Homeಚಳವಳಿಭೀಮಾ ಕೋರೆಗಾಂವ್: ಗೌತಮ್ ನವಲಖಾ ಜಾಮೀನು ಅರ್ಜಿ ತಿರಸ್ಕರಿಸಿದ ಎನ್‌ಐಎ ವಿಶೇಷ ನ್ಯಾಯಾಲಯ

ಭೀಮಾ ಕೋರೆಗಾಂವ್: ಗೌತಮ್ ನವಲಖಾ ಜಾಮೀನು ಅರ್ಜಿ ತಿರಸ್ಕರಿಸಿದ ಎನ್‌ಐಎ ವಿಶೇಷ ನ್ಯಾಯಾಲಯ

ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ ಆರೋಪ ಹೊರಿಸಲಾಗಿರುವ ಈ ಪ್ರಕರಣದ ಎಲ್ಲ ಆರೋಪಿಗಳಿಗೆ ಮುಂಬೈನ ವಿಶೇಷ ನ್ಯಾಯಾಲಯ ಪದೇ ಪದೇ ಜಾಮೀನು ನಿರಾಕರಿಸಿದೆ ಎಂಬುವುದು ಗಮನಾರ್ಹವಾಗಿದೆ.

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಗೌತಮ್ ನವಲಖಾ ಅವರು 90 ದಿನಗಳ ಕಾಲ ಬಂಧನದಲ್ಲಿದ್ದು, ಕ್ರಿಮಿನಲ್ ಪ್ರೊಸೀಜರ್ (ಸಿಆರ್‌ಪಿಸಿ) ಯ ಸೆಕ್ಷನ್ 167 ರ ಅಡಿಯಲ್ಲಿ ಡೀಫಾಲ್ಟ್ ಜಾಮೀನು ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಮುಂಬೈನ ಎನ್‌ಐಎ ವಿಶೇಷ ನ್ಯಾಯಾಲಯವು ತಿರಸ್ಕರಿಸಿದೆ.

ಪ್ರಸ್ತುತ ನವೀ ಮುಂಬಯಿಯ ತಾಲೋಜ ಜೈಲಿನಲ್ಲಿರುವ ನಾಗರಿಕ ಹಕ್ಕುಗಳ ಹೋರಾಟಗಾರ ಏಪ್ರಿಲ್ 14 ರಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ಮುಂದೆ ಶರಣಾಗಿದ್ದರು. ಅವರನ್ನು ಈ ಹಿಂದೆ 2018ರ ಆಗಸ್ಟ್ 29 ಮತ್ತು ಅಕ್ಟೋಬರ್ 1ರ ನಡುವೆ ಗೃಹಬಂಧನದಲ್ಲಿರಿಸಲಾಗಿತ್ತು.

ನವಲಖಾ ಅವರ ಜಾಮೀನು ಅರ್ಜಿ ಪರ ವಾದಿಸಿದ ವಕೀಲರು, “ನ್ಯಾಯಾಲಯವು ಗೃಹಬಂಧನವನ್ನು ತನಿಖಾ ಸಂಸ್ಥೆಗಳ ವಶದಲ್ಲಿರುವ ಅವಧಿಯೆಂದು ಪರಿಗಣಿಸಬೇಕು. ತನಿಖಾ ಸಂಸ್ಥೆ 90 ದಿನಗಳ ನಿಗದಿತ ಅವಧಿಯೊಳಗೆ ತನ್ನ ಚಾರ್ಜ್‌ಶೀಟ್ ಸಲ್ಲಿಸಿಲ್ಲ. ಹಾಗಾಗಿ ಅವರಿಗೆ ಜಾಮೀನು ನೀಡಬೇಕೆಂದು” ಒತ್ತಾಯಿಸಿದ್ದಾರೆ.

ಎನ್‌ಐಎ ಪರವಾಗಿ ಹಾಜರಾಗಿದ್ದ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್, ಡೀಫಾಲ್ಟ್ ಜಾಮೀನು ಕೋರಿಕೆಯು ಸಮರ್ಥನೀಯವಲ್ಲ. ಸಿಆರ್‌ಪಿಸಿಯ ಸೆಕ್ಷನ್ 167ರ ಅರ್ಥದಲ್ಲಿ ಗೃಹಬಂಧನವು ತನಿಖಾ ಕಸ್ಟಡಿಯಾಗುವುದಿಲ್ಲ ಎಂದು ವಾದಿಸಿದ್ದಾರೆ.

ಬಂಧನ ಸಮಯದಲ್ಲಿ ಗೃಹಬಂಧನ ಅವಧಿಯನ್ನು ಸೇರಿಸಬಹುದು ಎಂಬ ವಾದವನ್ನು ವಿಶೇಷ ನ್ಯಾಯಾಧೀಶ ದಿನೇಶ್ ಕೊಥಾಲಿಕರ್ ತಿರಸ್ಕರಿಸಿದರು. ಗೃಹಬಂಧನದ ವೇಳೆ ತನಿಖೆಗಾಗಿ ನವಲಖಾ ಎಂದಿಗೂ ಪೊಲೀಸರ ವಶದಲ್ಲಿರಲಿಲ್ಲ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ಗೌತಮ್ ನವಲಖಾ ಹಾಗೂ ಇನ್ನೊಬ್ಬ ಸಾಮಾಜಿಕ ಕಾರ್ಯಕರ್ತರಾದ ಡಾ. ಆನಂದ್ ತೇಲ್ತುಂಬ್ಡೆ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಗೆ 90 ರಿಂದ 180 ದಿನಗಳವರೆಗೆ ವಿಸ್ತರಿಸುವ ಕೋರಿ ಎನ್‌ಐಎ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ಅಂಗೀಕರಿಸಿದೆ.

ಈ ವರ್ಷದ ಜನವರಿಯಲ್ಲಿ ಪುಣೆ ಪೊಲೀಸರಿಂದ ಎನ್‌ಐಎಗೆ ವರ್ಗಾಯಿಸಲ್ಪಟ್ಟ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಅವರೊಂದಿಗೆ ಇತರ 10 ಮಂದಿಯನ್ನು ಬಂಧಿಸಲಾಗಿದೆ.

ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ ಆರೋಪ ಹೊರಿಸಲಾಗಿರುವ ಈ ಪ್ರಕರಣದ ಎಲ್ಲ ಆರೋಪಿಗಳಿಗೆ ಮುಂಬೈನ ವಿಶೇಷ ನ್ಯಾಯಾಲಯ ಪದೇ ಪದೇ ಜಾಮೀನು ನಿರಾಕರಿಸಿದೆ ಎಂಬುವುದು ಗಮನಾರ್ಹವಾಗಿದೆ.

ಇತ್ತೀಚೆಗೆ ಜೂನ್ 26 ರಂದು ತಾಲೂಜಾ ಜೈಲಿನಲ್ಲಿರುವ 80 ವರ್ಷದ ತೆಲುಗು ಕವಿ ಹಾಗೂ ಸಾಮಾಜಿಕ ಕಾರ್ಯಕರ್ತ ವರವರ ರಾವ್ ಅವರಿಗೆ ಜಾಮೀನು ನಿರಾಕರಿಸಲಾಗಿತ್ತು. ಕವಿಯ ಅನಾರೋಗ್ಯದ ಬಗ್ಗೆ ವ್ಯಾಪಕ ವರದಿಗಳು ಹೊರಬಂದು, ಅವರ ಕುಟುಂಬ ಕೂಡಾ ಪತ್ರಿಕಾಗೋಷ್ಟಿ ನಡೆಸಿ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದವು.

ಡಿಸೆಂಬರ್ 31, 2017 ರಂದು ಪುಣೆಯ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಭಾಷಣಗಳಿಂದಾಗಿ ಮರುದಿನ ಭೀಮಾ ಕೊರೆಗಾಂವ್  ಸ್ಮಾರಕದ ಬಳಿ ಹಿಂಸಾಚಾರ ಉಂಟಾಯಿತು, ಇದು ಕ್ರಿಮಿನಲ್ ಪಿತೂರಿ ಎಂಬ ಆರೋಪ ಇವರ ಮೇಲಿದೆ.


ಓದಿ: ತಕ್ಷಣದ ವೈದ್ಯಕೀಯ ತಪಾಸಣೆ ಕೋರಿ ಬಾಂಬೆ ಹೈಕೋರ್ಟ್‌‌ಗೆ ಮೊರೆ ಹೋದ ವರವರ ರಾವ್; ಭೀಮಾ ಕೋರೆಗಾಂವ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...