Homeಮುಖಪುಟಭೀಮಾಕೊರೆಗಾಂವ್ ಪ್ರಕರಣ: ಕ್ರಾಂತಿಕಾರಿ ಕವಿ ವರವರ ರಾವ್‌ಗೆ ಸುಪ್ರೀಂನಿಂದ ಜಾಮೀನು

ಭೀಮಾಕೊರೆಗಾಂವ್ ಪ್ರಕರಣ: ಕ್ರಾಂತಿಕಾರಿ ಕವಿ ವರವರ ರಾವ್‌ಗೆ ಸುಪ್ರೀಂನಿಂದ ಜಾಮೀನು

- Advertisement -
- Advertisement -

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಎತ್ತಿದ್ದ ಆಕ್ಷೇಪಣೆಗಳನ್ನು ತಿರಸ್ಕರಿಸಿರುದ ಸುಪ್ರೀಂ ಕೋರ್ಟ್ ಬುಧವಾರ ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ಕ್ರಾಂತಿಕಾರಿ ಕವಿ ವರವರ ರಾವ್‌ಗೆ ವೈದ್ಯಕೀಯ ಕಾರಣಗಳಿಗಾಗಿ ನಿಯಮಿತ ಜಾಮೀನು ನೀಡಿದೆ.

“ಮೇಲ್ಮನವಿದಾರರ ವೈದ್ಯಕೀಯ ಸ್ಥಿತಿಯು ಸ್ವಲ್ಪ ಸಮಯದವರೆಗೆ ಸುಧಾರಿಸಿಲ್ಲ, ಈ ಹಿಂದೆ (ಬಾಂಬೆ ಹೈಕೋರ್ಟ್) ನೀಡಿದ್ದ ಜಾಮೀನಿನ ಸೌಲಭ್ಯವನ್ನು ಹಿಂತೆಗೆದುಕೊಳ್ಳಲಾಗಿದೆ. ಒಟ್ಟಾರೆ ಸನ್ನಿವೇಶಗಳನ್ನು ಪರಿಗಣಿಸಿ, ಮೇಲ್ಮನವಿದಾರರು ವೈದ್ಯಕೀಯ ಆಧಾರದ ಮೇಲೆ ಜಾಮೀನು ಪಡೆಯಲು ಅರ್ಹರಾಗಿದ್ದಾರೆ” ಎಂದು ನ್ಯಾಯಮೂರ್ತಿಗಳಾದ ಯು.ಯು. ಲಲಿತ್, ಅನಿರುದ್ಧ ಬೋಸ್ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಆದೇಶಿಸಿದೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರೋಪಪಟ್ಟಿ ಸಲ್ಲಿಸಲಾಗಿದ್ದರೂ ಆರೋಪಗಳ ರಚನೆಗೆ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗಿಲ್ಲ ಎಂದು ನ್ಯಾಯಾಲಯವು ಹೇಳಿದೆ. ಈ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಎರಡೂವರೆ ವರ್ಷ ಜೈಲು ವಾಸ ಅನುಭವಿಸಿದ್ದನ್ನು ಕೂಡ ನ್ಯಾಯಾಲಯ ಗಣನೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ: ವರವರ ರಾವ್ ಅವರ ಪುಸ್ತಕದಿಂದ, ‘ಹಿಂದುತ್ವ’, ‘ಸಂಘಪರಿವಾರ’ ಸೇರಿದಂತೆ ಹಲವು ಪದಗಳನ್ನು ಕೈಬಿಟ್ಟ ಪ್ರಕಾಶನ ಸಂಸ್ಥೆ!

ಫೆಬ್ರವರಿ 2021 ರಲ್ಲಿ, ಹೈಕೋರ್ಟ್ ಅವರಿಗೆ ಆರು ತಿಂಗಳ ಕಾಲ ವೈದ್ಯಕೀಯ ಜಾಮೀನು ನೀಡಿತ್ತು. ಇದನ್ನು ಕಾಲಕಾಲಕ್ಕೆ ವಿಸ್ತರಿಸಲಾಗಿದ್ದರೂ, ಈ ವರ್ಷದ ಏಪ್ರಿಲ್‌ನಲ್ಲಿ ಹೈಕೋರ್ಟ್ ಶಾಶ್ವತ ಜಾಮೀನಿಗಾಗಿ ಸಲ್ಲಿಸಿದ್ದ ಅವರ ಮನವಿಯನ್ನು ತಿರಸ್ಕರಿಸಿತ್ತು. ಅಲ್ಲದೆ ಮೂರು ತಿಂಗಳೊಳಗೆ ಶರಣಾಗುವಂತೆ ಕೇಳಿತ್ತು. ಆದರೆ ಇದೀಗ ಸುಪ್ರೀಂಕೋರ್ಟ್‌ ಅವರ ಶರಣಾಗುವ ಷರತ್ತನ್ನು ತೆಗೆದುಹಾಕಿದ್ದು, ಎನ್‌ಐಎ ವಿಶೇಷ ನ್ಯಾಯಾಲಯದ ಒಪ್ಪಿಗೆಯಿಲ್ಲದೆ ಮುಂಬೈ ತೊರೆಯಬಾರದು ಎಂದು ನಿರ್ದೇಶಿಸಿದೆ.

ವೈದ್ಯಕೀಯ ಕಾರಣಗಳಿಗಾಗಿ ಮಾತ್ರ ಜಾಮೀನು ನೀಡಲಾಗಿದ್ದು ಅದನ್ನು ಪ್ರಕರಣದ ಅರ್ಹತೆಯ ಪ್ರತಿಬಿಂಬವಾಗಿ ನೋಡಬಾರದು ಎಂದು ಅದು ಸ್ಪಷ್ಟಪಡಿಸಿದೆ. ಈ ಆದೇಶವು ಇತರ ಆರೋಪಿಗಳ ಪ್ರಕರಣಗಳಿಗೆ ಪೂರ್ವನಿದರ್ಶನವಾಗುವುದಿಲ್ಲ ಎಂದು ಪೀಠ ಹೇಳಿದೆ.

ವರವರ ರಾವ್ ಪರ ವಾದ ಮಂಡಿಸಿದ ಹಿರಿಯ ವಕೀಲ ಆನಂದ್ ಗ್ರೋವರ್, “ವಿಚಾರಣೆಗೆ ಕನಿಷ್ಠ 10 ವರ್ಷಗಳು ಬೇಕು. ವರವರ ಅವರು ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದು ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆಗಳನ್ನು ಹೊಂದಿದ್ದಾರೆ”ಎಂದು ನ್ಯಾಯಾಲಯದಲ್ಲಿ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಎನ್‌ಐಎ ಪರ ವಕೀಲರಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು,“ಪ್ರಕರಣ ಕೇವಲ ಒಂದೂವರೆ ವರ್ಷ ತೆಗೆದುಕೊಳ್ಳುತ್ತದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಳದಿಂಗಳು ಕತ್ತಲೆಗೆ ಜಾರಿದಾಗ : ಕ್ರಾಂತಿಕಾರಿ ಕವಿ ವರವರ ರಾವ್ ಜೀವನ ಚಿತ್ರಣ

ಎಸ್‌ಸಿ ಆದೇಶಕ್ಕೆ ಪ್ರತಿಕ್ರಿಯಿಸಿದ ವರವರ ರಾವ್ ಅವರ ಸೋದರಳಿಯ ಎನ್. ವೇಣುಗೋಪಾಲ್, “ನಮ್ಮ ಆತಂಕ ಈಗ ಕಡಿಮೆಯಾಗಿದೆ. ಆದರೆ ಅವರು ಮುಂಬೈನಲ್ಲಿ ವಾಸಿಸಲು ಸಾಧ್ಯವಾಗುವುದಿಲ್ಲ. ಏಕೆಂದರೆ ಅವರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಗುತ್ತದೆ, ಅದನ್ನು ಅವರು ತೆಲಂಗಾಣದಲ್ಲಿ ಪಿಂಚಣಿ ಯೋಜನೆಯ ಮೂಲಕ ಅದನ್ನು ಪಡೆಯಬಹುದು” ಎಂದು ಹೇಳಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...