Homeಮುಖಪುಟಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

- Advertisement -
- Advertisement -

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ ಶಾಲಾ-ಕಮಾಲ್ ಮೌಲಾದ ಧಾರ್ಮಿಕ ಸ್ವರೂಪಕ್ಕೆ ಸಂಬಂಧಿಸಿದಂತೆ ಹಿಂದೂ-ಮುಸ್ಲಿಂ ಸಮುದಾಯಗಳ ನಡುವೆ ವಿವಾದವಿದೆ.

ಜನವರಿ 23ರಂದು ವಸಂತ ಪಂಚಮಿಯ ಪ್ರಯುಕ್ತ ದಿನವಿಡೀ ಪೂಜೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡುವಂತೆ ಕೋರಿ ಹಿಂದೂ ಫ್ರಂಟ್ ಫಾರ್ ಜಸ್ಟೀಸ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಪಂಚೋಲಿ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿತು.

ಭಾರತೀಯ ಪುರಾತತ್ವ ಇಲಾಖೆಯಿಂದ ರಕ್ಷಿಸಲ್ಪಟ್ಟ 11ನೇ ಶತಮಾನದ ಸ್ಮಾರಕವಾದ ಭೋಜ ಶಾಲೆಯನ್ನು ಹಿಂದೂಗಳು ಮತ್ತು ಮುಸ್ಲಿಮರು ವಿಭಿನ್ನವಾಗಿ ನೋಡುತ್ತಾರೆ. ಹಿಂದೂಗಳು ಇದನ್ನು ವಾಗ್ದೇವಿ (ಸರಸ್ವತಿ ದೇವತೆ) ಗೆ ಸಮರ್ಪಿತವಾದ ದೇವಾಲಯವೆಂದು ಪರಿಗಣಿಸುತ್ತಾರೆ. ಮುಸ್ಲಿಮರು ಇದನ್ನು ಕಮಾಲ್ ಮೌಲಾ ಮಸೀದಿ ಎಂದು ಪರಿಗಣಿಸುತ್ತಾರೆ. 2003ರ ಒಪ್ಪಂದದ ಪ್ರಕಾರ, ಹಿಂದೂಗಳು ಮಂಗಳವಾರ ಭೋಜ ಶಾಲೆ ಸಂಕೀರ್ಣದಲ್ಲಿ ಪೂಜೆ ಸಲ್ಲಿಸುತ್ತಾರೆ, ಮುಸ್ಲಿಮರು ಶುಕ್ರವಾರ ಅಲ್ಲಿ ನಮಾಝ್ ಮಾಡುತ್ತಾರೆ.

ಅರ್ಜಿದಾರರ ಪರ ವಕೀಲ ವಿಷ್ಣು ಶಂಕರ್ ಜೈನ್ ವಾದ ಮಂಡಿಸಿ, ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಪೂಜೆಗಳು ಮತ್ತು ಹವನಗಳು ಇರುತ್ತವೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.

ಮುಸ್ಲಿಮರ ಪರವಾಗಿ ಹಿರಿಯ ವಕೀಲ ಸಲ್ಮಾನ್ ಖುರ್ಷಿದ್ ವಾದ ಮಂಡಿಸಿ, ಜುಮಾ ನಮಾಝ್ ಮಧ್ಯಾಹ್ನ 1 ರಿಂದ 3 ಗಂಟೆಯ ನಡುವೆ ನಡೆಯುತ್ತದೆ. ನಂತರ ಮುಸ್ಲಿಂ ಸಮುದಾಯದ ಸದಸ್ಯರು ಆವರಣವನ್ನು ಖಾಲಿ ಮಾಡುತ್ತಾರೆ ಹೇಳಿದ್ದರು. ಕೇಂದ್ರ ಮತ್ತು ಭಾರತೀಯ ಪುರಾತತ್ವ ಸಮೀಕ್ಷೆ (ಎಎಸ್‌ಐ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್ ಮತ್ತು ಮಧ್ಯಪ್ರದೇಶದ ಅಡ್ವೊಕೇಟ್ ಜನರಲ್ ನ್ಯಾಯಾಲಯಕ್ಕೆ ಹಾಜರಾಗಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು.

ಇಡೀ ದಿನ ಪೂಜೆ ನಿರಂತರವಾಗಿ ನಡೆಯುವುದರಿಂದ ಸಂಜೆ 5 ಗಂಟೆಯ ನಂತರ ನಮಾಝ್ ಮಾಡಬಹುದೇ ಎಂದು ಜೈನ್ ಕೇಳಿದ್ದರು. ಜುಮಾ ನಮಾಝ್‌ಗೆ ನಿರ್ದಿಷ್ಟ ಸಮಯವಿದ್ದು, ಅದನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಖುರ್ಷಿದ್ ಸಮಸ್ಯೆ ತಿಳಿಸಿದ್ದರು.

ಮುಸ್ಲಿಮರು ನಮಾಝ್‌ಗೆ ಹಾಜರಾಗುವ ಸಾಧ್ಯತೆ ಇರುವ ವ್ಯಕ್ತಿಗಳ ಸಂಖ್ಯೆಯನ್ನು ಜಿಲ್ಲಾಡಳಿತಕ್ಕೆ ನೀಡಬಹುದು. ಇದರಿಂದ ಅವರಿಗೆ ಆವರಣದಲ್ಲಿ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಬಹುದು. ಜಿಲ್ಲಾಡಳಿತವು ನಮಾಝ್‌ಗೆ ಬರುವ ವ್ಯಕ್ತಿಗಳಿಗೆ ಪಾಸ್‌ಗಳನ್ನು ನೀಡುತ್ತದೆ ಎಂದು ಎಎಸ್‌ಜಿ ತಿಳಿಸಿದ್ದರು. ಇದಕ್ಕೆ ಒಪ್ಪಿದ ಖುರ್ಷಿದ್, ಇಂದು ಸಂಖ್ಯೆಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ವಾದ ಆಲಿಸಿದ ನ್ಯಾಯಾಲಯವು, “ಮುಸ್ಲಿಮರು ಮಧ್ಯಾಹ್ನ 1 ಗಂಟೆಯಿಂದ 3 ಗಂಟೆಯ ನಡುವೆ ಜುಮಾ ನಮಾಝ್ ಮಾಡಲು ಕಾಂಪೌಂಡ್ ಒಳಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು. ಆ ಜಾಗಕ್ಕೆ ಪ್ರತ್ಯೇಕ ಆಗಮನ ಮತ್ತು ನಿರ್ಗಮನ ದ್ವಾರಗಳಿರಬೇಕು ಎಂದು ಸೂಚಿಸಿದೆ.

ಅದೇ ರೀತಿ, ವಸಂತ ಪಂಚಮಿಯ ಪ್ರಯುಕ್ತ ಹಿಂದುಗಳಿಗೆ ಸಾಂಪ್ರದಾಯಿಕ ಸಮಾರಂಭಗಳನ್ನು ನಡೆಸಲು ಪ್ರತ್ಯೇಕ ಸ್ಥಳ ಲಭ್ಯವಾಗುವಂತೆ ಮಾಡಬೇಕು ಎಂದು ನಿರ್ದೇಶಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಮುಸ್ಲಿಮರ ಪರ ವಕೀಲ ಸಲ್ಮಾನ್ ಖುರ್ಷಿದ್, ಮಧ್ಯಾಹ್ನ 1 ರಿಂದ 3 ಗಂಟೆಯವರೆಗೆ ನಮಾಝ್‌ಗೆ ಬರುವ ಮುಸ್ಲಿಂ ಸಮುದಾಯದ ವ್ಯಕ್ತಿಗಳ ಸಂಖ್ಯೆಯನ್ನು ಜಿಲ್ಲಾಡಳಿತಕ್ಕೆ ಒದಗಿಸಲಾಗುವುದು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಆಡಳಿತವು ನಮಾಝ್‌ಗೆ ಬರುವವರಿಗೆ ಪಾಸ್‌ಗಳನ್ನು ನೀಡಬಹುದು. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನೋಡಿಕೊಳ್ಳಲು ಯಾವುದೇ ಇತರ ನ್ಯಾಯಯುತ ವಿಧಾನಗಳನ್ನು ಅಳವಡಿಸಿಕೊಳ್ಳಬಹುದು ಎಂದಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಎರಡೂ ಕಡೆಯವರು ಪರಸ್ಪರ ಗೌರವವನ್ನು ಕಾಪಾಡಿಕೊಳ್ಳಬೇಕು ಮತ್ತು ರಾಜ್ಯ, ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು” ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಮನವಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...