Homeಚಳವಳಿಭೀಮಾ ಕೊರೆಗಾಂವ್‌‌: ಪ್ರೊ. ಹನಿ ಬಾಬು ಆರೋಗ್ಯ ವರದಿ ಸಲ್ಲಿಸುವಂತೆ ಹೈಕೋರ್ಟ್‌ ನಿರ್ದೇಶನ

ಭೀಮಾ ಕೊರೆಗಾಂವ್‌‌: ಪ್ರೊ. ಹನಿ ಬಾಬು ಆರೋಗ್ಯ ವರದಿ ಸಲ್ಲಿಸುವಂತೆ ಹೈಕೋರ್ಟ್‌ ನಿರ್ದೇಶನ

- Advertisement -
- Advertisement -

ಭೀಮಾ ಕೊರೆಗಾಂವ್‌‌-ಎಲ್ಗರ್ ಪರಿಷತ್ ಪ್ರಕರಣದಲ್ಲಿ ಸಿಲುಕಿ ಮುಂಬೈನ ಖಾಸಗಿ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಹನಿ ಬಾಬು ಅವರ ಆರೋಗ್ಯ ವರದಿಯನ್ನು ಸಲ್ಲಿಸುವಂತೆ ಬಾಂಬೆ ಹೈಕೋರ್ಟ್ ನಿರ್ದೇಶಿಸಿದೆ.

ಆರೋಗ್ಯದ ಆಧಾರದ ಮೇಲೆ ಹನಿ ಬಾಬು ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಕೋರಿ ಅವರ ಪತ್ನಿ ಜೆನ್ನಿ ರೋವೆನ್ನಾ ಅವರು ಸಲ್ಲಿಸಿದ್ದ ಅರ್ಜಿಯನ್ನು, ನ್ಯಾಯಮೂರ್ತಿ ಎಸ್.ಎಸ್. ಶಿಂಧೆ ಮತ್ತು ನ್ಯಾಯಮೂರ್ತಿ ಎನ್.ಜೆ. ಜಮದಾರ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಇದನ್ನೂ ಓದಿ: ಜೈಲು ಅಧಿಕಾರಿಗಳಿಂದ ಚಿಕಿತ್ಸೆ ವಿಳಂಬ: ಸೋಂಕಿನಿಂದ ಹದಗೆಟ್ಟ ಪ್ರಾಧ್ಯಾಪಕ ಡಾ. ಹನಿ ಬಾಬು ಅವರ ಕಣ್ಣು

ಕಳೆದ ತಿಂಗಳ ಅವರ ವೈದ್ಯಕೀಯ ವರದಿಯಲ್ಲಿ ಅವರ ಕಣ್ಣಿನ ನರದಲ್ಲಿ ಊತ ಇರುವುದರಿಂದ ಎಂಆರ್‌ಐ ಸ್ಕ್ಯಾನ್ ಮತ್ತು ಇತರ ಪರೀಕ್ಷೆಗಳನ್ನು ಮಾಡಬೇಕಾಗುತ್ತದೆ ಎಂದು ಹೇಳಿದ್ದರಿಂದ, ನ್ಯಾಯಾಲಯವು ಅವರನ್ನು ಮುಂದಿನ ಆದೇಶದವರೆಗೂ ಆಸ್ಪತ್ರೆಯಲ್ಲಿರಲು ಆದೇಶ ನೀಡಿತ್ತು.

ಆದರೆ, ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಎರಡು ತಿಂಗಳ ಚಿಕಿತ್ಸೆಯ ನಂತರ ಹನಿಬಾಬು ಅವರ ಕಣ್ಣಿನ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ ಎಂದು ಅವರನ್ನು ಪ್ರತಿನಿಧಿಸುವ ವಕೀಲ ಪಯೋಶಿ ರಾಯ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಕಣ್ಣಿನ ಒಂದು ಕಡೆಯಲ್ಲಿ ಮಾತ್ರ ಸ್ವಲ್ಪ ಊತ ಉಳಿದಿದೆ, ಇದನ್ನು ರೋಗ ನಿರೋಧಕಗಳನ್ನು ನೀಡಿ ಗುಣಪಡಿಸಬಹುದು ಎಂದು ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: `ಸೆರೆಮನೆಯಲ್ಲಿ ನಿರಪರಾಧಿ’ – ಪ್ರೊ. ಹನಿಬಾಬು ಅವರ ಕುಟುಂಬ ನಮ್ಮೆಲ್ಲರನ್ನು ಉದ್ದೇಶಿಸಿ ಬರೆದಿರುವ ಪತ್ರ

ಹೈಕೋರ್ಟ್‌ನ ಮೇ 19 ರ ಆದೇಶದ ಪ್ರಕಾರ, ಖಾಸಗಿ ಆಸ್ಪತ್ರೆಯ ಚಿಕಿತ್ಸೆಯ ಶುಲ್ಕವನ್ನು ಹನಿ ಬಾಬು ಅವರ ಕುಟುಂಬವು ಭರಿಸಬೇಕು ಎಂಬ ಷರತ್ತಿನ ಮೇರೆಗೆ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು.

ಹನಿಬಾಬು ಅವರನ್ನು ಕಳೆದ ವರ್ಷದ ಜುಲೈನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯು ಭೀಮಾ ಕೊರೆಗಾಂವ್‌‌-ಎಲ್ಗರ್‌ ಪರಿಷತ್‌ ಪ್ರಕರಣದಲ್ಲಿ ಬಂಧಿಸಿತ್ತು.

ಮುಂದಿನ ವಿಚಾರಣೆಯ ಮೊದಲು ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸಲ್ಲಿಸುವಂತೆ ನ್ಯಾಯಪೀಠ ಈಗ ಖಾಸಗಿ ಆಸ್ಪತ್ರೆಗೆ ನಿರ್ದೇಶಿಸಿದೆ. ಮುಂದಿನ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 6 ರಂದು ನಡೆಸಲಿದೆ.

ಇದನ್ನೂ ಓದಿ: ವಿದ್ಯಾರ್ಥಿಗಳ ನೆಚ್ಚಿನ, ಜನಪ್ರಿಯ ಪ್ರಾಧ್ಯಾಪಕ ಡಾ. ಹನಿಬಾಬು ಬಂಧನದಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...