Homeಮುಖಪುಟಬರಲಿದೆ 'ಭೀಮಾ ಕೋರೆಗಾಂವ್' ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಸೆಟೆದು ನಿಂತು ಮಾನವೀಯ ಮೌಲ್ಯಗಳನ್ನು ಪಡೆದುಕೊಳ್ಳಲು ಹಂಬಲಿಸುವ ಮಹರ್ ಸೈನಿಕರ ಧೈರ್ಯ, ಸಾಹಸ, ಕೆಚ್ಚೆದೆಯ ಹೋರಾಟವೇ 'ಭೀಮಾ ಕೋರೆಗಾಂವ್' ಯುದ್ಧ...

- Advertisement -
- Advertisement -

ಭಾರತದ ಐತಿಹಾಸಿಕ ಘಟನೆ ‘ಭೀಮಾ ಕೋರೆಗಾಂವ್’ ಯುದ್ಧವನ್ನು ಆಧರಿಸಿದ ‘ದಿ ಬ್ಯಾಟಲ್ ಆಫ್ ಭೀಮಾ ಕೋರೆಗಾಂವ್’ ಎನ್ನುವ ಚಲನಚಿತ್ರ ಬಾಲಿವುಡ್‌ನಲ್ಲಿ ನಿರ್ಮಾಣವಾಗುತ್ತಿದ್ದು, ಖ್ಯಾತ ಗೀತ ರಚನೆಕಾರ ರಮೇಶ್ ಥೀಟೆ ಈ ಚಿತ್ರವನ್ನು ನಿರ್ಮಾಣ ಮಾಡುವುದರೊಟ್ಟಿಗೆ ನಿರ್ದೇಶನವನ್ನೂ ಮಾಡಲಿದ್ದಾರೆ.

ಅರ್ಜುನ್ ರಾಂಪಾಲ್, ದಿಗಂಗನ ಸೂರ್ಯವಂಶಿ, ಅಭಿಮನ್ಯು ಸಿಂಗ್, ಸನ್ನಿ ಲಿಯೋನ್, ಮಿಲಿಂದ್ ಗುನಾಜಿ, ಗೋವಿಂದ್ ನಾಮದೇವ್, ಯತೀನ್ ಕಾರ್ಯೇಕರ್, ಅಶೋಕ್ ಸಾಮ್ರಾತ್ ಸೇರಿದಂತೆ ದೊಡ್ಡ ತಾರಾ ಬಳಗವೇ ಚಿತ್ರದಲ್ಲಿದೆ. ಚಿತ್ರವು 2021 ರಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಇದನ್ನೂ ಓದಿ:ಸಾರಿಗೆ ನೌಕರರ ಪ್ರತಿಭಟನೆಗೆ ಮಣಿದ ಸರ್ಕಾರ: ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ

ಈ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಖ್ಯಾತ ಬಾಲಿವುಡ್ ನಟ ಅರ್ಜುನ್ ರಾಂ‌ಪಾಲ್ ಈ ಕುರಿತು ಟ್ವೀಟ್ ಮಾಡಿದ್ದು, “ನನ್ನ ಮನಸ್ಸನ್ನು ಗೆದ್ದ ಐತಿಹಾಸಿಕ ಘಟನೆಯನ್ನಾಧರಿಸಿದ ಚಿತ್ರದ ಭಾಗವಾಗಿರುವುದು ನನ್ನ ಹೆಮ್ಮೆ. ಖಂಡಿತಾ ಇದು ನಿಮ್ಮನ್ನೂ ಗೆಲ್ಲುತ್ತದೆ. 2021 ರಲ್ಲಿ ಚಿತ್ರ ಬಿಡುಗಡೆಯಾಗಲಿದೆ” ಎಂದು ಬರೆದುಕೊಂಡು ಚಿತ್ರದ ಫಸ್ಟ್‌ಲುಕ್ ಅನ್ನು ಹಂಚಿಕೊಂಡಿದ್ದಾರೆ.

ಚಿತ್ರದ ಹಾಡಿನ ಟೀಸರ್ ಅನ್ನು ಇಲ್ಲಿ ನೋಡಿ.

ಇದನ್ನೂ ಓದಿ: ನಿರುದ್ಯೋಗಿಗಳ ಬೆನ್ನಿಗೆ ನಿಂತ ನಟ ಸೋನು ಸೂದ್: ಇ-ಆಟೋ ಹಂಚಲು ನಿರ್ಧಾರ

ಇದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ನೂರಾರು ಜನರು ಇದನ್ನು ರೀಟ್ವೀಟ್ ಮಾಡಿದ್ದಾರೆ.

ಶ್ರೀಕಾಂತ್ ದೊಲ್ಲೆ ಎಂಬುವವರು ಟ್ವೀಟ್ ಮಾಡಿ, “ನಾವು ಕಾಯುತ್ತಿದ್ದೇವೆ!!! ಜೈಭೀಮ್” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಸಾಕ್ಷ್ಯ ಸಂಗ್ರಹಿಸಲು ಹೆಣಗುತ್ತಿರುವ NIA!

ಯೋಗೇಶ್ ಎಂಬುವವರು ಟ್ವೀಟ್ ಮಾಡಿ, “ಚಿತ್ರದ ಬಗ್ಗೆ ಕುತೂಹಲ ಮತ್ತು ಕಾತರನಾಗಿದ್ದೇನೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಂಗಾವ್‌ ವಿಜಯೋತ್ಸವದಲ್ಲಿ ನೆರೆದ 5 ಲಕ್ಷಕ್ಕೂ ಹೆಚ್ಚು ಜನ: ಇಂಟರ್‌ನೆಟ್‌ ಸ್ಥಗಿತ..

ಪಂಡಿತ್ ಕ್ಷಿತಿಜ್ ಎಂಬುವವರು ಟ್ವೀಟ್ ಮಾಡಿ, “ನಮ್ಮ ಇತಿಹಾಸ ನಮ್ಮ ಹೆಮ್ಮೆ. ಮಹಾರರ (ಅಸ್ಪೃಶ್ಯರ) ಇತಿಹಾಸ ಮತ್ತು ಭೀಮಾ ಕೋರೆಗಾಂವ್ ಘಟನೆಯನ್ನು ಜಗತ್ತು ತಿಳಿದುಕೊಳ್ಳಲಿ. ಶೇರ್ ಮಾಡಿ, ರೀಟ್ವೀಟ್ ಮಾಡಿ” ಎಂದು ಬರೆದುಕೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಭೀಮಾ ಕೋರೆಗಾಂವ್ ಎಂಬ ಹೆಸರು ಸಾಕಷ್ಟು ಪ್ರಚಲಿತದಲ್ಲಿದೆ. ಕಳೆದ ಕೆಲವು ವರ್ಷಗಳಿಂದ ಈ ಐತಿಹಾಸಿಕ ಘಟನೆಯ ನೆನಪಿಗಾಗಿ ಮಹಾರಾ‍ಷ್ಟ್ರದಲ್ಲಿ ಉತ್ಸವವನ್ನು ನಡೆಸಿಕೊಂಡು ಬರಲಾಗುತ್ತಿದೆ. ಇತ್ತೀಚೆಗೆ ನಡೆದ ಉತ್ಸವದಲ್ಲಿ ಗಲಭೆ ಆರಂಭವಾಗಿತ್ತು. ಇದರ ಭಾಗವಾಗಿ ಹತ್ತಾರು ಹೋರಾಟಗಾರರನ್ನು ಬಂಧಿಸಲಾಗಿದೆ. ಇದನ್ನು ವಿರೋಧಿಸಿ ದೇಶದಾದ್ಯಂತ ನೂರಾರು ಪ್ರತಿಭಟನೆಗಳು ನಡೆದಿವೆ.

ಇದನ್ನೂ ಓದಿ: ಮಾನವ ಹಕ್ಕುಗಳ ದಿನ: ಬಂಧನದಲ್ಲಿರುವ ಹೋರಾಟಗಾರರ ಬಿಡುಗಡೆಗೆ ಒತ್ತಾಯಿಸಿದ ರೈತರು!

ಏನಿದು ಕೋರೆಗಾಂವ್ ಯುದ್ಧ;

ಕೋರೇಗಾಂವ್ ಯುದ್ಧ ಇತಿಹಾಸದಲ್ಲಿ ಮುಚ್ಚಿಹೋದ ಸಾಹಸದ ಘಟನೆ. ಮೂವತ್ತು ಸಾವಿರ ಸೈನಿಕರನ್ನು ಕೇವಲ ಐನೂರು ಜನ ಸೈನಿಕರು ಸೇರಿಕೊಂಡು ಸೋಲಿಸಿದ ಕದನ. ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಸೆಟೆದು ನಿಂತು ಮಾನವೀಯ ಮೌಲ್ಯಗಳನ್ನು ಪಡೆದುಕೊಳ್ಳಲು ಹಂಬಲಿಸುವ ಮಹರ್ ಸೈನಿಕರ ಧೈರ್ಯ ಸಾಹಸ, ಕೆಚ್ಚೆದೆಯ ಹೋರಾಟ. ಶೋಷಿತರು ಮೇಲ್ಜಾತಿ ಶೋಷಕರ ವಿರುದ್ಧ, ಅವರ ಶೋಷಣೆಯ ನಡವಳಿಕೆಯ ವಿರುದ್ಧ ಯುದ್ಧ ಘೋಷಿಸಿದ, ನಡೆಸಿ ಗೆಲುವು. ಅದು ಭೀಮಾ ತೀರದಲ್ಲಿ ನಡೆದಿದ್ದರಿಂದ ಅದು ಇತಿಹಾಸದಲ್ಲಿ ‘ಭೀಮಾ ಕೋರೇಗಾಂವ್ ಯುದ್ಧ’ವೆಂದೇ ಪ್ರಸಿದ್ಧವಾಗಿದೆ.


ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ ಎನ್‌ಐಎಗೆ ವರ್ಗಾವಣೆ ಪ್ರಶ್ನಿಸಿ ಹೈಕೋರ್ಟ್‌‌ನಲ್ಲಿ ಅರ್ಜಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...