Homeಚಳವಳಿ204ನೇ ವರ್ಷದ ಭೀಮಾ ಕೋರೆಗಾಂವ್ ಸ್ಮರಣೆ: ಸಾವಿರಾರು ಜನರಿಂದ ಗೌರವ ಸಮರ್ಪಣೆ

204ನೇ ವರ್ಷದ ಭೀಮಾ ಕೋರೆಗಾಂವ್ ಸ್ಮರಣೆ: ಸಾವಿರಾರು ಜನರಿಂದ ಗೌರವ ಸಮರ್ಪಣೆ

- Advertisement -
- Advertisement -

1818 ರ ಆಂಗ್ಲೋ-ಮರಾಠಾ ಯುದ್ಧದಲ್ಲಿ ದಲಿತ ದಿಗ್ವಿಜಯದ ನೆನಪಿಗಾಗಿ ಪುಣೆಯಿಂದ 40 ಕಿ.ಮೀ ದೂರದಲ್ಲಿರುವ ಭೀಮಾ ಕೋರೆಗಾಂವ್‌ನಲ್ಲಿ ಇಂದು ನಡೆಯುತ್ತಿರುವ 204ನೇ ವರ್ಷದ ವಿಜಯೋತ್ಸವ ಸ್ಮರಣೆ ಕಾರ್ಯಕ್ರಮದಲ್ಲಿ ಸಾವಿರಾರು ಅಂಬೇಡ್ಕರ್‌ವಾದಿಗಳು ಸೇರಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಕಾರಣಕ್ಕಾಗಿ ಜಿಲ್ಲಾಡಳಿತದ ಹಲವಾರು ನಿರ್ಬಂಧಗಳ ನಡುವೆಯೂ ಕಾರ್ಯಕ್ರಮ ಜರುಗುತ್ತಿದೆ.

ಕಳೆದ ವರ್ಷ 203ನೇ ವರ್ಷದ ವಿಜಯೋತ್ಸವದ ವೇಳೆ ಸುಮಾರು 5 ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ಅದರ ಹಿಂದಿನ ವರ್ಷ 10 ಲಕ್ಷಕ್ಕೂ ಹೆಚ್ಚು ಜನ ಭೀಮಾ ಕೋರೆಗಾಂವ್ ವಿಜಯಸ್ಥಂಭಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದ್ದರು ಎಂದು ವರದಿಯಾಗಿತ್ತು.

ಕೊರೊನಾ ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು 60 ವರ್ಷಕ್ಕಿಂತ ಮೇಲ್ಪಟ್ಟ ಜನರು ಮತ್ತು 10 ವರ್ಷದೊಳಗಿನ ಮಕ್ಕಳು ಜಯಸ್ತಂಭಕ್ಕೆ ಬರುವುದನ್ನು ತಪ್ಪಿಸಲು ಜಿಲ್ಲಾಡಳಿತವು ಒತ್ತಾಯಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯುದ್ಧ ಸ್ಮಾರಕದ ಬಳಿ ಪೊಲೀಸ್ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ ಮತ್ತು COVID-19 ಪರೀಕ್ಷೆಯಂತಹ ಸೌಲಭ್ಯಗಳು ಸ್ಥಳದಲ್ಲಿವೆ ಎನ್ನಲಾಗಿದೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್, ರಾಜ್ಯ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, ಸಮಾಜ ಕಲ್ಯಾಣ ಸಚಿವ ಧನಂಜಯ್ ಮುಂಡೆ ಇಂದು ಬೆಳಗ್ಗೆ ಜಯಸ್ತಂಭಕ್ಕೆ ಭೇಟಿ ನೀಡಿದವರಲ್ಲಿ ಪ್ರಮುಖರಾಗಿದ್ದಾರೆ. ಜೊತೆಗೆ ದೇಶಾದ್ಯಂತದಿಂದ ಸಾವಿರಾರು ದಲಿತರು, ಅಂಬೇಡ್ಕರ್‌ವಾದಿಗಳು ಭೇಟಿ ನೀಡುತ್ತಿದ್ದಾರೆ.

1818ರ ಸಮಯದಲ್ಲಿ ಅಸ್ಪೃಶ್ಯರೆಂದು ಪರಿಗಣಿಸಲ್ಪಟ್ಟ ಮಹರ್ ಸಮುದಾಯದ ಸೈನಿಕರು ಜಾತಿ ತಾರತಮ್ಯ, ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದು ಮೇಲ್ಜಾತಿ ಪೇಶ್ವೆಗಳ ವಿರುದ್ಧದ ಮೂರನೇ ಆಂಗ್ಲೋ-ಮರಾಠಾ ಯುದ್ದದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಸೈನ್ಯವನ್ನು ಬೆಂಬಲಿಸಿದರು. ಕೇವಲ 500 ಜನ ದಲಿತ ಸೈನಿಕರು ದಿಟ್ಟ ಹೋರಾಟದ ಮೂಲಕ 28,000 ದಷ್ಟಿದ್ದ ಪೇಶ್ವೆ ಸೈನ್ಯವನ್ನು ಮಣಿಸಿದ ನೆನಪಿಗಾಗಿ ಇಲ್ಲಿ ಪ್ರತಿವರ್ಷ ವಿಜಯೋತ್ಸವ ಆಚರಿಸಲಾಗುತ್ತದೆ.

ಆ ಯುದ್ಧದ ವಿಜಯದ ನೆನಪಿಗಾಗಿ ಭೀಮಾ ಕೋರೆಗಾಂವ್‌ನಲ್ಲಿ ಸ್ಮಾರಕ ‘ಜೈ ಸ್ತಂಭ’ ಸ್ಥಾಪಿಸಲಾಗಿದೆ. ಡಾ.ಬಿ.ಆರ್ ಅಂಬೇಡ್ಕರ್‌ರವರು ತಮ್ಮ ಜೀವಿತಾವಧಿಯುದ್ದಕ್ಕೂ ಪ್ರತಿ ವರ್ಷ ಜನವರಿ 1 ರಂದು ಭೀಮಾ ಕೋರೆಗಾಂವ್‌ಗೆ ಭೇಟಿ ನೀಡಿ ಜಯಸ್ಥಂಭಕ್ಕೆ ಗೌರವ ಸಮರ್ಪಿಸುತ್ತಿದ್ದರು. ಆ ಸಂಪ್ರದಾಯವನ್ನು ಅಂಬೇಡ್ಕರ್‌ವಾದಿಗಳು ಇಂದಿಗೂ ಮುಂದುವರೆಸಿದ್ದಾರೆ.

ಆದರೆ ಭೀಮಾ ಕೋರೆಗಾಂವ್‌ನಲ್ಲಿ 2018 ರ ಜನವರಿ 1 ರಂದು ಸಂಭ್ರಮಾಚರಣೆಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಇದರಲ್ಲಿ ಒಬ್ಬರು ಸಾವನ್ನಪ್ಪಿದ್ದರು ಮತ್ತು ಹಲವಾರು ಮಂದಿ ಗಾಯಗೊಂಡಿದ್ದರು. ಇದನ್ನೆ ನೆಪವಾಗಿಟ್ಟುಕೊಂಡು ಅಂದಿನ ದೇವೇಂದ್ರ ಫಡ್ನವಿಸ್ ನೇತೃತ್ವದ ಬಿಜೆಪಿ ಸರ್ಕಾರ 15ಕ್ಕೂ ಹೆಚ್ಚು ಕಾರ್ಯಕರ್ತರ ಮೇಲೆ ಪಿತೂರಿ, ಕೊಲೆ ಪ್ರಕರಣಗಳನ್ನು ದಾಖಲಿಸಿ ಬಂಧಿಸಲಾಗಿದೆ. ಅವೆಲ್ಲವೂ ಸುಳ್ಳು ಕೇಸುಗಳಾಗಿದ್ದು, ಅವುಗಳನ್ನು ಹಿಂಪಡೆಯಬೇಕೆಂದು ಬಹಳಷ್ಟು ಹೋರಾಟಗಾರರು ಒತ್ತಾಯಿಸುತ್ತಲೇ ಇದ್ದಾರೆ.


ಇದನ್ನೂ ಓದಿ; ಕೋರೆಗಾಂವ್‌‌ ಕದನ: ದಲಿತ ಅಸ್ಮಿತೆ, ಸ್ವಾಭಿಮಾನದ ಮಹಾಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...