Homeಮುಖಪುಟಬೀದರ್ ಜಿಲ್ಲೆಯ ಮೊದಲ ಕಾದಂಬರಿಕಾರ ಸುಬ್ಬಣ್ಣ

ಬೀದರ್ ಜಿಲ್ಲೆಯ ಮೊದಲ ಕಾದಂಬರಿಕಾರ ಸುಬ್ಬಣ್ಣ

ಕಾದಂಬರಿ ಮನುಷ್ಯನ ಸಾಮಾಜಿಕ ಪಲ್ಲಟ

- Advertisement -
- Advertisement -

| ಭೀಮಾಶಂಕರ ಬಿರಾದಾರ |

ಕಾದಂಬರಿ ಮನುಷ್ಯನ ಸಾಮಾಜಿಕ ಪಲ್ಲಟ ಹಾಗೂ ಸಮಷ್ಟಿಯ ಬದುಕಿನ ವಿಶ್ಲೇಷಣೆಯ ಕಲಾತ್ಮಕ ಬರಹ. ಸಂಕೀರ್ಣವಾದ ಕಥಾ ಸಂವಿಧಾನವೂ ಹಾಗೂ ವಾಸ್ತವಿಕ ಘಟನೆಗಳನ್ನು ಚಿತ್ರಿಸುವ ದೀರ್ಘ ಕಥನ. ಪ್ರಜಾಪ್ರಭುತ್ವದ ಮೌಲ್ಯ ಮತ್ತು ಸಾಂಸ್ಕೃತಿಕ ಸ್ವಾತಂತ್ರ್ಯವು ಕಾದಂಬರಿಯ ಜಾಯಮಾನ. ನಾವೆಲ್‍ಗೆ ಸಂವಾದಿ ರೂಪ ಕನ್ನಡದಲ್ಲಿನ ಕಾದಂಬರಿ. 1899ರಲ್ಲಿ ಪ್ರಕಟಗೊಂಡ ಗುಲ್ವಾಡಿಯವರ ‘ಇಂದಿರಾಬಾಯಿ’ ಕನ್ನಡದ ಮೊದಲ ಸಾಮಾಜಿಕ ಕಾದಂಬರಿ. ಸಾಮ್ರಾಜ್ಯಶಾಹಿ, ವಸಾಹತು ಚಿಂತನೆ, ಇಂಗ್ಲಿಷ್ ಶಿಕ್ಷಣ, ಭಾರತೀಯ ಸಮಾಜದ ಮೇಲೆ ಒಡ್ಡುತ್ತಿರುವ ಆಧುನಿಕತೆ ಎಂಬ ಸಾಂಸ್ಕೃತಿಕ ಮತ್ತು ಬೌದ್ಧಿಕ ಯಜಮಾನ್ಯ, ಮನುಷ್ಯ ಸಂಬಂಧಗಳು ಆಕ್ರಮಿಸಿಕೊಂಡು ವ್ಯವಹಾರವಾಗಿಸಿದ ಜಾಗತೀಕರಣ ಇಂಥ ಅನೇಕ ಆಲೋಚನೆಗಳು ಮತ್ತು ಚಿಂತನೆಗಳು ಕನ್ನಡ ಕಾದಂಬರಿ ಪರಂಪರೆ ಒಂದು ಶತಮಾನಕ್ಕೂ ಹೆಚ್ಚುಕಾಲ ನಿರಂತರವಾಗಿ ಕಟ್ಟುತ್ತ ಬಂದಿದೆ. ಬೀದರ ಜಿಲ್ಲೆಯಲ್ಲಿ ಕಾದಂಬರಿ ಪ್ರಕಾರ ಸೃಷ್ಟಿಯಾದದ್ದು 1973ರಲ್ಲಿ. `ಸಿಂದಿ ಬನದಲ್ಲಿ ಸಿಕ್ಕವಳು’ ಕಾದಂಬರಿ ಬರೆಯುವ ಮೂಲಕ ಸುಬ್ಬಣ್ಣ ಅಂಬೆಸಂಗೆ ಜಿಲ್ಲೆಯ ಮೊದಲ ಕಾದಂಬರಿಕಾರರಾಗಿದ್ದಾರೆ. ಎಮ್.ಜಿ. ದೇಶಪಾಂಡೆ, ಯಶೋದಮ್ಮ ಸಿದ್ದಬಟ್ಟೆ, ಸುನಿತಾ ಬಿರಾದಾರ, ಗಣಪತಿ ಭೂರೆ, ಡಾ. ಜಯದೇವಿ ಗಾಯಕವಾಡ ಹೀಗೆ ಕೆಲವರು ಮಾತ್ರ ಜಿಲ್ಲೆಯಲ್ಲಿ ಕಾದಂಬರಿ ವಿನ್ಯಾಸ ಕಟ್ಟಿದ್ದಾರೆ. ಸುಬ್ಬಣ್ಣ ಅಂಬೆಸಂಗೆಯವರು ಸೃಜನಶೀಲ ಬರಹಗಾರರಾಗಿ ಕಾದಂಬರಿ, ಕಥೆ ಬರೆದಂತೆ ಭಾಷಾ ಚಿಂತಕರಾಗಿಯೂ ಗಮನ ಸೆಳೆಯುತ್ತಾರೆ.

ಭಾಲ್ಕಿ ತಾಲೂಕಿನ ಎಕಲಾಸಪೂರದ ಸುಬ್ಬಣ್ಣನವರು 1950 ಜೂನ್ 15ರಲ್ಲಿ ಜನಿಸಿದರು. ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು, ಗ್ರಾಮ ಪಂಚಾಯಿತಿ ಕಾರ್ಯದರ್ಶಿಯಾಗಿ, ಪ್ರೌಢಶಾಲಾ ಶಿಕ್ಷಕರಾಗಿ, ಕಾಲೇಜು ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಸದ್ಯ ಬೇಸಾಯದಲ್ಲಿ ತೊಡಗಿದ್ದಾರೆ. ಸುಬ್ಬಣ್ಣನವರ ‘ಸಿಂದಿಬನದಲ್ಲಿ ಸಿಕ್ಕವಳು’ ಕಾದಂಬರಿ ಸ್ತ್ರೀ ಕೇಂದ್ರೀತ ದುರಂತ ವಸ್ತುವನ್ನೊಳಗೊಂಡಿದೆ. ಕಥನ ವಿನ್ಯಾಸ ಸರಳವಾಗಿದ್ದರೂ ಒಂದು ಕಾಲದ ಸಾಮಾಜಿಕ ಮತ್ತು ಚಾರಿತ್ರಿಕ ಸಂದರ್ಭವನ್ನು ನೆನಪಿಸುತ್ತದೆ. ಕಾದಂಬರಿಗಳು ಭೂತ ಮತ್ತು ವರ್ತಮಾನಗಳೆರಡನ್ನು ತನ್ನ ಒಡಲೊಳಗಿಟ್ಟಿಕೊಂಡು ಭವಿಷ್ಯದ ಮರುವಿಶ್ಲೇಷಣೆಗೆ ಎಡೆಮಾಡಿಕೊಡುತ್ತವೆ. ಈ ಪ್ರದೇಶದ ಪ್ರಕ್ಷುಬ್ಧ ಕಾಲವೊಂದರ ಕ್ರೂರ ಸಂಗತಿಗಳನ್ನೂ ಇವರ ಕಾದಂಬರಿ ಕಥನಿಸುತ್ತದೆ. ಜತೆಗೆ ಧಾರ್ಮಿಕ ಮೂಲಭೂತವಾದಿತನ, ಪ್ರಭುತ್ವದ ಹಪಾಹಪಿತನ, ಸ್ತ್ರೀ ಅನುಭವಿಸಬಹುದಾದ ದೌರ್ಜನ್ಯದ ದುರಂತ, ಈ ಎಲ್ಲ ಬರ್ಬರತೆಗಳು ಒಳಗೊಂಡ ಸಮಾಜವೊಂದರ ಚಿತ್ರಣ ನೀಡುತ್ತದೆ. ಅಧಿಕಾರ ಕೇಂದ್ರೀತ ಸಿದ್ಧಾಂತಗಳು ಸೃಷ್ಟಿಸಿದ ದಮನಕಾರಿ ವ್ಯವಸ್ಥೆಯ ನಿಲುವುಗಳು ಸಮಾಜ, ಕುಟುಂಬ, ವ್ಯಕ್ತಿ ಮುಖ್ಯವಾಗಿ ಮಹಿಳೆಯ ಮೇಲೆ ಮಾಡುವ ಆಕ್ರಮಣಗಳು ಕಾದಂಬರಿಕಾರ ಖಚಿತವಾಗಿ ದಾಖಲಿಸಿದ್ದಾರೆ. ಪ್ರಭುತ್ವ ಮತ್ತು ಜನರ ನಡುವಿನ ಸೈದ್ಧಾಂತಿಕ ಭಿನ್ನತೆಗಳು, ಅದರಿಂದ ಉಂಟಾದ ದಂಗೆಗಳು ಮತ್ತು ದಂಗೆಗಳು ತಂದೊಡ್ಡುವ ವಿನಾಶಗಳು, ಮಹಿಳೆಯ ಅಸ್ತಿತ್ವದ ಮೇಲಿನ ಅಲೆಯಾಗಿವೆ. ಹೆಣ್ಣಿನ ಅನಿವಾರ್ಯತೆ ಮತ್ತು ಅಸಹಾಯಕ ಸ್ಥಿತಿಯಲ್ಲಿ ಜಾಗೃತಗೊಂಡ ಕೆಲವರ ‘ಪುರುಷತನ’ವು ಅವಳನ್ನು ಮುಕ್ಕುವಂತಾಗಿಸುವ ಅಂಶಗಳು ಕಾದಂಬರಿಯಲ್ಲಿ ಹಿಡಿದಿಟ್ಟಿದ್ದಾರೆ.

ಸುಬ್ಬಣ್ಣನವರು ‘ಅರಳು’, ‘ಚೇತನ’, ‘ಕಾಡಿನಲ್ಲಿ ಹಿಡಿದ ಗ್ರಹಣ ಗಂಗೆಯಲ್ಲಿ ಬಿಟ್ಟಿತು’, ‘ಬಳ್ಳಿಯ ಹೂ ಬಾಡದಿರಲಿ’ ಕಥಾ ಸಂಕಲನಗಳು ಪ್ರಕಟಿಸುವ ಮೂಲಕ ಜಿಲ್ಲೆಯ ಮುಖ್ಯ ಕಥೆಗಾರರಾಗಿದ್ದಾರೆ. ಆರಂಭದಲ್ಲಿ ನವೋದಯದ ದಟ್ಟ ಪ್ರಭಾವಕ್ಕೆ ಒಳಗಾಗಿದ್ದರೂ ನಂತರ ಹೆಚ್ಚು ಸಮಾಜ ಮತ್ತು ಸಮುದಾಯ ಕೇಂದ್ರಿತ ಕತೆಗಳು ಬರೆದಿದ್ದಾರೆ. ಪ್ರೀತಿ, ಪ್ರೇಮ, ಹತಾಶೆ, ನೆನಪುಗಳು ಒಂದೆಡೆಯಾದರೆ, ವೃದ್ಧಾಪ್ಯದಲ್ಲಿ ದುಡಿಯುವ, ದುಡಿದು ಬದುಕುವ ಅನಿವಾರ್ಯತೆ ಮತ್ತು ಜೀವನದ ಕ್ರೌರ್ಯ ಇವರ ಕತೆಗಳಲ್ಲಿ ಚಿತ್ರಿತಗೊಂಡಿವೆ. ಇವರ ಬಹುತೇಕ ಕತೆಗಳು ಮನೋವಿಶ್ಲೇಷಣಾ ಸಿದ್ಧಾಂತದ ನೆಲೆಯಲ್ಲಿ ರಚನೆಯಾಗಿವೆ. ಸಂಕೀರ್ಣಗೊಂಡ ಧಾರ್ಮಿಕತೆ ಮತ್ತು ಅದರ ಆಚರಣೆಗಳ ಭ್ರಷ್ಟತೆಯನ್ನು ನೇರವಾಗಿ ಪ್ರತಿರೋಧಿಸುವ ಮಟ್ಟದ ಪಾತ್ರಗಳು ಅವರ ಕತೆಗಳಲ್ಲಿ ಕಾಣುವುದಿಲ್ಲ. ಮನೋರೋಗಗಳು ಮೌಢ್ಯದ ರೂಪವಾಗಿ ದೇವರೆದುರಿಗೆ ಅನಾವರಣಗೊಳ್ಳುವ ಬಗೆಯನ್ನು ಮಾತ್ರ ಚಿತ್ರಿಸುವುದು ಕತೆಗಾರರಿಗೆ ಮುಖ್ಯವಾದದ್ದು ಕಾಣುತ್ತದೆ. ಹೀಗೆ ಸುಬ್ಬಣ್ಣನವರ ಕತೆಗಳು ಸಮಾಜದಲ್ಲಿ ಸಂಭವಿಸುವ ಸಂಗತಿಗಳ ಬಗೆಗೆ ನೇರವಾಗಿ ಮಾತನಾಡುತ್ತವೆ.

‘ಬೀದರ ಜಿಲ್ಲೆಯ ಕನ್ನಡ ಭಾಷಾ ಕುಸುಮ’ (1996) ಮತ್ತು ಗುಲಬರ್ಗಾ ವಿಶ್ವವಿದ್ಯಾಲಯ ಪ್ರಸಾರಾಂಗ ಪ್ರಕಟಿಸಿದ ‘ಗಡಿನಾಡು ಭಾಷಾ ಸಮಸ್ಯೆ’ ಕೃತಿ ಬರೆದ ಸುಬ್ಬಣ್ಣನವರು ಜಿಲ್ಲೆಯ ಮೊದಲ ಭಾಷಾ ಚಿಂತಕ. ಬೀದರ ಕನ್ನಡ ಭಾಷಾ ಅಧ್ಯಯನಕ್ಕೆ ಈ ಎರಡು ಕೃತಿಗಳು ಪ್ರಧಾನ ಮಾರ್ಗಗಳಾಗುತ್ತವೆ. ಬೀದರ ಕನ್ನಡ ಭಾಷೆಯ ರಚನೆ ಮತ್ತು ಅನ್ಯ ಭಾಷೆಗಳ ಪ್ರಭಾವ ಕುರಿತು ಸೂಕ್ಷ್ಮ ಚಿಂತನೆ ನಡೆಸಿ, ಕ್ಷೇತ್ರ ಕಾರ್ಯ ಕೈಗೊಂಡು ಅಧ್ಯಯನ ಪೂರ್ಣ ಕೃತಿಗಳು ಬರೆದಿದ್ದಾರೆ.

ಆಡುಮಾತಿನಿಂದ ಹಿಡಿದು ವ್ಯವಹಾರ, ಮಾರುಕಟ್ಟೆ, ಆಡಳಿತ, ಗ್ರಂಥಸ್ಥ, ಜನಪದ ಮೊದಲಾದ ಕ್ಷೇತ್ರಗಳಲ್ಲಿ ಬಳಕೆಯಾಗುವ ಭಾಷಾ ಭಿನ್ನತೆಯನ್ನು ಗುರುತಿಸಿ ನಿದರ್ಶನ ಸಹಿತ ವಿವರಿಸಿದ್ದಾರೆ. ಬೀದರ ಕನ್ನಡದ ಮೇಲೆ ಪ್ರಭಾವ ಬೀರಿದ ಪೋರ್ಚುಗೀಸ್, ಅರಬ್ಬಿ, ಉರ್ದು, ಇಂಗ್ಲೀಷ್, ಹಿಂದಿ, ಮರಾಠಿ, ತೆಲಗು ಭಾಷೆಗಳು ಇಲ್ಲಿನ ಕನ್ನಡದೊಂದಿಗೆ ಬೆರೆತ ಕ್ರಮವನ್ನು ವಿವೇಚಿಸಿದ್ದಾರೆ. ಅನ್ಯ ಭಾಷೆ ಬೆರೆಸಿ ಮಾತಾಡುವ ಈ ಪ್ರದೇಶದ ಜನರ ಆಡು ನುಡಿಯಲ್ಲಿ ಕನ್ನಡ ಅಸ್ಮಿತೆಯ ಹುಡುಕಾಟಕ್ಕೆ ತೊಡಗಿದ್ದಾರೆ.

ಡಾ.ಚನ್ನಬಸವ ಪಟ್ಟದ್ದೇವರ ಕುರಿತು ಲೇಖನಗಳ ಸಂಗ್ರಹ ‘ವಿನಯ ಭಂಡಾರಿ’ ಹಾಗೂ ‘ನೀನೊಲಿದರೆ ಕೊರಡು ಕೊನರುವುದಯ್ಯ’ ಕೃತಿಗಳು, ‘ಗುರುತು’, ‘ಅಡ್ಡಗೋಡೆಯ ಮೇಲಿನ ದೀಪ’, ‘ವಿಚಾರಗಳಿಂದ ಸಹಾಯಗಳಿಲ್ಲ’ ಎಂಬ ಪ್ರಬಂಧ ಮತ್ತು ರೇಡಿಯೋ ಚಿಂತನಗಳ ಸಂಗ್ರಹ ಬರೆವ ಮೂಲಕ ಬದುಕಿನ ಪ್ರೀತಿ ಮತ್ತು ಸಾಮಾಜಿಕ ಪ್ರಜ್ಞೆಯ ಬರಹಗಾರರಾಗಿ ನಿಲ್ಲುತ್ತಾರೆ. ಸುಬ್ಬಣ್ಣನವರ ಕತೆಗಳಿಗೆ ಗುಲಬರ್ಗಾ ವಿಶ್ವವಿದ್ಯಾಲಯ ಪ್ರಸಾರಾಂಗದ ಜಯತೀರ್ಥ ರಾಜಪುರೋಹಿತ ದತ್ತಿ ಕಥಾ ಪ್ರಶಸ್ತಿ ಸೇರಿ ಅನೇಕ ಪುರಸ್ಕಾರಗಳು ದೊರೆತಿವೆ. ಭಾಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಇವರು ಕೃಷಿಕರಾಗಿ, ಅಧ್ಯಾಪಕರಾಗಿ, ಕಾದಂಬರಿಕಾರರಾಗಿ, ಭಾಷಾ ಚಿಂತಕರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...