Homeಮುಖಪುಟಭೀಮಾ ಕೋರೆಗಾಂವ್: ಪ್ರೊ.ಕೆ.ಸತ್ಯನಾರಾಯಣ ಅವರಿಗೆ ಸಮನ್ಸ್ ಹೊರಡಿಸಿದ NIA

ಭೀಮಾ ಕೋರೆಗಾಂವ್: ಪ್ರೊ.ಕೆ.ಸತ್ಯನಾರಾಯಣ ಅವರಿಗೆ ಸಮನ್ಸ್ ಹೊರಡಿಸಿದ NIA

NIA ಈ ಪ್ರಕರಣದ ನೆಪದಲ್ಲಿ ಅನೇಕರನ್ನು ವಿಚಾರಣೆಯ ಹೆಸರಿನಲ್ಲಿ ಬಂಧಿಸಿ ಹಿಂಸಿಸುತ್ತಿದೆ ಎಂದು ಜೆ.ಎನ್.ಯು ವಿದ್ಯಾರ್ಥಿಗಳು ಆರೋಪಿಸಿ ಈ ಹಿಂದೆಯೇ ಪ್ರತಿಭಟನೆ ನಡೆಸಿದ್ದರು.

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಹೈದರಾಬಾದ್‌ನ EFL ವಿಶ್ವವಿದ್ಯಾನಿಲಯದ ಪ್ರೊ.ಕೆ.ಸತ್ಯನಾರಾಯಣ ಅವರಿಗೆ ಸಮನ್ಸ್ ಹೊರಡಿಸಿದೆ.

ಸಿ.ಆರ್.ಪಿ.ಸಿ ಸೆಕ್ಷನ್ 91 ಮತ್ತು 160ರ ಅಡಿಯಲ್ಲಿ ಸೆಪ್ಟಂಬರ್ 9, 2020ರಂದು ಸಾಕ್ಷಿಯಾಗಿ ಹಾಜರಾಗಲು NIA ಸಮನ್ಸ್ ಹೊರಡಿಸಿದೆ. “ಇದೇ ದಿನಾಂಕದಂದು ವಿಚಾರಣೆಗೆ ಹಾಜರಾಗಲು ಪತ್ರಕರ್ತರು ಮತ್ತು ನನ್ನ ಸಹೋದರರಾದ ಕೆ.ವಿ.ಕುರ್ಮನಾಥ್ ಅವರಿಗೂ ಸಮನ್ಸ್ ಜಾರಿಗೊಳಿಸಿದೆ” ಎಂದು ಸತ್ಯನಾರಾಯಣ್ ಹೇಳಿದ್ದಾರೆ.

“ನಿಮಗೆ ತಿಳಿದಿರುವಂತೆ, ನನ್ನ ಮಾವ, ಕ್ರಾಂತಿಕಾರಿ ಕವಿ ವರವರ ರಾವ್ ವಿರುದ್ಧ ಸಾಕ್ಷ್ಯಗಳನ್ನು ಸಂಗ್ರಹಿಸುವ ನೆಪದಲ್ಲಿ ನನ್ನ ಫ್ಲಾಟ್ ಮೇಲೆ ಪುಣೆ ಪೊಲೀಸರು ಆಗಸ್ಟ್ 2018 ರಲ್ಲಿ ದಾಳಿ ನಡೆಸಿದ್ದರು. ನಾನು ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಯಾವುದೇ ರೀತಿಯಲ್ಲಿ ಸಂಪರ್ಕ ಹೊಂದಿಲ್ಲ ಎಂದು ಹೇಳಿದ್ದೇನೆ. ವರವರ ರಾವ್ ನನ್ನ ಸಂಬಂಧಿ ಎನ್ನುವ ಕಾರಣಕ್ಕೆ, ನನ್ನ ಮನೆಯ ಮೇಲೆ ದಾಳಿ ಮಾಡಿ, ನನಗೆ ಮಾನಸಿಕ ಹಿಂಸೆ ನೀಡಲಾಗುತ್ತಿತ್ತು” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್; ಪ್ರಾಧ್ಯಾಪಕರ ಮೇಲಿನ NIA ಕಿರುಕುಳಕ್ಕೆ ವಿದ್ಯಾರ್ಥಿಗಳ ಖಂಡನೆ

“ನಾನು ವರವರ ರಾವ್‌ಗೆ ಸಂಬಂಧಿ ಎಂಬುದು ಸತ್ಯ. ಆದರೆ ಭೀಮಾ ಕೋರೆಗಾಂವ್ ಪ್ರಕರಣಕ್ಕೂ ನನಗೆ ಯಾವುದೇ ಸಂಬಂಧವಿಲ್ಲ ಎಂದು ಮತ್ತೊಮ್ಮೆ ಹೇಳುತ್ತೇನೆ. ವರವಾರ ರಾವ್ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದೆ. ಜೊತೆಗೆ ಮುಂಬೈನಲ್ಲಿ ಸಾಂಕ್ರಾಮಿಕ ರೋಗವು ವೇಗವಾಗಿ ಹರಡುತ್ತಿರುವ ಸಮಯದಲ್ಲಿ NIA ಸಮನ್ಸ್ ನಮ್ಮ ಕುಟುಂಬದ ಸಂಕಟವನ್ನು ಇನ್ನಷ್ಟು ಹೆಚ್ಚಿಸಿದೆ” ಎಂದು ಅವರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ.

NIA ಈ ಪ್ರಕರಣದ ನೆಪದಲ್ಲಿ ಅನೇಕರನ್ನು ವಿಚಾರಣೆಯ ಹೆಸರಿನಲ್ಲಿ ಬಂಧಿಸಿ ಹಿಂಸಿಸುತ್ತಿದೆ ಎಂದು ಜೆ.ಎನ್.ಯು ವಿದ್ಯಾರ್ಥಿಗಳು ಆರೋಪಿಸಿ ಈ ಹಿಂದೆಯೇ ಪ್ರತಿಭಟನೆ ನಡೆಸಿದ್ದರು.

ಈಗಾಗಲೇ ಈ ಪ್ರಕರಣದಲ್ಲಿ 12 ಜನ ಮಾನವ ಹಕ್ಕುಗಳ ಹೋರಾಟಗಾರರನ್ನು ಭಯೋತ್ಪಾದನೆಯ ಆರೋಪದಡಿ ಬಂಧಿಸಲಾಗಿದೆ. ಭೀಮಾ ಕೋರೆಗಾಂವ್ ಘಟನೆಗೆ ಸಂಬಂಧಿಸಿದ ಸುಳ್ಳು ಆರೋಪಗಳ ಮೇಲೆ ಹಲವಾರು ವ್ಯಕ್ತಿಗಳನ್ನು ಹಿಂಸಿಸಲಾಗುತ್ತಿದೆ ಎಂಬುದು ಈಗ ಸ್ಪಷ್ಟವಾಗಿದೆ. ಇಂತಹ ಕೃತ್ಯಗಳು ನಮ್ಮ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿದೆ, ನಾಗರಿಕ ಸ್ವಾತಂತ್ರ್ಯಗಳನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿರುವ ಅವರು, ಸಾಂವಿಧಾನಿಕ ಕ್ರಮವನ್ನು ಕುಗ್ಗಿಸುವ ಹಾಗೂ ಶಿಕ್ಷಣ ತಜ್ಞರು ಮತ್ತು ಕಾರ್ಯಕರ್ತರ ಮೇಲಿನ ಉದ್ದೇಶಪೂರ್ವಕ ಕಿರುಕುಳವನ್ನು ಕೇಂದ್ರ ಸರ್ಕಾರ ನಿಲ್ಲಿಸಬೇಕು ಎಂದು ಅವರು ಒತ್ತಾಯಿಸಿದ್ದರು.


ಇದನ್ನೂ ಓದಿ: ಭೀಮರಾಜ್ಯದ ಮುಂದೆ ರಾಮರಾಜ್ಯ ಧೂಳಿಪಟವಾಗುತ್ತದೆ; ಒಂದು ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...