಪಡೆಯಬೇಕೆಂದು ಬಹಳಷ್ಟು ಹೋರಾಟಗಾರರು ಒತ್ತಾಯಿಸುತ್ತಲೇ ಇದ್ದಾರೆ.


ಇದನ್ನೂ ಓದಿ; ಕೋರೆಗಾಂವ್‌‌ ಕದನ: ದಲಿತ ಅಸ್ಮಿತೆ, ಸ್ವಾಭಿಮಾನದ ಮಹಾಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...