Homeಮುಖಪುಟಭೀಮಾ ಕೋರೆಗಾಂವ್: ಚಿಂತಕ ಆನಂದ್ ತೇಲ್ತುಂಬ್ಡೆರವರಿಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್: ಚಿಂತಕ ಆನಂದ್ ತೇಲ್ತುಂಬ್ಡೆರವರಿಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯಡಿ ಬಂಧಿತರಾಗಿದ್ದ ಖ್ಯಾತ ಮಾನವ ಹಕ್ಕು ಹೋರಾಟಗಾರ, ಚಿಂತಕ ಪ್ರೊ. ಆನಂದ್ ತೇಲ್ತುಂಬ್ಡೆರವರಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ.

ತಮ್ಮ ಜಾಮೀನು ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯ ತಿರಸ್ಕರಿಸಿರುವುದನ್ನು ಪ್ರಶ್ನಸಿ ತೇಲ್ತುಬ್ಡೆಯವರು 2021ರಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ಜಸ್ಟೀಸ್ ಎ.ಎಸ್ ಗಡ್ಕರಿ ಮತ್ತು ಮಿಲಿಂಡ್ ಜಾಧವ್‌ರವರಿದ್ದ ವಿಭಾಗೀಯ ಪೀಠ ಜಾಮೀನು ಮಂಜೂರು ಮಾಡಿದೆ.

ಡಿಸೆಂಬರ್ 31, 2017ರಂದ ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷತ್ ಪ್ರಕರಣದ ಆರೋಪಿ ಆಗಿರುವ ಆನಂದ್ ತೇಲ್ತುಂಬೆ ಅವರು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ 2020ರ ಏಪ್ರಿಲ್ 14ರ ಡಾ.ಬಿ.ಆರ್. ಅಂಬೇಡ್ಕರ್ ಜನ್ಮದಿನದಂದು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಶರಣರಾಗಿದ್ದರು.

ಯುಎಪಿಎಯ ಸೆಕ್ಷನ್ 38 ಮತ್ತು 39 ಹೊರತುಪಡಿಸಿ ಸೆಕ್ಷನ್ 13, 16 ಮತ್ತು 18 ರ ಅಡಿಯಲ್ಲಿ ಅಪರಾಧಗಳನ್ನು ಮಾಡಲಾಗಿಲ್ಲ ಎಂದು ಗಮನಿಸಿದ ನ್ಯಾಯಾಲಯ ತಲಾ ಒಂದು ಲಕ್ಷ ರೂ.ಗಳ ಎರಡು ಶ್ಯೂರಿಟಿ ಪಿಆರ್ ಬಾಂಡ್ ಮೇಲೆ ಜಾಮೀನು ನೀಡಿದೆ. ಆದರೆ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಲು ಎನ್‌ಐಎಗೆ ಒಂದು ವಾರ ಕಾಲಾವಕಾಶ ನೀಡಿರುವ ನ್ಯಾಯಾಲಯ ಈ ಜಾಮೀನಿನಗೆ ಒಂದು ವಾರಗಳ ತಡೆಯಾಜ್ಞೆ ಸಹ ನೀಡಿದೆ. ಹಾಗಾಗಿ ಒಂದು ವಾರಗಳ ಕಾಲ ತೇಲ್ತುಂಬ್ಡೆಯವರು ಬಿಡುಗಡೆಯಾಗುವುದಿಲ್ಲ.

ಏನಿದು ಪ್ರಕರಣ

2018 ರಲ್ಲಿ ಭೀಮಾಕೊರೆಗಾವ್‌ನಲ್ಲಿ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ, 200 ವರ್ಷಗಳ ಹಿಂದಿನ ಪೇಶ್ವಾಗಳ ವಿರುದ್ದದ ಯುದ್ದದಲ್ಲಿ ಜಯಗಳಿಸಿದ ಮಹರ್‌ ಜನಾಂಗದ 200ನೇ ವರ್ಷದ ಆಚರಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರ ನಡೆದಿತ್ತು. ಈ ಸಂಬಂಧ ಆನಂದ್‌ ತೆಲ್ತುಂಬ್ಡೆಯವರ ಮೇಲೆಯೂ ಸಹ ಪ್ರಕರಣ ದಾಖಲಾಗಿದ್ದು, ಇದು ಪ್ರಭುತ್ವ ಪ್ರಾಯೋಜಿತ ಪಿತೂರಿ ಎಂದು ಆನಂದ್‌ ತೆಲ್ತುಂಬ್ಡೆಯವರು ಆರೋಪಿಸಿದ್ದಾರೆ.

ಆನಂತರ ಅವರು ಪ್ರಧಾನಿ  ಮೋದಿಯವರನ್ನು ಹತ್ಯೆಗೈಯಲು ಸಂಚು ರೂಪಿಸಿದ ನಿಷೇದಿತ ಮಾವೋವಾದಿ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಎನ್‌ಐಎ ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯಿದೆ” (ಯುಎಪಿಎ) ಪ್ರಕರಣಗಳನ್ನು ಹೇರಿತ್ತು.

ಭಾರತದ ಹೆಸರಾಂತ ಚಿಂತಕ, IIM ಅಹಮದಾಬಾದ್‍ನ ಮೊದಲ ಹಳೆಯ ವಿದ್ಯಾರ್ಥಿ, ಮೊದಲ IIT ಪ್ರೊಫೆಸರ್ ಹಾಗೂ ಮೊದಲ ಕಾ‍ರ್ಪೊರೇಟ್ CEO, ಅಂಬೇಡ್ಕರ್‌ರವರ ಸಬಂಧಿ ಮತ್ತು ಬೌದ್ಧಿಕ ವಾರಸುದಾರ ಡಾ. ಆನಂದ್‌ ತೇಲ್ತುಂಬ್ಡೆಯವರನ್ನು 2020ರ ವರ್ಷದ ವ್ಯಕ್ತಿಯಾಗಿ ವ್ಯಾಂಕೋವರ್ ಮೂಲದ ಆನ್‌ಲೈನ್ ನಿಯತಕಾಲಿಕ ರ್ಯಾಡಿಕಲ್ ದೇಸಿ ಘೋಷಿಸಿತ್ತು.

ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದ  ಬಡ ಭೂಹೀನ ಕೂಲಿಕಾರ್ಮಿಕರ ಕುಟುಂಬದಲ್ಲಿ ಜನಿಸಿದ ಪ್ರೊ. ಆನಂದ್‌ ತೇಲ್ತುಂಬ್ಡೆ ಅವರು ದೇಶದ ಅತ್ಯುತ್ತಮ ವಿದ್ಯಾವಂತ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಅವರು ಅದ್ಭುತ ಶೈಕ್ಷಣಿಕ ಮತ್ತು ವೃತ್ತಿಜೀವನವನ್ನು ಹೊಂದಿದ್ದಾರೆ. ದೇಶದ ಅತ್ಯುನ್ನತ ಗಣ್ಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಹಲವು ಕಂಪನಿಗಳಿಗೆ ನಾಯಕತ್ವ ಕೊಟ್ಟಿದ್ದಾರೆ ಮತ್ತು ಅನೇಕ ಪ್ರಶಸ್ತಿ, ಪುರಸ್ಕಾರಗಳು ಅವರನ್ನು ಹುಡುಕಿಕೊಂಡುಬಂದಿವೆ. ಭಾರತದಲ್ಲಿನ ಜಾತಿ ಪದ್ದತಿ, ಅಸಮಾನತೆ ಬಗ್ಗೆ, ಅಂಬೇಡ್ಕರ್‌ರವರ ಕುರಿತು 29 ಪುಸ್ತಕಗಳನ್ನು ರಚಿಸಿರುವ ತೇಲ್ತುಂಬ್ಡೆ ಸಾವಿರಾರು ಲೇಖನಗಳನ್ನು ಬರೆದಿದ್ದಾರೆ.

ಇದನ್ನೂ ಓದಿ: ದೇಶದ ಸಾಕ್ಷಿಪ್ರಜ್ಞೆ ಬಾಬಾಸಾಹೇಬರ ಬೌದ್ಧಿಕ ವಾರಸುದಾರ: ಚಿಂತಕ ಆನಂದ್ ತೇಲ್ತುಂಬ್ಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...