Homeಮುಖಪುಟಬರಲಿದೆ 'ಭೀಮಾ ಕೋರೆಗಾಂವ್' ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಸೆಟೆದು ನಿಂತು ಮಾನವೀಯ ಮೌಲ್ಯಗಳನ್ನು ಪಡೆದುಕೊಳ್ಳಲು ಹಂಬಲಿಸುವ ಮಹರ್ ಸೈನಿಕರ ಧೈರ್ಯ, ಸಾಹಸ, ಕೆಚ್ಚೆದೆಯ ಹೋರಾಟವೇ 'ಭೀಮಾ ಕೋರೆಗಾಂವ್' ಯುದ್ಧ...

- Advertisement -
- Advertisement -

ಭಾರತದ ಐತಿಹಾಸಿಕ ಘಟನೆ ‘ಭೀಮಾ ಕೋರೆಗಾಂವ್’ ಯುದ್ಧವನ್ನು ಆಧರಿಸಿದ ‘ದಿ ಬ್ಯಾಟಲ್ ಆಫ್ ಭೀಮಾ ಕೋರೆಗಾಂವ್’ ಎನ್ನುವ ಚಲನಚಿತ್ರ ಬಾಲಿವುಡ್‌ನಲ್ಲಿ ನಿರ್ಮಾಣವಾಗುತ್ತಿದ್ದು, ಖ್ಯಾತ ಗೀತ ರಚನೆಕಾರ ರಮೇಶ್ ಥೀಟೆ ಈ ಚಿತ್ರವನ್ನು ನಿರ್ಮಾಣ ಮಾಡುವುದರೊಟ್ಟಿಗೆ ನಿರ್ದೇಶನವನ್ನೂ ಮಾಡಲಿದ್ದಾರೆ.

ಅರ್ಜುನ್ ರಾಂಪಾಲ್, ದಿಗಂಗನ ಸೂರ್ಯವಂಶಿ, ಅಭಿಮನ್ಯು ಸಿಂಗ್, ಸನ್ನಿ ಲಿಯೋನ್, ಮಿಲಿಂದ್ ಗುನಾಜಿ, ಗೋವಿಂದ್ ನಾಮದೇವ್, ಯತೀನ್ ಕಾರ್ಯೇಕರ್, ಅಶೋಕ್ ಸಾಮ್ರಾತ್ ಸೇರಿದಂತೆ ದೊಡ್ಡ ತಾರಾ ಬಳಗವೇ ಚಿತ್ರದಲ್ಲಿದೆ. ಚಿತ್ರವು 2021 ರಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಇದನ್ನೂ ಓದಿ:ಸಾರಿಗೆ ನೌಕರರ ಪ್ರತಿಭಟನೆಗೆ ಮಣಿದ ಸರ್ಕಾರ: ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ

ಈ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಖ್ಯಾತ ಬಾಲಿವುಡ್ ನಟ ಅರ್ಜುನ್ ರಾಂ‌ಪಾಲ್ ಈ ಕುರಿತು ಟ್ವೀಟ್ ಮಾಡಿದ್ದು, “ನನ್ನ ಮನಸ್ಸನ್ನು ಗೆದ್ದ ಐತಿಹಾಸಿಕ ಘಟನೆಯನ್ನಾಧರಿಸಿದ ಚಿತ್ರದ ಭಾಗವಾಗಿರುವುದು ನನ್ನ ಹೆಮ್ಮೆ. ಖಂಡಿತಾ ಇದು ನಿಮ್ಮನ್ನೂ ಗೆಲ್ಲುತ್ತದೆ. 2021 ರಲ್ಲಿ ಚಿತ್ರ ಬಿಡುಗಡೆಯಾಗಲಿದೆ” ಎಂದು ಬರೆದುಕೊಂಡು ಚಿತ್ರದ ಫಸ್ಟ್‌ಲುಕ್ ಅನ್ನು ಹಂಚಿಕೊಂಡಿದ್ದಾರೆ.

ಚಿತ್ರದ ಹಾಡಿನ ಟೀಸರ್ ಅನ್ನು ಇಲ್ಲಿ ನೋಡಿ.

ಇದನ್ನೂ ಓದಿ: ನಿರುದ್ಯೋಗಿಗಳ ಬೆನ್ನಿಗೆ ನಿಂತ ನಟ ಸೋನು ಸೂದ್: ಇ-ಆಟೋ ಹಂಚಲು ನಿರ್ಧಾರ

ಇದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ನೂರಾರು ಜನರು ಇದನ್ನು ರೀಟ್ವೀಟ್ ಮಾಡಿದ್ದಾರೆ.

ಶ್ರೀಕಾಂತ್ ದೊಲ್ಲೆ ಎಂಬುವವರು ಟ್ವೀಟ್ ಮಾಡಿ, “ನಾವು ಕಾಯುತ್ತಿದ್ದೇವೆ!!! ಜೈಭೀಮ್” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಸಾಕ್ಷ್ಯ ಸಂಗ್ರಹಿಸಲು ಹೆಣಗುತ್ತಿರುವ NIA!

ಯೋಗೇಶ್ ಎಂಬುವವರು ಟ್ವೀಟ್ ಮಾಡಿ, “ಚಿತ್ರದ ಬಗ್ಗೆ ಕುತೂಹಲ ಮತ್ತು ಕಾತರನಾಗಿದ್ದೇನೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಂಗಾವ್‌ ವಿಜಯೋತ್ಸವದಲ್ಲಿ ನೆರೆದ 5 ಲಕ್ಷಕ್ಕೂ ಹೆಚ್ಚು ಜನ: ಇಂಟರ್‌ನೆಟ್‌ ಸ್ಥಗಿತ..

ಪಂಡಿತ್ ಕ್ಷಿತಿಜ್ ಎಂಬುವವರು ಟ್ವೀಟ್ ಮಾಡಿ, “ನಮ್ಮ ಇತಿಹಾಸ ನಮ್ಮ ಹೆಮ್ಮೆ. ಮಹಾರರ (ಅಸ್ಪೃಶ್ಯರ) ಇತಿಹಾಸ ಮತ್ತು ಭೀಮಾ ಕೋರೆಗಾಂವ್ ಘಟನೆಯನ್ನು ಜಗತ್ತು ತಿಳಿದುಕೊಳ್ಳಲಿ. ಶೇರ್ ಮಾಡಿ, ರೀಟ್ವೀಟ್ ಮಾಡಿ” ಎಂದು ಬರೆದುಕೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಭೀಮಾ ಕೋರೆಗಾಂವ್ ಎಂಬ ಹೆಸರು ಸಾಕಷ್ಟು ಪ್ರಚಲಿತದಲ್ಲಿದೆ. ಕಳೆದ ಕೆಲವು ವರ್ಷಗಳಿಂದ ಈ ಐತಿಹಾಸಿಕ ಘಟನೆಯ ನೆನಪಿಗಾಗಿ ಮಹಾರಾ‍ಷ್ಟ್ರದಲ್ಲಿ ಉತ್ಸವವನ್ನು ನಡೆಸಿಕೊಂಡು ಬರಲಾಗುತ್ತಿದೆ. ಇತ್ತೀಚೆಗೆ ನಡೆದ ಉತ್ಸವದಲ್ಲಿ ಗಲಭೆ ಆರಂಭವಾಗಿತ್ತು. ಇದರ ಭಾಗವಾಗಿ ಹತ್ತಾರು ಹೋರಾಟಗಾರರನ್ನು ಬಂಧಿಸಲಾಗಿದೆ. ಇದನ್ನು ವಿರೋಧಿಸಿ ದೇಶದಾದ್ಯಂತ ನೂರಾರು ಪ್ರತಿಭಟನೆಗಳು ನಡೆದಿವೆ.

ಇದನ್ನೂ ಓದಿ: ಮಾನವ ಹಕ್ಕುಗಳ ದಿನ: ಬಂಧನದಲ್ಲಿರುವ ಹೋರಾಟಗಾರರ ಬಿಡುಗಡೆಗೆ ಒತ್ತಾಯಿಸಿದ ರೈತರು!

ಏನಿದು ಕೋರೆಗಾಂವ್ ಯುದ್ಧ;

ಕೋರೇಗಾಂವ್ ಯುದ್ಧ ಇತಿಹಾಸದಲ್ಲಿ ಮುಚ್ಚಿಹೋದ ಸಾಹಸದ ಘಟನೆ. ಮೂವತ್ತು ಸಾವಿರ ಸೈನಿಕರನ್ನು ಕೇವಲ ಐನೂರು ಜನ ಸೈನಿಕರು ಸೇರಿಕೊಂಡು ಸೋಲಿಸಿದ ಕದನ. ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಸೆಟೆದು ನಿಂತು ಮಾನವೀಯ ಮೌಲ್ಯಗಳನ್ನು ಪಡೆದುಕೊಳ್ಳಲು ಹಂಬಲಿಸುವ ಮಹರ್ ಸೈನಿಕರ ಧೈರ್ಯ ಸಾಹಸ, ಕೆಚ್ಚೆದೆಯ ಹೋರಾಟ. ಶೋಷಿತರು ಮೇಲ್ಜಾತಿ ಶೋಷಕರ ವಿರುದ್ಧ, ಅವರ ಶೋಷಣೆಯ ನಡವಳಿಕೆಯ ವಿರುದ್ಧ ಯುದ್ಧ ಘೋಷಿಸಿದ, ನಡೆಸಿ ಗೆಲುವು. ಅದು ಭೀಮಾ ತೀರದಲ್ಲಿ ನಡೆದಿದ್ದರಿಂದ ಅದು ಇತಿಹಾಸದಲ್ಲಿ ‘ಭೀಮಾ ಕೋರೇಗಾಂವ್ ಯುದ್ಧ’ವೆಂದೇ ಪ್ರಸಿದ್ಧವಾಗಿದೆ.


ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ ಎನ್‌ಐಎಗೆ ವರ್ಗಾವಣೆ ಪ್ರಶ್ನಿಸಿ ಹೈಕೋರ್ಟ್‌‌ನಲ್ಲಿ ಅರ್ಜಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...