Homeಮುಖಪುಟಭೀಮಾಕೊರೆಗಾಂವ್ ಪ್ರಕರಣ: ಕ್ರಾಂತಿಕಾರಿ ಕವಿ ವರವರ ರಾವ್‌ಗೆ ಸುಪ್ರೀಂನಿಂದ ಜಾಮೀನು

ಭೀಮಾಕೊರೆಗಾಂವ್ ಪ್ರಕರಣ: ಕ್ರಾಂತಿಕಾರಿ ಕವಿ ವರವರ ರಾವ್‌ಗೆ ಸುಪ್ರೀಂನಿಂದ ಜಾಮೀನು

- Advertisement -
- Advertisement -

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಎತ್ತಿದ್ದ ಆಕ್ಷೇಪಣೆಗಳನ್ನು ತಿರಸ್ಕರಿಸಿರುದ ಸುಪ್ರೀಂ ಕೋರ್ಟ್ ಬುಧವಾರ ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ಕ್ರಾಂತಿಕಾರಿ ಕವಿ ವರವರ ರಾವ್‌ಗೆ ವೈದ್ಯಕೀಯ ಕಾರಣಗಳಿಗಾಗಿ ನಿಯಮಿತ ಜಾಮೀನು ನೀಡಿದೆ.

“ಮೇಲ್ಮನವಿದಾರರ ವೈದ್ಯಕೀಯ ಸ್ಥಿತಿಯು ಸ್ವಲ್ಪ ಸಮಯದವರೆಗೆ ಸುಧಾರಿಸಿಲ್ಲ, ಈ ಹಿಂದೆ (ಬಾಂಬೆ ಹೈಕೋರ್ಟ್) ನೀಡಿದ್ದ ಜಾಮೀನಿನ ಸೌಲಭ್ಯವನ್ನು ಹಿಂತೆಗೆದುಕೊಳ್ಳಲಾಗಿದೆ. ಒಟ್ಟಾರೆ ಸನ್ನಿವೇಶಗಳನ್ನು ಪರಿಗಣಿಸಿ, ಮೇಲ್ಮನವಿದಾರರು ವೈದ್ಯಕೀಯ ಆಧಾರದ ಮೇಲೆ ಜಾಮೀನು ಪಡೆಯಲು ಅರ್ಹರಾಗಿದ್ದಾರೆ” ಎಂದು ನ್ಯಾಯಮೂರ್ತಿಗಳಾದ ಯು.ಯು. ಲಲಿತ್, ಅನಿರುದ್ಧ ಬೋಸ್ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಆದೇಶಿಸಿದೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರೋಪಪಟ್ಟಿ ಸಲ್ಲಿಸಲಾಗಿದ್ದರೂ ಆರೋಪಗಳ ರಚನೆಗೆ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗಿಲ್ಲ ಎಂದು ನ್ಯಾಯಾಲಯವು ಹೇಳಿದೆ. ಈ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಎರಡೂವರೆ ವರ್ಷ ಜೈಲು ವಾಸ ಅನುಭವಿಸಿದ್ದನ್ನು ಕೂಡ ನ್ಯಾಯಾಲಯ ಗಣನೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ: ವರವರ ರಾವ್ ಅವರ ಪುಸ್ತಕದಿಂದ, ‘ಹಿಂದುತ್ವ’, ‘ಸಂಘಪರಿವಾರ’ ಸೇರಿದಂತೆ ಹಲವು ಪದಗಳನ್ನು ಕೈಬಿಟ್ಟ ಪ್ರಕಾಶನ ಸಂಸ್ಥೆ!

ಫೆಬ್ರವರಿ 2021 ರಲ್ಲಿ, ಹೈಕೋರ್ಟ್ ಅವರಿಗೆ ಆರು ತಿಂಗಳ ಕಾಲ ವೈದ್ಯಕೀಯ ಜಾಮೀನು ನೀಡಿತ್ತು. ಇದನ್ನು ಕಾಲಕಾಲಕ್ಕೆ ವಿಸ್ತರಿಸಲಾಗಿದ್ದರೂ, ಈ ವರ್ಷದ ಏಪ್ರಿಲ್‌ನಲ್ಲಿ ಹೈಕೋರ್ಟ್ ಶಾಶ್ವತ ಜಾಮೀನಿಗಾಗಿ ಸಲ್ಲಿಸಿದ್ದ ಅವರ ಮನವಿಯನ್ನು ತಿರಸ್ಕರಿಸಿತ್ತು. ಅಲ್ಲದೆ ಮೂರು ತಿಂಗಳೊಳಗೆ ಶರಣಾಗುವಂತೆ ಕೇಳಿತ್ತು. ಆದರೆ ಇದೀಗ ಸುಪ್ರೀಂಕೋರ್ಟ್‌ ಅವರ ಶರಣಾಗುವ ಷರತ್ತನ್ನು ತೆಗೆದುಹಾಕಿದ್ದು, ಎನ್‌ಐಎ ವಿಶೇಷ ನ್ಯಾಯಾಲಯದ ಒಪ್ಪಿಗೆಯಿಲ್ಲದೆ ಮುಂಬೈ ತೊರೆಯಬಾರದು ಎಂದು ನಿರ್ದೇಶಿಸಿದೆ.

ವೈದ್ಯಕೀಯ ಕಾರಣಗಳಿಗಾಗಿ ಮಾತ್ರ ಜಾಮೀನು ನೀಡಲಾಗಿದ್ದು ಅದನ್ನು ಪ್ರಕರಣದ ಅರ್ಹತೆಯ ಪ್ರತಿಬಿಂಬವಾಗಿ ನೋಡಬಾರದು ಎಂದು ಅದು ಸ್ಪಷ್ಟಪಡಿಸಿದೆ. ಈ ಆದೇಶವು ಇತರ ಆರೋಪಿಗಳ ಪ್ರಕರಣಗಳಿಗೆ ಪೂರ್ವನಿದರ್ಶನವಾಗುವುದಿಲ್ಲ ಎಂದು ಪೀಠ ಹೇಳಿದೆ.

ವರವರ ರಾವ್ ಪರ ವಾದ ಮಂಡಿಸಿದ ಹಿರಿಯ ವಕೀಲ ಆನಂದ್ ಗ್ರೋವರ್, “ವಿಚಾರಣೆಗೆ ಕನಿಷ್ಠ 10 ವರ್ಷಗಳು ಬೇಕು. ವರವರ ಅವರು ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದು ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆಗಳನ್ನು ಹೊಂದಿದ್ದಾರೆ”ಎಂದು ನ್ಯಾಯಾಲಯದಲ್ಲಿ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಎನ್‌ಐಎ ಪರ ವಕೀಲರಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು,“ಪ್ರಕರಣ ಕೇವಲ ಒಂದೂವರೆ ವರ್ಷ ತೆಗೆದುಕೊಳ್ಳುತ್ತದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಳದಿಂಗಳು ಕತ್ತಲೆಗೆ ಜಾರಿದಾಗ : ಕ್ರಾಂತಿಕಾರಿ ಕವಿ ವರವರ ರಾವ್ ಜೀವನ ಚಿತ್ರಣ

ಎಸ್‌ಸಿ ಆದೇಶಕ್ಕೆ ಪ್ರತಿಕ್ರಿಯಿಸಿದ ವರವರ ರಾವ್ ಅವರ ಸೋದರಳಿಯ ಎನ್. ವೇಣುಗೋಪಾಲ್, “ನಮ್ಮ ಆತಂಕ ಈಗ ಕಡಿಮೆಯಾಗಿದೆ. ಆದರೆ ಅವರು ಮುಂಬೈನಲ್ಲಿ ವಾಸಿಸಲು ಸಾಧ್ಯವಾಗುವುದಿಲ್ಲ. ಏಕೆಂದರೆ ಅವರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಗುತ್ತದೆ, ಅದನ್ನು ಅವರು ತೆಲಂಗಾಣದಲ್ಲಿ ಪಿಂಚಣಿ ಯೋಜನೆಯ ಮೂಲಕ ಅದನ್ನು ಪಡೆಯಬಹುದು” ಎಂದು ಹೇಳಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...