Homeಮುಖಪುಟಭೀಮಾ ಕೋರೆಗಾಂವ್: ಚಿಂತಕ ಆನಂದ್ ತೇಲ್ತುಂಬ್ಡೆರವರಿಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್: ಚಿಂತಕ ಆನಂದ್ ತೇಲ್ತುಂಬ್ಡೆರವರಿಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯಡಿ ಬಂಧಿತರಾಗಿದ್ದ ಖ್ಯಾತ ಮಾನವ ಹಕ್ಕು ಹೋರಾಟಗಾರ, ಚಿಂತಕ ಪ್ರೊ. ಆನಂದ್ ತೇಲ್ತುಂಬ್ಡೆರವರಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ.

ತಮ್ಮ ಜಾಮೀನು ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯ ತಿರಸ್ಕರಿಸಿರುವುದನ್ನು ಪ್ರಶ್ನಸಿ ತೇಲ್ತುಬ್ಡೆಯವರು 2021ರಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ಜಸ್ಟೀಸ್ ಎ.ಎಸ್ ಗಡ್ಕರಿ ಮತ್ತು ಮಿಲಿಂಡ್ ಜಾಧವ್‌ರವರಿದ್ದ ವಿಭಾಗೀಯ ಪೀಠ ಜಾಮೀನು ಮಂಜೂರು ಮಾಡಿದೆ.

ಡಿಸೆಂಬರ್ 31, 2017ರಂದ ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷತ್ ಪ್ರಕರಣದ ಆರೋಪಿ ಆಗಿರುವ ಆನಂದ್ ತೇಲ್ತುಂಬೆ ಅವರು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ 2020ರ ಏಪ್ರಿಲ್ 14ರ ಡಾ.ಬಿ.ಆರ್. ಅಂಬೇಡ್ಕರ್ ಜನ್ಮದಿನದಂದು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಶರಣರಾಗಿದ್ದರು.

ಯುಎಪಿಎಯ ಸೆಕ್ಷನ್ 38 ಮತ್ತು 39 ಹೊರತುಪಡಿಸಿ ಸೆಕ್ಷನ್ 13, 16 ಮತ್ತು 18 ರ ಅಡಿಯಲ್ಲಿ ಅಪರಾಧಗಳನ್ನು ಮಾಡಲಾಗಿಲ್ಲ ಎಂದು ಗಮನಿಸಿದ ನ್ಯಾಯಾಲಯ ತಲಾ ಒಂದು ಲಕ್ಷ ರೂ.ಗಳ ಎರಡು ಶ್ಯೂರಿಟಿ ಪಿಆರ್ ಬಾಂಡ್ ಮೇಲೆ ಜಾಮೀನು ನೀಡಿದೆ. ಆದರೆ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಲು ಎನ್‌ಐಎಗೆ ಒಂದು ವಾರ ಕಾಲಾವಕಾಶ ನೀಡಿರುವ ನ್ಯಾಯಾಲಯ ಈ ಜಾಮೀನಿನಗೆ ಒಂದು ವಾರಗಳ ತಡೆಯಾಜ್ಞೆ ಸಹ ನೀಡಿದೆ. ಹಾಗಾಗಿ ಒಂದು ವಾರಗಳ ಕಾಲ ತೇಲ್ತುಂಬ್ಡೆಯವರು ಬಿಡುಗಡೆಯಾಗುವುದಿಲ್ಲ.

ಏನಿದು ಪ್ರಕರಣ

2018 ರಲ್ಲಿ ಭೀಮಾಕೊರೆಗಾವ್‌ನಲ್ಲಿ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ, 200 ವರ್ಷಗಳ ಹಿಂದಿನ ಪೇಶ್ವಾಗಳ ವಿರುದ್ದದ ಯುದ್ದದಲ್ಲಿ ಜಯಗಳಿಸಿದ ಮಹರ್‌ ಜನಾಂಗದ 200ನೇ ವರ್ಷದ ಆಚರಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರ ನಡೆದಿತ್ತು. ಈ ಸಂಬಂಧ ಆನಂದ್‌ ತೆಲ್ತುಂಬ್ಡೆಯವರ ಮೇಲೆಯೂ ಸಹ ಪ್ರಕರಣ ದಾಖಲಾಗಿದ್ದು, ಇದು ಪ್ರಭುತ್ವ ಪ್ರಾಯೋಜಿತ ಪಿತೂರಿ ಎಂದು ಆನಂದ್‌ ತೆಲ್ತುಂಬ್ಡೆಯವರು ಆರೋಪಿಸಿದ್ದಾರೆ.

ಆನಂತರ ಅವರು ಪ್ರಧಾನಿ  ಮೋದಿಯವರನ್ನು ಹತ್ಯೆಗೈಯಲು ಸಂಚು ರೂಪಿಸಿದ ನಿಷೇದಿತ ಮಾವೋವಾದಿ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಎನ್‌ಐಎ ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯಿದೆ” (ಯುಎಪಿಎ) ಪ್ರಕರಣಗಳನ್ನು ಹೇರಿತ್ತು.

ಭಾರತದ ಹೆಸರಾಂತ ಚಿಂತಕ, IIM ಅಹಮದಾಬಾದ್‍ನ ಮೊದಲ ಹಳೆಯ ವಿದ್ಯಾರ್ಥಿ, ಮೊದಲ IIT ಪ್ರೊಫೆಸರ್ ಹಾಗೂ ಮೊದಲ ಕಾ‍ರ್ಪೊರೇಟ್ CEO, ಅಂಬೇಡ್ಕರ್‌ರವರ ಸಬಂಧಿ ಮತ್ತು ಬೌದ್ಧಿಕ ವಾರಸುದಾರ ಡಾ. ಆನಂದ್‌ ತೇಲ್ತುಂಬ್ಡೆಯವರನ್ನು 2020ರ ವರ್ಷದ ವ್ಯಕ್ತಿಯಾಗಿ ವ್ಯಾಂಕೋವರ್ ಮೂಲದ ಆನ್‌ಲೈನ್ ನಿಯತಕಾಲಿಕ ರ್ಯಾಡಿಕಲ್ ದೇಸಿ ಘೋಷಿಸಿತ್ತು.

ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದ  ಬಡ ಭೂಹೀನ ಕೂಲಿಕಾರ್ಮಿಕರ ಕುಟುಂಬದಲ್ಲಿ ಜನಿಸಿದ ಪ್ರೊ. ಆನಂದ್‌ ತೇಲ್ತುಂಬ್ಡೆ ಅವರು ದೇಶದ ಅತ್ಯುತ್ತಮ ವಿದ್ಯಾವಂತ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಅವರು ಅದ್ಭುತ ಶೈಕ್ಷಣಿಕ ಮತ್ತು ವೃತ್ತಿಜೀವನವನ್ನು ಹೊಂದಿದ್ದಾರೆ. ದೇಶದ ಅತ್ಯುನ್ನತ ಗಣ್ಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಹಲವು ಕಂಪನಿಗಳಿಗೆ ನಾಯಕತ್ವ ಕೊಟ್ಟಿದ್ದಾರೆ ಮತ್ತು ಅನೇಕ ಪ್ರಶಸ್ತಿ, ಪುರಸ್ಕಾರಗಳು ಅವರನ್ನು ಹುಡುಕಿಕೊಂಡುಬಂದಿವೆ. ಭಾರತದಲ್ಲಿನ ಜಾತಿ ಪದ್ದತಿ, ಅಸಮಾನತೆ ಬಗ್ಗೆ, ಅಂಬೇಡ್ಕರ್‌ರವರ ಕುರಿತು 29 ಪುಸ್ತಕಗಳನ್ನು ರಚಿಸಿರುವ ತೇಲ್ತುಂಬ್ಡೆ ಸಾವಿರಾರು ಲೇಖನಗಳನ್ನು ಬರೆದಿದ್ದಾರೆ.

ಇದನ್ನೂ ಓದಿ: ದೇಶದ ಸಾಕ್ಷಿಪ್ರಜ್ಞೆ ಬಾಬಾಸಾಹೇಬರ ಬೌದ್ಧಿಕ ವಾರಸುದಾರ: ಚಿಂತಕ ಆನಂದ್ ತೇಲ್ತುಂಬ್ಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...