Homeಮುಖಪುಟಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

- Advertisement -
- Advertisement -

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ ಶಾಲಾ-ಕಮಾಲ್ ಮೌಲಾದ ಧಾರ್ಮಿಕ ಸ್ವರೂಪಕ್ಕೆ ಸಂಬಂಧಿಸಿದಂತೆ ಹಿಂದೂ-ಮುಸ್ಲಿಂ ಸಮುದಾಯಗಳ ನಡುವೆ ವಿವಾದವಿದೆ.

ಜನವರಿ 23ರಂದು ವಸಂತ ಪಂಚಮಿಯ ಪ್ರಯುಕ್ತ ದಿನವಿಡೀ ಪೂಜೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡುವಂತೆ ಕೋರಿ ಹಿಂದೂ ಫ್ರಂಟ್ ಫಾರ್ ಜಸ್ಟೀಸ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಪಂಚೋಲಿ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿತು.

ಭಾರತೀಯ ಪುರಾತತ್ವ ಇಲಾಖೆಯಿಂದ ರಕ್ಷಿಸಲ್ಪಟ್ಟ 11ನೇ ಶತಮಾನದ ಸ್ಮಾರಕವಾದ ಭೋಜ ಶಾಲೆಯನ್ನು ಹಿಂದೂಗಳು ಮತ್ತು ಮುಸ್ಲಿಮರು ವಿಭಿನ್ನವಾಗಿ ನೋಡುತ್ತಾರೆ. ಹಿಂದೂಗಳು ಇದನ್ನು ವಾಗ್ದೇವಿ (ಸರಸ್ವತಿ ದೇವತೆ) ಗೆ ಸಮರ್ಪಿತವಾದ ದೇವಾಲಯವೆಂದು ಪರಿಗಣಿಸುತ್ತಾರೆ. ಮುಸ್ಲಿಮರು ಇದನ್ನು ಕಮಾಲ್ ಮೌಲಾ ಮಸೀದಿ ಎಂದು ಪರಿಗಣಿಸುತ್ತಾರೆ. 2003ರ ಒಪ್ಪಂದದ ಪ್ರಕಾರ, ಹಿಂದೂಗಳು ಮಂಗಳವಾರ ಭೋಜ ಶಾಲೆ ಸಂಕೀರ್ಣದಲ್ಲಿ ಪೂಜೆ ಸಲ್ಲಿಸುತ್ತಾರೆ, ಮುಸ್ಲಿಮರು ಶುಕ್ರವಾರ ಅಲ್ಲಿ ನಮಾಝ್ ಮಾಡುತ್ತಾರೆ.

ಅರ್ಜಿದಾರರ ಪರ ವಕೀಲ ವಿಷ್ಣು ಶಂಕರ್ ಜೈನ್ ವಾದ ಮಂಡಿಸಿ, ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಪೂಜೆಗಳು ಮತ್ತು ಹವನಗಳು ಇರುತ್ತವೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.

ಮುಸ್ಲಿಮರ ಪರವಾಗಿ ಹಿರಿಯ ವಕೀಲ ಸಲ್ಮಾನ್ ಖುರ್ಷಿದ್ ವಾದ ಮಂಡಿಸಿ, ಜುಮಾ ನಮಾಝ್ ಮಧ್ಯಾಹ್ನ 1 ರಿಂದ 3 ಗಂಟೆಯ ನಡುವೆ ನಡೆಯುತ್ತದೆ. ನಂತರ ಮುಸ್ಲಿಂ ಸಮುದಾಯದ ಸದಸ್ಯರು ಆವರಣವನ್ನು ಖಾಲಿ ಮಾಡುತ್ತಾರೆ ಹೇಳಿದ್ದರು. ಕೇಂದ್ರ ಮತ್ತು ಭಾರತೀಯ ಪುರಾತತ್ವ ಸಮೀಕ್ಷೆ (ಎಎಸ್‌ಐ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್ ಮತ್ತು ಮಧ್ಯಪ್ರದೇಶದ ಅಡ್ವೊಕೇಟ್ ಜನರಲ್ ನ್ಯಾಯಾಲಯಕ್ಕೆ ಹಾಜರಾಗಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು.

ಇಡೀ ದಿನ ಪೂಜೆ ನಿರಂತರವಾಗಿ ನಡೆಯುವುದರಿಂದ ಸಂಜೆ 5 ಗಂಟೆಯ ನಂತರ ನಮಾಝ್ ಮಾಡಬಹುದೇ ಎಂದು ಜೈನ್ ಕೇಳಿದ್ದರು. ಜುಮಾ ನಮಾಝ್‌ಗೆ ನಿರ್ದಿಷ್ಟ ಸಮಯವಿದ್ದು, ಅದನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಖುರ್ಷಿದ್ ಸಮಸ್ಯೆ ತಿಳಿಸಿದ್ದರು.

ಮುಸ್ಲಿಮರು ನಮಾಝ್‌ಗೆ ಹಾಜರಾಗುವ ಸಾಧ್ಯತೆ ಇರುವ ವ್ಯಕ್ತಿಗಳ ಸಂಖ್ಯೆಯನ್ನು ಜಿಲ್ಲಾಡಳಿತಕ್ಕೆ ನೀಡಬಹುದು. ಇದರಿಂದ ಅವರಿಗೆ ಆವರಣದಲ್ಲಿ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಬಹುದು. ಜಿಲ್ಲಾಡಳಿತವು ನಮಾಝ್‌ಗೆ ಬರುವ ವ್ಯಕ್ತಿಗಳಿಗೆ ಪಾಸ್‌ಗಳನ್ನು ನೀಡುತ್ತದೆ ಎಂದು ಎಎಸ್‌ಜಿ ತಿಳಿಸಿದ್ದರು. ಇದಕ್ಕೆ ಒಪ್ಪಿದ ಖುರ್ಷಿದ್, ಇಂದು ಸಂಖ್ಯೆಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ವಾದ ಆಲಿಸಿದ ನ್ಯಾಯಾಲಯವು, “ಮುಸ್ಲಿಮರು ಮಧ್ಯಾಹ್ನ 1 ಗಂಟೆಯಿಂದ 3 ಗಂಟೆಯ ನಡುವೆ ಜುಮಾ ನಮಾಝ್ ಮಾಡಲು ಕಾಂಪೌಂಡ್ ಒಳಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು. ಆ ಜಾಗಕ್ಕೆ ಪ್ರತ್ಯೇಕ ಆಗಮನ ಮತ್ತು ನಿರ್ಗಮನ ದ್ವಾರಗಳಿರಬೇಕು ಎಂದು ಸೂಚಿಸಿದೆ.

ಅದೇ ರೀತಿ, ವಸಂತ ಪಂಚಮಿಯ ಪ್ರಯುಕ್ತ ಹಿಂದುಗಳಿಗೆ ಸಾಂಪ್ರದಾಯಿಕ ಸಮಾರಂಭಗಳನ್ನು ನಡೆಸಲು ಪ್ರತ್ಯೇಕ ಸ್ಥಳ ಲಭ್ಯವಾಗುವಂತೆ ಮಾಡಬೇಕು ಎಂದು ನಿರ್ದೇಶಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಮುಸ್ಲಿಮರ ಪರ ವಕೀಲ ಸಲ್ಮಾನ್ ಖುರ್ಷಿದ್, ಮಧ್ಯಾಹ್ನ 1 ರಿಂದ 3 ಗಂಟೆಯವರೆಗೆ ನಮಾಝ್‌ಗೆ ಬರುವ ಮುಸ್ಲಿಂ ಸಮುದಾಯದ ವ್ಯಕ್ತಿಗಳ ಸಂಖ್ಯೆಯನ್ನು ಜಿಲ್ಲಾಡಳಿತಕ್ಕೆ ಒದಗಿಸಲಾಗುವುದು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಆಡಳಿತವು ನಮಾಝ್‌ಗೆ ಬರುವವರಿಗೆ ಪಾಸ್‌ಗಳನ್ನು ನೀಡಬಹುದು. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನೋಡಿಕೊಳ್ಳಲು ಯಾವುದೇ ಇತರ ನ್ಯಾಯಯುತ ವಿಧಾನಗಳನ್ನು ಅಳವಡಿಸಿಕೊಳ್ಳಬಹುದು ಎಂದಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಎರಡೂ ಕಡೆಯವರು ಪರಸ್ಪರ ಗೌರವವನ್ನು ಕಾಪಾಡಿಕೊಳ್ಳಬೇಕು ಮತ್ತು ರಾಜ್ಯ, ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು” ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಮನವಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...