Homeಕರ್ನಾಟಕಜನವರಿ 1 ರಂದು ಭೀಮಾ ಕೊರೆಗಾಂವ್‌‌ ವಿಜಯೋತ್ಸವ ಆಚರಣೆ ಹಾಗೂ 'ಪ್ರತಿರೋಧ ಸಮಾವೇಶ'

ಜನವರಿ 1 ರಂದು ಭೀಮಾ ಕೊರೆಗಾಂವ್‌‌ ವಿಜಯೋತ್ಸವ ಆಚರಣೆ ಹಾಗೂ ‘ಪ್ರತಿರೋಧ ಸಮಾವೇಶ’

ಮೂವತ್ತು ಸಾವಿರ ಜಾತಿವಾದಿ ಪೇಶ್ವೆ ಸೈನಿಕರನ್ನು ಕೇವಲ ಐನೂರು ದಲಿತ ’ಮಹರ್‌’ ಸೈನಿಕರು ಸೇರಿಕೊಂಡು ಸೋಲಿಸಿದ ಯುದ್ದವಾಗಿದೆ ಭೀಮಾ ಕೊರೆಗಾಂವ್!

- Advertisement -
- Advertisement -

ಜಾತಿವಾದಿ ಪೇಶ್ವೆಗಳ ವಿರುದ್ದ ದಲಿತ ಮಹಾರ್‌ ಸೈನಿಕರು ನಡೆಸಿರುವ ಭೀಮಾ ಕೊರೆಗಾಂವ್ ಯುದ್ಧದ ವಿಜಯೋತ್ಸವದ ಅಂಗವಾಗಿ ಹಾಗೂ ಮಾನವ ಹಕ್ಕು ಹೋರಾಟಗಾರರ ಬಿಡುಗಡೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜನವರಿ 1 ರಂದು ’ಪ್ರತಿರೋಧ ಸಮಾವೇಶ’ ನಡೆಯಲಿದೆ.

ಭೀಮಾ ಕೊರೆಗಾಂವ್ ಹೋರಾಟ ಸಮಿತಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಕಾರ್ಯಕ್ರಮವು ಜನವರಿ 1 ರ ಬೆಳಿಗ್ಗೆ 10:30 ಕ್ಕೆ ಪ್ರಾರಂಭವಾಗಲಿದೆ. ಭೀಮಾ ಕೊರೆಗಾಂವ್ ಯುದ್ಧದ ವಿಜಯೋತ್ಸವ ಆಚರಣೆ, ಮಾನವ ಹಕ್ಕು ಹೋರಾಟಗಾರರ ಬಂಧನವನ್ನು ವಿರೋಧಿಸಿ ’ಪ್ರತಿರೋಧ ಸಮಾವೇಶ’ ಕೂಡಾ ನಡೆಯಲಿದೆ. ಇಷ್ಟೇ ಅಲ್ಲದೆ, ಕಾರ್ಯಕ್ರಮದಲ್ಲಿ ತಮಟೆ, ನಗಾರಿ ವಾದನ, ಹಾಡುಗಾರಿಕೆ, ಕವಿಗೋಷ್ಟಿಯೂ ನಡೆಯಲಿದೆ.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

2017 ರಂದು ಭೀಮಾ ಕೊರೆಗಾಂವ್‌ನ‌‌ಲ್ಲಿ ನಡೆದ ಎಲ್ಗಾರ್‌ ಪರಿಷತ್‌ನ ಭಾಗವಾಗಿದ್ದ, ನಿವೃತ್ತ ನ್ಯಾಯಮೂರ್ತಿ ಬಿ.ಜಿ. ಕೋಲ್ಸೆ ಪಾಟಿಲ್ ಪ್ರತಿರೋಧ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಇಡೀ ಕಾರ್ಯಕ್ರಮದ ವೇಳಾಪಟ್ಟಿಗೆ ಇಲ್ಲಿ ಕ್ಲಿಕ್ ಮಾಡಿ.

ಭೀಮಾ ಕೊರೆಗಾಂವ್ ಯುದ್ದವು 1818 ರ ಜನವರಿ 1 ರಂದು ಮಹಾರಾಷ್ಟ್ರದ ಭೀಮಾ ಕೊರೆಗಾಂವ್‌ನಲ್ಲಿ ನಡೆಯಿತು. ಮೂವತ್ತು ಸಾವಿರ ಜಾತಿವಾದಿ ಪೇಶ್ವೆ ಸೈನಿಕರನ್ನು ಕೇವಲ ಐನೂರು ದಲಿತ ’ಮಹರ್‌’ ಸೈನಿಕರು ಸೇರಿಕೊಂಡು ಸೋಲಿಸಿದ ಯುದ್ದವಾಗಿದೆ ಇದು. ಭೀಮಾ ತೀರದಲ್ಲಿ ನಡೆದ ಈ ಯುದ್ದದ ಇತಿಹಾಸವನ್ನು ಮತ್ತೇ ಮುನ್ನಲೆಗೆ ತಂದವರು ಸಂವಿದಾನ ಶಿಲ್ಪಿ ಡಾ. ಬಿ.ಆ‌ರ್‌. ಅಂಬೇಡ್ಕರ್‌ ಆಗಿದ್ದಾರೆ. ಅವರು ಈ ಸ್ಥಳಕ್ಕೆ ತಾವು ಬದುಕಿರುವ ತನಕವು ಪ್ರತೀ ವರ್ಷ ಎಲ್ಲಿದ್ದರೂ ಭೇಟಿ ನೀಡಿ ವೀರ ಯೋಧರನ್ನು ಸ್ಮರಿಸುತ್ತಿದ್ದರು. ಭೀಮಾ ಕೊರೆಗಾಂವ್ ಹಾಗೂ ಪ್ರತಿರೋಧ ಸಮಾವೇಶದ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.

2017 ರಲ್ಲಿ ಭೀಮಾ ಕೊರೆಗಾಂವ್ ಯುದ್ದದ ನೂರನೇ ವರ್ಷದ ವಿಜಯೋತ್ಸವ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಬಲಪಂಥೀಯ ಗುಂಪೊಂದು ಗಲಭೆ ನಡೆಸಿ ಹಿಂಸಾಚಾರಕ್ಕೆ ಕಾರಣವಾಗಿತ್ತು. ಆದರೆ ಸರ್ಕಾರವು ವಿಜಯೋತ್ಸವದ ಮುಂಚಿನ ದಿನ ’ಎಲ್ಗರ್‌ ಪರಿಷರ್‌‌’ ಸಮಾವೇಶದಲ್ಲಿ ಮಾಡಿದ ಭಾಷಣವೇ ಈ ಗಲಭೆಗೆ ಕಾರಣ ಎಂದು ಆರೋಪಿಸಿ ಸಮಾವೇಶದಲ್ಲಿ ಭಾಗವಹಿಸಿದ್ದ ಹೋರಾಟಗಾರರನ್ನು ಹೊಣೆಗಾರರನ್ನಾಗಿಸಿದೆ. ಈ ಪ್ರಕರಣದಲ್ಲಿ ಇದುವರೆಗೂ 16 ಜನರನ್ನು ಸರ್ಕಾರ ಬಂಧಿಸಿದೆ.

ಇದನ್ನೂ ಓದಿ: ಮಹರ್ ಸೈನಿಕರ ‘ಭೀಮಾ ಕೋರೆಗಾಂವ್’ ಹೋರಾಟ ನೆನಪಿಸುವ ಕನ್ನಡ ಹಾಡು 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...