Homeಮುಖಪುಟಬೀದರ್ ಜಿಲ್ಲೆಯ ಮೊದಲ ಕಾದಂಬರಿಕಾರ ಸುಬ್ಬಣ್ಣ

ಬೀದರ್ ಜಿಲ್ಲೆಯ ಮೊದಲ ಕಾದಂಬರಿಕಾರ ಸುಬ್ಬಣ್ಣ

ಕಾದಂಬರಿ ಮನುಷ್ಯನ ಸಾಮಾಜಿಕ ಪಲ್ಲಟ

- Advertisement -
- Advertisement -

| ಭೀಮಾಶಂಕರ ಬಿರಾದಾರ |

ಕಾದಂಬರಿ ಮನುಷ್ಯನ ಸಾಮಾಜಿಕ ಪಲ್ಲಟ ಹಾಗೂ ಸಮಷ್ಟಿಯ ಬದುಕಿನ ವಿಶ್ಲೇಷಣೆಯ ಕಲಾತ್ಮಕ ಬರಹ. ಸಂಕೀರ್ಣವಾದ ಕಥಾ ಸಂವಿಧಾನವೂ ಹಾಗೂ ವಾಸ್ತವಿಕ ಘಟನೆಗಳನ್ನು ಚಿತ್ರಿಸುವ ದೀರ್ಘ ಕಥನ. ಪ್ರಜಾಪ್ರಭುತ್ವದ ಮೌಲ್ಯ ಮತ್ತು ಸಾಂಸ್ಕೃತಿಕ ಸ್ವಾತಂತ್ರ್ಯವು ಕಾದಂಬರಿಯ ಜಾಯಮಾನ. ನಾವೆಲ್‍ಗೆ ಸಂವಾದಿ ರೂಪ ಕನ್ನಡದಲ್ಲಿನ ಕಾದಂಬರಿ. 1899ರಲ್ಲಿ ಪ್ರಕಟಗೊಂಡ ಗುಲ್ವಾಡಿಯವರ ‘ಇಂದಿರಾಬಾಯಿ’ ಕನ್ನಡದ ಮೊದಲ ಸಾಮಾಜಿಕ ಕಾದಂಬರಿ. ಸಾಮ್ರಾಜ್ಯಶಾಹಿ, ವಸಾಹತು ಚಿಂತನೆ, ಇಂಗ್ಲಿಷ್ ಶಿಕ್ಷಣ, ಭಾರತೀಯ ಸಮಾಜದ ಮೇಲೆ ಒಡ್ಡುತ್ತಿರುವ ಆಧುನಿಕತೆ ಎಂಬ ಸಾಂಸ್ಕೃತಿಕ ಮತ್ತು ಬೌದ್ಧಿಕ ಯಜಮಾನ್ಯ, ಮನುಷ್ಯ ಸಂಬಂಧಗಳು ಆಕ್ರಮಿಸಿಕೊಂಡು ವ್ಯವಹಾರವಾಗಿಸಿದ ಜಾಗತೀಕರಣ ಇಂಥ ಅನೇಕ ಆಲೋಚನೆಗಳು ಮತ್ತು ಚಿಂತನೆಗಳು ಕನ್ನಡ ಕಾದಂಬರಿ ಪರಂಪರೆ ಒಂದು ಶತಮಾನಕ್ಕೂ ಹೆಚ್ಚುಕಾಲ ನಿರಂತರವಾಗಿ ಕಟ್ಟುತ್ತ ಬಂದಿದೆ. ಬೀದರ ಜಿಲ್ಲೆಯಲ್ಲಿ ಕಾದಂಬರಿ ಪ್ರಕಾರ ಸೃಷ್ಟಿಯಾದದ್ದು 1973ರಲ್ಲಿ. `ಸಿಂದಿ ಬನದಲ್ಲಿ ಸಿಕ್ಕವಳು’ ಕಾದಂಬರಿ ಬರೆಯುವ ಮೂಲಕ ಸುಬ್ಬಣ್ಣ ಅಂಬೆಸಂಗೆ ಜಿಲ್ಲೆಯ ಮೊದಲ ಕಾದಂಬರಿಕಾರರಾಗಿದ್ದಾರೆ. ಎಮ್.ಜಿ. ದೇಶಪಾಂಡೆ, ಯಶೋದಮ್ಮ ಸಿದ್ದಬಟ್ಟೆ, ಸುನಿತಾ ಬಿರಾದಾರ, ಗಣಪತಿ ಭೂರೆ, ಡಾ. ಜಯದೇವಿ ಗಾಯಕವಾಡ ಹೀಗೆ ಕೆಲವರು ಮಾತ್ರ ಜಿಲ್ಲೆಯಲ್ಲಿ ಕಾದಂಬರಿ ವಿನ್ಯಾಸ ಕಟ್ಟಿದ್ದಾರೆ. ಸುಬ್ಬಣ್ಣ ಅಂಬೆಸಂಗೆಯವರು ಸೃಜನಶೀಲ ಬರಹಗಾರರಾಗಿ ಕಾದಂಬರಿ, ಕಥೆ ಬರೆದಂತೆ ಭಾಷಾ ಚಿಂತಕರಾಗಿಯೂ ಗಮನ ಸೆಳೆಯುತ್ತಾರೆ.

ಭಾಲ್ಕಿ ತಾಲೂಕಿನ ಎಕಲಾಸಪೂರದ ಸುಬ್ಬಣ್ಣನವರು 1950 ಜೂನ್ 15ರಲ್ಲಿ ಜನಿಸಿದರು. ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು, ಗ್ರಾಮ ಪಂಚಾಯಿತಿ ಕಾರ್ಯದರ್ಶಿಯಾಗಿ, ಪ್ರೌಢಶಾಲಾ ಶಿಕ್ಷಕರಾಗಿ, ಕಾಲೇಜು ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಸದ್ಯ ಬೇಸಾಯದಲ್ಲಿ ತೊಡಗಿದ್ದಾರೆ. ಸುಬ್ಬಣ್ಣನವರ ‘ಸಿಂದಿಬನದಲ್ಲಿ ಸಿಕ್ಕವಳು’ ಕಾದಂಬರಿ ಸ್ತ್ರೀ ಕೇಂದ್ರೀತ ದುರಂತ ವಸ್ತುವನ್ನೊಳಗೊಂಡಿದೆ. ಕಥನ ವಿನ್ಯಾಸ ಸರಳವಾಗಿದ್ದರೂ ಒಂದು ಕಾಲದ ಸಾಮಾಜಿಕ ಮತ್ತು ಚಾರಿತ್ರಿಕ ಸಂದರ್ಭವನ್ನು ನೆನಪಿಸುತ್ತದೆ. ಕಾದಂಬರಿಗಳು ಭೂತ ಮತ್ತು ವರ್ತಮಾನಗಳೆರಡನ್ನು ತನ್ನ ಒಡಲೊಳಗಿಟ್ಟಿಕೊಂಡು ಭವಿಷ್ಯದ ಮರುವಿಶ್ಲೇಷಣೆಗೆ ಎಡೆಮಾಡಿಕೊಡುತ್ತವೆ. ಈ ಪ್ರದೇಶದ ಪ್ರಕ್ಷುಬ್ಧ ಕಾಲವೊಂದರ ಕ್ರೂರ ಸಂಗತಿಗಳನ್ನೂ ಇವರ ಕಾದಂಬರಿ ಕಥನಿಸುತ್ತದೆ. ಜತೆಗೆ ಧಾರ್ಮಿಕ ಮೂಲಭೂತವಾದಿತನ, ಪ್ರಭುತ್ವದ ಹಪಾಹಪಿತನ, ಸ್ತ್ರೀ ಅನುಭವಿಸಬಹುದಾದ ದೌರ್ಜನ್ಯದ ದುರಂತ, ಈ ಎಲ್ಲ ಬರ್ಬರತೆಗಳು ಒಳಗೊಂಡ ಸಮಾಜವೊಂದರ ಚಿತ್ರಣ ನೀಡುತ್ತದೆ. ಅಧಿಕಾರ ಕೇಂದ್ರೀತ ಸಿದ್ಧಾಂತಗಳು ಸೃಷ್ಟಿಸಿದ ದಮನಕಾರಿ ವ್ಯವಸ್ಥೆಯ ನಿಲುವುಗಳು ಸಮಾಜ, ಕುಟುಂಬ, ವ್ಯಕ್ತಿ ಮುಖ್ಯವಾಗಿ ಮಹಿಳೆಯ ಮೇಲೆ ಮಾಡುವ ಆಕ್ರಮಣಗಳು ಕಾದಂಬರಿಕಾರ ಖಚಿತವಾಗಿ ದಾಖಲಿಸಿದ್ದಾರೆ. ಪ್ರಭುತ್ವ ಮತ್ತು ಜನರ ನಡುವಿನ ಸೈದ್ಧಾಂತಿಕ ಭಿನ್ನತೆಗಳು, ಅದರಿಂದ ಉಂಟಾದ ದಂಗೆಗಳು ಮತ್ತು ದಂಗೆಗಳು ತಂದೊಡ್ಡುವ ವಿನಾಶಗಳು, ಮಹಿಳೆಯ ಅಸ್ತಿತ್ವದ ಮೇಲಿನ ಅಲೆಯಾಗಿವೆ. ಹೆಣ್ಣಿನ ಅನಿವಾರ್ಯತೆ ಮತ್ತು ಅಸಹಾಯಕ ಸ್ಥಿತಿಯಲ್ಲಿ ಜಾಗೃತಗೊಂಡ ಕೆಲವರ ‘ಪುರುಷತನ’ವು ಅವಳನ್ನು ಮುಕ್ಕುವಂತಾಗಿಸುವ ಅಂಶಗಳು ಕಾದಂಬರಿಯಲ್ಲಿ ಹಿಡಿದಿಟ್ಟಿದ್ದಾರೆ.

ಸುಬ್ಬಣ್ಣನವರು ‘ಅರಳು’, ‘ಚೇತನ’, ‘ಕಾಡಿನಲ್ಲಿ ಹಿಡಿದ ಗ್ರಹಣ ಗಂಗೆಯಲ್ಲಿ ಬಿಟ್ಟಿತು’, ‘ಬಳ್ಳಿಯ ಹೂ ಬಾಡದಿರಲಿ’ ಕಥಾ ಸಂಕಲನಗಳು ಪ್ರಕಟಿಸುವ ಮೂಲಕ ಜಿಲ್ಲೆಯ ಮುಖ್ಯ ಕಥೆಗಾರರಾಗಿದ್ದಾರೆ. ಆರಂಭದಲ್ಲಿ ನವೋದಯದ ದಟ್ಟ ಪ್ರಭಾವಕ್ಕೆ ಒಳಗಾಗಿದ್ದರೂ ನಂತರ ಹೆಚ್ಚು ಸಮಾಜ ಮತ್ತು ಸಮುದಾಯ ಕೇಂದ್ರಿತ ಕತೆಗಳು ಬರೆದಿದ್ದಾರೆ. ಪ್ರೀತಿ, ಪ್ರೇಮ, ಹತಾಶೆ, ನೆನಪುಗಳು ಒಂದೆಡೆಯಾದರೆ, ವೃದ್ಧಾಪ್ಯದಲ್ಲಿ ದುಡಿಯುವ, ದುಡಿದು ಬದುಕುವ ಅನಿವಾರ್ಯತೆ ಮತ್ತು ಜೀವನದ ಕ್ರೌರ್ಯ ಇವರ ಕತೆಗಳಲ್ಲಿ ಚಿತ್ರಿತಗೊಂಡಿವೆ. ಇವರ ಬಹುತೇಕ ಕತೆಗಳು ಮನೋವಿಶ್ಲೇಷಣಾ ಸಿದ್ಧಾಂತದ ನೆಲೆಯಲ್ಲಿ ರಚನೆಯಾಗಿವೆ. ಸಂಕೀರ್ಣಗೊಂಡ ಧಾರ್ಮಿಕತೆ ಮತ್ತು ಅದರ ಆಚರಣೆಗಳ ಭ್ರಷ್ಟತೆಯನ್ನು ನೇರವಾಗಿ ಪ್ರತಿರೋಧಿಸುವ ಮಟ್ಟದ ಪಾತ್ರಗಳು ಅವರ ಕತೆಗಳಲ್ಲಿ ಕಾಣುವುದಿಲ್ಲ. ಮನೋರೋಗಗಳು ಮೌಢ್ಯದ ರೂಪವಾಗಿ ದೇವರೆದುರಿಗೆ ಅನಾವರಣಗೊಳ್ಳುವ ಬಗೆಯನ್ನು ಮಾತ್ರ ಚಿತ್ರಿಸುವುದು ಕತೆಗಾರರಿಗೆ ಮುಖ್ಯವಾದದ್ದು ಕಾಣುತ್ತದೆ. ಹೀಗೆ ಸುಬ್ಬಣ್ಣನವರ ಕತೆಗಳು ಸಮಾಜದಲ್ಲಿ ಸಂಭವಿಸುವ ಸಂಗತಿಗಳ ಬಗೆಗೆ ನೇರವಾಗಿ ಮಾತನಾಡುತ್ತವೆ.

‘ಬೀದರ ಜಿಲ್ಲೆಯ ಕನ್ನಡ ಭಾಷಾ ಕುಸುಮ’ (1996) ಮತ್ತು ಗುಲಬರ್ಗಾ ವಿಶ್ವವಿದ್ಯಾಲಯ ಪ್ರಸಾರಾಂಗ ಪ್ರಕಟಿಸಿದ ‘ಗಡಿನಾಡು ಭಾಷಾ ಸಮಸ್ಯೆ’ ಕೃತಿ ಬರೆದ ಸುಬ್ಬಣ್ಣನವರು ಜಿಲ್ಲೆಯ ಮೊದಲ ಭಾಷಾ ಚಿಂತಕ. ಬೀದರ ಕನ್ನಡ ಭಾಷಾ ಅಧ್ಯಯನಕ್ಕೆ ಈ ಎರಡು ಕೃತಿಗಳು ಪ್ರಧಾನ ಮಾರ್ಗಗಳಾಗುತ್ತವೆ. ಬೀದರ ಕನ್ನಡ ಭಾಷೆಯ ರಚನೆ ಮತ್ತು ಅನ್ಯ ಭಾಷೆಗಳ ಪ್ರಭಾವ ಕುರಿತು ಸೂಕ್ಷ್ಮ ಚಿಂತನೆ ನಡೆಸಿ, ಕ್ಷೇತ್ರ ಕಾರ್ಯ ಕೈಗೊಂಡು ಅಧ್ಯಯನ ಪೂರ್ಣ ಕೃತಿಗಳು ಬರೆದಿದ್ದಾರೆ.

ಆಡುಮಾತಿನಿಂದ ಹಿಡಿದು ವ್ಯವಹಾರ, ಮಾರುಕಟ್ಟೆ, ಆಡಳಿತ, ಗ್ರಂಥಸ್ಥ, ಜನಪದ ಮೊದಲಾದ ಕ್ಷೇತ್ರಗಳಲ್ಲಿ ಬಳಕೆಯಾಗುವ ಭಾಷಾ ಭಿನ್ನತೆಯನ್ನು ಗುರುತಿಸಿ ನಿದರ್ಶನ ಸಹಿತ ವಿವರಿಸಿದ್ದಾರೆ. ಬೀದರ ಕನ್ನಡದ ಮೇಲೆ ಪ್ರಭಾವ ಬೀರಿದ ಪೋರ್ಚುಗೀಸ್, ಅರಬ್ಬಿ, ಉರ್ದು, ಇಂಗ್ಲೀಷ್, ಹಿಂದಿ, ಮರಾಠಿ, ತೆಲಗು ಭಾಷೆಗಳು ಇಲ್ಲಿನ ಕನ್ನಡದೊಂದಿಗೆ ಬೆರೆತ ಕ್ರಮವನ್ನು ವಿವೇಚಿಸಿದ್ದಾರೆ. ಅನ್ಯ ಭಾಷೆ ಬೆರೆಸಿ ಮಾತಾಡುವ ಈ ಪ್ರದೇಶದ ಜನರ ಆಡು ನುಡಿಯಲ್ಲಿ ಕನ್ನಡ ಅಸ್ಮಿತೆಯ ಹುಡುಕಾಟಕ್ಕೆ ತೊಡಗಿದ್ದಾರೆ.

ಡಾ.ಚನ್ನಬಸವ ಪಟ್ಟದ್ದೇವರ ಕುರಿತು ಲೇಖನಗಳ ಸಂಗ್ರಹ ‘ವಿನಯ ಭಂಡಾರಿ’ ಹಾಗೂ ‘ನೀನೊಲಿದರೆ ಕೊರಡು ಕೊನರುವುದಯ್ಯ’ ಕೃತಿಗಳು, ‘ಗುರುತು’, ‘ಅಡ್ಡಗೋಡೆಯ ಮೇಲಿನ ದೀಪ’, ‘ವಿಚಾರಗಳಿಂದ ಸಹಾಯಗಳಿಲ್ಲ’ ಎಂಬ ಪ್ರಬಂಧ ಮತ್ತು ರೇಡಿಯೋ ಚಿಂತನಗಳ ಸಂಗ್ರಹ ಬರೆವ ಮೂಲಕ ಬದುಕಿನ ಪ್ರೀತಿ ಮತ್ತು ಸಾಮಾಜಿಕ ಪ್ರಜ್ಞೆಯ ಬರಹಗಾರರಾಗಿ ನಿಲ್ಲುತ್ತಾರೆ. ಸುಬ್ಬಣ್ಣನವರ ಕತೆಗಳಿಗೆ ಗುಲಬರ್ಗಾ ವಿಶ್ವವಿದ್ಯಾಲಯ ಪ್ರಸಾರಾಂಗದ ಜಯತೀರ್ಥ ರಾಜಪುರೋಹಿತ ದತ್ತಿ ಕಥಾ ಪ್ರಶಸ್ತಿ ಸೇರಿ ಅನೇಕ ಪುರಸ್ಕಾರಗಳು ದೊರೆತಿವೆ. ಭಾಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಇವರು ಕೃಷಿಕರಾಗಿ, ಅಧ್ಯಾಪಕರಾಗಿ, ಕಾದಂಬರಿಕಾರರಾಗಿ, ಭಾಷಾ ಚಿಂತಕರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...