Homeಚಳವಳಿಭೀಮಾ ಕೊರೆಗಾಂವ್‌‌: ಪ್ರೊ. ಹನಿ ಬಾಬು ಆರೋಗ್ಯ ವರದಿ ಸಲ್ಲಿಸುವಂತೆ ಹೈಕೋರ್ಟ್‌ ನಿರ್ದೇಶನ

ಭೀಮಾ ಕೊರೆಗಾಂವ್‌‌: ಪ್ರೊ. ಹನಿ ಬಾಬು ಆರೋಗ್ಯ ವರದಿ ಸಲ್ಲಿಸುವಂತೆ ಹೈಕೋರ್ಟ್‌ ನಿರ್ದೇಶನ

- Advertisement -
- Advertisement -

ಭೀಮಾ ಕೊರೆಗಾಂವ್‌‌-ಎಲ್ಗರ್ ಪರಿಷತ್ ಪ್ರಕರಣದಲ್ಲಿ ಸಿಲುಕಿ ಮುಂಬೈನ ಖಾಸಗಿ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಹನಿ ಬಾಬು ಅವರ ಆರೋಗ್ಯ ವರದಿಯನ್ನು ಸಲ್ಲಿಸುವಂತೆ ಬಾಂಬೆ ಹೈಕೋರ್ಟ್ ನಿರ್ದೇಶಿಸಿದೆ.

ಆರೋಗ್ಯದ ಆಧಾರದ ಮೇಲೆ ಹನಿ ಬಾಬು ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಕೋರಿ ಅವರ ಪತ್ನಿ ಜೆನ್ನಿ ರೋವೆನ್ನಾ ಅವರು ಸಲ್ಲಿಸಿದ್ದ ಅರ್ಜಿಯನ್ನು, ನ್ಯಾಯಮೂರ್ತಿ ಎಸ್.ಎಸ್. ಶಿಂಧೆ ಮತ್ತು ನ್ಯಾಯಮೂರ್ತಿ ಎನ್.ಜೆ. ಜಮದಾರ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಇದನ್ನೂ ಓದಿ: ಜೈಲು ಅಧಿಕಾರಿಗಳಿಂದ ಚಿಕಿತ್ಸೆ ವಿಳಂಬ: ಸೋಂಕಿನಿಂದ ಹದಗೆಟ್ಟ ಪ್ರಾಧ್ಯಾಪಕ ಡಾ. ಹನಿ ಬಾಬು ಅವರ ಕಣ್ಣು

ಕಳೆದ ತಿಂಗಳ ಅವರ ವೈದ್ಯಕೀಯ ವರದಿಯಲ್ಲಿ ಅವರ ಕಣ್ಣಿನ ನರದಲ್ಲಿ ಊತ ಇರುವುದರಿಂದ ಎಂಆರ್‌ಐ ಸ್ಕ್ಯಾನ್ ಮತ್ತು ಇತರ ಪರೀಕ್ಷೆಗಳನ್ನು ಮಾಡಬೇಕಾಗುತ್ತದೆ ಎಂದು ಹೇಳಿದ್ದರಿಂದ, ನ್ಯಾಯಾಲಯವು ಅವರನ್ನು ಮುಂದಿನ ಆದೇಶದವರೆಗೂ ಆಸ್ಪತ್ರೆಯಲ್ಲಿರಲು ಆದೇಶ ನೀಡಿತ್ತು.

ಆದರೆ, ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಎರಡು ತಿಂಗಳ ಚಿಕಿತ್ಸೆಯ ನಂತರ ಹನಿಬಾಬು ಅವರ ಕಣ್ಣಿನ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ ಎಂದು ಅವರನ್ನು ಪ್ರತಿನಿಧಿಸುವ ವಕೀಲ ಪಯೋಶಿ ರಾಯ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಕಣ್ಣಿನ ಒಂದು ಕಡೆಯಲ್ಲಿ ಮಾತ್ರ ಸ್ವಲ್ಪ ಊತ ಉಳಿದಿದೆ, ಇದನ್ನು ರೋಗ ನಿರೋಧಕಗಳನ್ನು ನೀಡಿ ಗುಣಪಡಿಸಬಹುದು ಎಂದು ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: `ಸೆರೆಮನೆಯಲ್ಲಿ ನಿರಪರಾಧಿ’ – ಪ್ರೊ. ಹನಿಬಾಬು ಅವರ ಕುಟುಂಬ ನಮ್ಮೆಲ್ಲರನ್ನು ಉದ್ದೇಶಿಸಿ ಬರೆದಿರುವ ಪತ್ರ

ಹೈಕೋರ್ಟ್‌ನ ಮೇ 19 ರ ಆದೇಶದ ಪ್ರಕಾರ, ಖಾಸಗಿ ಆಸ್ಪತ್ರೆಯ ಚಿಕಿತ್ಸೆಯ ಶುಲ್ಕವನ್ನು ಹನಿ ಬಾಬು ಅವರ ಕುಟುಂಬವು ಭರಿಸಬೇಕು ಎಂಬ ಷರತ್ತಿನ ಮೇರೆಗೆ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು.

ಹನಿಬಾಬು ಅವರನ್ನು ಕಳೆದ ವರ್ಷದ ಜುಲೈನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯು ಭೀಮಾ ಕೊರೆಗಾಂವ್‌‌-ಎಲ್ಗರ್‌ ಪರಿಷತ್‌ ಪ್ರಕರಣದಲ್ಲಿ ಬಂಧಿಸಿತ್ತು.

ಮುಂದಿನ ವಿಚಾರಣೆಯ ಮೊದಲು ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸಲ್ಲಿಸುವಂತೆ ನ್ಯಾಯಪೀಠ ಈಗ ಖಾಸಗಿ ಆಸ್ಪತ್ರೆಗೆ ನಿರ್ದೇಶಿಸಿದೆ. ಮುಂದಿನ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 6 ರಂದು ನಡೆಸಲಿದೆ.

ಇದನ್ನೂ ಓದಿ: ವಿದ್ಯಾರ್ಥಿಗಳ ನೆಚ್ಚಿನ, ಜನಪ್ರಿಯ ಪ್ರಾಧ್ಯಾಪಕ ಡಾ. ಹನಿಬಾಬು ಬಂಧನದಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...