Homeಮುಖಪುಟಭೀಮಾ ಕೋರೆಗಾಂವ್: ಚಿಂತಕ ಆನಂದ್ ತೇಲ್ತುಂಬ್ಡೆರವರಿಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್: ಚಿಂತಕ ಆನಂದ್ ತೇಲ್ತುಂಬ್ಡೆರವರಿಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯಡಿ ಬಂಧಿತರಾಗಿದ್ದ ಖ್ಯಾತ ಮಾನವ ಹಕ್ಕು ಹೋರಾಟಗಾರ, ಚಿಂತಕ ಪ್ರೊ. ಆನಂದ್ ತೇಲ್ತುಂಬ್ಡೆರವರಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ.

ತಮ್ಮ ಜಾಮೀನು ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯ ತಿರಸ್ಕರಿಸಿರುವುದನ್ನು ಪ್ರಶ್ನಸಿ ತೇಲ್ತುಬ್ಡೆಯವರು 2021ರಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ಜಸ್ಟೀಸ್ ಎ.ಎಸ್ ಗಡ್ಕರಿ ಮತ್ತು ಮಿಲಿಂಡ್ ಜಾಧವ್‌ರವರಿದ್ದ ವಿಭಾಗೀಯ ಪೀಠ ಜಾಮೀನು ಮಂಜೂರು ಮಾಡಿದೆ.

ಡಿಸೆಂಬರ್ 31, 2017ರಂದ ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷತ್ ಪ್ರಕರಣದ ಆರೋಪಿ ಆಗಿರುವ ಆನಂದ್ ತೇಲ್ತುಂಬೆ ಅವರು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ 2020ರ ಏಪ್ರಿಲ್ 14ರ ಡಾ.ಬಿ.ಆರ್. ಅಂಬೇಡ್ಕರ್ ಜನ್ಮದಿನದಂದು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಶರಣರಾಗಿದ್ದರು.

ಯುಎಪಿಎಯ ಸೆಕ್ಷನ್ 38 ಮತ್ತು 39 ಹೊರತುಪಡಿಸಿ ಸೆಕ್ಷನ್ 13, 16 ಮತ್ತು 18 ರ ಅಡಿಯಲ್ಲಿ ಅಪರಾಧಗಳನ್ನು ಮಾಡಲಾಗಿಲ್ಲ ಎಂದು ಗಮನಿಸಿದ ನ್ಯಾಯಾಲಯ ತಲಾ ಒಂದು ಲಕ್ಷ ರೂ.ಗಳ ಎರಡು ಶ್ಯೂರಿಟಿ ಪಿಆರ್ ಬಾಂಡ್ ಮೇಲೆ ಜಾಮೀನು ನೀಡಿದೆ. ಆದರೆ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಲು ಎನ್‌ಐಎಗೆ ಒಂದು ವಾರ ಕಾಲಾವಕಾಶ ನೀಡಿರುವ ನ್ಯಾಯಾಲಯ ಈ ಜಾಮೀನಿನಗೆ ಒಂದು ವಾರಗಳ ತಡೆಯಾಜ್ಞೆ ಸಹ ನೀಡಿದೆ. ಹಾಗಾಗಿ ಒಂದು ವಾರಗಳ ಕಾಲ ತೇಲ್ತುಂಬ್ಡೆಯವರು ಬಿಡುಗಡೆಯಾಗುವುದಿಲ್ಲ.

ಏನಿದು ಪ್ರಕರಣ

2018 ರಲ್ಲಿ ಭೀಮಾಕೊರೆಗಾವ್‌ನಲ್ಲಿ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ, 200 ವರ್ಷಗಳ ಹಿಂದಿನ ಪೇಶ್ವಾಗಳ ವಿರುದ್ದದ ಯುದ್ದದಲ್ಲಿ ಜಯಗಳಿಸಿದ ಮಹರ್‌ ಜನಾಂಗದ 200ನೇ ವರ್ಷದ ಆಚರಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರ ನಡೆದಿತ್ತು. ಈ ಸಂಬಂಧ ಆನಂದ್‌ ತೆಲ್ತುಂಬ್ಡೆಯವರ ಮೇಲೆಯೂ ಸಹ ಪ್ರಕರಣ ದಾಖಲಾಗಿದ್ದು, ಇದು ಪ್ರಭುತ್ವ ಪ್ರಾಯೋಜಿತ ಪಿತೂರಿ ಎಂದು ಆನಂದ್‌ ತೆಲ್ತುಂಬ್ಡೆಯವರು ಆರೋಪಿಸಿದ್ದಾರೆ.

ಆನಂತರ ಅವರು ಪ್ರಧಾನಿ  ಮೋದಿಯವರನ್ನು ಹತ್ಯೆಗೈಯಲು ಸಂಚು ರೂಪಿಸಿದ ನಿಷೇದಿತ ಮಾವೋವಾದಿ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಎನ್‌ಐಎ ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯಿದೆ” (ಯುಎಪಿಎ) ಪ್ರಕರಣಗಳನ್ನು ಹೇರಿತ್ತು.

ಭಾರತದ ಹೆಸರಾಂತ ಚಿಂತಕ, IIM ಅಹಮದಾಬಾದ್‍ನ ಮೊದಲ ಹಳೆಯ ವಿದ್ಯಾರ್ಥಿ, ಮೊದಲ IIT ಪ್ರೊಫೆಸರ್ ಹಾಗೂ ಮೊದಲ ಕಾ‍ರ್ಪೊರೇಟ್ CEO, ಅಂಬೇಡ್ಕರ್‌ರವರ ಸಬಂಧಿ ಮತ್ತು ಬೌದ್ಧಿಕ ವಾರಸುದಾರ ಡಾ. ಆನಂದ್‌ ತೇಲ್ತುಂಬ್ಡೆಯವರನ್ನು 2020ರ ವರ್ಷದ ವ್ಯಕ್ತಿಯಾಗಿ ವ್ಯಾಂಕೋವರ್ ಮೂಲದ ಆನ್‌ಲೈನ್ ನಿಯತಕಾಲಿಕ ರ್ಯಾಡಿಕಲ್ ದೇಸಿ ಘೋಷಿಸಿತ್ತು.

ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದ  ಬಡ ಭೂಹೀನ ಕೂಲಿಕಾರ್ಮಿಕರ ಕುಟುಂಬದಲ್ಲಿ ಜನಿಸಿದ ಪ್ರೊ. ಆನಂದ್‌ ತೇಲ್ತುಂಬ್ಡೆ ಅವರು ದೇಶದ ಅತ್ಯುತ್ತಮ ವಿದ್ಯಾವಂತ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಅವರು ಅದ್ಭುತ ಶೈಕ್ಷಣಿಕ ಮತ್ತು ವೃತ್ತಿಜೀವನವನ್ನು ಹೊಂದಿದ್ದಾರೆ. ದೇಶದ ಅತ್ಯುನ್ನತ ಗಣ್ಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಹಲವು ಕಂಪನಿಗಳಿಗೆ ನಾಯಕತ್ವ ಕೊಟ್ಟಿದ್ದಾರೆ ಮತ್ತು ಅನೇಕ ಪ್ರಶಸ್ತಿ, ಪುರಸ್ಕಾರಗಳು ಅವರನ್ನು ಹುಡುಕಿಕೊಂಡುಬಂದಿವೆ. ಭಾರತದಲ್ಲಿನ ಜಾತಿ ಪದ್ದತಿ, ಅಸಮಾನತೆ ಬಗ್ಗೆ, ಅಂಬೇಡ್ಕರ್‌ರವರ ಕುರಿತು 29 ಪುಸ್ತಕಗಳನ್ನು ರಚಿಸಿರುವ ತೇಲ್ತುಂಬ್ಡೆ ಸಾವಿರಾರು ಲೇಖನಗಳನ್ನು ಬರೆದಿದ್ದಾರೆ.

ಇದನ್ನೂ ಓದಿ: ದೇಶದ ಸಾಕ್ಷಿಪ್ರಜ್ಞೆ ಬಾಬಾಸಾಹೇಬರ ಬೌದ್ಧಿಕ ವಾರಸುದಾರ: ಚಿಂತಕ ಆನಂದ್ ತೇಲ್ತುಂಬ್ಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...