Homeಮುಖಪುಟಭೀಮಾ ಕೋರೆಗಾಂವ್ ತ್ಯಾಗದ ಇತಿಹಾಸ ಅಳಿಸಲು ಕೋಮುವಾದಿಗಳ ಯತ್ನ: ಶರದ್ ಪವಾರ್

ಭೀಮಾ ಕೋರೆಗಾಂವ್ ತ್ಯಾಗದ ಇತಿಹಾಸ ಅಳಿಸಲು ಕೋಮುವಾದಿಗಳ ಯತ್ನ: ಶರದ್ ಪವಾರ್

- Advertisement -
- Advertisement -

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿರುವ ಭೀಮಾ ಕೋರೆಗಾಂವ್‌ನ ಇತಿಹಾಸವು ಜನರ ತ್ಯಾಗದ ಇತಿಹಾಸವಾಗಿದ್ದು, ಆದರೆ ಕೆಲವು ಕೋಮುವಾದಿಗಳು ಅದನ್ನು ಅಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. 1818 ರ ಕೋರೆಗಾಂವ್ ಭೀಮಾ ಕದನದಲ್ಲಿ ದಲಿತರನ್ನು ಒಳಗೊಂಡ ಬ್ರಿಟಿಷ್ ಸೈನ್ಯವು ಪೇಶ್ವೆಗಳನ್ನು ಸೋಲಿಸಿತ್ತು. ಈ ಹೋರಾಟವನ್ನು ದಲಿತ ಸ್ವಾಭಿಮಾನದ ಸಂಕೇತವಾಗಿ ಇತಿಹಾಸದಲ್ಲಿ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಯುದ್ಧದ ಸ್ಮರಣಾರ್ಥವಾಗಿ 2017 ರ ಡಿಸೆಂಬರ್ 31 ರಂದು ಪುಣೆಯಲ್ಲಿ ಎಲ್ಗರ್ ಪರಿಷತ್ ಸಮಾವೇಶವನ್ನು ಆಯೋಜಿಸಿತ್ತು. ಆದರೆ ಒಂದು ದಿನದ ನಂತರ ಅಲ್ಲಿ ಹಿಂಸಾಚಾರ ಭುಗಿಲೆದ್ದಿತು. ಹಿಂಸಾಚಾರದ ಕುರಿತು ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರವು ಫೆಬ್ರವರಿ 2018 ರಲ್ಲಿ ಮಾಜಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆಎನ್ ಪಟೇಲ್ ಅವರ ನೇತೃತ್ವದಲ್ಲಿ ಕೋರೆಗಾಂವ್ ಭೀಮಾ ವಿಚಾರಣಾ ಆಯೋಗವನ್ನು ರಚಿಸಿತು.

ಈ ಆಯೋಗದ ಮುಂದೆ ಕೆಲವು ಸಾಕ್ಷಿಗಳನ್ನು ಪ್ರತಿನಿಧಿಸುತ್ತಿರುವ ವಕೀಲ ರಾಹುಲ್ ಮಖರೆ ಅವರು ಎನ್‌ಸಿಪಿ (ಎಸ್‌ಪಿ) ಗೆ ಸೇರ್ಪಡೆಗೊಂಡಿದ್ದಾರೆ. ಸೋಮವಾರ ನಡೆದ ಈ ಕಾರ್ಯಕ್ರಮದಲ್ಲಿ ಶರದ್ ಪವಾರ್, ಹಿಂಸಾಚಾರವು ರಾಜ್ಯ ಮತ್ತು ದೇಶದಲ್ಲಿ ಪ್ರಕ್ಷುಬ್ಧತೆಯನ್ನು ಉಂಟುಮಾಡಿದೆ ಎಂದು ಹೇಳಿದ್ದಾರೆ.

ಇದನ್ನೂಓದಿ: ನಗರಗಳಲ್ಲಿ ಒಳಚರಂಡಿ, ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಶೇ.92ರಷ್ಟು ಕಾರ್ಮಿಕರು ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗದವರು : ವರದಿ

”ಒಂದು ದಿನ ಆಯೋಗದ ಮುಂದೆ ಹಾಜರಾಗುವಂತೆ ನನಗೆ ಸಮನ್ಸ್ ಬಂದಿತ್ತು. ಅಡ್ಡಪರೀಕ್ಷೆಯ ವೇಳೆ ಕೆಲವರು ಕೆಲವು ವಿಷಯಗಳನ್ನು ಹೇಳುವಂತೆ ಒತ್ತಾಯಿಸಿದರು. ಕೋರೆಗಾಂವ್ ಭೀಮಾ ಇತಿಹಾಸವು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಜನರ ಇತಿಹಾಸವಾಗಿದೆ. ಆದರೆ ಕೆಲವು ಕೋಮುವಾದಿಗಳು ಆ ಇತಿಹಾಸವನ್ನು ಅಳಿಸಿ ಹಾಕಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಆರೋಪಿಸಿದರು.

“ಕೆಲವು ಯುವಕರು ಸಮಾಜದ ಮುಂದೆ ಸತ್ಯವನ್ನು ಹೇಳುತ್ತಿದ್ದಾರೆ. ಅವರಲ್ಲಿ ಮಖರೆ ಕೂಡ ಇದ್ದಾರೆ” ಎಂದು ಶರದ್ ಪವಾರ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜಕ್ಕೆ ಅಪಾಯಕಾರಿ ಮತ್ತು ಅವರ ಮನಸ್ಸಿನಲ್ಲಿರುವ ಚಿಂತನೆಯು “ಸಮಾನತೆಗೆ ಹಾನಿಕಾರಕ” ಎಂದು ಪವಾರ್ ಹೇಳಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್ ಅವರು ನಮಗೆ ನೀಡಿದ ಸಂವಿಧಾನಕ್ಕೆ ಇಂದಿನ ಸರ್ಕಾರ ಬೆದರಿಕೆ ಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಪವಾರ್ ಹೇಳಿದ್ದು, ಬಿಜೆಪಿಯ ನಾಯಕರು ತಮ್ಮ ಪಕ್ಷವು 400 ಸ್ಥಾನಗಳನ್ನು ಪಡೆದರೆ ಸಂವಿಧಾನವನ್ನು ಬದಲಾಯಿಸುತ್ತದೆ ಎಂದು 2024ರ ಲೋಕಸಭೆ ಚುನಾವಣೆ ಹೇಳಿದ್ದಾರೆ ಎಂದು ಅವರು ಉಲ್ಲೇಖಿಸಿದರು.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...