Homeಕರ್ನಾಟಕಜನವರಿ 1 ರಂದು ಭೀಮಾ ಕೊರೆಗಾಂವ್‌‌ ವಿಜಯೋತ್ಸವ ಆಚರಣೆ ಹಾಗೂ 'ಪ್ರತಿರೋಧ ಸಮಾವೇಶ'

ಜನವರಿ 1 ರಂದು ಭೀಮಾ ಕೊರೆಗಾಂವ್‌‌ ವಿಜಯೋತ್ಸವ ಆಚರಣೆ ಹಾಗೂ ‘ಪ್ರತಿರೋಧ ಸಮಾವೇಶ’

ಮೂವತ್ತು ಸಾವಿರ ಜಾತಿವಾದಿ ಪೇಶ್ವೆ ಸೈನಿಕರನ್ನು ಕೇವಲ ಐನೂರು ದಲಿತ ’ಮಹರ್‌’ ಸೈನಿಕರು ಸೇರಿಕೊಂಡು ಸೋಲಿಸಿದ ಯುದ್ದವಾಗಿದೆ ಭೀಮಾ ಕೊರೆಗಾಂವ್!

- Advertisement -
- Advertisement -

ಜಾತಿವಾದಿ ಪೇಶ್ವೆಗಳ ವಿರುದ್ದ ದಲಿತ ಮಹಾರ್‌ ಸೈನಿಕರು ನಡೆಸಿರುವ ಭೀಮಾ ಕೊರೆಗಾಂವ್ ಯುದ್ಧದ ವಿಜಯೋತ್ಸವದ ಅಂಗವಾಗಿ ಹಾಗೂ ಮಾನವ ಹಕ್ಕು ಹೋರಾಟಗಾರರ ಬಿಡುಗಡೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜನವರಿ 1 ರಂದು ’ಪ್ರತಿರೋಧ ಸಮಾವೇಶ’ ನಡೆಯಲಿದೆ.

ಭೀಮಾ ಕೊರೆಗಾಂವ್ ಹೋರಾಟ ಸಮಿತಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಕಾರ್ಯಕ್ರಮವು ಜನವರಿ 1 ರ ಬೆಳಿಗ್ಗೆ 10:30 ಕ್ಕೆ ಪ್ರಾರಂಭವಾಗಲಿದೆ. ಭೀಮಾ ಕೊರೆಗಾಂವ್ ಯುದ್ಧದ ವಿಜಯೋತ್ಸವ ಆಚರಣೆ, ಮಾನವ ಹಕ್ಕು ಹೋರಾಟಗಾರರ ಬಂಧನವನ್ನು ವಿರೋಧಿಸಿ ’ಪ್ರತಿರೋಧ ಸಮಾವೇಶ’ ಕೂಡಾ ನಡೆಯಲಿದೆ. ಇಷ್ಟೇ ಅಲ್ಲದೆ, ಕಾರ್ಯಕ್ರಮದಲ್ಲಿ ತಮಟೆ, ನಗಾರಿ ವಾದನ, ಹಾಡುಗಾರಿಕೆ, ಕವಿಗೋಷ್ಟಿಯೂ ನಡೆಯಲಿದೆ.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

2017 ರಂದು ಭೀಮಾ ಕೊರೆಗಾಂವ್‌ನ‌‌ಲ್ಲಿ ನಡೆದ ಎಲ್ಗಾರ್‌ ಪರಿಷತ್‌ನ ಭಾಗವಾಗಿದ್ದ, ನಿವೃತ್ತ ನ್ಯಾಯಮೂರ್ತಿ ಬಿ.ಜಿ. ಕೋಲ್ಸೆ ಪಾಟಿಲ್ ಪ್ರತಿರೋಧ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಇಡೀ ಕಾರ್ಯಕ್ರಮದ ವೇಳಾಪಟ್ಟಿಗೆ ಇಲ್ಲಿ ಕ್ಲಿಕ್ ಮಾಡಿ.

ಭೀಮಾ ಕೊರೆಗಾಂವ್ ಯುದ್ದವು 1818 ರ ಜನವರಿ 1 ರಂದು ಮಹಾರಾಷ್ಟ್ರದ ಭೀಮಾ ಕೊರೆಗಾಂವ್‌ನಲ್ಲಿ ನಡೆಯಿತು. ಮೂವತ್ತು ಸಾವಿರ ಜಾತಿವಾದಿ ಪೇಶ್ವೆ ಸೈನಿಕರನ್ನು ಕೇವಲ ಐನೂರು ದಲಿತ ’ಮಹರ್‌’ ಸೈನಿಕರು ಸೇರಿಕೊಂಡು ಸೋಲಿಸಿದ ಯುದ್ದವಾಗಿದೆ ಇದು. ಭೀಮಾ ತೀರದಲ್ಲಿ ನಡೆದ ಈ ಯುದ್ದದ ಇತಿಹಾಸವನ್ನು ಮತ್ತೇ ಮುನ್ನಲೆಗೆ ತಂದವರು ಸಂವಿದಾನ ಶಿಲ್ಪಿ ಡಾ. ಬಿ.ಆ‌ರ್‌. ಅಂಬೇಡ್ಕರ್‌ ಆಗಿದ್ದಾರೆ. ಅವರು ಈ ಸ್ಥಳಕ್ಕೆ ತಾವು ಬದುಕಿರುವ ತನಕವು ಪ್ರತೀ ವರ್ಷ ಎಲ್ಲಿದ್ದರೂ ಭೇಟಿ ನೀಡಿ ವೀರ ಯೋಧರನ್ನು ಸ್ಮರಿಸುತ್ತಿದ್ದರು. ಭೀಮಾ ಕೊರೆಗಾಂವ್ ಹಾಗೂ ಪ್ರತಿರೋಧ ಸಮಾವೇಶದ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.

2017 ರಲ್ಲಿ ಭೀಮಾ ಕೊರೆಗಾಂವ್ ಯುದ್ದದ ನೂರನೇ ವರ್ಷದ ವಿಜಯೋತ್ಸವ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಬಲಪಂಥೀಯ ಗುಂಪೊಂದು ಗಲಭೆ ನಡೆಸಿ ಹಿಂಸಾಚಾರಕ್ಕೆ ಕಾರಣವಾಗಿತ್ತು. ಆದರೆ ಸರ್ಕಾರವು ವಿಜಯೋತ್ಸವದ ಮುಂಚಿನ ದಿನ ’ಎಲ್ಗರ್‌ ಪರಿಷರ್‌‌’ ಸಮಾವೇಶದಲ್ಲಿ ಮಾಡಿದ ಭಾಷಣವೇ ಈ ಗಲಭೆಗೆ ಕಾರಣ ಎಂದು ಆರೋಪಿಸಿ ಸಮಾವೇಶದಲ್ಲಿ ಭಾಗವಹಿಸಿದ್ದ ಹೋರಾಟಗಾರರನ್ನು ಹೊಣೆಗಾರರನ್ನಾಗಿಸಿದೆ. ಈ ಪ್ರಕರಣದಲ್ಲಿ ಇದುವರೆಗೂ 16 ಜನರನ್ನು ಸರ್ಕಾರ ಬಂಧಿಸಿದೆ.

ಇದನ್ನೂ ಓದಿ: ಮಹರ್ ಸೈನಿಕರ ‘ಭೀಮಾ ಕೋರೆಗಾಂವ್’ ಹೋರಾಟ ನೆನಪಿಸುವ ಕನ್ನಡ ಹಾಡು 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...