Homeಮುಖಪುಟಬೀದರ್ ಜಿಲ್ಲೆಯ ಮೊದಲ ಕಾದಂಬರಿಕಾರ ಸುಬ್ಬಣ್ಣ

ಬೀದರ್ ಜಿಲ್ಲೆಯ ಮೊದಲ ಕಾದಂಬರಿಕಾರ ಸುಬ್ಬಣ್ಣ

ಕಾದಂಬರಿ ಮನುಷ್ಯನ ಸಾಮಾಜಿಕ ಪಲ್ಲಟ

- Advertisement -
- Advertisement -

| ಭೀಮಾಶಂಕರ ಬಿರಾದಾರ |

ಕಾದಂಬರಿ ಮನುಷ್ಯನ ಸಾಮಾಜಿಕ ಪಲ್ಲಟ ಹಾಗೂ ಸಮಷ್ಟಿಯ ಬದುಕಿನ ವಿಶ್ಲೇಷಣೆಯ ಕಲಾತ್ಮಕ ಬರಹ. ಸಂಕೀರ್ಣವಾದ ಕಥಾ ಸಂವಿಧಾನವೂ ಹಾಗೂ ವಾಸ್ತವಿಕ ಘಟನೆಗಳನ್ನು ಚಿತ್ರಿಸುವ ದೀರ್ಘ ಕಥನ. ಪ್ರಜಾಪ್ರಭುತ್ವದ ಮೌಲ್ಯ ಮತ್ತು ಸಾಂಸ್ಕೃತಿಕ ಸ್ವಾತಂತ್ರ್ಯವು ಕಾದಂಬರಿಯ ಜಾಯಮಾನ. ನಾವೆಲ್‍ಗೆ ಸಂವಾದಿ ರೂಪ ಕನ್ನಡದಲ್ಲಿನ ಕಾದಂಬರಿ. 1899ರಲ್ಲಿ ಪ್ರಕಟಗೊಂಡ ಗುಲ್ವಾಡಿಯವರ ‘ಇಂದಿರಾಬಾಯಿ’ ಕನ್ನಡದ ಮೊದಲ ಸಾಮಾಜಿಕ ಕಾದಂಬರಿ. ಸಾಮ್ರಾಜ್ಯಶಾಹಿ, ವಸಾಹತು ಚಿಂತನೆ, ಇಂಗ್ಲಿಷ್ ಶಿಕ್ಷಣ, ಭಾರತೀಯ ಸಮಾಜದ ಮೇಲೆ ಒಡ್ಡುತ್ತಿರುವ ಆಧುನಿಕತೆ ಎಂಬ ಸಾಂಸ್ಕೃತಿಕ ಮತ್ತು ಬೌದ್ಧಿಕ ಯಜಮಾನ್ಯ, ಮನುಷ್ಯ ಸಂಬಂಧಗಳು ಆಕ್ರಮಿಸಿಕೊಂಡು ವ್ಯವಹಾರವಾಗಿಸಿದ ಜಾಗತೀಕರಣ ಇಂಥ ಅನೇಕ ಆಲೋಚನೆಗಳು ಮತ್ತು ಚಿಂತನೆಗಳು ಕನ್ನಡ ಕಾದಂಬರಿ ಪರಂಪರೆ ಒಂದು ಶತಮಾನಕ್ಕೂ ಹೆಚ್ಚುಕಾಲ ನಿರಂತರವಾಗಿ ಕಟ್ಟುತ್ತ ಬಂದಿದೆ. ಬೀದರ ಜಿಲ್ಲೆಯಲ್ಲಿ ಕಾದಂಬರಿ ಪ್ರಕಾರ ಸೃಷ್ಟಿಯಾದದ್ದು 1973ರಲ್ಲಿ. `ಸಿಂದಿ ಬನದಲ್ಲಿ ಸಿಕ್ಕವಳು’ ಕಾದಂಬರಿ ಬರೆಯುವ ಮೂಲಕ ಸುಬ್ಬಣ್ಣ ಅಂಬೆಸಂಗೆ ಜಿಲ್ಲೆಯ ಮೊದಲ ಕಾದಂಬರಿಕಾರರಾಗಿದ್ದಾರೆ. ಎಮ್.ಜಿ. ದೇಶಪಾಂಡೆ, ಯಶೋದಮ್ಮ ಸಿದ್ದಬಟ್ಟೆ, ಸುನಿತಾ ಬಿರಾದಾರ, ಗಣಪತಿ ಭೂರೆ, ಡಾ. ಜಯದೇವಿ ಗಾಯಕವಾಡ ಹೀಗೆ ಕೆಲವರು ಮಾತ್ರ ಜಿಲ್ಲೆಯಲ್ಲಿ ಕಾದಂಬರಿ ವಿನ್ಯಾಸ ಕಟ್ಟಿದ್ದಾರೆ. ಸುಬ್ಬಣ್ಣ ಅಂಬೆಸಂಗೆಯವರು ಸೃಜನಶೀಲ ಬರಹಗಾರರಾಗಿ ಕಾದಂಬರಿ, ಕಥೆ ಬರೆದಂತೆ ಭಾಷಾ ಚಿಂತಕರಾಗಿಯೂ ಗಮನ ಸೆಳೆಯುತ್ತಾರೆ.

ಭಾಲ್ಕಿ ತಾಲೂಕಿನ ಎಕಲಾಸಪೂರದ ಸುಬ್ಬಣ್ಣನವರು 1950 ಜೂನ್ 15ರಲ್ಲಿ ಜನಿಸಿದರು. ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು, ಗ್ರಾಮ ಪಂಚಾಯಿತಿ ಕಾರ್ಯದರ್ಶಿಯಾಗಿ, ಪ್ರೌಢಶಾಲಾ ಶಿಕ್ಷಕರಾಗಿ, ಕಾಲೇಜು ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಸದ್ಯ ಬೇಸಾಯದಲ್ಲಿ ತೊಡಗಿದ್ದಾರೆ. ಸುಬ್ಬಣ್ಣನವರ ‘ಸಿಂದಿಬನದಲ್ಲಿ ಸಿಕ್ಕವಳು’ ಕಾದಂಬರಿ ಸ್ತ್ರೀ ಕೇಂದ್ರೀತ ದುರಂತ ವಸ್ತುವನ್ನೊಳಗೊಂಡಿದೆ. ಕಥನ ವಿನ್ಯಾಸ ಸರಳವಾಗಿದ್ದರೂ ಒಂದು ಕಾಲದ ಸಾಮಾಜಿಕ ಮತ್ತು ಚಾರಿತ್ರಿಕ ಸಂದರ್ಭವನ್ನು ನೆನಪಿಸುತ್ತದೆ. ಕಾದಂಬರಿಗಳು ಭೂತ ಮತ್ತು ವರ್ತಮಾನಗಳೆರಡನ್ನು ತನ್ನ ಒಡಲೊಳಗಿಟ್ಟಿಕೊಂಡು ಭವಿಷ್ಯದ ಮರುವಿಶ್ಲೇಷಣೆಗೆ ಎಡೆಮಾಡಿಕೊಡುತ್ತವೆ. ಈ ಪ್ರದೇಶದ ಪ್ರಕ್ಷುಬ್ಧ ಕಾಲವೊಂದರ ಕ್ರೂರ ಸಂಗತಿಗಳನ್ನೂ ಇವರ ಕಾದಂಬರಿ ಕಥನಿಸುತ್ತದೆ. ಜತೆಗೆ ಧಾರ್ಮಿಕ ಮೂಲಭೂತವಾದಿತನ, ಪ್ರಭುತ್ವದ ಹಪಾಹಪಿತನ, ಸ್ತ್ರೀ ಅನುಭವಿಸಬಹುದಾದ ದೌರ್ಜನ್ಯದ ದುರಂತ, ಈ ಎಲ್ಲ ಬರ್ಬರತೆಗಳು ಒಳಗೊಂಡ ಸಮಾಜವೊಂದರ ಚಿತ್ರಣ ನೀಡುತ್ತದೆ. ಅಧಿಕಾರ ಕೇಂದ್ರೀತ ಸಿದ್ಧಾಂತಗಳು ಸೃಷ್ಟಿಸಿದ ದಮನಕಾರಿ ವ್ಯವಸ್ಥೆಯ ನಿಲುವುಗಳು ಸಮಾಜ, ಕುಟುಂಬ, ವ್ಯಕ್ತಿ ಮುಖ್ಯವಾಗಿ ಮಹಿಳೆಯ ಮೇಲೆ ಮಾಡುವ ಆಕ್ರಮಣಗಳು ಕಾದಂಬರಿಕಾರ ಖಚಿತವಾಗಿ ದಾಖಲಿಸಿದ್ದಾರೆ. ಪ್ರಭುತ್ವ ಮತ್ತು ಜನರ ನಡುವಿನ ಸೈದ್ಧಾಂತಿಕ ಭಿನ್ನತೆಗಳು, ಅದರಿಂದ ಉಂಟಾದ ದಂಗೆಗಳು ಮತ್ತು ದಂಗೆಗಳು ತಂದೊಡ್ಡುವ ವಿನಾಶಗಳು, ಮಹಿಳೆಯ ಅಸ್ತಿತ್ವದ ಮೇಲಿನ ಅಲೆಯಾಗಿವೆ. ಹೆಣ್ಣಿನ ಅನಿವಾರ್ಯತೆ ಮತ್ತು ಅಸಹಾಯಕ ಸ್ಥಿತಿಯಲ್ಲಿ ಜಾಗೃತಗೊಂಡ ಕೆಲವರ ‘ಪುರುಷತನ’ವು ಅವಳನ್ನು ಮುಕ್ಕುವಂತಾಗಿಸುವ ಅಂಶಗಳು ಕಾದಂಬರಿಯಲ್ಲಿ ಹಿಡಿದಿಟ್ಟಿದ್ದಾರೆ.

ಸುಬ್ಬಣ್ಣನವರು ‘ಅರಳು’, ‘ಚೇತನ’, ‘ಕಾಡಿನಲ್ಲಿ ಹಿಡಿದ ಗ್ರಹಣ ಗಂಗೆಯಲ್ಲಿ ಬಿಟ್ಟಿತು’, ‘ಬಳ್ಳಿಯ ಹೂ ಬಾಡದಿರಲಿ’ ಕಥಾ ಸಂಕಲನಗಳು ಪ್ರಕಟಿಸುವ ಮೂಲಕ ಜಿಲ್ಲೆಯ ಮುಖ್ಯ ಕಥೆಗಾರರಾಗಿದ್ದಾರೆ. ಆರಂಭದಲ್ಲಿ ನವೋದಯದ ದಟ್ಟ ಪ್ರಭಾವಕ್ಕೆ ಒಳಗಾಗಿದ್ದರೂ ನಂತರ ಹೆಚ್ಚು ಸಮಾಜ ಮತ್ತು ಸಮುದಾಯ ಕೇಂದ್ರಿತ ಕತೆಗಳು ಬರೆದಿದ್ದಾರೆ. ಪ್ರೀತಿ, ಪ್ರೇಮ, ಹತಾಶೆ, ನೆನಪುಗಳು ಒಂದೆಡೆಯಾದರೆ, ವೃದ್ಧಾಪ್ಯದಲ್ಲಿ ದುಡಿಯುವ, ದುಡಿದು ಬದುಕುವ ಅನಿವಾರ್ಯತೆ ಮತ್ತು ಜೀವನದ ಕ್ರೌರ್ಯ ಇವರ ಕತೆಗಳಲ್ಲಿ ಚಿತ್ರಿತಗೊಂಡಿವೆ. ಇವರ ಬಹುತೇಕ ಕತೆಗಳು ಮನೋವಿಶ್ಲೇಷಣಾ ಸಿದ್ಧಾಂತದ ನೆಲೆಯಲ್ಲಿ ರಚನೆಯಾಗಿವೆ. ಸಂಕೀರ್ಣಗೊಂಡ ಧಾರ್ಮಿಕತೆ ಮತ್ತು ಅದರ ಆಚರಣೆಗಳ ಭ್ರಷ್ಟತೆಯನ್ನು ನೇರವಾಗಿ ಪ್ರತಿರೋಧಿಸುವ ಮಟ್ಟದ ಪಾತ್ರಗಳು ಅವರ ಕತೆಗಳಲ್ಲಿ ಕಾಣುವುದಿಲ್ಲ. ಮನೋರೋಗಗಳು ಮೌಢ್ಯದ ರೂಪವಾಗಿ ದೇವರೆದುರಿಗೆ ಅನಾವರಣಗೊಳ್ಳುವ ಬಗೆಯನ್ನು ಮಾತ್ರ ಚಿತ್ರಿಸುವುದು ಕತೆಗಾರರಿಗೆ ಮುಖ್ಯವಾದದ್ದು ಕಾಣುತ್ತದೆ. ಹೀಗೆ ಸುಬ್ಬಣ್ಣನವರ ಕತೆಗಳು ಸಮಾಜದಲ್ಲಿ ಸಂಭವಿಸುವ ಸಂಗತಿಗಳ ಬಗೆಗೆ ನೇರವಾಗಿ ಮಾತನಾಡುತ್ತವೆ.

‘ಬೀದರ ಜಿಲ್ಲೆಯ ಕನ್ನಡ ಭಾಷಾ ಕುಸುಮ’ (1996) ಮತ್ತು ಗುಲಬರ್ಗಾ ವಿಶ್ವವಿದ್ಯಾಲಯ ಪ್ರಸಾರಾಂಗ ಪ್ರಕಟಿಸಿದ ‘ಗಡಿನಾಡು ಭಾಷಾ ಸಮಸ್ಯೆ’ ಕೃತಿ ಬರೆದ ಸುಬ್ಬಣ್ಣನವರು ಜಿಲ್ಲೆಯ ಮೊದಲ ಭಾಷಾ ಚಿಂತಕ. ಬೀದರ ಕನ್ನಡ ಭಾಷಾ ಅಧ್ಯಯನಕ್ಕೆ ಈ ಎರಡು ಕೃತಿಗಳು ಪ್ರಧಾನ ಮಾರ್ಗಗಳಾಗುತ್ತವೆ. ಬೀದರ ಕನ್ನಡ ಭಾಷೆಯ ರಚನೆ ಮತ್ತು ಅನ್ಯ ಭಾಷೆಗಳ ಪ್ರಭಾವ ಕುರಿತು ಸೂಕ್ಷ್ಮ ಚಿಂತನೆ ನಡೆಸಿ, ಕ್ಷೇತ್ರ ಕಾರ್ಯ ಕೈಗೊಂಡು ಅಧ್ಯಯನ ಪೂರ್ಣ ಕೃತಿಗಳು ಬರೆದಿದ್ದಾರೆ.

ಆಡುಮಾತಿನಿಂದ ಹಿಡಿದು ವ್ಯವಹಾರ, ಮಾರುಕಟ್ಟೆ, ಆಡಳಿತ, ಗ್ರಂಥಸ್ಥ, ಜನಪದ ಮೊದಲಾದ ಕ್ಷೇತ್ರಗಳಲ್ಲಿ ಬಳಕೆಯಾಗುವ ಭಾಷಾ ಭಿನ್ನತೆಯನ್ನು ಗುರುತಿಸಿ ನಿದರ್ಶನ ಸಹಿತ ವಿವರಿಸಿದ್ದಾರೆ. ಬೀದರ ಕನ್ನಡದ ಮೇಲೆ ಪ್ರಭಾವ ಬೀರಿದ ಪೋರ್ಚುಗೀಸ್, ಅರಬ್ಬಿ, ಉರ್ದು, ಇಂಗ್ಲೀಷ್, ಹಿಂದಿ, ಮರಾಠಿ, ತೆಲಗು ಭಾಷೆಗಳು ಇಲ್ಲಿನ ಕನ್ನಡದೊಂದಿಗೆ ಬೆರೆತ ಕ್ರಮವನ್ನು ವಿವೇಚಿಸಿದ್ದಾರೆ. ಅನ್ಯ ಭಾಷೆ ಬೆರೆಸಿ ಮಾತಾಡುವ ಈ ಪ್ರದೇಶದ ಜನರ ಆಡು ನುಡಿಯಲ್ಲಿ ಕನ್ನಡ ಅಸ್ಮಿತೆಯ ಹುಡುಕಾಟಕ್ಕೆ ತೊಡಗಿದ್ದಾರೆ.

ಡಾ.ಚನ್ನಬಸವ ಪಟ್ಟದ್ದೇವರ ಕುರಿತು ಲೇಖನಗಳ ಸಂಗ್ರಹ ‘ವಿನಯ ಭಂಡಾರಿ’ ಹಾಗೂ ‘ನೀನೊಲಿದರೆ ಕೊರಡು ಕೊನರುವುದಯ್ಯ’ ಕೃತಿಗಳು, ‘ಗುರುತು’, ‘ಅಡ್ಡಗೋಡೆಯ ಮೇಲಿನ ದೀಪ’, ‘ವಿಚಾರಗಳಿಂದ ಸಹಾಯಗಳಿಲ್ಲ’ ಎಂಬ ಪ್ರಬಂಧ ಮತ್ತು ರೇಡಿಯೋ ಚಿಂತನಗಳ ಸಂಗ್ರಹ ಬರೆವ ಮೂಲಕ ಬದುಕಿನ ಪ್ರೀತಿ ಮತ್ತು ಸಾಮಾಜಿಕ ಪ್ರಜ್ಞೆಯ ಬರಹಗಾರರಾಗಿ ನಿಲ್ಲುತ್ತಾರೆ. ಸುಬ್ಬಣ್ಣನವರ ಕತೆಗಳಿಗೆ ಗುಲಬರ್ಗಾ ವಿಶ್ವವಿದ್ಯಾಲಯ ಪ್ರಸಾರಾಂಗದ ಜಯತೀರ್ಥ ರಾಜಪುರೋಹಿತ ದತ್ತಿ ಕಥಾ ಪ್ರಶಸ್ತಿ ಸೇರಿ ಅನೇಕ ಪುರಸ್ಕಾರಗಳು ದೊರೆತಿವೆ. ಭಾಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಇವರು ಕೃಷಿಕರಾಗಿ, ಅಧ್ಯಾಪಕರಾಗಿ, ಕಾದಂಬರಿಕಾರರಾಗಿ, ಭಾಷಾ ಚಿಂತಕರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...