Homeಚಳವಳಿಭೀಮಾ ಕೋರೆಗಾಂವ್: ಗೌತಮ್ ನವಲಖಾ ಜಾಮೀನು ಅರ್ಜಿ ತಿರಸ್ಕರಿಸಿದ ಎನ್‌ಐಎ ವಿಶೇಷ ನ್ಯಾಯಾಲಯ

ಭೀಮಾ ಕೋರೆಗಾಂವ್: ಗೌತಮ್ ನವಲಖಾ ಜಾಮೀನು ಅರ್ಜಿ ತಿರಸ್ಕರಿಸಿದ ಎನ್‌ಐಎ ವಿಶೇಷ ನ್ಯಾಯಾಲಯ

ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ ಆರೋಪ ಹೊರಿಸಲಾಗಿರುವ ಈ ಪ್ರಕರಣದ ಎಲ್ಲ ಆರೋಪಿಗಳಿಗೆ ಮುಂಬೈನ ವಿಶೇಷ ನ್ಯಾಯಾಲಯ ಪದೇ ಪದೇ ಜಾಮೀನು ನಿರಾಕರಿಸಿದೆ ಎಂಬುವುದು ಗಮನಾರ್ಹವಾಗಿದೆ.

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಗೌತಮ್ ನವಲಖಾ ಅವರು 90 ದಿನಗಳ ಕಾಲ ಬಂಧನದಲ್ಲಿದ್ದು, ಕ್ರಿಮಿನಲ್ ಪ್ರೊಸೀಜರ್ (ಸಿಆರ್‌ಪಿಸಿ) ಯ ಸೆಕ್ಷನ್ 167 ರ ಅಡಿಯಲ್ಲಿ ಡೀಫಾಲ್ಟ್ ಜಾಮೀನು ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಮುಂಬೈನ ಎನ್‌ಐಎ ವಿಶೇಷ ನ್ಯಾಯಾಲಯವು ತಿರಸ್ಕರಿಸಿದೆ.

ಪ್ರಸ್ತುತ ನವೀ ಮುಂಬಯಿಯ ತಾಲೋಜ ಜೈಲಿನಲ್ಲಿರುವ ನಾಗರಿಕ ಹಕ್ಕುಗಳ ಹೋರಾಟಗಾರ ಏಪ್ರಿಲ್ 14 ರಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ಮುಂದೆ ಶರಣಾಗಿದ್ದರು. ಅವರನ್ನು ಈ ಹಿಂದೆ 2018ರ ಆಗಸ್ಟ್ 29 ಮತ್ತು ಅಕ್ಟೋಬರ್ 1ರ ನಡುವೆ ಗೃಹಬಂಧನದಲ್ಲಿರಿಸಲಾಗಿತ್ತು.

ನವಲಖಾ ಅವರ ಜಾಮೀನು ಅರ್ಜಿ ಪರ ವಾದಿಸಿದ ವಕೀಲರು, “ನ್ಯಾಯಾಲಯವು ಗೃಹಬಂಧನವನ್ನು ತನಿಖಾ ಸಂಸ್ಥೆಗಳ ವಶದಲ್ಲಿರುವ ಅವಧಿಯೆಂದು ಪರಿಗಣಿಸಬೇಕು. ತನಿಖಾ ಸಂಸ್ಥೆ 90 ದಿನಗಳ ನಿಗದಿತ ಅವಧಿಯೊಳಗೆ ತನ್ನ ಚಾರ್ಜ್‌ಶೀಟ್ ಸಲ್ಲಿಸಿಲ್ಲ. ಹಾಗಾಗಿ ಅವರಿಗೆ ಜಾಮೀನು ನೀಡಬೇಕೆಂದು” ಒತ್ತಾಯಿಸಿದ್ದಾರೆ.

ಎನ್‌ಐಎ ಪರವಾಗಿ ಹಾಜರಾಗಿದ್ದ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್, ಡೀಫಾಲ್ಟ್ ಜಾಮೀನು ಕೋರಿಕೆಯು ಸಮರ್ಥನೀಯವಲ್ಲ. ಸಿಆರ್‌ಪಿಸಿಯ ಸೆಕ್ಷನ್ 167ರ ಅರ್ಥದಲ್ಲಿ ಗೃಹಬಂಧನವು ತನಿಖಾ ಕಸ್ಟಡಿಯಾಗುವುದಿಲ್ಲ ಎಂದು ವಾದಿಸಿದ್ದಾರೆ.

ಬಂಧನ ಸಮಯದಲ್ಲಿ ಗೃಹಬಂಧನ ಅವಧಿಯನ್ನು ಸೇರಿಸಬಹುದು ಎಂಬ ವಾದವನ್ನು ವಿಶೇಷ ನ್ಯಾಯಾಧೀಶ ದಿನೇಶ್ ಕೊಥಾಲಿಕರ್ ತಿರಸ್ಕರಿಸಿದರು. ಗೃಹಬಂಧನದ ವೇಳೆ ತನಿಖೆಗಾಗಿ ನವಲಖಾ ಎಂದಿಗೂ ಪೊಲೀಸರ ವಶದಲ್ಲಿರಲಿಲ್ಲ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ಗೌತಮ್ ನವಲಖಾ ಹಾಗೂ ಇನ್ನೊಬ್ಬ ಸಾಮಾಜಿಕ ಕಾರ್ಯಕರ್ತರಾದ ಡಾ. ಆನಂದ್ ತೇಲ್ತುಂಬ್ಡೆ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಗೆ 90 ರಿಂದ 180 ದಿನಗಳವರೆಗೆ ವಿಸ್ತರಿಸುವ ಕೋರಿ ಎನ್‌ಐಎ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ಅಂಗೀಕರಿಸಿದೆ.

ಈ ವರ್ಷದ ಜನವರಿಯಲ್ಲಿ ಪುಣೆ ಪೊಲೀಸರಿಂದ ಎನ್‌ಐಎಗೆ ವರ್ಗಾಯಿಸಲ್ಪಟ್ಟ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಅವರೊಂದಿಗೆ ಇತರ 10 ಮಂದಿಯನ್ನು ಬಂಧಿಸಲಾಗಿದೆ.

ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ ಆರೋಪ ಹೊರಿಸಲಾಗಿರುವ ಈ ಪ್ರಕರಣದ ಎಲ್ಲ ಆರೋಪಿಗಳಿಗೆ ಮುಂಬೈನ ವಿಶೇಷ ನ್ಯಾಯಾಲಯ ಪದೇ ಪದೇ ಜಾಮೀನು ನಿರಾಕರಿಸಿದೆ ಎಂಬುವುದು ಗಮನಾರ್ಹವಾಗಿದೆ.

ಇತ್ತೀಚೆಗೆ ಜೂನ್ 26 ರಂದು ತಾಲೂಜಾ ಜೈಲಿನಲ್ಲಿರುವ 80 ವರ್ಷದ ತೆಲುಗು ಕವಿ ಹಾಗೂ ಸಾಮಾಜಿಕ ಕಾರ್ಯಕರ್ತ ವರವರ ರಾವ್ ಅವರಿಗೆ ಜಾಮೀನು ನಿರಾಕರಿಸಲಾಗಿತ್ತು. ಕವಿಯ ಅನಾರೋಗ್ಯದ ಬಗ್ಗೆ ವ್ಯಾಪಕ ವರದಿಗಳು ಹೊರಬಂದು, ಅವರ ಕುಟುಂಬ ಕೂಡಾ ಪತ್ರಿಕಾಗೋಷ್ಟಿ ನಡೆಸಿ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದವು.

ಡಿಸೆಂಬರ್ 31, 2017 ರಂದು ಪುಣೆಯ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಭಾಷಣಗಳಿಂದಾಗಿ ಮರುದಿನ ಭೀಮಾ ಕೊರೆಗಾಂವ್  ಸ್ಮಾರಕದ ಬಳಿ ಹಿಂಸಾಚಾರ ಉಂಟಾಯಿತು, ಇದು ಕ್ರಿಮಿನಲ್ ಪಿತೂರಿ ಎಂಬ ಆರೋಪ ಇವರ ಮೇಲಿದೆ.


ಓದಿ: ತಕ್ಷಣದ ವೈದ್ಯಕೀಯ ತಪಾಸಣೆ ಕೋರಿ ಬಾಂಬೆ ಹೈಕೋರ್ಟ್‌‌ಗೆ ಮೊರೆ ಹೋದ ವರವರ ರಾವ್; ಭೀಮಾ ಕೋರೆಗಾಂವ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...