Homeಕರ್ನಾಟಕಜನವರಿ 1 ರಂದು ಭೀಮಾ ಕೊರೆಗಾಂವ್‌‌ ವಿಜಯೋತ್ಸವ ಆಚರಣೆ ಹಾಗೂ 'ಪ್ರತಿರೋಧ ಸಮಾವೇಶ'

ಜನವರಿ 1 ರಂದು ಭೀಮಾ ಕೊರೆಗಾಂವ್‌‌ ವಿಜಯೋತ್ಸವ ಆಚರಣೆ ಹಾಗೂ ‘ಪ್ರತಿರೋಧ ಸಮಾವೇಶ’

ಮೂವತ್ತು ಸಾವಿರ ಜಾತಿವಾದಿ ಪೇಶ್ವೆ ಸೈನಿಕರನ್ನು ಕೇವಲ ಐನೂರು ದಲಿತ ’ಮಹರ್‌’ ಸೈನಿಕರು ಸೇರಿಕೊಂಡು ಸೋಲಿಸಿದ ಯುದ್ದವಾಗಿದೆ ಭೀಮಾ ಕೊರೆಗಾಂವ್!

- Advertisement -
- Advertisement -

ಜಾತಿವಾದಿ ಪೇಶ್ವೆಗಳ ವಿರುದ್ದ ದಲಿತ ಮಹಾರ್‌ ಸೈನಿಕರು ನಡೆಸಿರುವ ಭೀಮಾ ಕೊರೆಗಾಂವ್ ಯುದ್ಧದ ವಿಜಯೋತ್ಸವದ ಅಂಗವಾಗಿ ಹಾಗೂ ಮಾನವ ಹಕ್ಕು ಹೋರಾಟಗಾರರ ಬಿಡುಗಡೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜನವರಿ 1 ರಂದು ’ಪ್ರತಿರೋಧ ಸಮಾವೇಶ’ ನಡೆಯಲಿದೆ.

ಭೀಮಾ ಕೊರೆಗಾಂವ್ ಹೋರಾಟ ಸಮಿತಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಕಾರ್ಯಕ್ರಮವು ಜನವರಿ 1 ರ ಬೆಳಿಗ್ಗೆ 10:30 ಕ್ಕೆ ಪ್ರಾರಂಭವಾಗಲಿದೆ. ಭೀಮಾ ಕೊರೆಗಾಂವ್ ಯುದ್ಧದ ವಿಜಯೋತ್ಸವ ಆಚರಣೆ, ಮಾನವ ಹಕ್ಕು ಹೋರಾಟಗಾರರ ಬಂಧನವನ್ನು ವಿರೋಧಿಸಿ ’ಪ್ರತಿರೋಧ ಸಮಾವೇಶ’ ಕೂಡಾ ನಡೆಯಲಿದೆ. ಇಷ್ಟೇ ಅಲ್ಲದೆ, ಕಾರ್ಯಕ್ರಮದಲ್ಲಿ ತಮಟೆ, ನಗಾರಿ ವಾದನ, ಹಾಡುಗಾರಿಕೆ, ಕವಿಗೋಷ್ಟಿಯೂ ನಡೆಯಲಿದೆ.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

2017 ರಂದು ಭೀಮಾ ಕೊರೆಗಾಂವ್‌ನ‌‌ಲ್ಲಿ ನಡೆದ ಎಲ್ಗಾರ್‌ ಪರಿಷತ್‌ನ ಭಾಗವಾಗಿದ್ದ, ನಿವೃತ್ತ ನ್ಯಾಯಮೂರ್ತಿ ಬಿ.ಜಿ. ಕೋಲ್ಸೆ ಪಾಟಿಲ್ ಪ್ರತಿರೋಧ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಇಡೀ ಕಾರ್ಯಕ್ರಮದ ವೇಳಾಪಟ್ಟಿಗೆ ಇಲ್ಲಿ ಕ್ಲಿಕ್ ಮಾಡಿ.

ಭೀಮಾ ಕೊರೆಗಾಂವ್ ಯುದ್ದವು 1818 ರ ಜನವರಿ 1 ರಂದು ಮಹಾರಾಷ್ಟ್ರದ ಭೀಮಾ ಕೊರೆಗಾಂವ್‌ನಲ್ಲಿ ನಡೆಯಿತು. ಮೂವತ್ತು ಸಾವಿರ ಜಾತಿವಾದಿ ಪೇಶ್ವೆ ಸೈನಿಕರನ್ನು ಕೇವಲ ಐನೂರು ದಲಿತ ’ಮಹರ್‌’ ಸೈನಿಕರು ಸೇರಿಕೊಂಡು ಸೋಲಿಸಿದ ಯುದ್ದವಾಗಿದೆ ಇದು. ಭೀಮಾ ತೀರದಲ್ಲಿ ನಡೆದ ಈ ಯುದ್ದದ ಇತಿಹಾಸವನ್ನು ಮತ್ತೇ ಮುನ್ನಲೆಗೆ ತಂದವರು ಸಂವಿದಾನ ಶಿಲ್ಪಿ ಡಾ. ಬಿ.ಆ‌ರ್‌. ಅಂಬೇಡ್ಕರ್‌ ಆಗಿದ್ದಾರೆ. ಅವರು ಈ ಸ್ಥಳಕ್ಕೆ ತಾವು ಬದುಕಿರುವ ತನಕವು ಪ್ರತೀ ವರ್ಷ ಎಲ್ಲಿದ್ದರೂ ಭೇಟಿ ನೀಡಿ ವೀರ ಯೋಧರನ್ನು ಸ್ಮರಿಸುತ್ತಿದ್ದರು. ಭೀಮಾ ಕೊರೆಗಾಂವ್ ಹಾಗೂ ಪ್ರತಿರೋಧ ಸಮಾವೇಶದ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.

2017 ರಲ್ಲಿ ಭೀಮಾ ಕೊರೆಗಾಂವ್ ಯುದ್ದದ ನೂರನೇ ವರ್ಷದ ವಿಜಯೋತ್ಸವ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಬಲಪಂಥೀಯ ಗುಂಪೊಂದು ಗಲಭೆ ನಡೆಸಿ ಹಿಂಸಾಚಾರಕ್ಕೆ ಕಾರಣವಾಗಿತ್ತು. ಆದರೆ ಸರ್ಕಾರವು ವಿಜಯೋತ್ಸವದ ಮುಂಚಿನ ದಿನ ’ಎಲ್ಗರ್‌ ಪರಿಷರ್‌‌’ ಸಮಾವೇಶದಲ್ಲಿ ಮಾಡಿದ ಭಾಷಣವೇ ಈ ಗಲಭೆಗೆ ಕಾರಣ ಎಂದು ಆರೋಪಿಸಿ ಸಮಾವೇಶದಲ್ಲಿ ಭಾಗವಹಿಸಿದ್ದ ಹೋರಾಟಗಾರರನ್ನು ಹೊಣೆಗಾರರನ್ನಾಗಿಸಿದೆ. ಈ ಪ್ರಕರಣದಲ್ಲಿ ಇದುವರೆಗೂ 16 ಜನರನ್ನು ಸರ್ಕಾರ ಬಂಧಿಸಿದೆ.

ಇದನ್ನೂ ಓದಿ: ಮಹರ್ ಸೈನಿಕರ ‘ಭೀಮಾ ಕೋರೆಗಾಂವ್’ ಹೋರಾಟ ನೆನಪಿಸುವ ಕನ್ನಡ ಹಾಡು 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...