Homeಮುಖಪುಟಭೀಮಾಕೊರೆಗಾಂವ್ ಪ್ರಕರಣ: ಕ್ರಾಂತಿಕಾರಿ ಕವಿ ವರವರ ರಾವ್‌ಗೆ ಸುಪ್ರೀಂನಿಂದ ಜಾಮೀನು

ಭೀಮಾಕೊರೆಗಾಂವ್ ಪ್ರಕರಣ: ಕ್ರಾಂತಿಕಾರಿ ಕವಿ ವರವರ ರಾವ್‌ಗೆ ಸುಪ್ರೀಂನಿಂದ ಜಾಮೀನು

- Advertisement -
- Advertisement -

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಎತ್ತಿದ್ದ ಆಕ್ಷೇಪಣೆಗಳನ್ನು ತಿರಸ್ಕರಿಸಿರುದ ಸುಪ್ರೀಂ ಕೋರ್ಟ್ ಬುಧವಾರ ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ಕ್ರಾಂತಿಕಾರಿ ಕವಿ ವರವರ ರಾವ್‌ಗೆ ವೈದ್ಯಕೀಯ ಕಾರಣಗಳಿಗಾಗಿ ನಿಯಮಿತ ಜಾಮೀನು ನೀಡಿದೆ.

“ಮೇಲ್ಮನವಿದಾರರ ವೈದ್ಯಕೀಯ ಸ್ಥಿತಿಯು ಸ್ವಲ್ಪ ಸಮಯದವರೆಗೆ ಸುಧಾರಿಸಿಲ್ಲ, ಈ ಹಿಂದೆ (ಬಾಂಬೆ ಹೈಕೋರ್ಟ್) ನೀಡಿದ್ದ ಜಾಮೀನಿನ ಸೌಲಭ್ಯವನ್ನು ಹಿಂತೆಗೆದುಕೊಳ್ಳಲಾಗಿದೆ. ಒಟ್ಟಾರೆ ಸನ್ನಿವೇಶಗಳನ್ನು ಪರಿಗಣಿಸಿ, ಮೇಲ್ಮನವಿದಾರರು ವೈದ್ಯಕೀಯ ಆಧಾರದ ಮೇಲೆ ಜಾಮೀನು ಪಡೆಯಲು ಅರ್ಹರಾಗಿದ್ದಾರೆ” ಎಂದು ನ್ಯಾಯಮೂರ್ತಿಗಳಾದ ಯು.ಯು. ಲಲಿತ್, ಅನಿರುದ್ಧ ಬೋಸ್ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಆದೇಶಿಸಿದೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರೋಪಪಟ್ಟಿ ಸಲ್ಲಿಸಲಾಗಿದ್ದರೂ ಆರೋಪಗಳ ರಚನೆಗೆ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗಿಲ್ಲ ಎಂದು ನ್ಯಾಯಾಲಯವು ಹೇಳಿದೆ. ಈ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಎರಡೂವರೆ ವರ್ಷ ಜೈಲು ವಾಸ ಅನುಭವಿಸಿದ್ದನ್ನು ಕೂಡ ನ್ಯಾಯಾಲಯ ಗಣನೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ: ವರವರ ರಾವ್ ಅವರ ಪುಸ್ತಕದಿಂದ, ‘ಹಿಂದುತ್ವ’, ‘ಸಂಘಪರಿವಾರ’ ಸೇರಿದಂತೆ ಹಲವು ಪದಗಳನ್ನು ಕೈಬಿಟ್ಟ ಪ್ರಕಾಶನ ಸಂಸ್ಥೆ!

ಫೆಬ್ರವರಿ 2021 ರಲ್ಲಿ, ಹೈಕೋರ್ಟ್ ಅವರಿಗೆ ಆರು ತಿಂಗಳ ಕಾಲ ವೈದ್ಯಕೀಯ ಜಾಮೀನು ನೀಡಿತ್ತು. ಇದನ್ನು ಕಾಲಕಾಲಕ್ಕೆ ವಿಸ್ತರಿಸಲಾಗಿದ್ದರೂ, ಈ ವರ್ಷದ ಏಪ್ರಿಲ್‌ನಲ್ಲಿ ಹೈಕೋರ್ಟ್ ಶಾಶ್ವತ ಜಾಮೀನಿಗಾಗಿ ಸಲ್ಲಿಸಿದ್ದ ಅವರ ಮನವಿಯನ್ನು ತಿರಸ್ಕರಿಸಿತ್ತು. ಅಲ್ಲದೆ ಮೂರು ತಿಂಗಳೊಳಗೆ ಶರಣಾಗುವಂತೆ ಕೇಳಿತ್ತು. ಆದರೆ ಇದೀಗ ಸುಪ್ರೀಂಕೋರ್ಟ್‌ ಅವರ ಶರಣಾಗುವ ಷರತ್ತನ್ನು ತೆಗೆದುಹಾಕಿದ್ದು, ಎನ್‌ಐಎ ವಿಶೇಷ ನ್ಯಾಯಾಲಯದ ಒಪ್ಪಿಗೆಯಿಲ್ಲದೆ ಮುಂಬೈ ತೊರೆಯಬಾರದು ಎಂದು ನಿರ್ದೇಶಿಸಿದೆ.

ವೈದ್ಯಕೀಯ ಕಾರಣಗಳಿಗಾಗಿ ಮಾತ್ರ ಜಾಮೀನು ನೀಡಲಾಗಿದ್ದು ಅದನ್ನು ಪ್ರಕರಣದ ಅರ್ಹತೆಯ ಪ್ರತಿಬಿಂಬವಾಗಿ ನೋಡಬಾರದು ಎಂದು ಅದು ಸ್ಪಷ್ಟಪಡಿಸಿದೆ. ಈ ಆದೇಶವು ಇತರ ಆರೋಪಿಗಳ ಪ್ರಕರಣಗಳಿಗೆ ಪೂರ್ವನಿದರ್ಶನವಾಗುವುದಿಲ್ಲ ಎಂದು ಪೀಠ ಹೇಳಿದೆ.

ವರವರ ರಾವ್ ಪರ ವಾದ ಮಂಡಿಸಿದ ಹಿರಿಯ ವಕೀಲ ಆನಂದ್ ಗ್ರೋವರ್, “ವಿಚಾರಣೆಗೆ ಕನಿಷ್ಠ 10 ವರ್ಷಗಳು ಬೇಕು. ವರವರ ಅವರು ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದು ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆಗಳನ್ನು ಹೊಂದಿದ್ದಾರೆ”ಎಂದು ನ್ಯಾಯಾಲಯದಲ್ಲಿ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಎನ್‌ಐಎ ಪರ ವಕೀಲರಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು,“ಪ್ರಕರಣ ಕೇವಲ ಒಂದೂವರೆ ವರ್ಷ ತೆಗೆದುಕೊಳ್ಳುತ್ತದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಳದಿಂಗಳು ಕತ್ತಲೆಗೆ ಜಾರಿದಾಗ : ಕ್ರಾಂತಿಕಾರಿ ಕವಿ ವರವರ ರಾವ್ ಜೀವನ ಚಿತ್ರಣ

ಎಸ್‌ಸಿ ಆದೇಶಕ್ಕೆ ಪ್ರತಿಕ್ರಿಯಿಸಿದ ವರವರ ರಾವ್ ಅವರ ಸೋದರಳಿಯ ಎನ್. ವೇಣುಗೋಪಾಲ್, “ನಮ್ಮ ಆತಂಕ ಈಗ ಕಡಿಮೆಯಾಗಿದೆ. ಆದರೆ ಅವರು ಮುಂಬೈನಲ್ಲಿ ವಾಸಿಸಲು ಸಾಧ್ಯವಾಗುವುದಿಲ್ಲ. ಏಕೆಂದರೆ ಅವರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಗುತ್ತದೆ, ಅದನ್ನು ಅವರು ತೆಲಂಗಾಣದಲ್ಲಿ ಪಿಂಚಣಿ ಯೋಜನೆಯ ಮೂಲಕ ಅದನ್ನು ಪಡೆಯಬಹುದು” ಎಂದು ಹೇಳಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...