Homeಮುಖಪುಟಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

- Advertisement -
- Advertisement -

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ ಶಾಲಾ-ಕಮಾಲ್ ಮೌಲಾದ ಧಾರ್ಮಿಕ ಸ್ವರೂಪಕ್ಕೆ ಸಂಬಂಧಿಸಿದಂತೆ ಹಿಂದೂ-ಮುಸ್ಲಿಂ ಸಮುದಾಯಗಳ ನಡುವೆ ವಿವಾದವಿದೆ.

ಜನವರಿ 23ರಂದು ವಸಂತ ಪಂಚಮಿಯ ಪ್ರಯುಕ್ತ ದಿನವಿಡೀ ಪೂಜೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡುವಂತೆ ಕೋರಿ ಹಿಂದೂ ಫ್ರಂಟ್ ಫಾರ್ ಜಸ್ಟೀಸ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಪಂಚೋಲಿ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿತು.

ಭಾರತೀಯ ಪುರಾತತ್ವ ಇಲಾಖೆಯಿಂದ ರಕ್ಷಿಸಲ್ಪಟ್ಟ 11ನೇ ಶತಮಾನದ ಸ್ಮಾರಕವಾದ ಭೋಜ ಶಾಲೆಯನ್ನು ಹಿಂದೂಗಳು ಮತ್ತು ಮುಸ್ಲಿಮರು ವಿಭಿನ್ನವಾಗಿ ನೋಡುತ್ತಾರೆ. ಹಿಂದೂಗಳು ಇದನ್ನು ವಾಗ್ದೇವಿ (ಸರಸ್ವತಿ ದೇವತೆ) ಗೆ ಸಮರ್ಪಿತವಾದ ದೇವಾಲಯವೆಂದು ಪರಿಗಣಿಸುತ್ತಾರೆ. ಮುಸ್ಲಿಮರು ಇದನ್ನು ಕಮಾಲ್ ಮೌಲಾ ಮಸೀದಿ ಎಂದು ಪರಿಗಣಿಸುತ್ತಾರೆ. 2003ರ ಒಪ್ಪಂದದ ಪ್ರಕಾರ, ಹಿಂದೂಗಳು ಮಂಗಳವಾರ ಭೋಜ ಶಾಲೆ ಸಂಕೀರ್ಣದಲ್ಲಿ ಪೂಜೆ ಸಲ್ಲಿಸುತ್ತಾರೆ, ಮುಸ್ಲಿಮರು ಶುಕ್ರವಾರ ಅಲ್ಲಿ ನಮಾಝ್ ಮಾಡುತ್ತಾರೆ.

ಅರ್ಜಿದಾರರ ಪರ ವಕೀಲ ವಿಷ್ಣು ಶಂಕರ್ ಜೈನ್ ವಾದ ಮಂಡಿಸಿ, ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಪೂಜೆಗಳು ಮತ್ತು ಹವನಗಳು ಇರುತ್ತವೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.

ಮುಸ್ಲಿಮರ ಪರವಾಗಿ ಹಿರಿಯ ವಕೀಲ ಸಲ್ಮಾನ್ ಖುರ್ಷಿದ್ ವಾದ ಮಂಡಿಸಿ, ಜುಮಾ ನಮಾಝ್ ಮಧ್ಯಾಹ್ನ 1 ರಿಂದ 3 ಗಂಟೆಯ ನಡುವೆ ನಡೆಯುತ್ತದೆ. ನಂತರ ಮುಸ್ಲಿಂ ಸಮುದಾಯದ ಸದಸ್ಯರು ಆವರಣವನ್ನು ಖಾಲಿ ಮಾಡುತ್ತಾರೆ ಹೇಳಿದ್ದರು. ಕೇಂದ್ರ ಮತ್ತು ಭಾರತೀಯ ಪುರಾತತ್ವ ಸಮೀಕ್ಷೆ (ಎಎಸ್‌ಐ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್ ಮತ್ತು ಮಧ್ಯಪ್ರದೇಶದ ಅಡ್ವೊಕೇಟ್ ಜನರಲ್ ನ್ಯಾಯಾಲಯಕ್ಕೆ ಹಾಜರಾಗಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು.

ಇಡೀ ದಿನ ಪೂಜೆ ನಿರಂತರವಾಗಿ ನಡೆಯುವುದರಿಂದ ಸಂಜೆ 5 ಗಂಟೆಯ ನಂತರ ನಮಾಝ್ ಮಾಡಬಹುದೇ ಎಂದು ಜೈನ್ ಕೇಳಿದ್ದರು. ಜುಮಾ ನಮಾಝ್‌ಗೆ ನಿರ್ದಿಷ್ಟ ಸಮಯವಿದ್ದು, ಅದನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಖುರ್ಷಿದ್ ಸಮಸ್ಯೆ ತಿಳಿಸಿದ್ದರು.

ಮುಸ್ಲಿಮರು ನಮಾಝ್‌ಗೆ ಹಾಜರಾಗುವ ಸಾಧ್ಯತೆ ಇರುವ ವ್ಯಕ್ತಿಗಳ ಸಂಖ್ಯೆಯನ್ನು ಜಿಲ್ಲಾಡಳಿತಕ್ಕೆ ನೀಡಬಹುದು. ಇದರಿಂದ ಅವರಿಗೆ ಆವರಣದಲ್ಲಿ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಬಹುದು. ಜಿಲ್ಲಾಡಳಿತವು ನಮಾಝ್‌ಗೆ ಬರುವ ವ್ಯಕ್ತಿಗಳಿಗೆ ಪಾಸ್‌ಗಳನ್ನು ನೀಡುತ್ತದೆ ಎಂದು ಎಎಸ್‌ಜಿ ತಿಳಿಸಿದ್ದರು. ಇದಕ್ಕೆ ಒಪ್ಪಿದ ಖುರ್ಷಿದ್, ಇಂದು ಸಂಖ್ಯೆಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ವಾದ ಆಲಿಸಿದ ನ್ಯಾಯಾಲಯವು, “ಮುಸ್ಲಿಮರು ಮಧ್ಯಾಹ್ನ 1 ಗಂಟೆಯಿಂದ 3 ಗಂಟೆಯ ನಡುವೆ ಜುಮಾ ನಮಾಝ್ ಮಾಡಲು ಕಾಂಪೌಂಡ್ ಒಳಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು. ಆ ಜಾಗಕ್ಕೆ ಪ್ರತ್ಯೇಕ ಆಗಮನ ಮತ್ತು ನಿರ್ಗಮನ ದ್ವಾರಗಳಿರಬೇಕು ಎಂದು ಸೂಚಿಸಿದೆ.

ಅದೇ ರೀತಿ, ವಸಂತ ಪಂಚಮಿಯ ಪ್ರಯುಕ್ತ ಹಿಂದುಗಳಿಗೆ ಸಾಂಪ್ರದಾಯಿಕ ಸಮಾರಂಭಗಳನ್ನು ನಡೆಸಲು ಪ್ರತ್ಯೇಕ ಸ್ಥಳ ಲಭ್ಯವಾಗುವಂತೆ ಮಾಡಬೇಕು ಎಂದು ನಿರ್ದೇಶಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಮುಸ್ಲಿಮರ ಪರ ವಕೀಲ ಸಲ್ಮಾನ್ ಖುರ್ಷಿದ್, ಮಧ್ಯಾಹ್ನ 1 ರಿಂದ 3 ಗಂಟೆಯವರೆಗೆ ನಮಾಝ್‌ಗೆ ಬರುವ ಮುಸ್ಲಿಂ ಸಮುದಾಯದ ವ್ಯಕ್ತಿಗಳ ಸಂಖ್ಯೆಯನ್ನು ಜಿಲ್ಲಾಡಳಿತಕ್ಕೆ ಒದಗಿಸಲಾಗುವುದು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಆಡಳಿತವು ನಮಾಝ್‌ಗೆ ಬರುವವರಿಗೆ ಪಾಸ್‌ಗಳನ್ನು ನೀಡಬಹುದು. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನೋಡಿಕೊಳ್ಳಲು ಯಾವುದೇ ಇತರ ನ್ಯಾಯಯುತ ವಿಧಾನಗಳನ್ನು ಅಳವಡಿಸಿಕೊಳ್ಳಬಹುದು ಎಂದಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಎರಡೂ ಕಡೆಯವರು ಪರಸ್ಪರ ಗೌರವವನ್ನು ಕಾಪಾಡಿಕೊಳ್ಳಬೇಕು ಮತ್ತು ರಾಜ್ಯ, ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು” ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಮನವಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....