Homeಚಳವಳಿಭೀಮಾ ಕೋರೆಗಾಂವ್: ಗೌತಮ್ ನವಲಖಾ ಜಾಮೀನು ಅರ್ಜಿ ತಿರಸ್ಕರಿಸಿದ ಎನ್‌ಐಎ ವಿಶೇಷ ನ್ಯಾಯಾಲಯ

ಭೀಮಾ ಕೋರೆಗಾಂವ್: ಗೌತಮ್ ನವಲಖಾ ಜಾಮೀನು ಅರ್ಜಿ ತಿರಸ್ಕರಿಸಿದ ಎನ್‌ಐಎ ವಿಶೇಷ ನ್ಯಾಯಾಲಯ

ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ ಆರೋಪ ಹೊರಿಸಲಾಗಿರುವ ಈ ಪ್ರಕರಣದ ಎಲ್ಲ ಆರೋಪಿಗಳಿಗೆ ಮುಂಬೈನ ವಿಶೇಷ ನ್ಯಾಯಾಲಯ ಪದೇ ಪದೇ ಜಾಮೀನು ನಿರಾಕರಿಸಿದೆ ಎಂಬುವುದು ಗಮನಾರ್ಹವಾಗಿದೆ.

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಗೌತಮ್ ನವಲಖಾ ಅವರು 90 ದಿನಗಳ ಕಾಲ ಬಂಧನದಲ್ಲಿದ್ದು, ಕ್ರಿಮಿನಲ್ ಪ್ರೊಸೀಜರ್ (ಸಿಆರ್‌ಪಿಸಿ) ಯ ಸೆಕ್ಷನ್ 167 ರ ಅಡಿಯಲ್ಲಿ ಡೀಫಾಲ್ಟ್ ಜಾಮೀನು ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಮುಂಬೈನ ಎನ್‌ಐಎ ವಿಶೇಷ ನ್ಯಾಯಾಲಯವು ತಿರಸ್ಕರಿಸಿದೆ.

ಪ್ರಸ್ತುತ ನವೀ ಮುಂಬಯಿಯ ತಾಲೋಜ ಜೈಲಿನಲ್ಲಿರುವ ನಾಗರಿಕ ಹಕ್ಕುಗಳ ಹೋರಾಟಗಾರ ಏಪ್ರಿಲ್ 14 ರಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ಮುಂದೆ ಶರಣಾಗಿದ್ದರು. ಅವರನ್ನು ಈ ಹಿಂದೆ 2018ರ ಆಗಸ್ಟ್ 29 ಮತ್ತು ಅಕ್ಟೋಬರ್ 1ರ ನಡುವೆ ಗೃಹಬಂಧನದಲ್ಲಿರಿಸಲಾಗಿತ್ತು.

ನವಲಖಾ ಅವರ ಜಾಮೀನು ಅರ್ಜಿ ಪರ ವಾದಿಸಿದ ವಕೀಲರು, “ನ್ಯಾಯಾಲಯವು ಗೃಹಬಂಧನವನ್ನು ತನಿಖಾ ಸಂಸ್ಥೆಗಳ ವಶದಲ್ಲಿರುವ ಅವಧಿಯೆಂದು ಪರಿಗಣಿಸಬೇಕು. ತನಿಖಾ ಸಂಸ್ಥೆ 90 ದಿನಗಳ ನಿಗದಿತ ಅವಧಿಯೊಳಗೆ ತನ್ನ ಚಾರ್ಜ್‌ಶೀಟ್ ಸಲ್ಲಿಸಿಲ್ಲ. ಹಾಗಾಗಿ ಅವರಿಗೆ ಜಾಮೀನು ನೀಡಬೇಕೆಂದು” ಒತ್ತಾಯಿಸಿದ್ದಾರೆ.

ಎನ್‌ಐಎ ಪರವಾಗಿ ಹಾಜರಾಗಿದ್ದ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್, ಡೀಫಾಲ್ಟ್ ಜಾಮೀನು ಕೋರಿಕೆಯು ಸಮರ್ಥನೀಯವಲ್ಲ. ಸಿಆರ್‌ಪಿಸಿಯ ಸೆಕ್ಷನ್ 167ರ ಅರ್ಥದಲ್ಲಿ ಗೃಹಬಂಧನವು ತನಿಖಾ ಕಸ್ಟಡಿಯಾಗುವುದಿಲ್ಲ ಎಂದು ವಾದಿಸಿದ್ದಾರೆ.

ಬಂಧನ ಸಮಯದಲ್ಲಿ ಗೃಹಬಂಧನ ಅವಧಿಯನ್ನು ಸೇರಿಸಬಹುದು ಎಂಬ ವಾದವನ್ನು ವಿಶೇಷ ನ್ಯಾಯಾಧೀಶ ದಿನೇಶ್ ಕೊಥಾಲಿಕರ್ ತಿರಸ್ಕರಿಸಿದರು. ಗೃಹಬಂಧನದ ವೇಳೆ ತನಿಖೆಗಾಗಿ ನವಲಖಾ ಎಂದಿಗೂ ಪೊಲೀಸರ ವಶದಲ್ಲಿರಲಿಲ್ಲ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ಗೌತಮ್ ನವಲಖಾ ಹಾಗೂ ಇನ್ನೊಬ್ಬ ಸಾಮಾಜಿಕ ಕಾರ್ಯಕರ್ತರಾದ ಡಾ. ಆನಂದ್ ತೇಲ್ತುಂಬ್ಡೆ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಗೆ 90 ರಿಂದ 180 ದಿನಗಳವರೆಗೆ ವಿಸ್ತರಿಸುವ ಕೋರಿ ಎನ್‌ಐಎ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ಅಂಗೀಕರಿಸಿದೆ.

ಈ ವರ್ಷದ ಜನವರಿಯಲ್ಲಿ ಪುಣೆ ಪೊಲೀಸರಿಂದ ಎನ್‌ಐಎಗೆ ವರ್ಗಾಯಿಸಲ್ಪಟ್ಟ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಅವರೊಂದಿಗೆ ಇತರ 10 ಮಂದಿಯನ್ನು ಬಂಧಿಸಲಾಗಿದೆ.

ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ ಆರೋಪ ಹೊರಿಸಲಾಗಿರುವ ಈ ಪ್ರಕರಣದ ಎಲ್ಲ ಆರೋಪಿಗಳಿಗೆ ಮುಂಬೈನ ವಿಶೇಷ ನ್ಯಾಯಾಲಯ ಪದೇ ಪದೇ ಜಾಮೀನು ನಿರಾಕರಿಸಿದೆ ಎಂಬುವುದು ಗಮನಾರ್ಹವಾಗಿದೆ.

ಇತ್ತೀಚೆಗೆ ಜೂನ್ 26 ರಂದು ತಾಲೂಜಾ ಜೈಲಿನಲ್ಲಿರುವ 80 ವರ್ಷದ ತೆಲುಗು ಕವಿ ಹಾಗೂ ಸಾಮಾಜಿಕ ಕಾರ್ಯಕರ್ತ ವರವರ ರಾವ್ ಅವರಿಗೆ ಜಾಮೀನು ನಿರಾಕರಿಸಲಾಗಿತ್ತು. ಕವಿಯ ಅನಾರೋಗ್ಯದ ಬಗ್ಗೆ ವ್ಯಾಪಕ ವರದಿಗಳು ಹೊರಬಂದು, ಅವರ ಕುಟುಂಬ ಕೂಡಾ ಪತ್ರಿಕಾಗೋಷ್ಟಿ ನಡೆಸಿ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದವು.

ಡಿಸೆಂಬರ್ 31, 2017 ರಂದು ಪುಣೆಯ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಭಾಷಣಗಳಿಂದಾಗಿ ಮರುದಿನ ಭೀಮಾ ಕೊರೆಗಾಂವ್  ಸ್ಮಾರಕದ ಬಳಿ ಹಿಂಸಾಚಾರ ಉಂಟಾಯಿತು, ಇದು ಕ್ರಿಮಿನಲ್ ಪಿತೂರಿ ಎಂಬ ಆರೋಪ ಇವರ ಮೇಲಿದೆ.


ಓದಿ: ತಕ್ಷಣದ ವೈದ್ಯಕೀಯ ತಪಾಸಣೆ ಕೋರಿ ಬಾಂಬೆ ಹೈಕೋರ್ಟ್‌‌ಗೆ ಮೊರೆ ಹೋದ ವರವರ ರಾವ್; ಭೀಮಾ ಕೋರೆಗಾಂವ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...