Homeಮುಖಪುಟಭೀಮಾ ಕೋರೆಗಾಂವ್; ಪ್ರಾಧ್ಯಾಪಕರ ಮೇಲಿನ NIA ಕಿರುಕುಳಕ್ಕೆ ವಿದ್ಯಾರ್ಥಿಗಳ ಖಂಡನೆ

ಭೀಮಾ ಕೋರೆಗಾಂವ್; ಪ್ರಾಧ್ಯಾಪಕರ ಮೇಲಿನ NIA ಕಿರುಕುಳಕ್ಕೆ ವಿದ್ಯಾರ್ಥಿಗಳ ಖಂಡನೆ

ಭೀಮಾ ಕೋರೆಗಾಂವ್ ಘಟನೆಗೆ ಸಂಬಂಧಿಸಿದ ಸುಳ್ಳು ಆರೋಪಗಳ ಮೇಲೆ ಹಲವಾರು ವ್ಯಕ್ತಿಗಳನ್ನು ಹಿಂಸಿಸಲಾಗುತ್ತಿದೆ ಎಂಬುದು ಈಗ ಸ್ಪಷ್ಟವಾಗಿದೆ. ಆಘಾತಕಾರಿ ಸಂಗತಿಯೆಂದರೆ ರಾಕೇಶ್ ರಂಜನ್ ಅವರಂತೆಯೇ ಇನ್ನೂ ಯಾರಾದರೂ ಇದೇ ಬಲೆಯಲ್ಲಿ ಸಿಕ್ಕಿಹಾಕಿಕೊಳ್ಳುತ್ತಾರೇನೋ' ಎಂದು ವಿದ್ಯಾರ್ಥಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ರಾಮ್ ಕಾಲೇಜ್ ಆಫ್ ಕಾಮರ್ಸ್‌ನ ಅರ್ಥಶಾಸ್ತ್ರದ ಸಹಾಯಕ ಪ್ರಾಧ್ಯಾಪಕ ರಾಕೇಶ್ ರಂಜನ್‌ ಮತ್ತು ಪ್ರೇಮ್ ಕುಮಾರ್ ವಿಜಯನ್‌ಗೆ ರಾಷ್ಟ್ರೀಯ ತನಿಖಾ ಸಂಸ್ಥೆ ನೀಡುತ್ತಿರುವ ಕಿರುಕುಳವನ್ನು ಜೆಎನ್‌ಯು ಮತ್ತು ದೆಹಲಿ ವಿಶ್ವವಿದ್ಯಾಲಯದ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಹಳೆಯ ವಿದ್ಯಾರ್ಥಿಗಳು ಖಂಡಿಸಿದ್ದಾರೆ.

2018ರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾಲೇಜಿನ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕರಾದ ರಂಜನ್ ಮತ್ತು ಪ್ರೇಮ್ ಕುಮಾರ್ ವಿಜಯನ್ ಅವರನ್ನು ತನಿಖಾ ಸಂಸ್ಥೆಯು ಶುಕ್ರವಾರ ಪ್ರಶ್ನಿಸಿದ್ದಾರೆ. ಈಗಾಗಲೇ ಈ ಪ್ರಕರಣದಲ್ಲಿ 12 ಜನ ಮಾನವ ಹಕ್ಕುಗಳ ಹೋರಾಟಗಾರರನ್ನು ಭಯೋತ್ಪಾದನೆಯ ಆರೋಪದಡಿ ಬಂಧಿಸಲಾಗಿದೆ. ಅವರಲ್ಲಿ ದೆಹಲಿ ವಿಶ್ವವಿದ್ಯಾಲಯದ ಮತ್ತೊಬ್ಬ ಸಹಾಯಕ ಪ್ರಾಧ್ಯಾಪಕ ಹನಿ ಬಾಬು ಎಂ.ಟಿ. ಅವರೂ ಸೇರಿದ್ದಾರೆ.

ರಂಜನ್ ಜೆಎನ್‌ಯುನ ಆರ್ಥಿಕ ಅಧ್ಯಯನ ಮತ್ತು ಯೋಜನಾ ಕೇಂದ್ರದಿಂದ ಬಂದವರಾಗಿದ್ದು, ತಮ್ಮ ಎಂಎ ಮತ್ತು ಎಂಫಿಲ್ ಪದವಿಯನ್ನು ಇಲ್ಲಿಂದಲೇ ಪಡೆದಿದ್ದರು. ಈಗ ಪಿಎಚ್‌ಡಿ ಮಾಡುತ್ತಿದ್ದಾರೆ. ಪ್ರಸ್ತುತ ತಾನು ಪದವಿ ಪಡೆದಿದ್ದ ದೆಹಲಿ ವಿವಿಯಲ್ಲಿಯೇ ಭೋಧಕರಾಗಿದ್ದಾರೆ. ಅಲ್ಲಿ ಅಮಿತ್ ಭದುರಿ, ಜಯತಿ ಘೋಷ್ ಮತ್ತು ಪ್ರಭಾತ್ ಪಟ್ನಾಯಕ್ ಸಹ ಇದ್ದಾರೆ.

ಭೀಮಾ ಕೋರೆಗಾಂವ್ ಘಟನೆಗೆ ಸಂಬಂಧಿಸಿದ ಸುಳ್ಳು ಆರೋಪಗಳ ಮೇಲೆ ಹಲವಾರು ವ್ಯಕ್ತಿಗಳನ್ನು ಹಿಂಸಿಸಲಾಗುತ್ತಿದೆ ಎಂಬುದು ಈಗ ಸ್ಪಷ್ಟವಾಗಿದೆ. ಆಘಾತಕಾರಿ ಸಂಗತಿಯೆಂದರೆ ರಾಕೇಶ್ ರಂಜನ್ ಅವರಂತೆಯೇ ಇನ್ನೂ ಯಾರಾದರೂ ಇದೇ ಬಲೆಯಲ್ಲಿ ಸಿಕ್ಕಿಹಾಕಿಕೊಳ್ಳುತ್ತಾರೇನೋ’ ಎಂದು ವಿದ್ಯಾರ್ಥಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅವರು ಗಂಭೀರ ಶಿಕ್ಷಕರು ಮಾತ್ರವಲ್ಲ, ಯಾವುದೇ ಹಿಂಸಾಚಾರದಲ್ಲಿ ಭಾಗಿಯಾಗಲೂ ಅವರು ಒಪ್ಪುವುದಿಲ್ಲ. ಇಂತಹ ಮುಗ್ಧ ವ್ಯಕ್ತಿಗಳ ಮೇಲಿನ ಈ ಕಿರುಕುಳ ತಕ್ಷಣವೇ ಕೊನೆಗೊಳ್ಳಬೇಕು ಎಂದು ನಾವು ಬಲವಾಗಿ ಪ್ರತಿಪಾದಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇಂತಹ ಕೃತ್ಯಗಳು ನಮ್ಮ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿದೆ, ನಾಗರಿಕ ಸ್ವಾತಂತ್ರ್ಯಗಳನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿರುವ ಅವರು, ಸಾಂವಿಧಾನಿಕ ಕ್ರಮವನ್ನು ಕುಗ್ಗಿಸುವ ಹಾಗೂ ಶಿಕ್ಷಣ ತಜ್ಞರು ಮತ್ತು ಕಾರ್ಯಕರ್ತರ ಮೇಲಿನ ಉದ್ದೇಶಪೂರ್ವಕ ಕಿರುಕುಳವನ್ನು ಕೇಂದ್ರ ಸರ್ಕಾರ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ವಿಷಯದಲ್ಲಿ ರಾಕೇಶ್ ರಂಜನ್ ವಿರುದ್ಧ ತನಿಖಾ ಸಂಸ್ಥೆಯು ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ವಿದ್ಯಾರ್ಥಿ ಪ್ರಾಧ್ಯಾಪಕರು ಒತ್ತಾಯಿಸಿದ್ದಾರೆ.

ರಂಜನ್, ವಿಜಯನ್ ಮತ್ತು ಹನಿ ಬಾಬು ಅವರು, ನಿಷೇಧಿತ ಸಿಪಿಐ ಮಾವೋವಾದಿಗಳೊಂದಿಗಿನ ಸಂಪರ್ಕಕ್ಕಾಗಿ ನಾಗ್ಪುರ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ದೆಹಲಿ ವಿವಿಯ ರಾಜಕೀಯ ವಿಜ್ಞಾನದ ಮಾಜಿ ಸಹಾಯಕ ಪ್ರಾಧ್ಯಾಪಕ ಜಿ.ಎನ್ ಸಾಯಿಬಾಬ ಅವರ ರಕ್ಷಣಾ ಮತ್ತು ಬಿಡುಗಡೆ ಸಮಿತಿಯ ಭಾಗವಾಗಿದ್ದಾರೆ.


ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ಪ್ರಾಧ್ಯಾಪಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಗತಿಪರ ಚಿಂತಕರು ಮತ್ತು ಪ್ರಾಧ್ಯಾಪಕರನ್ನು ಜೈಲಿಗೆ ತಳ್ಳುತ್ತಿರುವ ಆಡಳಿತಾರೂಢರ ವಿರುದ್ಧ ವಿದ್ಯಾರ್ಥಿಗಳು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ದ‌ನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...