Homeಮುಖಪುಟಭೀಮಾ ಕೋರೆಗಾಂವ್: ಚಿಂತಕ ಆನಂದ್ ತೇಲ್ತುಂಬ್ಡೆರವರಿಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್: ಚಿಂತಕ ಆನಂದ್ ತೇಲ್ತುಂಬ್ಡೆರವರಿಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯಡಿ ಬಂಧಿತರಾಗಿದ್ದ ಖ್ಯಾತ ಮಾನವ ಹಕ್ಕು ಹೋರಾಟಗಾರ, ಚಿಂತಕ ಪ್ರೊ. ಆನಂದ್ ತೇಲ್ತುಂಬ್ಡೆರವರಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ.

ತಮ್ಮ ಜಾಮೀನು ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯ ತಿರಸ್ಕರಿಸಿರುವುದನ್ನು ಪ್ರಶ್ನಸಿ ತೇಲ್ತುಬ್ಡೆಯವರು 2021ರಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ಜಸ್ಟೀಸ್ ಎ.ಎಸ್ ಗಡ್ಕರಿ ಮತ್ತು ಮಿಲಿಂಡ್ ಜಾಧವ್‌ರವರಿದ್ದ ವಿಭಾಗೀಯ ಪೀಠ ಜಾಮೀನು ಮಂಜೂರು ಮಾಡಿದೆ.

ಡಿಸೆಂಬರ್ 31, 2017ರಂದ ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷತ್ ಪ್ರಕರಣದ ಆರೋಪಿ ಆಗಿರುವ ಆನಂದ್ ತೇಲ್ತುಂಬೆ ಅವರು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ 2020ರ ಏಪ್ರಿಲ್ 14ರ ಡಾ.ಬಿ.ಆರ್. ಅಂಬೇಡ್ಕರ್ ಜನ್ಮದಿನದಂದು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಶರಣರಾಗಿದ್ದರು.

ಯುಎಪಿಎಯ ಸೆಕ್ಷನ್ 38 ಮತ್ತು 39 ಹೊರತುಪಡಿಸಿ ಸೆಕ್ಷನ್ 13, 16 ಮತ್ತು 18 ರ ಅಡಿಯಲ್ಲಿ ಅಪರಾಧಗಳನ್ನು ಮಾಡಲಾಗಿಲ್ಲ ಎಂದು ಗಮನಿಸಿದ ನ್ಯಾಯಾಲಯ ತಲಾ ಒಂದು ಲಕ್ಷ ರೂ.ಗಳ ಎರಡು ಶ್ಯೂರಿಟಿ ಪಿಆರ್ ಬಾಂಡ್ ಮೇಲೆ ಜಾಮೀನು ನೀಡಿದೆ. ಆದರೆ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಲು ಎನ್‌ಐಎಗೆ ಒಂದು ವಾರ ಕಾಲಾವಕಾಶ ನೀಡಿರುವ ನ್ಯಾಯಾಲಯ ಈ ಜಾಮೀನಿನಗೆ ಒಂದು ವಾರಗಳ ತಡೆಯಾಜ್ಞೆ ಸಹ ನೀಡಿದೆ. ಹಾಗಾಗಿ ಒಂದು ವಾರಗಳ ಕಾಲ ತೇಲ್ತುಂಬ್ಡೆಯವರು ಬಿಡುಗಡೆಯಾಗುವುದಿಲ್ಲ.

ಏನಿದು ಪ್ರಕರಣ

2018 ರಲ್ಲಿ ಭೀಮಾಕೊರೆಗಾವ್‌ನಲ್ಲಿ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ, 200 ವರ್ಷಗಳ ಹಿಂದಿನ ಪೇಶ್ವಾಗಳ ವಿರುದ್ದದ ಯುದ್ದದಲ್ಲಿ ಜಯಗಳಿಸಿದ ಮಹರ್‌ ಜನಾಂಗದ 200ನೇ ವರ್ಷದ ಆಚರಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರ ನಡೆದಿತ್ತು. ಈ ಸಂಬಂಧ ಆನಂದ್‌ ತೆಲ್ತುಂಬ್ಡೆಯವರ ಮೇಲೆಯೂ ಸಹ ಪ್ರಕರಣ ದಾಖಲಾಗಿದ್ದು, ಇದು ಪ್ರಭುತ್ವ ಪ್ರಾಯೋಜಿತ ಪಿತೂರಿ ಎಂದು ಆನಂದ್‌ ತೆಲ್ತುಂಬ್ಡೆಯವರು ಆರೋಪಿಸಿದ್ದಾರೆ.

ಆನಂತರ ಅವರು ಪ್ರಧಾನಿ  ಮೋದಿಯವರನ್ನು ಹತ್ಯೆಗೈಯಲು ಸಂಚು ರೂಪಿಸಿದ ನಿಷೇದಿತ ಮಾವೋವಾದಿ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಎನ್‌ಐಎ ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯಿದೆ” (ಯುಎಪಿಎ) ಪ್ರಕರಣಗಳನ್ನು ಹೇರಿತ್ತು.

ಭಾರತದ ಹೆಸರಾಂತ ಚಿಂತಕ, IIM ಅಹಮದಾಬಾದ್‍ನ ಮೊದಲ ಹಳೆಯ ವಿದ್ಯಾರ್ಥಿ, ಮೊದಲ IIT ಪ್ರೊಫೆಸರ್ ಹಾಗೂ ಮೊದಲ ಕಾ‍ರ್ಪೊರೇಟ್ CEO, ಅಂಬೇಡ್ಕರ್‌ರವರ ಸಬಂಧಿ ಮತ್ತು ಬೌದ್ಧಿಕ ವಾರಸುದಾರ ಡಾ. ಆನಂದ್‌ ತೇಲ್ತುಂಬ್ಡೆಯವರನ್ನು 2020ರ ವರ್ಷದ ವ್ಯಕ್ತಿಯಾಗಿ ವ್ಯಾಂಕೋವರ್ ಮೂಲದ ಆನ್‌ಲೈನ್ ನಿಯತಕಾಲಿಕ ರ್ಯಾಡಿಕಲ್ ದೇಸಿ ಘೋಷಿಸಿತ್ತು.

ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದ  ಬಡ ಭೂಹೀನ ಕೂಲಿಕಾರ್ಮಿಕರ ಕುಟುಂಬದಲ್ಲಿ ಜನಿಸಿದ ಪ್ರೊ. ಆನಂದ್‌ ತೇಲ್ತುಂಬ್ಡೆ ಅವರು ದೇಶದ ಅತ್ಯುತ್ತಮ ವಿದ್ಯಾವಂತ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಅವರು ಅದ್ಭುತ ಶೈಕ್ಷಣಿಕ ಮತ್ತು ವೃತ್ತಿಜೀವನವನ್ನು ಹೊಂದಿದ್ದಾರೆ. ದೇಶದ ಅತ್ಯುನ್ನತ ಗಣ್ಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಹಲವು ಕಂಪನಿಗಳಿಗೆ ನಾಯಕತ್ವ ಕೊಟ್ಟಿದ್ದಾರೆ ಮತ್ತು ಅನೇಕ ಪ್ರಶಸ್ತಿ, ಪುರಸ್ಕಾರಗಳು ಅವರನ್ನು ಹುಡುಕಿಕೊಂಡುಬಂದಿವೆ. ಭಾರತದಲ್ಲಿನ ಜಾತಿ ಪದ್ದತಿ, ಅಸಮಾನತೆ ಬಗ್ಗೆ, ಅಂಬೇಡ್ಕರ್‌ರವರ ಕುರಿತು 29 ಪುಸ್ತಕಗಳನ್ನು ರಚಿಸಿರುವ ತೇಲ್ತುಂಬ್ಡೆ ಸಾವಿರಾರು ಲೇಖನಗಳನ್ನು ಬರೆದಿದ್ದಾರೆ.

ಇದನ್ನೂ ಓದಿ: ದೇಶದ ಸಾಕ್ಷಿಪ್ರಜ್ಞೆ ಬಾಬಾಸಾಹೇಬರ ಬೌದ್ಧಿಕ ವಾರಸುದಾರ: ಚಿಂತಕ ಆನಂದ್ ತೇಲ್ತುಂಬ್ಡೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...