HomeಚಳವಳಿNIA ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್: ಚಿಂತಕ ಆನಂದ್ ತೇಲ್ತುಂಬ್ಡೆ ಜಾಮೀನಿಗೆ ಸಮ್ಮತಿ

NIA ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್: ಚಿಂತಕ ಆನಂದ್ ತೇಲ್ತುಂಬ್ಡೆ ಜಾಮೀನಿಗೆ ಸಮ್ಮತಿ

ಭೀಮಾ ಕೊರೆಗಾಂವ್‌ – ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಅವರು 2020ರ ಏಪ್ರಿಲ್‌ನಿಂದಲೂ ಬಂಧನದಲ್ಲಿದ್ದಾರೆ

- Advertisement -
- Advertisement -

ಭೀಮಾ ಕೊರೆಗಾಂವ್‌-ಎಲ್ಗರ್ ಪರಿಷತ್ ಪ್ರಕರಣದಲ್ಲಿ ವಿದ್ವಾಂಸ, ಹೋರಾಟಗಾರ ಆನಂದ್ ತೇಲ್ತುಂಬ್ಡೆ ಅವರಿಗೆ ಜಾಮೀನು ಮಂಜೂರು ಮಾಡಿದ್ದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದ್ದು, ಅವರಿಗೆ ಜಾಮೀನು ನೀಡಲು ಅನುಮತಿ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಹೈಕೋರ್ಟ್‌ನ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಾಂಬೆ ಹೈಕೋರ್ಟ್ ಆದೇಶದಲ್ಲಿ ಮಾಡಿರುವ ಅವಲೋಕನಗಳು ಸುಪ್ರೀಂ ಕೋರ್ಟ್ ಈ ಹಿಂದೆ ಹೇಳಿದ್ದಕ್ಕೆ ವಿರುದ್ಧವಾಗಿದೆ. ಜಾಮೀನು ಆದೇಶದಲ್ಲಿನ ಅವಲೋಕನಗಳು, ವಿಚಾರಣೆ ಮತ್ತು ತನಿಖೆಯ ಮೇಲೆ ಪ್ರಭಾವ ಬೀರುತ್ತವೆ” ಎಂದು ಈ ಹಿಂದೆ ತೇಲ್ತುಂಬ್ಡೆಗೆ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಎನ್‌ಐಎ ಸುಪ್ರೀಂಕೋರ್ಟ್‌ಗೆ ಮೊರೆ ಹೋಗಿತ್ತು.

ಇದನ್ನೂ ಓದಿ: 2020ರ ವರ್ಷದ ವ್ಯಕ್ತಿಯಾಗಿ ಚಿಂತಕ ಡಾ.ಆನಂದ್ ತೇಲ್ತುಂಬ್ಡೆ ಆಯ್ಕೆ

“ತನಿಖಾ ಸಂಸ್ಥೆಯು ಈಗಾಗಲೇ ತೆಲ್ತುಂಬ್ಡೆ ವಿರುದ್ಧದ ಸಾಕ್ಷ್ಯಾಧಾರಗಳನ್ನು ಪಡೆಯುವಲ್ಲಿ ಬಹಳ ಕಷ್ಟವನ್ನು ಎದುರಿಸುತ್ತಿದೆ. ಒಂದು ವೇಳೆ ಅವರಿಗೆ ಜಾಮೀನು ನೀಡಿದರೆ ಇದಕ್ಕೆ ಮಾರಣಾಂತಿಕ ಹೊಡೆತ ನೀಡಿದಂತಾಗುತ್ತದೆ. ಅವರು ನ್ಯಾಯಾಂಗ ಬಂಧನದಿಂದ ಬಿಡುಗಡೆಯಾದ ನಂತರ ಯಾವುದೇ ಪುರಾವೆಗಳು ಹೊರ ಬರದಂತೆ ನೋಡಿಕೊಳ್ಳುತ್ತಾರೆ” ಎಂದು ತನ್ನ ವಿಶೇಷ ರಜೆ ಅರ್ಜಿಯಲ್ಲಿ (SLP) ಎನ್‌ಐಎ ಕೋರ್ಟ್‌ನಲ್ಲಿ ಹೇಳಿತ್ತು.

ಕಳೆದ ವಾರ, ಬಾಂಬೆ ಹೈಕೋರ್ಟ್ ಆನಂದ್‌ ತೇಲ್ತುಂಬ್ಡೆ ಅವರಿಗೆ ಜಾಮೀನು ನೀಡಿತ್ತು. ಅವರು 2020ರ ಏಪ್ರಿಲ್‌ನಿಂದಲೂ ಬಂಧನದಲ್ಲಿದ್ದು, ಯುಎಪಿಎ ಅಡಿಯಲ್ಲಿ ಭಯೋತ್ಪಾದಕ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ತೀರ್ಮಾನಿಸಲು ಸಾಧ್ಯವಿಲ್ಲ ಎಂದು ತೀರ್ಪಿನಲ್ಲಿ ಹೇಳಿತ್ತು.

ಆನಂದ್‌ ತೇಲ್ತುಂಬ್ಡೆ ಅವರು ಭೀಮಾ ಕೊರೆಗಾಂವ್‌-ಎಲ್ಗರ್‌ ಪರಿಷತ್‌ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಜಾಮೀನು ಪಡೆದ ಮೂರನೇ ಆರೋಪಿಯಾಗಿದ್ದಾರೆ. ಅವರ ಸಹ ಆರೋಪಿ ವರವರ ರಾವ್‌ಗೆ ವೈದ್ಯಕೀಯ ಕಾರಣಗಳಿಗಾಗಿ ಜಾಮೀನು ಪಡೆದಿದ್ದಾರೆ.

ಇದನ್ನೂ ಓದಿ: ದೇಶದ ಸಾಕ್ಷಿಪ್ರಜ್ಞೆ ಬಾಬಾಸಾಹೇಬರ ಬೌದ್ಧಿಕ ವಾರಸುದಾರ: ಚಿಂತಕ ಆನಂದ್ ತೇಲ್ತುಂಬ್ಡೆ

ಈ ಹಿಂದೆ ಹೋರಾಟಗಾರ್ತಿ ಸುಧಾ ಭಾರದ್ವಾಜ್‌ ಅವರಿಗೆ ಡೀಫಾಲ್ಟ್ ಜಾಮೀನು ನೀಡಲಾಗಿದೆ. ತೇಲ್ತುಂಬ್ಡೆ ಅವರು ಹೈಕೋರ್ಟ್‌ನಿಂದ ಅರ್ಹತೆಯ ಮೇರೆಗೆ ಜಾಮೀನು ಪಡೆದ ಪ್ರಕರಣದ ಮೊದಲ ಆರೋಪಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...